Homeಮುಖಪುಟಸಿಎಎ ವಿರೋಧಿ ನಾಟಕಕ್ಕೆ ಪೊಲೀಸ್ ವಿಚಾರಣೆ: ಜೆಜೆ ಕಾಯ್ದೆಯಡಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ -...

ಸಿಎಎ ವಿರೋಧಿ ನಾಟಕಕ್ಕೆ ಪೊಲೀಸ್ ವಿಚಾರಣೆ: ಜೆಜೆ ಕಾಯ್ದೆಯಡಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ – ಹೈಕೋರ್ಟ್

ನಾವು ಇದನ್ನು ಕ್ಷಮಿಸಿದರೆ ಇದು ಪುನಾರಾವರ್ತನೆಯಾಗುತ್ತದೆ. ಇಂತಹ ಕ್ರಮವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಕ್ಕಳನ್ನು ಹೀಗೆ ಏಕೆ ನಡೆಸಿಕೊಳ್ಳಲಾಗುತ್ತದೆ? ಇದು ಸರಿಯಾಗಬೇಕು.

- Advertisement -
- Advertisement -

ಕಳೆದ ವರ್ಷ ಬೀದರ್‌ನ ಶಾಹೀನ್ ಎಜುಕೇಶನ್ ಸೊಸೈಟಿಯಲ್ಲಿ ಸಿಎಎ ವಿರೋಧಿ ನಾಟಕ ಪ್ರದರ್ಶಿಸಿದಕ್ಕೆ ದೇಶದ್ರೋಹದ ಪ್ರಕರಣಕ್ಕೆ ದಾಖಲಾಗಿತ್ತು. ಆಗ ಶಸ್ತ್ರಾಸ್ತ್ರಗಳನ್ನು ಒಳಗೊಂಡ ಸಮವಸ್ತ್ರಧಾರಿ ಪೊಲೀಸರು ಮಕ್ಕಳನ್ನು ವಿಚಾರಣೆ ನಡೆಸಿದ್ದನ್ನು ಗಮನಿಸಿದ ಕರ್ನಾಟಕ ಹೈಕೋರ್ಟ್, ಪ್ರಾಥಮಿಕ ಸಾಕ್ಷ್ಯಗಳ ಆಧಾರದಲ್ಲಿ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, 2015 ರ ಅಡಿಯಲ್ಲಿನ ನಿಬಂಧನೆಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರಿದ್ದ ವಿಭಾಗೀಯ ಪೀಠವು, “ಉಪ ಅಧೀಕ್ಷಕರಾದ ಬಸವೇಶ್ವರವರು ಮಾರ್ಚ್ 16 ರಂದು ಸಲ್ಲಿಸಿದ ಅಫಿಡವಿಟ್ ನಲ್ಲಿ ಯಾವುದೇ ಫೋಟೊಗಳನ್ನು ಲಗತ್ತಿಸಿಲ್ಲ. ಅವರು IA 1, 2020 ರಲ್ಲಿ ಫೋಟೊಗಳನ್ನು ಲಗತ್ತಿಸಿದ್ದಾರೆ. ಏಪ್ರಿಲ್ 1, 2020 ರ ಎರಡನೇ ಫೋಟೋದಲ್ಲಿ ಈ ಶಾಲಾ ಮಕ್ಕಳನ್ನು (2 ಹುಡುಗರು, 1 ಹುಡುಗಿ) ಐದು ಪೋಲಿಸ್ ಅಧಿಕಾರಿಗಳು ವಿಚಾರಣೆಗೆ ಒಳಪಡಿಸುತ್ತಿದ್ದು, ಅದರಲ್ಲಿ ನಾಲ್ವರು ಪೂರ್ಣ ಸಮವಸ್ತ್ರದಲ್ಲಿದ್ದಾರೆ ಮತ್ತು ಕನಿಷ್ಠ ಇಬ್ಬರು ಬಂದೂಕುಗಳನ್ನು ಹೊಂದಿದ್ದಾರೆ. ಇವು ಅಂದಿನ ವಿಚಾರಣೆಯ ಫೋಟೊಗಳು ಎಂದು ಅವರು ಒಪ್ಪಿಕೊಂಡಿದ್ದಾರೆ. ಈ ಪ್ರಾಥಮಿಕ ಸಾಕ್ಷ್ಯಗಳು 2016ರ ಜೆಜೆ ಕಾಯ್ದೆಯ 86(5) ಅಡಿಯಲ್ಲಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೆಕ್ಷನ್ 86 ಅದರ ಉಪ-ಸೆಕ್ಷನ್ 5 ರಲ್ಲಿ ಮಕ್ಕಳಿಗಾಗಿ ವಿಶೇಷ ಬಾಲಾಪರಾಧ ಪೊಲೀಸ್ ಘಟಕದ ಸ್ಥಾಪನೆ ಬಗ್ಗೆ ಹೇಳುತ್ತದೆ. ಅದಂರಂತೆ “ಮಕ್ಕಳೊಂದಿಗೆ ಸಂವಹನ ನಡೆಸುವ ಪೋಲಿಸ್ ಅಧಿಕಾರಿ ಸಾಧ್ಯವಾದಷ್ಟು ಸರಳ ಬಟ್ಟೆಯಲ್ಲಿರಬೇಕು ಮತ್ತು ಸಮವಸ್ತ್ರದಲ್ಲಿರಬಾರದು ಮತ್ತು ಹೆಣ್ಣು ಮಗುವಿನೊಂದಿಗೆ ವ್ಯವಹರಿಸಲು ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ತೊಡಗಿಸಿಕೊಳ್ಳಬೇಕು” ಎಂದಿದೆ.

“ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಶಾಲಾ ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಸರ್ಕಾರದ ಅತ್ಯಂತ ಹಿರಿಯ ಅಧಿಕಾರಿಯು ಅಫಿಡವಿಟ್ ಸಲ್ಲಿಸುವ ಮೂಲಕ ಪ್ರತಿಕ್ರಿಯಿಸಲು ನಾವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇವೆ. ಈ ಕ್ರಮದ ಆಧಾರದಲ್ಲಿ ಸರ್ಕಾರವು ಮುಂದೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ತಡೆಯಲು ರಾಜ್ಯದಾದ್ಯಂತ ಪೊಲೀಸರಿಗೆ ನಿರ್ದೇಶನಗಳನ್ನು ನೀಡುವುದನ್ನು ಪರಿಗಣಿಸಬಹುದು” ಎಂದು ಕೋರ್ಟ್ ಹೇಳಿದೆ.

“ನಾವು ಇದನ್ನು ಕ್ಷಮಿಸಿದರೆ ಇದು ಪುನಾರಾವರ್ತನೆಯಾಗುತ್ತದೆ. ಇಂತಹ ಕ್ರಮವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಕ್ಕಳನ್ನು ಹೀಗೆ ಏಕೆ ನಡೆಸಿಕೊಳ್ಳಲಾಗುತ್ತದೆ? ಇದು ಸರಿಯಾಗಬೇಕು. ಇದು ಹೀಗೆ ಮುಂದುವರೆಯಲು ಸಾಧ್ಯವಿಲ್ಲ” ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಕಳೆದ ವರ್ಷದ ಶಾಹಿನ್ ಸಂಸ್ಥೆಯ ಮಕ್ಕಳು ಸಿಎಎ ವಿರೋಧಿ ನಾಟಕ ಮಾಡಿದರೆಂಬ ಕಾರಣಕ್ಕಾಗಿ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ನಾಟಕದಲ್ಲಿ ಭಾಗವಹಿಸಿದ್ದ ಮಗುವಿನ ತಾಯಿಯನ್ನು ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಹಲವರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಪೊಲೀಸರು ಶಾಲೆಗೆ ನುಗ್ಗಿ ಚಿಕ್ಕಮಕ್ಕಳನ್ನು ವಿಚಾರಣೆಗೊಳಪಡಿಸಲಾಗಿತ್ತು. ತದನಂತರ ಹಲವರು ಇಡೀ ಸಂಸ್ಥೆ ವಿರುದ್ಧ ಅಪಪ್ರಚಾರ ಮಾಡಿದ್ದರು. ಹಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಬಿಡಿಸಿ ಬೇರೆಡೆಗೆ ವರ್ಗಾಹಿಸುವಂತೆ ಮಾಡಲಾಗಿತ್ತು. ಕೋರ್ಟ್ ದೇಶದ್ರೋಹ ನಡೆದಿಲ್ಲ ಎಂದು ತೀರ್ಪಿತ್ತಿತ್ತು.


ಇದನ್ನೂ ಓದಿ: CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...