Homeಚಳವಳಿಮಹಿಳಾ ದಿನದಂದೇ ಆದಿವಾಸಿ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಅಪಹರಣ ಮಾಡಿದ ಪೊಲೀಸರು: ಆರೋಪ

ಮಹಿಳಾ ದಿನದಂದೇ ಆದಿವಾಸಿ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಅಪಹರಣ ಮಾಡಿದ ಪೊಲೀಸರು: ಆರೋಪ

ಆದಿವಾಸಿ ಹಕ್ಕುಗಳ ಹೋರಾಟಗಾರ್ತಿಯಾಗಿರುವ ಇವರು ಅದಾನಿ ಪ್ರೈ.‌‌ ಲಿ. ಕಂಪೆನಿಯ ಗಣಿಗಾರಿಕೆ ಯೋಜನೆಗಳ ವಿರುದ್ಧ ತೀವ್ರವಾಗಿ ಹೋರಾಟವನ್ನು ಸಂಘಟಿಸುತ್ತಿದ್ದಾರೆ

- Advertisement -
- Advertisement -

ಗಣಿಗಾರಿಕೆ ವಿರೋಧಿ ಮತ್ತು ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ 28 ವರ್ಷದ ಹಿಡ್ಮೆ ಮಾರ್ಖಂ ಅವರನ್ನು, ದಂತೇವಾಡಾದ ಸಮೇಲಿಯಲ್ಲಿ ನಡೆದ ಅಂತರರಾಷ್ಟ್ರೀಯ ಕಾರ್ಮಿಕ ಮಹಿಳಾ ದಿನಾಚರಣೆಯ ಕಾರ್ಯಕ್ರಮದಿಂದ ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ಅಪಹರಣಕ್ಕೊಳಗಾಗಿದ್ದಾರೆ ಎಂದು ಪಿಯುಸಿಎಲ್‌ ಆರೋಪಿಸಿದೆ.

ಆದರೆ ಪೊಲೀಸರು ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಬಂಧನದಲ್ಲಿದ್ದಾಗ ಛತ್ತೀಸ್‌ಗಡ ಪೊಲೀಸ್‌‌ ಮತ್ತು ಅರೆಸೈನಿಕ ಪಡೆಗಳಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಕವಾಸಿ ನಂದೆ ಮತ್ತು ಪಾಂಡೆ ಎಂಬ ಇಬ್ಬರು ಯುವತಿಯರ ನೆನಪಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪೊಲೀಸರ ದೌರ್ಜನ್ಯದಿಂದಾಗಿ ನಂದೆ ಮತ್ತು ಪಾಂಡೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಬಂಧನದ ವಾರೆಂಟ್ ತಡೆ ಹಿಡಿದ ಸುಪ್ರೀಂ

ಹಿಡ್ಮೆ ಅರೆಸೈನಿಕ ಪಡೆ ಕ್ಯಾಂಪ್‌ಗಳು ಮತ್ತು ಒಕ್ಕಲೆಬ್ಬಿಸುವುದರ ವಿರುದ್ಧದ ಗಟ್ಟಿ ಧ್ವನಿಯ ಹೋರಾಟಗಾರ್ತಿಯಾಗಿದ್ದಾರೆ. ‘ಜೈಲ್‌ ಬಂದಿ ರಿಹೈ ಸಮಿತಿ’ಯ ಕನ್ವೀನರ್ ಆಗಿರುವ ಅವರು ರಾಜ್ಯಪಾಲರು, ಮುಖ್ಯಮಂತ್ರಿ, ಪೊಲೀಸ್ ವರಿಷ್ಠಾಧಿಕಾರಿ, ಕಲೆಕ್ಟರ್ ಮತ್ತು ಇತರ ಅಧಿಕಾರಿಗಳನ್ನು ಭೇಟಿ ಮಾಡಿ, ಜೈಲುಗಳು ಮತ್ತು ಪೊಲೀಸ್ ಶಿಬಿರಗಳಲ್ಲಿ ಬಂಧಿಸಲ್ಪಟ್ಟ ಮತ್ತು ಶಿಕ್ಷೆಗೊಳಗಾದ ಅಮಾಯಕ ಆದಿವಾಸಿಗಳ ಬಿಡುಗಡೆಗಾಗಿ ಹಲವಾರು ಹೋರಾಟವನ್ನು ನಡೆಸಿದ್ದಾರೆ.

ತಮ್ಮ ಭೂಮಿಯನ್ನು ಪವಿತ್ರ ಭೂವಿ ಎಂದು ಪ್ರತಿಪಾದಿಸುವ ಅವರು ಅಲ್ಲಿನ ಗಣಿಗಾರಿಕೆ ವಿರುದ್ಧವೂ ಹೋರಾಡುತ್ತಿದ್ದರು. ಆದಿವಾಸಿಗಳು ಪವಿತ್ರ ಎಂದು ನಂಬುವ ನಂದರಾಜ್ ಬೆಟ್ಟವನ್ನು ಉಳಿಸುವ ಆಂದೋಲನದ ಭಾಗವಾಗಿ, ಅದಾನಿ ಪ್ರೈವೆಟ್‌‌ ಲಿಮಿಟೆಡ್‌‌ನಂತಹ ಕಂಪೆನಿಗಳು ಬೆಟ್ಟವನ್ನು ನಾಶಪಡಿಸುವುದನ್ನು ವಿರೋಧಿಸಿ, ಕಂಪೆನಿಯ ಗಣಿಗಾರಿಕೆ ಯೋಜನೆಗಳ ವಿರುದ್ಧ ತೀವ್ರವಾಗಿ ಹೋರಾಟವನ್ನು ಸಂಘಟಿಸುತ್ತಿದ್ದಾರೆ.

ಇದನ್ನೂ ಓದಿ: ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧಿಸಿ ಆಂಧ್ರಪ್ರದೇಶ ಬಂದ್

ಹಿಡ್ಮೆ ಮಾರ್ಖಂ ಅವರ ಬಂಧನವನ್ನು ಪೀಪಲ್ಸ್ ಯೂನಿಯನ್ ಆಫ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ‘ಅಪಹರಣ’ ಎಂದು ಖಂಡಿಸಿದೆ.

ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿಕೊಂಡಿದ್ದು, ಈ ನಾಲ್ಕು ಪ್ರಕರಣಗಳಲ್ಲಿ ಯುಎಪಿಎ ಸೇರಿದಂತೆ ಅನೇಕ ಗಂಭೀರ ಆರೋಪಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ಪಿಯುಸಿಎಲ್‌‌ ಹೇಳಿಕೆಯಂತೆ, “ಶಾಂತಿಯುತವಾಗಿ ನೆರೆದಿದ್ದ ಮುನ್ನೂರು ಗ್ರಾಮಸ್ಥರು ಮತ್ತು ಹೋರಾಟಗಾರರ ಮುಂದೆ ಹಿಡ್ಮೆ ಮಾರ್ಖಂ ಅವರನ್ನು ಎಳೆದೊಯ್ಯಲಾಯಿತು. ನೆರೆದಿದ್ದವರಲ್ಲಿ ಜೈಲು ಬಂದಿ ರಿಹೈ ಸಮಿತಿ ಮತ್ತು ಛತ್ತೀಸ್‌ಗಢ ಮಹಿಳಾ ಅಧಿಕಾರಿ ಮಂಚ್‌ನ ಹೋರಾಟಗಾರರು ಕೂಡ ಇದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...