Homeಚಳವಳಿಮಹಿಳಾ ದಿನದಂದೇ ಆದಿವಾಸಿ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಅಪಹರಣ ಮಾಡಿದ ಪೊಲೀಸರು: ಆರೋಪ

ಮಹಿಳಾ ದಿನದಂದೇ ಆದಿವಾಸಿ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಅಪಹರಣ ಮಾಡಿದ ಪೊಲೀಸರು: ಆರೋಪ

ಆದಿವಾಸಿ ಹಕ್ಕುಗಳ ಹೋರಾಟಗಾರ್ತಿಯಾಗಿರುವ ಇವರು ಅದಾನಿ ಪ್ರೈ.‌‌ ಲಿ. ಕಂಪೆನಿಯ ಗಣಿಗಾರಿಕೆ ಯೋಜನೆಗಳ ವಿರುದ್ಧ ತೀವ್ರವಾಗಿ ಹೋರಾಟವನ್ನು ಸಂಘಟಿಸುತ್ತಿದ್ದಾರೆ

- Advertisement -
- Advertisement -

ಗಣಿಗಾರಿಕೆ ವಿರೋಧಿ ಮತ್ತು ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ 28 ವರ್ಷದ ಹಿಡ್ಮೆ ಮಾರ್ಖಂ ಅವರನ್ನು, ದಂತೇವಾಡಾದ ಸಮೇಲಿಯಲ್ಲಿ ನಡೆದ ಅಂತರರಾಷ್ಟ್ರೀಯ ಕಾರ್ಮಿಕ ಮಹಿಳಾ ದಿನಾಚರಣೆಯ ಕಾರ್ಯಕ್ರಮದಿಂದ ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ಅಪಹರಣಕ್ಕೊಳಗಾಗಿದ್ದಾರೆ ಎಂದು ಪಿಯುಸಿಎಲ್‌ ಆರೋಪಿಸಿದೆ.

ಆದರೆ ಪೊಲೀಸರು ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಬಂಧನದಲ್ಲಿದ್ದಾಗ ಛತ್ತೀಸ್‌ಗಡ ಪೊಲೀಸ್‌‌ ಮತ್ತು ಅರೆಸೈನಿಕ ಪಡೆಗಳಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಕವಾಸಿ ನಂದೆ ಮತ್ತು ಪಾಂಡೆ ಎಂಬ ಇಬ್ಬರು ಯುವತಿಯರ ನೆನಪಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪೊಲೀಸರ ದೌರ್ಜನ್ಯದಿಂದಾಗಿ ನಂದೆ ಮತ್ತು ಪಾಂಡೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಬಂಧನದ ವಾರೆಂಟ್ ತಡೆ ಹಿಡಿದ ಸುಪ್ರೀಂ

ಹಿಡ್ಮೆ ಅರೆಸೈನಿಕ ಪಡೆ ಕ್ಯಾಂಪ್‌ಗಳು ಮತ್ತು ಒಕ್ಕಲೆಬ್ಬಿಸುವುದರ ವಿರುದ್ಧದ ಗಟ್ಟಿ ಧ್ವನಿಯ ಹೋರಾಟಗಾರ್ತಿಯಾಗಿದ್ದಾರೆ. ‘ಜೈಲ್‌ ಬಂದಿ ರಿಹೈ ಸಮಿತಿ’ಯ ಕನ್ವೀನರ್ ಆಗಿರುವ ಅವರು ರಾಜ್ಯಪಾಲರು, ಮುಖ್ಯಮಂತ್ರಿ, ಪೊಲೀಸ್ ವರಿಷ್ಠಾಧಿಕಾರಿ, ಕಲೆಕ್ಟರ್ ಮತ್ತು ಇತರ ಅಧಿಕಾರಿಗಳನ್ನು ಭೇಟಿ ಮಾಡಿ, ಜೈಲುಗಳು ಮತ್ತು ಪೊಲೀಸ್ ಶಿಬಿರಗಳಲ್ಲಿ ಬಂಧಿಸಲ್ಪಟ್ಟ ಮತ್ತು ಶಿಕ್ಷೆಗೊಳಗಾದ ಅಮಾಯಕ ಆದಿವಾಸಿಗಳ ಬಿಡುಗಡೆಗಾಗಿ ಹಲವಾರು ಹೋರಾಟವನ್ನು ನಡೆಸಿದ್ದಾರೆ.

ತಮ್ಮ ಭೂಮಿಯನ್ನು ಪವಿತ್ರ ಭೂವಿ ಎಂದು ಪ್ರತಿಪಾದಿಸುವ ಅವರು ಅಲ್ಲಿನ ಗಣಿಗಾರಿಕೆ ವಿರುದ್ಧವೂ ಹೋರಾಡುತ್ತಿದ್ದರು. ಆದಿವಾಸಿಗಳು ಪವಿತ್ರ ಎಂದು ನಂಬುವ ನಂದರಾಜ್ ಬೆಟ್ಟವನ್ನು ಉಳಿಸುವ ಆಂದೋಲನದ ಭಾಗವಾಗಿ, ಅದಾನಿ ಪ್ರೈವೆಟ್‌‌ ಲಿಮಿಟೆಡ್‌‌ನಂತಹ ಕಂಪೆನಿಗಳು ಬೆಟ್ಟವನ್ನು ನಾಶಪಡಿಸುವುದನ್ನು ವಿರೋಧಿಸಿ, ಕಂಪೆನಿಯ ಗಣಿಗಾರಿಕೆ ಯೋಜನೆಗಳ ವಿರುದ್ಧ ತೀವ್ರವಾಗಿ ಹೋರಾಟವನ್ನು ಸಂಘಟಿಸುತ್ತಿದ್ದಾರೆ.

ಇದನ್ನೂ ಓದಿ: ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧಿಸಿ ಆಂಧ್ರಪ್ರದೇಶ ಬಂದ್

ಹಿಡ್ಮೆ ಮಾರ್ಖಂ ಅವರ ಬಂಧನವನ್ನು ಪೀಪಲ್ಸ್ ಯೂನಿಯನ್ ಆಫ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ‘ಅಪಹರಣ’ ಎಂದು ಖಂಡಿಸಿದೆ.

ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿಕೊಂಡಿದ್ದು, ಈ ನಾಲ್ಕು ಪ್ರಕರಣಗಳಲ್ಲಿ ಯುಎಪಿಎ ಸೇರಿದಂತೆ ಅನೇಕ ಗಂಭೀರ ಆರೋಪಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ಪಿಯುಸಿಎಲ್‌‌ ಹೇಳಿಕೆಯಂತೆ, “ಶಾಂತಿಯುತವಾಗಿ ನೆರೆದಿದ್ದ ಮುನ್ನೂರು ಗ್ರಾಮಸ್ಥರು ಮತ್ತು ಹೋರಾಟಗಾರರ ಮುಂದೆ ಹಿಡ್ಮೆ ಮಾರ್ಖಂ ಅವರನ್ನು ಎಳೆದೊಯ್ಯಲಾಯಿತು. ನೆರೆದಿದ್ದವರಲ್ಲಿ ಜೈಲು ಬಂದಿ ರಿಹೈ ಸಮಿತಿ ಮತ್ತು ಛತ್ತೀಸ್‌ಗಢ ಮಹಿಳಾ ಅಧಿಕಾರಿ ಮಂಚ್‌ನ ಹೋರಾಟಗಾರರು ಕೂಡ ಇದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...