Homeಚಳವಳಿಮಹಿಳಾ ದಿನದಂದೇ ಆದಿವಾಸಿ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಅಪಹರಣ ಮಾಡಿದ ಪೊಲೀಸರು: ಆರೋಪ

ಮಹಿಳಾ ದಿನದಂದೇ ಆದಿವಾಸಿ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಅಪಹರಣ ಮಾಡಿದ ಪೊಲೀಸರು: ಆರೋಪ

ಆದಿವಾಸಿ ಹಕ್ಕುಗಳ ಹೋರಾಟಗಾರ್ತಿಯಾಗಿರುವ ಇವರು ಅದಾನಿ ಪ್ರೈ.‌‌ ಲಿ. ಕಂಪೆನಿಯ ಗಣಿಗಾರಿಕೆ ಯೋಜನೆಗಳ ವಿರುದ್ಧ ತೀವ್ರವಾಗಿ ಹೋರಾಟವನ್ನು ಸಂಘಟಿಸುತ್ತಿದ್ದಾರೆ

- Advertisement -
- Advertisement -

ಗಣಿಗಾರಿಕೆ ವಿರೋಧಿ ಮತ್ತು ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ 28 ವರ್ಷದ ಹಿಡ್ಮೆ ಮಾರ್ಖಂ ಅವರನ್ನು, ದಂತೇವಾಡಾದ ಸಮೇಲಿಯಲ್ಲಿ ನಡೆದ ಅಂತರರಾಷ್ಟ್ರೀಯ ಕಾರ್ಮಿಕ ಮಹಿಳಾ ದಿನಾಚರಣೆಯ ಕಾರ್ಯಕ್ರಮದಿಂದ ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ಅಪಹರಣಕ್ಕೊಳಗಾಗಿದ್ದಾರೆ ಎಂದು ಪಿಯುಸಿಎಲ್‌ ಆರೋಪಿಸಿದೆ.

ಆದರೆ ಪೊಲೀಸರು ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಬಂಧನದಲ್ಲಿದ್ದಾಗ ಛತ್ತೀಸ್‌ಗಡ ಪೊಲೀಸ್‌‌ ಮತ್ತು ಅರೆಸೈನಿಕ ಪಡೆಗಳಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಕವಾಸಿ ನಂದೆ ಮತ್ತು ಪಾಂಡೆ ಎಂಬ ಇಬ್ಬರು ಯುವತಿಯರ ನೆನಪಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪೊಲೀಸರ ದೌರ್ಜನ್ಯದಿಂದಾಗಿ ನಂದೆ ಮತ್ತು ಪಾಂಡೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಬಂಧನದ ವಾರೆಂಟ್ ತಡೆ ಹಿಡಿದ ಸುಪ್ರೀಂ

ಹಿಡ್ಮೆ ಅರೆಸೈನಿಕ ಪಡೆ ಕ್ಯಾಂಪ್‌ಗಳು ಮತ್ತು ಒಕ್ಕಲೆಬ್ಬಿಸುವುದರ ವಿರುದ್ಧದ ಗಟ್ಟಿ ಧ್ವನಿಯ ಹೋರಾಟಗಾರ್ತಿಯಾಗಿದ್ದಾರೆ. ‘ಜೈಲ್‌ ಬಂದಿ ರಿಹೈ ಸಮಿತಿ’ಯ ಕನ್ವೀನರ್ ಆಗಿರುವ ಅವರು ರಾಜ್ಯಪಾಲರು, ಮುಖ್ಯಮಂತ್ರಿ, ಪೊಲೀಸ್ ವರಿಷ್ಠಾಧಿಕಾರಿ, ಕಲೆಕ್ಟರ್ ಮತ್ತು ಇತರ ಅಧಿಕಾರಿಗಳನ್ನು ಭೇಟಿ ಮಾಡಿ, ಜೈಲುಗಳು ಮತ್ತು ಪೊಲೀಸ್ ಶಿಬಿರಗಳಲ್ಲಿ ಬಂಧಿಸಲ್ಪಟ್ಟ ಮತ್ತು ಶಿಕ್ಷೆಗೊಳಗಾದ ಅಮಾಯಕ ಆದಿವಾಸಿಗಳ ಬಿಡುಗಡೆಗಾಗಿ ಹಲವಾರು ಹೋರಾಟವನ್ನು ನಡೆಸಿದ್ದಾರೆ.

ತಮ್ಮ ಭೂಮಿಯನ್ನು ಪವಿತ್ರ ಭೂವಿ ಎಂದು ಪ್ರತಿಪಾದಿಸುವ ಅವರು ಅಲ್ಲಿನ ಗಣಿಗಾರಿಕೆ ವಿರುದ್ಧವೂ ಹೋರಾಡುತ್ತಿದ್ದರು. ಆದಿವಾಸಿಗಳು ಪವಿತ್ರ ಎಂದು ನಂಬುವ ನಂದರಾಜ್ ಬೆಟ್ಟವನ್ನು ಉಳಿಸುವ ಆಂದೋಲನದ ಭಾಗವಾಗಿ, ಅದಾನಿ ಪ್ರೈವೆಟ್‌‌ ಲಿಮಿಟೆಡ್‌‌ನಂತಹ ಕಂಪೆನಿಗಳು ಬೆಟ್ಟವನ್ನು ನಾಶಪಡಿಸುವುದನ್ನು ವಿರೋಧಿಸಿ, ಕಂಪೆನಿಯ ಗಣಿಗಾರಿಕೆ ಯೋಜನೆಗಳ ವಿರುದ್ಧ ತೀವ್ರವಾಗಿ ಹೋರಾಟವನ್ನು ಸಂಘಟಿಸುತ್ತಿದ್ದಾರೆ.

ಇದನ್ನೂ ಓದಿ: ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧಿಸಿ ಆಂಧ್ರಪ್ರದೇಶ ಬಂದ್

ಹಿಡ್ಮೆ ಮಾರ್ಖಂ ಅವರ ಬಂಧನವನ್ನು ಪೀಪಲ್ಸ್ ಯೂನಿಯನ್ ಆಫ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ‘ಅಪಹರಣ’ ಎಂದು ಖಂಡಿಸಿದೆ.

ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿಕೊಂಡಿದ್ದು, ಈ ನಾಲ್ಕು ಪ್ರಕರಣಗಳಲ್ಲಿ ಯುಎಪಿಎ ಸೇರಿದಂತೆ ಅನೇಕ ಗಂಭೀರ ಆರೋಪಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ಪಿಯುಸಿಎಲ್‌‌ ಹೇಳಿಕೆಯಂತೆ, “ಶಾಂತಿಯುತವಾಗಿ ನೆರೆದಿದ್ದ ಮುನ್ನೂರು ಗ್ರಾಮಸ್ಥರು ಮತ್ತು ಹೋರಾಟಗಾರರ ಮುಂದೆ ಹಿಡ್ಮೆ ಮಾರ್ಖಂ ಅವರನ್ನು ಎಳೆದೊಯ್ಯಲಾಯಿತು. ನೆರೆದಿದ್ದವರಲ್ಲಿ ಜೈಲು ಬಂದಿ ರಿಹೈ ಸಮಿತಿ ಮತ್ತು ಛತ್ತೀಸ್‌ಗಢ ಮಹಿಳಾ ಅಧಿಕಾರಿ ಮಂಚ್‌ನ ಹೋರಾಟಗಾರರು ಕೂಡ ಇದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...