Homeನ್ಯಾಯ ಪಥಪೊಲೀಸರಿಗೆ ವಿಪಾಸನಾ ಧ್ಯಾನ ತರಬೇತಿ ಅಗತ್ಯ

ಪೊಲೀಸರಿಗೆ ವಿಪಾಸನಾ ಧ್ಯಾನ ತರಬೇತಿ ಅಗತ್ಯ

- Advertisement -
- Advertisement -

ಕೊರೊನಾ ವೈರಾಣು ದಾಂಗುಡಿಯಿಟ್ಟ ಮೇಲೆ ಜಗತ್ತು ಅಲ್ಲೋಲ ಕಲ್ಲೋಲವಾಗಿದೆ ಮತ್ತು ಬದುಕಿನ ಲಯವೇ ಬದಲಾಗಿದೆ. ಇದು ಹೊಸ ರೋಗಲಕ್ಷಣವಾದ್ದರಿಂದ, ಚುಚ್ಚುಮದ್ದು ಅಥವಾ ಗುಳಿಗೆಗಳನ್ನು ಇನ್ನೂ ಕಂಡು ಹಿಡಿದಿಲ್ಲವಾದ್ದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದೇ ಅದನ್ನು ತಡೆಯುವ ಸುಲಭೋಪಾಯವೆಂದಾಯಿತು. ಆದ್ದರಿಂದ ‘ಮನೆಯ ಒಳಗಿರು’ ಎಂಬುದು ಬೀಜಮಂತ್ರವಾಯಿತು.

ಬಹುತೇಕ ದೇಶಗಳಲ್ಲಿ ಸರ್ಕಾರಗಳು ಲಾಕ್‌ಡೌನ್ ಘೋಷಿಸಿದವು. ನಮ್ಮ ದೇಶವೂ ಅದನ್ನೇ ಮಾಡಿತು. ಆದರೆ ಜನರು ಕೇಳಬೇಕಲ್ಲ. ಹೊಸದರಲ್ಲಿ ಸಣ್ಣಪುಟ್ಟ ನೆಪವೊಡ್ಡಿ ಕಾರು, ಬೈಕುಗಳಲ್ಲಿ ಬೀದಿಗಿಳಿಯಲಾರಂಭಿಸಿದರು. ಆಶ್ಚರ್ಯವೆಂದರೆ ಜಗತ್ತಿನ ಬೇರೆಲ್ಲೂ ಕಾಣಿಸದಂತಹ ದೃಶ್ಯಗಳು ಭಾರತದ ನಗರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದವು. ನಮ್ಮ ಪೊಲೀಸರು ಬೀದಿಯಲ್ಲಿ ಕಂಡಕಂಡವರನ್ನು ತಮ್ಮ ಲಾಠಿಗಳಿಂದ ಥಳಿಸುತ್ತಿದ್ದರು.

ಎಷ್ಟರಮಟ್ಟಿಗೆಂದರೆ, ಕಚೇರಿಗೆಂದು ಹೊರಟಿದ್ದ ಆರೋಗ್ಯ ಇಲಾಖೆಯಂಥ ತುರ್ತುಸೇವೆಯ ಅಧಿಕಾರಿಯನ್ನು ಗುರುತಿನ ಚೀಟಿ ತೋರಿಸಿದರೂ ಬಿಡದೆ ಮನಬಂದಂತೆ ಥಳಿಸಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದರು.

ಹೀಗೆ ಸಾರ್ವಜನಿಕವಾಗಿ ಹೊಡೆಯುವುದು ಕಾನೂನುಬದ್ಧವಲ್ಲ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಅವರಿಗೂ ತಿಳಿದಿದೆ. ಆದರೂ ಹೊಡೆಯುತ್ತಿದ್ದಾರೆ. ಜನರು ಹೊರಬರದಂತೆ ಭಯ ಹುಟ್ಟಿಸುವ ಉದ್ದೇಶದಿಂದಲೇ ಪೊಲೀಸರು ಹಾಗೆ ಮಾಡಿದ್ದರೂ ಹಿಂಸೆ ಅಲ್ಲಿ ತಾಂಡವವಾಡಿದೆ. ಅನೇಕರು ದೈಹಿಕ ನ್ಯೂನತೆಗೆ ಒಳಗಾಗಿರುವ ಸಾಧ್ಯತೆಗಳಿವೆ. ಕೆಲವರು ಎಷ್ಟು ರಭಸದಿಂದ ಹೊಡೆಯುತ್ತಿದ್ದರೆಂದರೆ ತಮ್ಮೆಲ್ಲ ಬಿರುಸನ್ನೂ ಒಟ್ಟುಗೂಡಿಸಿಕೊಂಡು ಲಾಠಿಯನ್ನು ಬೀಸುತ್ತಿದ್ದರು. ಹೀಗೆ ಹೇಳದೆ ಕೇಳದೆ, ಮುಖವನ್ನೂ ನೋಡದೆ ಬಾರಿಸುತ್ತಿದ್ದರು ಎಂದರೆ ವಿಕೃತಾನಂದವನ್ನು ಪಡೆಯುತ್ತಿದ್ದರು ಎಂದೇ ಅರ್ಥೈಸಬೇಕಾಗುತ್ತದೆ.

ಹಾಗೆಂದ ಮಾತ್ರಕ್ಕೆ ಹೊಡೆಯುತ್ತಿದ್ದವರು ಕೆಟ್ಟವರೆಂದೇನೂ ಅಲ್ಲ. ಮನಸ್ಸನ್ನು ಸ್ಥಿಮಿತದಲ್ಲಿಟ್ಟುಕೊಳ್ಳಲು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಕೋಪವನ್ನು ಉದ್ದೀಪಿಸಲು ಕೆಲವರಿಗೆ ಒಂದು ಸಣ್ಣ ಕಾರಣ ಸಾಕು. ವಸ್ತುಸ್ಥಿತಿಯನ್ನು ನೋಡಿ, ವಿಚಾರ ಮಾಡುವಷ್ಟು ತಾಳ್ಮೆ ಕೆಲವರಲ್ಲಿರುವುದಿಲ್ಲ. ಮನುಷ್ಯನೊಳಗಿರುವ ರಾಗ, ದ್ವೇಷಾದಿಗಳನ್ನು ಹತೋಟಿಯಲ್ಲಿಟ್ಟುಕೊಳ್ಳಲು ತರಬೇತಿಯ ಅಗತ್ಯವಿದೆ. ಅದನ್ನು ವಿಪಸ್ಸನಾ ಧ್ಯಾನ ನೀಡುತ್ತದೆ. ಸಾರ್ವಜನಿಕ ಸೇವೆಯಲ್ಲಿರುವವರಿಗೆ ಅದರಲ್ಲೂ ಮುಖ್ಯವಾಗಿ ಪೊಲೀಸರಿಗೆ ಅದರ ಅಗತ್ಯ ಹೆಚ್ಚು. ಯಾಕೆಂದರೆ ಅವರು ಯಾವಾಗಲೂ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಾರೆ.

ಪಾಶ್ಚಾತ್ಯ ದೇಶಗಳಲ್ಲಿ ಇತ್ತೀಚೆಗೆ ಒಂದು ಹೊಸ ಟ್ರೆಂಡ್ ಶುರುವಾಗಿದೆ. ಒತ್ತಡ ನಿವಾರಣೆಗೆ ಅವರು ವಿಪಸ್ಸನಾ ಧ್ಯಾನದ ಮೊರೆ ಹೋಗುತ್ತಿದ್ದಾರೆ. ಕೆನಡಾ ದೇಶದ ಪೊಲೀಸರಿಗೆ ಹತ್ತು ದಿನಗಳ ಅವಧಿಯ ವಿಪಸ್ಸನಾ ಕಲಿಸಲಾಗುತ್ತಿದೆ. ಅಮೇರಿಕಾದಲ್ಲಿ ಜೈಲಿನಲ್ಲಿರುವ ಖೈದಿಗಳಿಗೂ ವಿಪಸ್ಸನಾ ಧ್ಯಾನ ಕಲಿಸುತ್ತಿದ್ದಾರೆ.

ಇತ್ತೀಚೆಗೆ ಒಂದು ಸಣ್ಣ ವೀಡಿಯೊ ನೋಡಿ ಅಚ್ಚರಿಗೊಂಡೆ. ಅದು ಬ್ರೆಜಿಲ್ ದೇಶದ ಒಂದು ಜೈಲಿನಲ್ಲಿ ಖೈದಿಗಳು ವಿಪಸ್ಸನಾ ಧ್ಯಾನ ಮಾಡುತ್ತಿರುವ ಕಿರುಚಿತ್ರ. ದಕ್ಷಿಣ ಅಮೆರಿಕಾದ ಹೆಚ್ಚಿನ ದೇಶಗಳು ಕ್ಷಿಪ್ರಕ್ರಾಂತಿಗಳಿಂದ ಸರ್ಕಾರ ರಚಿಸುತ್ತವೆ. ಮಾಫಿಯಾಗಳಿವೆ, ಡ್ರಗ್ಸ್ನ ಹಾವಳಿಯಿದೆ. ಕೊಲೆ, ಸುಲಿಗೆ, ಅತ್ಯಾಚಾರ, ದರೋಡೆ ಅಲ್ಲಿ ಮಾಮೂಲು ಘಟನೆಗಳು. ಈ ಎಲ್ಲ ಕಾರಣಗಳಿಂದ ಅಲ್ಲಿನ ಜೈಲುಗಳು ತುಂಬಿ ತುಳುಕುತ್ತವೆ. ಹೆಚ್ಚಿನ ಜೈಲುಗಳನ್ನು ಸೇನೆಗಳು ನೋಡಿಕೊಳ್ಳುತ್ತವೆ. ಆದರೂ ಜೈಲಿನ ಒಳಗೂ ಅದೇ ಕತೆ. ಕೊಲೆ, ಸುಲಿಗೆ, ಮಾಫಿಯಾ ಚಟುವಟಿಕೆ, ಡ್ರಗ್ಸ್ ಇತ್ಯಾದಿ. ಖೈದಿಗಳನ್ನು ತಹಬದಿಗೆ ತರಲು ಅವರಿಗೆ ವಿಪಸ್ಸನಾ ಧ್ಯಾನವನ್ನು ಕಲಿಸುತ್ತಿದ್ದಾರೆ!

ಅವರ ಅನುಭವಗಳನ್ನು ಅವರವರ ಬಾಯಲ್ಲಿಯೇ ಕೇಳಬೇಕು. ಒಬ್ಬ ಹೇಳುತ್ತಿದ್ದ; ಕೋಪ ಹೇಗೆ ಶಮನವಾಗುತ್ತದೆ? ನಮ್ಮೊಳಗಿರುವ ಕಲ್ಮಶವನ್ನು ತೆಗೆದುಹಾಕುವುದರಿಂದ. ಅದರ ಕಾರಣ ಮತ್ತು ಪರಿಣಾಮಗಳನ್ನು ಅರಿಯುವುದರಿಂದ ಅದು ಸಾಧ್ಯ. ಎಲ್ಲ ಕೆಡುಕುಗಳ ಮೂಲ ದ್ವೇ಼ಷ. ಅದನ್ನು ಸ್ವಲ್ಪಸ್ವಲ್ಪವಾಗಿ, ನಿಧನಿಧಾನವಾಗಿ ಹೊರಹಾಕಬೇಕು. ಲೋಭದಿಂದ ಬಿಡುಗಡೆ ಪಡೆಯಬೇಕು. ಆಗ ಅವಿದ್ಯೆ ತಂತಾನೆ ದೂರವಾಗುತ್ತದೆ. ಇವುಗಳನ್ನು ಇತರ ಧರ್ಮಗಳು ಹೇಳುವುದಿಲ್ಲವೆಂದಲ್ಲ.

ಆದರೆ ಬುದ್ಧ ಅವುಗಳ ಅನುಷ್ಠಾನಕ್ಕೆಂದು ಒಂದು ಪ್ರಯೋಗವನ್ನು ಕಂಡುಹಿಡಿದಿದ್ದಾನೆ. ಅದೇ ವಿಪಸ್ಸನಾ ಧ್ಯಾನ. ಬರ್ಮಾ ಮೂಲದ ಎಸ್. ಎನ್. ಗೊಯೆಂಕಾರವರು ಈ ಧ್ಯಾನಮಾರ್ಗವನ್ನು ಧರ್ಮದ ಆಚೆಗೆ ನಿಂತು ಜಗತ್ತಿನಾದ್ಯಂತ ಪ್ರಚುರಪಡಿಸಿದ್ದಾರೆ. ಬೌದ್ಧಧರ್ಮದ ಹಂಗಿಲ್ಲದೆ ಜನರು ಇದನ್ನು ಕಲಿಯುತ್ತಿದ್ದಾರೆ. ಇಲ್ಲಿ ಮತಾಂತರದ ಪ್ರಶ್ನೆಯಿಲ್ಲ. ದೇವರ ಗೊಡವೆಯಿಲ್ಲ. ಆದ್ದರಿಂದ ದೈವನಿಂದನೆಯ ಆರೋಪವಿಲ್ಲ. ಕೊನೆಗೆ ಬುದ್ಧನನ್ನು ಸ್ಮರಿಸದಿದ್ದರೂ ಆಕ್ಷೇಪವಿಲ್ಲ. ವಿಪಸ್ಸನಾ ಮನಸ್ಸನ್ನು ತಿಳಿಗೊಳಿಸುತ್ತದೆ ಮತ್ತು ಇರುವುದನ್ನು ಇರುವ ಹಾಗೆ ನೋಡುವುದನ್ನು ಕಲಿಸುತ್ತದೆ.

ಬಹುತೇಕ ಎಲ್ಲ ರಾಷ್ಟ್ರಗಳಲ್ಲಿಯೂ ಈಗ ವಿಪಸ್ಸನಾ ಧ್ಯಾನ ಕೇಂದ್ರಗಳಿವೆ. ಒತ್ತಡದಲ್ಲಿ ಕೆಲಸ ಮಾಡುವ ಎಲ್ಲ ಸಾರ್ವಜನಿಕ ಸೇವೆಯ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ವಿಶೇಷವಾಗಿ ಪೊಲೀಸರಿಗೆ ಸರ್ಕಾರಗಳೇ ಭಾರತ ಮೂಲವಾದ ಈ ಧ್ಯಾನ ಮಾರ್ಗವನ್ನು ಕಲಿಸಲು ಮುಂದಾಗಬೇಕು.

-ಡಾ. ಮೂಡ್ನಾಕೂಡು ಚಿನ್ನಸ್ವಾಮಿ


ಓದಿ:

ಪ್ರಜಾಪ್ರಭುತ್ವ v/s ಜಾತಿಪ್ರಭುತ್ವ Democracy v/s Castocracy : ಡಾ. ಮೂಡ್ನಾಕೂಡು ಚಿನ್ನಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...