Homeನ್ಯಾಯ ಪಥಪೊಲೀಸರಿಗೆ ವಿಪಾಸನಾ ಧ್ಯಾನ ತರಬೇತಿ ಅಗತ್ಯ

ಪೊಲೀಸರಿಗೆ ವಿಪಾಸನಾ ಧ್ಯಾನ ತರಬೇತಿ ಅಗತ್ಯ

- Advertisement -
- Advertisement -

ಕೊರೊನಾ ವೈರಾಣು ದಾಂಗುಡಿಯಿಟ್ಟ ಮೇಲೆ ಜಗತ್ತು ಅಲ್ಲೋಲ ಕಲ್ಲೋಲವಾಗಿದೆ ಮತ್ತು ಬದುಕಿನ ಲಯವೇ ಬದಲಾಗಿದೆ. ಇದು ಹೊಸ ರೋಗಲಕ್ಷಣವಾದ್ದರಿಂದ, ಚುಚ್ಚುಮದ್ದು ಅಥವಾ ಗುಳಿಗೆಗಳನ್ನು ಇನ್ನೂ ಕಂಡು ಹಿಡಿದಿಲ್ಲವಾದ್ದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದೇ ಅದನ್ನು ತಡೆಯುವ ಸುಲಭೋಪಾಯವೆಂದಾಯಿತು. ಆದ್ದರಿಂದ ‘ಮನೆಯ ಒಳಗಿರು’ ಎಂಬುದು ಬೀಜಮಂತ್ರವಾಯಿತು.

ಬಹುತೇಕ ದೇಶಗಳಲ್ಲಿ ಸರ್ಕಾರಗಳು ಲಾಕ್‌ಡೌನ್ ಘೋಷಿಸಿದವು. ನಮ್ಮ ದೇಶವೂ ಅದನ್ನೇ ಮಾಡಿತು. ಆದರೆ ಜನರು ಕೇಳಬೇಕಲ್ಲ. ಹೊಸದರಲ್ಲಿ ಸಣ್ಣಪುಟ್ಟ ನೆಪವೊಡ್ಡಿ ಕಾರು, ಬೈಕುಗಳಲ್ಲಿ ಬೀದಿಗಿಳಿಯಲಾರಂಭಿಸಿದರು. ಆಶ್ಚರ್ಯವೆಂದರೆ ಜಗತ್ತಿನ ಬೇರೆಲ್ಲೂ ಕಾಣಿಸದಂತಹ ದೃಶ್ಯಗಳು ಭಾರತದ ನಗರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದವು. ನಮ್ಮ ಪೊಲೀಸರು ಬೀದಿಯಲ್ಲಿ ಕಂಡಕಂಡವರನ್ನು ತಮ್ಮ ಲಾಠಿಗಳಿಂದ ಥಳಿಸುತ್ತಿದ್ದರು.

ಎಷ್ಟರಮಟ್ಟಿಗೆಂದರೆ, ಕಚೇರಿಗೆಂದು ಹೊರಟಿದ್ದ ಆರೋಗ್ಯ ಇಲಾಖೆಯಂಥ ತುರ್ತುಸೇವೆಯ ಅಧಿಕಾರಿಯನ್ನು ಗುರುತಿನ ಚೀಟಿ ತೋರಿಸಿದರೂ ಬಿಡದೆ ಮನಬಂದಂತೆ ಥಳಿಸಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದರು.

ಹೀಗೆ ಸಾರ್ವಜನಿಕವಾಗಿ ಹೊಡೆಯುವುದು ಕಾನೂನುಬದ್ಧವಲ್ಲ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಅವರಿಗೂ ತಿಳಿದಿದೆ. ಆದರೂ ಹೊಡೆಯುತ್ತಿದ್ದಾರೆ. ಜನರು ಹೊರಬರದಂತೆ ಭಯ ಹುಟ್ಟಿಸುವ ಉದ್ದೇಶದಿಂದಲೇ ಪೊಲೀಸರು ಹಾಗೆ ಮಾಡಿದ್ದರೂ ಹಿಂಸೆ ಅಲ್ಲಿ ತಾಂಡವವಾಡಿದೆ. ಅನೇಕರು ದೈಹಿಕ ನ್ಯೂನತೆಗೆ ಒಳಗಾಗಿರುವ ಸಾಧ್ಯತೆಗಳಿವೆ. ಕೆಲವರು ಎಷ್ಟು ರಭಸದಿಂದ ಹೊಡೆಯುತ್ತಿದ್ದರೆಂದರೆ ತಮ್ಮೆಲ್ಲ ಬಿರುಸನ್ನೂ ಒಟ್ಟುಗೂಡಿಸಿಕೊಂಡು ಲಾಠಿಯನ್ನು ಬೀಸುತ್ತಿದ್ದರು. ಹೀಗೆ ಹೇಳದೆ ಕೇಳದೆ, ಮುಖವನ್ನೂ ನೋಡದೆ ಬಾರಿಸುತ್ತಿದ್ದರು ಎಂದರೆ ವಿಕೃತಾನಂದವನ್ನು ಪಡೆಯುತ್ತಿದ್ದರು ಎಂದೇ ಅರ್ಥೈಸಬೇಕಾಗುತ್ತದೆ.

ಹಾಗೆಂದ ಮಾತ್ರಕ್ಕೆ ಹೊಡೆಯುತ್ತಿದ್ದವರು ಕೆಟ್ಟವರೆಂದೇನೂ ಅಲ್ಲ. ಮನಸ್ಸನ್ನು ಸ್ಥಿಮಿತದಲ್ಲಿಟ್ಟುಕೊಳ್ಳಲು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಕೋಪವನ್ನು ಉದ್ದೀಪಿಸಲು ಕೆಲವರಿಗೆ ಒಂದು ಸಣ್ಣ ಕಾರಣ ಸಾಕು. ವಸ್ತುಸ್ಥಿತಿಯನ್ನು ನೋಡಿ, ವಿಚಾರ ಮಾಡುವಷ್ಟು ತಾಳ್ಮೆ ಕೆಲವರಲ್ಲಿರುವುದಿಲ್ಲ. ಮನುಷ್ಯನೊಳಗಿರುವ ರಾಗ, ದ್ವೇಷಾದಿಗಳನ್ನು ಹತೋಟಿಯಲ್ಲಿಟ್ಟುಕೊಳ್ಳಲು ತರಬೇತಿಯ ಅಗತ್ಯವಿದೆ. ಅದನ್ನು ವಿಪಸ್ಸನಾ ಧ್ಯಾನ ನೀಡುತ್ತದೆ. ಸಾರ್ವಜನಿಕ ಸೇವೆಯಲ್ಲಿರುವವರಿಗೆ ಅದರಲ್ಲೂ ಮುಖ್ಯವಾಗಿ ಪೊಲೀಸರಿಗೆ ಅದರ ಅಗತ್ಯ ಹೆಚ್ಚು. ಯಾಕೆಂದರೆ ಅವರು ಯಾವಾಗಲೂ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಾರೆ.

ಪಾಶ್ಚಾತ್ಯ ದೇಶಗಳಲ್ಲಿ ಇತ್ತೀಚೆಗೆ ಒಂದು ಹೊಸ ಟ್ರೆಂಡ್ ಶುರುವಾಗಿದೆ. ಒತ್ತಡ ನಿವಾರಣೆಗೆ ಅವರು ವಿಪಸ್ಸನಾ ಧ್ಯಾನದ ಮೊರೆ ಹೋಗುತ್ತಿದ್ದಾರೆ. ಕೆನಡಾ ದೇಶದ ಪೊಲೀಸರಿಗೆ ಹತ್ತು ದಿನಗಳ ಅವಧಿಯ ವಿಪಸ್ಸನಾ ಕಲಿಸಲಾಗುತ್ತಿದೆ. ಅಮೇರಿಕಾದಲ್ಲಿ ಜೈಲಿನಲ್ಲಿರುವ ಖೈದಿಗಳಿಗೂ ವಿಪಸ್ಸನಾ ಧ್ಯಾನ ಕಲಿಸುತ್ತಿದ್ದಾರೆ.

ಇತ್ತೀಚೆಗೆ ಒಂದು ಸಣ್ಣ ವೀಡಿಯೊ ನೋಡಿ ಅಚ್ಚರಿಗೊಂಡೆ. ಅದು ಬ್ರೆಜಿಲ್ ದೇಶದ ಒಂದು ಜೈಲಿನಲ್ಲಿ ಖೈದಿಗಳು ವಿಪಸ್ಸನಾ ಧ್ಯಾನ ಮಾಡುತ್ತಿರುವ ಕಿರುಚಿತ್ರ. ದಕ್ಷಿಣ ಅಮೆರಿಕಾದ ಹೆಚ್ಚಿನ ದೇಶಗಳು ಕ್ಷಿಪ್ರಕ್ರಾಂತಿಗಳಿಂದ ಸರ್ಕಾರ ರಚಿಸುತ್ತವೆ. ಮಾಫಿಯಾಗಳಿವೆ, ಡ್ರಗ್ಸ್ನ ಹಾವಳಿಯಿದೆ. ಕೊಲೆ, ಸುಲಿಗೆ, ಅತ್ಯಾಚಾರ, ದರೋಡೆ ಅಲ್ಲಿ ಮಾಮೂಲು ಘಟನೆಗಳು. ಈ ಎಲ್ಲ ಕಾರಣಗಳಿಂದ ಅಲ್ಲಿನ ಜೈಲುಗಳು ತುಂಬಿ ತುಳುಕುತ್ತವೆ. ಹೆಚ್ಚಿನ ಜೈಲುಗಳನ್ನು ಸೇನೆಗಳು ನೋಡಿಕೊಳ್ಳುತ್ತವೆ. ಆದರೂ ಜೈಲಿನ ಒಳಗೂ ಅದೇ ಕತೆ. ಕೊಲೆ, ಸುಲಿಗೆ, ಮಾಫಿಯಾ ಚಟುವಟಿಕೆ, ಡ್ರಗ್ಸ್ ಇತ್ಯಾದಿ. ಖೈದಿಗಳನ್ನು ತಹಬದಿಗೆ ತರಲು ಅವರಿಗೆ ವಿಪಸ್ಸನಾ ಧ್ಯಾನವನ್ನು ಕಲಿಸುತ್ತಿದ್ದಾರೆ!

ಅವರ ಅನುಭವಗಳನ್ನು ಅವರವರ ಬಾಯಲ್ಲಿಯೇ ಕೇಳಬೇಕು. ಒಬ್ಬ ಹೇಳುತ್ತಿದ್ದ; ಕೋಪ ಹೇಗೆ ಶಮನವಾಗುತ್ತದೆ? ನಮ್ಮೊಳಗಿರುವ ಕಲ್ಮಶವನ್ನು ತೆಗೆದುಹಾಕುವುದರಿಂದ. ಅದರ ಕಾರಣ ಮತ್ತು ಪರಿಣಾಮಗಳನ್ನು ಅರಿಯುವುದರಿಂದ ಅದು ಸಾಧ್ಯ. ಎಲ್ಲ ಕೆಡುಕುಗಳ ಮೂಲ ದ್ವೇ಼ಷ. ಅದನ್ನು ಸ್ವಲ್ಪಸ್ವಲ್ಪವಾಗಿ, ನಿಧನಿಧಾನವಾಗಿ ಹೊರಹಾಕಬೇಕು. ಲೋಭದಿಂದ ಬಿಡುಗಡೆ ಪಡೆಯಬೇಕು. ಆಗ ಅವಿದ್ಯೆ ತಂತಾನೆ ದೂರವಾಗುತ್ತದೆ. ಇವುಗಳನ್ನು ಇತರ ಧರ್ಮಗಳು ಹೇಳುವುದಿಲ್ಲವೆಂದಲ್ಲ.

ಆದರೆ ಬುದ್ಧ ಅವುಗಳ ಅನುಷ್ಠಾನಕ್ಕೆಂದು ಒಂದು ಪ್ರಯೋಗವನ್ನು ಕಂಡುಹಿಡಿದಿದ್ದಾನೆ. ಅದೇ ವಿಪಸ್ಸನಾ ಧ್ಯಾನ. ಬರ್ಮಾ ಮೂಲದ ಎಸ್. ಎನ್. ಗೊಯೆಂಕಾರವರು ಈ ಧ್ಯಾನಮಾರ್ಗವನ್ನು ಧರ್ಮದ ಆಚೆಗೆ ನಿಂತು ಜಗತ್ತಿನಾದ್ಯಂತ ಪ್ರಚುರಪಡಿಸಿದ್ದಾರೆ. ಬೌದ್ಧಧರ್ಮದ ಹಂಗಿಲ್ಲದೆ ಜನರು ಇದನ್ನು ಕಲಿಯುತ್ತಿದ್ದಾರೆ. ಇಲ್ಲಿ ಮತಾಂತರದ ಪ್ರಶ್ನೆಯಿಲ್ಲ. ದೇವರ ಗೊಡವೆಯಿಲ್ಲ. ಆದ್ದರಿಂದ ದೈವನಿಂದನೆಯ ಆರೋಪವಿಲ್ಲ. ಕೊನೆಗೆ ಬುದ್ಧನನ್ನು ಸ್ಮರಿಸದಿದ್ದರೂ ಆಕ್ಷೇಪವಿಲ್ಲ. ವಿಪಸ್ಸನಾ ಮನಸ್ಸನ್ನು ತಿಳಿಗೊಳಿಸುತ್ತದೆ ಮತ್ತು ಇರುವುದನ್ನು ಇರುವ ಹಾಗೆ ನೋಡುವುದನ್ನು ಕಲಿಸುತ್ತದೆ.

ಬಹುತೇಕ ಎಲ್ಲ ರಾಷ್ಟ್ರಗಳಲ್ಲಿಯೂ ಈಗ ವಿಪಸ್ಸನಾ ಧ್ಯಾನ ಕೇಂದ್ರಗಳಿವೆ. ಒತ್ತಡದಲ್ಲಿ ಕೆಲಸ ಮಾಡುವ ಎಲ್ಲ ಸಾರ್ವಜನಿಕ ಸೇವೆಯ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ವಿಶೇಷವಾಗಿ ಪೊಲೀಸರಿಗೆ ಸರ್ಕಾರಗಳೇ ಭಾರತ ಮೂಲವಾದ ಈ ಧ್ಯಾನ ಮಾರ್ಗವನ್ನು ಕಲಿಸಲು ಮುಂದಾಗಬೇಕು.

-ಡಾ. ಮೂಡ್ನಾಕೂಡು ಚಿನ್ನಸ್ವಾಮಿ


ಓದಿ:

ಪ್ರಜಾಪ್ರಭುತ್ವ v/s ಜಾತಿಪ್ರಭುತ್ವ Democracy v/s Castocracy : ಡಾ. ಮೂಡ್ನಾಕೂಡು ಚಿನ್ನಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...