Homeಮುಖಪುಟಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

ಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

- Advertisement -
- Advertisement -

‍ಹಿಂಸಾತ್ಮಕ ಘಟನೆಗಳ ನಡುವೆ ಉತ್ತರ ಪ್ರದೇಶದ ಬ್ಲಾಕ್ ಪ್ರಮುಖರ ಚುನಾವಣೆ ನಡೆದು ಫಲಿತಾಂಶವೂ ಬಂದಿದೆ. ಚುನಾವಣೆಯ ಸಂದರ್ಭದಲ್ಲಿ ಉನ್ನಾವೊ ಜಿಲ್ಲೆಯ ಒಂದು ಘಟನೆ ದೇಶದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ. ಇಲ್ಲಿಯ ಚೀಫ್ ಡೆವಲಪ್‌ಮೆಂಟ್‌ ಅಧಿಕಾರಿ ದಿವ್ಯಾಂಶು ಪಟೇಲ್ ವಿವಾದಕ್ಕೆ ಕಾರಣರಾಗಿದ್ದರೆ. ಚುನಾವಣೆ ಸಮಯದಲ್ಲಿ ಅವರು ಪತ್ರಕರ್ತರನ್ನು ಥಳಿಸಿದ್ದಾರೆ ಎಂದು ಆರೋಪ ಕೇಳಿಬಂದಿದ್ದು ಆ ಸಂಬಂಧ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

IAS ಅಧಿಕಾರಿ ದಿವ್ಯಾಂಶು ಪಟೇಲ್ ಅವರ ಅಮಾನತ್ತಿಗೆ ಅನೇಕ ಹಿರಿಯ ರಾಜಕಾರಣಿಗಳು ಒತ್ತಾಯಿಸಿದ್ದಾರೆ. ಮತ್ತು ಸಿಡಿಒ ಬಂಧನಕ್ಕೆ ಒತ್ತಾಯಿಸಿ ಸೋಶಿಯಲ್ ಮೀಡಿಯಾದಲ್ಲಿ ನಿರಂತರವಾಗಿ ಟ್ರೆಂಡಿಂಗ್ ನಡೆಯುತ್ತಿದೆ.

ಉತ್ತರ ಪ್ರದೇಶದಲ್ಲಿ ನಡೆದ ಬ್ಲಾಕ್‌ ಪ್ರಮುಖ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸುತ್ತಿದ್ದಂತೆ ವ್ಯಾಪಕ ಹಿಂಸಾಚಾರ ನಡೆದಿತ್ತು. ಚುನಾವಣೆ ಫಲಿತಾಂಶ ಘೊಷಣೆ ನಡೆದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ವಿರೋಧ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಟಿ.ವಿ. ವಾಹಿನಿಯ ಪತ್ರಕರ್ತ ಕೃಷ್ಣ ತಿವಾರಿಯವರ ಮೇಲೆ ಬಿಜೆಪಿ ಕಾರ್ಯಕರ್ತರು ಮತ್ತು ಸಿಡಿಒ ದಿವ್ಯಾಂಶು ಪಟೇಲ್‌ ಹಿಗ್ಗಾ ಮುಗ್ಗಾ ಥಳಿಸುತ್ತಿರುವ ವಿಡಿಯೋ ಫೇಸ್‌ಬುಕ್‌ ಮತ್ತು ಟ್ವಿಟ್ಟರ್‌ನಲ್ಲಿ ಹರಿದಾಡುತ್ತಿದೆ. ಪತ್ರಕರ್ತರ ಮೇಲಿನ ಹಲ್ಲೆಯ ದೃಶ್ಯ ಬೆಳಕಿಗೆ ಬರುತ್ತಿದಂತೆ  ಘಟನೆಯನ್ನು ಖಂಡಿಸಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಬ್ರಜೇಶ್‌ ಮಿಶ್ರಾ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

ಕಾಂಗ್ರೆಸ್‌ ನಾಯಕ ಕ್ಯಾಪ್ಟನ್‌ ಅಜಯ್‌ ಸಿಂಗ್‌ ಪತ್ರಕರ್ತರ ಮೇಲೆ ದೌರ್ಜನ್ಯವೆಸಗಿದ ಸಿಡಿಒ ದಿವ್ಯಾಂಶು ಪಟೇಲ್‌ ಅವರ ಅಮಾನತ್ತಿಗೆ ಆಗ್ರಹಿಸಿದ್ದಾರೆ. ಪತ್ರಿಕೋದ್ಯಮ ಸಂವಿಧಾನದ 4 ನೇ ಅಂಗ. IAS ಅಧಿಕಾರಿಯೊಬ್ಬರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಸಂವಿಧಾನದ ಮೇಲೆಯೆ ಹಲ್ಲೆ ನಡೆಸಿದಂತೆ. ಜನರ ಅಭಿಪ್ರಾಯಗಳನ್ನು ವರದಿ ಮಾಡುತ್ತಿದ್ದ ಪತ್ರಕರ್ತ ಕೃಷ್ಣ ತಿವಾರಿಯವರಿಗೆ ಥಳಿಸಿದ ದಿವ್ಯಾಂಶು ಪಟೇಲ್ ಮತ್ತು ಬಿಜೆಪಿ ಕಾರ್ಯಕರ್ತರ ಬಂಧನವಾಗಬೇಕೆಂದು ಅವರು ಟ್ವೀಟ್‌ ಮಾಡಿದ್ದಾರೆ.

ಅತ್ಯಾಚಾರ, ದೌರ್ಜನ್ಯ, ಅಧಿಕಾರದ ಮದ, ಪೊಲೀಸ್ ದಬ್ಬಾಳಿಕೆ ಇದು ಉತ್ತರ ಪ್ರದೇಶ ಸರ್ಕಾರದ ಮುಖ್ಯ ಪ್ರಾಯೋಜಿತ ಕಾರ್ಯಕ್ರಮಗಳು. ಇನ್ನು ಮೌನ ವಹಿಸಿ ಕೂತರೆ ದೇಶದಲ್ಲಿ ಶಾಂತಿ ಮತ್ತು ನೆಮ್ಮದಿ ಮರೀಚಿಕೆಗಳಷ್ಟೆ ಎಂದು ಪತ್ರಕರ್ತನ ಮೇಲಿನ ಹಲ್ಲೆ ಕುರಿತು ಕಾಂಗ್ರೆಸ್‌ ವಕ್ತಾರೆ ಡಾ. ಅರ್ಚನಾ ಶರ್ಮಾ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಿಡಿಒ ದಿವ್ಯಾಂಶು ಪಟೇಲ್‌ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಜಿಲ್ಲಾಡಳಿತ ಘಟನೆಯ ವರದಿಯನ್ನು ಕೇಳಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: 2015-19ರ ನಡುವೆ ದ್ವಿಗುಣಗೊಂಡ ಮಹಿಳೆಯರ ಮೇಲಿನ ದೌರ್ಜನ್ಯ!

ಪತ್ರಕರ್ತರ ಮೇಲಿನ ಹಲ್ಲೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾದಂತಿದೆ. ನಾವು ಪ್ರಜಾಪ್ರಭುತ್ವ ದೇಶದಲ್ಲಿ ಇದ್ದೇವೆಯೇ ಅಥವಾ ಪೊಲೀಸ್‌ ರಾಜ್ಯದಲ್ಲಿರುವುದೋ ಎಂದು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಅನೇಕರು ಆಕ್ರೋಶ ಹೊರಹಾಕಿದ್ದಾರೆ.  ಚುನಾವಣೆಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿದ್ದು ಪೊಲೀಸರ ಎದುರಿನಲ್ಲಿಯೇ ಘರ್ಷಣೆ ಮತ್ತು ಗುಂಡಿನ ದಾಳಿಗಳು ಸಹ ನಡೆದಿವೆ ಎಂದು ರಾಷ್ಟ್ರೀಯ ವಾಹಿನಿಯೊಂದು ವರದಿ ಮಾಡಿದೆ.

ಬ್ಲಾಕ್‌ ಪ್ರಮುಖ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಿಂಗ್‌ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ್ದರು.

ಗ್ರಾಮ ಪಂಚಾಯತಿ, ಬ್ಲಾಕ್‌ ಪಂಚಾಯತಿಯಂತಹ ಸ್ಥಳೀಯ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಅಭಿನಂದಿಸುವ ಪ್ರಧಾನಿ ಮೋದಿಯವರು ಪತ್ರಕರ್ತರ ಮೇಲೆ  ಹಲ್ಲೆ ನಡೆದಾಗ ಯಾಕೆ ತುಟಿ ಬಿಚ್ಚುವುದಿಲ್ಲ ? ತಮ್ಮ ಕಾರ್ಯಕರ್ತರಲ್ಲಿ ಶಾಂತಿ ಸ್ಥಾಪನೆಗೆ ಕರೆ ನೀಡುವುದಿಲ್ಲ ? ಈಶಾನ್ಯ ದೆಹಲಿಯ ಗಲಭೆ ಸಂದರ್ಭದಿಂದ ಹಿಡಿದು ನಿನ್ನೆಯ ಪೊಲೀಸ್‌ ದೌರ್ಜನ್ಯದವರೆಗೆ ಪ್ರಧಾನಿಯವರ ದಿವ್ಯ ಮೌನ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ ಎಂದು ದೇಶದ ಅನೇಕ ರಾಜಕೀಯ ನಾಯಕರು, ನ್ಯಾಯವಾದಿಗಳು ಮತ್ತು ಹರಿಯ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಪ್ರಾಯೋಜಿತ ಹಿಂಸಾಚಾರ ಮತ್ತು ಭಿನ್ನಮತವನ್ನು ಪೊಲೀಸ್‌ ಬಲದಿಂದ ದಮನಿಸುವ ಬಿಜೆಪಿ ತಂತದ್ರದ ವಿರುದ್ಧ ಜನರು ಧ್ವನಿ ಎತ್ತಬೇಕು ಎಂದು ಕಾಂಗ್ರೆಸ್‌, ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಕರೆ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ ಮೇಲೆ ಮನಸೋ…

-ರಾಜೇಶ್ ಹೆಬ್ಬಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...