Homeಮುಖಪುಟಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

ಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

- Advertisement -
- Advertisement -

‍ಹಿಂಸಾತ್ಮಕ ಘಟನೆಗಳ ನಡುವೆ ಉತ್ತರ ಪ್ರದೇಶದ ಬ್ಲಾಕ್ ಪ್ರಮುಖರ ಚುನಾವಣೆ ನಡೆದು ಫಲಿತಾಂಶವೂ ಬಂದಿದೆ. ಚುನಾವಣೆಯ ಸಂದರ್ಭದಲ್ಲಿ ಉನ್ನಾವೊ ಜಿಲ್ಲೆಯ ಒಂದು ಘಟನೆ ದೇಶದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ. ಇಲ್ಲಿಯ ಚೀಫ್ ಡೆವಲಪ್‌ಮೆಂಟ್‌ ಅಧಿಕಾರಿ ದಿವ್ಯಾಂಶು ಪಟೇಲ್ ವಿವಾದಕ್ಕೆ ಕಾರಣರಾಗಿದ್ದರೆ. ಚುನಾವಣೆ ಸಮಯದಲ್ಲಿ ಅವರು ಪತ್ರಕರ್ತರನ್ನು ಥಳಿಸಿದ್ದಾರೆ ಎಂದು ಆರೋಪ ಕೇಳಿಬಂದಿದ್ದು ಆ ಸಂಬಂಧ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

IAS ಅಧಿಕಾರಿ ದಿವ್ಯಾಂಶು ಪಟೇಲ್ ಅವರ ಅಮಾನತ್ತಿಗೆ ಅನೇಕ ಹಿರಿಯ ರಾಜಕಾರಣಿಗಳು ಒತ್ತಾಯಿಸಿದ್ದಾರೆ. ಮತ್ತು ಸಿಡಿಒ ಬಂಧನಕ್ಕೆ ಒತ್ತಾಯಿಸಿ ಸೋಶಿಯಲ್ ಮೀಡಿಯಾದಲ್ಲಿ ನಿರಂತರವಾಗಿ ಟ್ರೆಂಡಿಂಗ್ ನಡೆಯುತ್ತಿದೆ.

ಉತ್ತರ ಪ್ರದೇಶದಲ್ಲಿ ನಡೆದ ಬ್ಲಾಕ್‌ ಪ್ರಮುಖ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸುತ್ತಿದ್ದಂತೆ ವ್ಯಾಪಕ ಹಿಂಸಾಚಾರ ನಡೆದಿತ್ತು. ಚುನಾವಣೆ ಫಲಿತಾಂಶ ಘೊಷಣೆ ನಡೆದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ವಿರೋಧ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಟಿ.ವಿ. ವಾಹಿನಿಯ ಪತ್ರಕರ್ತ ಕೃಷ್ಣ ತಿವಾರಿಯವರ ಮೇಲೆ ಬಿಜೆಪಿ ಕಾರ್ಯಕರ್ತರು ಮತ್ತು ಸಿಡಿಒ ದಿವ್ಯಾಂಶು ಪಟೇಲ್‌ ಹಿಗ್ಗಾ ಮುಗ್ಗಾ ಥಳಿಸುತ್ತಿರುವ ವಿಡಿಯೋ ಫೇಸ್‌ಬುಕ್‌ ಮತ್ತು ಟ್ವಿಟ್ಟರ್‌ನಲ್ಲಿ ಹರಿದಾಡುತ್ತಿದೆ. ಪತ್ರಕರ್ತರ ಮೇಲಿನ ಹಲ್ಲೆಯ ದೃಶ್ಯ ಬೆಳಕಿಗೆ ಬರುತ್ತಿದಂತೆ  ಘಟನೆಯನ್ನು ಖಂಡಿಸಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಬ್ರಜೇಶ್‌ ಮಿಶ್ರಾ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

ಕಾಂಗ್ರೆಸ್‌ ನಾಯಕ ಕ್ಯಾಪ್ಟನ್‌ ಅಜಯ್‌ ಸಿಂಗ್‌ ಪತ್ರಕರ್ತರ ಮೇಲೆ ದೌರ್ಜನ್ಯವೆಸಗಿದ ಸಿಡಿಒ ದಿವ್ಯಾಂಶು ಪಟೇಲ್‌ ಅವರ ಅಮಾನತ್ತಿಗೆ ಆಗ್ರಹಿಸಿದ್ದಾರೆ. ಪತ್ರಿಕೋದ್ಯಮ ಸಂವಿಧಾನದ 4 ನೇ ಅಂಗ. IAS ಅಧಿಕಾರಿಯೊಬ್ಬರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಸಂವಿಧಾನದ ಮೇಲೆಯೆ ಹಲ್ಲೆ ನಡೆಸಿದಂತೆ. ಜನರ ಅಭಿಪ್ರಾಯಗಳನ್ನು ವರದಿ ಮಾಡುತ್ತಿದ್ದ ಪತ್ರಕರ್ತ ಕೃಷ್ಣ ತಿವಾರಿಯವರಿಗೆ ಥಳಿಸಿದ ದಿವ್ಯಾಂಶು ಪಟೇಲ್ ಮತ್ತು ಬಿಜೆಪಿ ಕಾರ್ಯಕರ್ತರ ಬಂಧನವಾಗಬೇಕೆಂದು ಅವರು ಟ್ವೀಟ್‌ ಮಾಡಿದ್ದಾರೆ.

ಅತ್ಯಾಚಾರ, ದೌರ್ಜನ್ಯ, ಅಧಿಕಾರದ ಮದ, ಪೊಲೀಸ್ ದಬ್ಬಾಳಿಕೆ ಇದು ಉತ್ತರ ಪ್ರದೇಶ ಸರ್ಕಾರದ ಮುಖ್ಯ ಪ್ರಾಯೋಜಿತ ಕಾರ್ಯಕ್ರಮಗಳು. ಇನ್ನು ಮೌನ ವಹಿಸಿ ಕೂತರೆ ದೇಶದಲ್ಲಿ ಶಾಂತಿ ಮತ್ತು ನೆಮ್ಮದಿ ಮರೀಚಿಕೆಗಳಷ್ಟೆ ಎಂದು ಪತ್ರಕರ್ತನ ಮೇಲಿನ ಹಲ್ಲೆ ಕುರಿತು ಕಾಂಗ್ರೆಸ್‌ ವಕ್ತಾರೆ ಡಾ. ಅರ್ಚನಾ ಶರ್ಮಾ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಿಡಿಒ ದಿವ್ಯಾಂಶು ಪಟೇಲ್‌ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಜಿಲ್ಲಾಡಳಿತ ಘಟನೆಯ ವರದಿಯನ್ನು ಕೇಳಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: 2015-19ರ ನಡುವೆ ದ್ವಿಗುಣಗೊಂಡ ಮಹಿಳೆಯರ ಮೇಲಿನ ದೌರ್ಜನ್ಯ!

ಪತ್ರಕರ್ತರ ಮೇಲಿನ ಹಲ್ಲೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾದಂತಿದೆ. ನಾವು ಪ್ರಜಾಪ್ರಭುತ್ವ ದೇಶದಲ್ಲಿ ಇದ್ದೇವೆಯೇ ಅಥವಾ ಪೊಲೀಸ್‌ ರಾಜ್ಯದಲ್ಲಿರುವುದೋ ಎಂದು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಅನೇಕರು ಆಕ್ರೋಶ ಹೊರಹಾಕಿದ್ದಾರೆ.  ಚುನಾವಣೆಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿದ್ದು ಪೊಲೀಸರ ಎದುರಿನಲ್ಲಿಯೇ ಘರ್ಷಣೆ ಮತ್ತು ಗುಂಡಿನ ದಾಳಿಗಳು ಸಹ ನಡೆದಿವೆ ಎಂದು ರಾಷ್ಟ್ರೀಯ ವಾಹಿನಿಯೊಂದು ವರದಿ ಮಾಡಿದೆ.

ಬ್ಲಾಕ್‌ ಪ್ರಮುಖ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಿಂಗ್‌ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ್ದರು.

ಗ್ರಾಮ ಪಂಚಾಯತಿ, ಬ್ಲಾಕ್‌ ಪಂಚಾಯತಿಯಂತಹ ಸ್ಥಳೀಯ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಅಭಿನಂದಿಸುವ ಪ್ರಧಾನಿ ಮೋದಿಯವರು ಪತ್ರಕರ್ತರ ಮೇಲೆ  ಹಲ್ಲೆ ನಡೆದಾಗ ಯಾಕೆ ತುಟಿ ಬಿಚ್ಚುವುದಿಲ್ಲ ? ತಮ್ಮ ಕಾರ್ಯಕರ್ತರಲ್ಲಿ ಶಾಂತಿ ಸ್ಥಾಪನೆಗೆ ಕರೆ ನೀಡುವುದಿಲ್ಲ ? ಈಶಾನ್ಯ ದೆಹಲಿಯ ಗಲಭೆ ಸಂದರ್ಭದಿಂದ ಹಿಡಿದು ನಿನ್ನೆಯ ಪೊಲೀಸ್‌ ದೌರ್ಜನ್ಯದವರೆಗೆ ಪ್ರಧಾನಿಯವರ ದಿವ್ಯ ಮೌನ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ ಎಂದು ದೇಶದ ಅನೇಕ ರಾಜಕೀಯ ನಾಯಕರು, ನ್ಯಾಯವಾದಿಗಳು ಮತ್ತು ಹರಿಯ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಪ್ರಾಯೋಜಿತ ಹಿಂಸಾಚಾರ ಮತ್ತು ಭಿನ್ನಮತವನ್ನು ಪೊಲೀಸ್‌ ಬಲದಿಂದ ದಮನಿಸುವ ಬಿಜೆಪಿ ತಂತದ್ರದ ವಿರುದ್ಧ ಜನರು ಧ್ವನಿ ಎತ್ತಬೇಕು ಎಂದು ಕಾಂಗ್ರೆಸ್‌, ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಕರೆ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ ಮೇಲೆ ಮನಸೋ…

-ರಾಜೇಶ್ ಹೆಬ್ಬಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...