Homeಮುಖಪುಟಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

ಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

- Advertisement -
- Advertisement -

‍ಹಿಂಸಾತ್ಮಕ ಘಟನೆಗಳ ನಡುವೆ ಉತ್ತರ ಪ್ರದೇಶದ ಬ್ಲಾಕ್ ಪ್ರಮುಖರ ಚುನಾವಣೆ ನಡೆದು ಫಲಿತಾಂಶವೂ ಬಂದಿದೆ. ಚುನಾವಣೆಯ ಸಂದರ್ಭದಲ್ಲಿ ಉನ್ನಾವೊ ಜಿಲ್ಲೆಯ ಒಂದು ಘಟನೆ ದೇಶದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ. ಇಲ್ಲಿಯ ಚೀಫ್ ಡೆವಲಪ್‌ಮೆಂಟ್‌ ಅಧಿಕಾರಿ ದಿವ್ಯಾಂಶು ಪಟೇಲ್ ವಿವಾದಕ್ಕೆ ಕಾರಣರಾಗಿದ್ದರೆ. ಚುನಾವಣೆ ಸಮಯದಲ್ಲಿ ಅವರು ಪತ್ರಕರ್ತರನ್ನು ಥಳಿಸಿದ್ದಾರೆ ಎಂದು ಆರೋಪ ಕೇಳಿಬಂದಿದ್ದು ಆ ಸಂಬಂಧ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

IAS ಅಧಿಕಾರಿ ದಿವ್ಯಾಂಶು ಪಟೇಲ್ ಅವರ ಅಮಾನತ್ತಿಗೆ ಅನೇಕ ಹಿರಿಯ ರಾಜಕಾರಣಿಗಳು ಒತ್ತಾಯಿಸಿದ್ದಾರೆ. ಮತ್ತು ಸಿಡಿಒ ಬಂಧನಕ್ಕೆ ಒತ್ತಾಯಿಸಿ ಸೋಶಿಯಲ್ ಮೀಡಿಯಾದಲ್ಲಿ ನಿರಂತರವಾಗಿ ಟ್ರೆಂಡಿಂಗ್ ನಡೆಯುತ್ತಿದೆ.

ಉತ್ತರ ಪ್ರದೇಶದಲ್ಲಿ ನಡೆದ ಬ್ಲಾಕ್‌ ಪ್ರಮುಖ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸುತ್ತಿದ್ದಂತೆ ವ್ಯಾಪಕ ಹಿಂಸಾಚಾರ ನಡೆದಿತ್ತು. ಚುನಾವಣೆ ಫಲಿತಾಂಶ ಘೊಷಣೆ ನಡೆದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ವಿರೋಧ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಟಿ.ವಿ. ವಾಹಿನಿಯ ಪತ್ರಕರ್ತ ಕೃಷ್ಣ ತಿವಾರಿಯವರ ಮೇಲೆ ಬಿಜೆಪಿ ಕಾರ್ಯಕರ್ತರು ಮತ್ತು ಸಿಡಿಒ ದಿವ್ಯಾಂಶು ಪಟೇಲ್‌ ಹಿಗ್ಗಾ ಮುಗ್ಗಾ ಥಳಿಸುತ್ತಿರುವ ವಿಡಿಯೋ ಫೇಸ್‌ಬುಕ್‌ ಮತ್ತು ಟ್ವಿಟ್ಟರ್‌ನಲ್ಲಿ ಹರಿದಾಡುತ್ತಿದೆ. ಪತ್ರಕರ್ತರ ಮೇಲಿನ ಹಲ್ಲೆಯ ದೃಶ್ಯ ಬೆಳಕಿಗೆ ಬರುತ್ತಿದಂತೆ  ಘಟನೆಯನ್ನು ಖಂಡಿಸಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಬ್ರಜೇಶ್‌ ಮಿಶ್ರಾ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

ಕಾಂಗ್ರೆಸ್‌ ನಾಯಕ ಕ್ಯಾಪ್ಟನ್‌ ಅಜಯ್‌ ಸಿಂಗ್‌ ಪತ್ರಕರ್ತರ ಮೇಲೆ ದೌರ್ಜನ್ಯವೆಸಗಿದ ಸಿಡಿಒ ದಿವ್ಯಾಂಶು ಪಟೇಲ್‌ ಅವರ ಅಮಾನತ್ತಿಗೆ ಆಗ್ರಹಿಸಿದ್ದಾರೆ. ಪತ್ರಿಕೋದ್ಯಮ ಸಂವಿಧಾನದ 4 ನೇ ಅಂಗ. IAS ಅಧಿಕಾರಿಯೊಬ್ಬರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಸಂವಿಧಾನದ ಮೇಲೆಯೆ ಹಲ್ಲೆ ನಡೆಸಿದಂತೆ. ಜನರ ಅಭಿಪ್ರಾಯಗಳನ್ನು ವರದಿ ಮಾಡುತ್ತಿದ್ದ ಪತ್ರಕರ್ತ ಕೃಷ್ಣ ತಿವಾರಿಯವರಿಗೆ ಥಳಿಸಿದ ದಿವ್ಯಾಂಶು ಪಟೇಲ್ ಮತ್ತು ಬಿಜೆಪಿ ಕಾರ್ಯಕರ್ತರ ಬಂಧನವಾಗಬೇಕೆಂದು ಅವರು ಟ್ವೀಟ್‌ ಮಾಡಿದ್ದಾರೆ.

ಅತ್ಯಾಚಾರ, ದೌರ್ಜನ್ಯ, ಅಧಿಕಾರದ ಮದ, ಪೊಲೀಸ್ ದಬ್ಬಾಳಿಕೆ ಇದು ಉತ್ತರ ಪ್ರದೇಶ ಸರ್ಕಾರದ ಮುಖ್ಯ ಪ್ರಾಯೋಜಿತ ಕಾರ್ಯಕ್ರಮಗಳು. ಇನ್ನು ಮೌನ ವಹಿಸಿ ಕೂತರೆ ದೇಶದಲ್ಲಿ ಶಾಂತಿ ಮತ್ತು ನೆಮ್ಮದಿ ಮರೀಚಿಕೆಗಳಷ್ಟೆ ಎಂದು ಪತ್ರಕರ್ತನ ಮೇಲಿನ ಹಲ್ಲೆ ಕುರಿತು ಕಾಂಗ್ರೆಸ್‌ ವಕ್ತಾರೆ ಡಾ. ಅರ್ಚನಾ ಶರ್ಮಾ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಿಡಿಒ ದಿವ್ಯಾಂಶು ಪಟೇಲ್‌ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಜಿಲ್ಲಾಡಳಿತ ಘಟನೆಯ ವರದಿಯನ್ನು ಕೇಳಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: 2015-19ರ ನಡುವೆ ದ್ವಿಗುಣಗೊಂಡ ಮಹಿಳೆಯರ ಮೇಲಿನ ದೌರ್ಜನ್ಯ!

ಪತ್ರಕರ್ತರ ಮೇಲಿನ ಹಲ್ಲೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾದಂತಿದೆ. ನಾವು ಪ್ರಜಾಪ್ರಭುತ್ವ ದೇಶದಲ್ಲಿ ಇದ್ದೇವೆಯೇ ಅಥವಾ ಪೊಲೀಸ್‌ ರಾಜ್ಯದಲ್ಲಿರುವುದೋ ಎಂದು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಅನೇಕರು ಆಕ್ರೋಶ ಹೊರಹಾಕಿದ್ದಾರೆ.  ಚುನಾವಣೆಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿದ್ದು ಪೊಲೀಸರ ಎದುರಿನಲ್ಲಿಯೇ ಘರ್ಷಣೆ ಮತ್ತು ಗುಂಡಿನ ದಾಳಿಗಳು ಸಹ ನಡೆದಿವೆ ಎಂದು ರಾಷ್ಟ್ರೀಯ ವಾಹಿನಿಯೊಂದು ವರದಿ ಮಾಡಿದೆ.

ಬ್ಲಾಕ್‌ ಪ್ರಮುಖ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಿಂಗ್‌ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ್ದರು.

ಗ್ರಾಮ ಪಂಚಾಯತಿ, ಬ್ಲಾಕ್‌ ಪಂಚಾಯತಿಯಂತಹ ಸ್ಥಳೀಯ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಅಭಿನಂದಿಸುವ ಪ್ರಧಾನಿ ಮೋದಿಯವರು ಪತ್ರಕರ್ತರ ಮೇಲೆ  ಹಲ್ಲೆ ನಡೆದಾಗ ಯಾಕೆ ತುಟಿ ಬಿಚ್ಚುವುದಿಲ್ಲ ? ತಮ್ಮ ಕಾರ್ಯಕರ್ತರಲ್ಲಿ ಶಾಂತಿ ಸ್ಥಾಪನೆಗೆ ಕರೆ ನೀಡುವುದಿಲ್ಲ ? ಈಶಾನ್ಯ ದೆಹಲಿಯ ಗಲಭೆ ಸಂದರ್ಭದಿಂದ ಹಿಡಿದು ನಿನ್ನೆಯ ಪೊಲೀಸ್‌ ದೌರ್ಜನ್ಯದವರೆಗೆ ಪ್ರಧಾನಿಯವರ ದಿವ್ಯ ಮೌನ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ ಎಂದು ದೇಶದ ಅನೇಕ ರಾಜಕೀಯ ನಾಯಕರು, ನ್ಯಾಯವಾದಿಗಳು ಮತ್ತು ಹರಿಯ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಪ್ರಾಯೋಜಿತ ಹಿಂಸಾಚಾರ ಮತ್ತು ಭಿನ್ನಮತವನ್ನು ಪೊಲೀಸ್‌ ಬಲದಿಂದ ದಮನಿಸುವ ಬಿಜೆಪಿ ತಂತದ್ರದ ವಿರುದ್ಧ ಜನರು ಧ್ವನಿ ಎತ್ತಬೇಕು ಎಂದು ಕಾಂಗ್ರೆಸ್‌, ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಕರೆ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ ಮೇಲೆ ಮನಸೋ…

-ರಾಜೇಶ್ ಹೆಬ್ಬಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...