Homeಮುಖಪುಟಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

ಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

- Advertisement -
- Advertisement -

‍ಹಿಂಸಾತ್ಮಕ ಘಟನೆಗಳ ನಡುವೆ ಉತ್ತರ ಪ್ರದೇಶದ ಬ್ಲಾಕ್ ಪ್ರಮುಖರ ಚುನಾವಣೆ ನಡೆದು ಫಲಿತಾಂಶವೂ ಬಂದಿದೆ. ಚುನಾವಣೆಯ ಸಂದರ್ಭದಲ್ಲಿ ಉನ್ನಾವೊ ಜಿಲ್ಲೆಯ ಒಂದು ಘಟನೆ ದೇಶದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ. ಇಲ್ಲಿಯ ಚೀಫ್ ಡೆವಲಪ್‌ಮೆಂಟ್‌ ಅಧಿಕಾರಿ ದಿವ್ಯಾಂಶು ಪಟೇಲ್ ವಿವಾದಕ್ಕೆ ಕಾರಣರಾಗಿದ್ದರೆ. ಚುನಾವಣೆ ಸಮಯದಲ್ಲಿ ಅವರು ಪತ್ರಕರ್ತರನ್ನು ಥಳಿಸಿದ್ದಾರೆ ಎಂದು ಆರೋಪ ಕೇಳಿಬಂದಿದ್ದು ಆ ಸಂಬಂಧ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

IAS ಅಧಿಕಾರಿ ದಿವ್ಯಾಂಶು ಪಟೇಲ್ ಅವರ ಅಮಾನತ್ತಿಗೆ ಅನೇಕ ಹಿರಿಯ ರಾಜಕಾರಣಿಗಳು ಒತ್ತಾಯಿಸಿದ್ದಾರೆ. ಮತ್ತು ಸಿಡಿಒ ಬಂಧನಕ್ಕೆ ಒತ್ತಾಯಿಸಿ ಸೋಶಿಯಲ್ ಮೀಡಿಯಾದಲ್ಲಿ ನಿರಂತರವಾಗಿ ಟ್ರೆಂಡಿಂಗ್ ನಡೆಯುತ್ತಿದೆ.

ಉತ್ತರ ಪ್ರದೇಶದಲ್ಲಿ ನಡೆದ ಬ್ಲಾಕ್‌ ಪ್ರಮುಖ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸುತ್ತಿದ್ದಂತೆ ವ್ಯಾಪಕ ಹಿಂಸಾಚಾರ ನಡೆದಿತ್ತು. ಚುನಾವಣೆ ಫಲಿತಾಂಶ ಘೊಷಣೆ ನಡೆದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ವಿರೋಧ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಟಿ.ವಿ. ವಾಹಿನಿಯ ಪತ್ರಕರ್ತ ಕೃಷ್ಣ ತಿವಾರಿಯವರ ಮೇಲೆ ಬಿಜೆಪಿ ಕಾರ್ಯಕರ್ತರು ಮತ್ತು ಸಿಡಿಒ ದಿವ್ಯಾಂಶು ಪಟೇಲ್‌ ಹಿಗ್ಗಾ ಮುಗ್ಗಾ ಥಳಿಸುತ್ತಿರುವ ವಿಡಿಯೋ ಫೇಸ್‌ಬುಕ್‌ ಮತ್ತು ಟ್ವಿಟ್ಟರ್‌ನಲ್ಲಿ ಹರಿದಾಡುತ್ತಿದೆ. ಪತ್ರಕರ್ತರ ಮೇಲಿನ ಹಲ್ಲೆಯ ದೃಶ್ಯ ಬೆಳಕಿಗೆ ಬರುತ್ತಿದಂತೆ  ಘಟನೆಯನ್ನು ಖಂಡಿಸಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಬ್ರಜೇಶ್‌ ಮಿಶ್ರಾ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

ಕಾಂಗ್ರೆಸ್‌ ನಾಯಕ ಕ್ಯಾಪ್ಟನ್‌ ಅಜಯ್‌ ಸಿಂಗ್‌ ಪತ್ರಕರ್ತರ ಮೇಲೆ ದೌರ್ಜನ್ಯವೆಸಗಿದ ಸಿಡಿಒ ದಿವ್ಯಾಂಶು ಪಟೇಲ್‌ ಅವರ ಅಮಾನತ್ತಿಗೆ ಆಗ್ರಹಿಸಿದ್ದಾರೆ. ಪತ್ರಿಕೋದ್ಯಮ ಸಂವಿಧಾನದ 4 ನೇ ಅಂಗ. IAS ಅಧಿಕಾರಿಯೊಬ್ಬರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಸಂವಿಧಾನದ ಮೇಲೆಯೆ ಹಲ್ಲೆ ನಡೆಸಿದಂತೆ. ಜನರ ಅಭಿಪ್ರಾಯಗಳನ್ನು ವರದಿ ಮಾಡುತ್ತಿದ್ದ ಪತ್ರಕರ್ತ ಕೃಷ್ಣ ತಿವಾರಿಯವರಿಗೆ ಥಳಿಸಿದ ದಿವ್ಯಾಂಶು ಪಟೇಲ್ ಮತ್ತು ಬಿಜೆಪಿ ಕಾರ್ಯಕರ್ತರ ಬಂಧನವಾಗಬೇಕೆಂದು ಅವರು ಟ್ವೀಟ್‌ ಮಾಡಿದ್ದಾರೆ.

ಅತ್ಯಾಚಾರ, ದೌರ್ಜನ್ಯ, ಅಧಿಕಾರದ ಮದ, ಪೊಲೀಸ್ ದಬ್ಬಾಳಿಕೆ ಇದು ಉತ್ತರ ಪ್ರದೇಶ ಸರ್ಕಾರದ ಮುಖ್ಯ ಪ್ರಾಯೋಜಿತ ಕಾರ್ಯಕ್ರಮಗಳು. ಇನ್ನು ಮೌನ ವಹಿಸಿ ಕೂತರೆ ದೇಶದಲ್ಲಿ ಶಾಂತಿ ಮತ್ತು ನೆಮ್ಮದಿ ಮರೀಚಿಕೆಗಳಷ್ಟೆ ಎಂದು ಪತ್ರಕರ್ತನ ಮೇಲಿನ ಹಲ್ಲೆ ಕುರಿತು ಕಾಂಗ್ರೆಸ್‌ ವಕ್ತಾರೆ ಡಾ. ಅರ್ಚನಾ ಶರ್ಮಾ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಿಡಿಒ ದಿವ್ಯಾಂಶು ಪಟೇಲ್‌ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಜಿಲ್ಲಾಡಳಿತ ಘಟನೆಯ ವರದಿಯನ್ನು ಕೇಳಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: 2015-19ರ ನಡುವೆ ದ್ವಿಗುಣಗೊಂಡ ಮಹಿಳೆಯರ ಮೇಲಿನ ದೌರ್ಜನ್ಯ!

ಪತ್ರಕರ್ತರ ಮೇಲಿನ ಹಲ್ಲೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾದಂತಿದೆ. ನಾವು ಪ್ರಜಾಪ್ರಭುತ್ವ ದೇಶದಲ್ಲಿ ಇದ್ದೇವೆಯೇ ಅಥವಾ ಪೊಲೀಸ್‌ ರಾಜ್ಯದಲ್ಲಿರುವುದೋ ಎಂದು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಅನೇಕರು ಆಕ್ರೋಶ ಹೊರಹಾಕಿದ್ದಾರೆ.  ಚುನಾವಣೆಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿದ್ದು ಪೊಲೀಸರ ಎದುರಿನಲ್ಲಿಯೇ ಘರ್ಷಣೆ ಮತ್ತು ಗುಂಡಿನ ದಾಳಿಗಳು ಸಹ ನಡೆದಿವೆ ಎಂದು ರಾಷ್ಟ್ರೀಯ ವಾಹಿನಿಯೊಂದು ವರದಿ ಮಾಡಿದೆ.

ಬ್ಲಾಕ್‌ ಪ್ರಮುಖ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಿಂಗ್‌ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ್ದರು.

ಗ್ರಾಮ ಪಂಚಾಯತಿ, ಬ್ಲಾಕ್‌ ಪಂಚಾಯತಿಯಂತಹ ಸ್ಥಳೀಯ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಅಭಿನಂದಿಸುವ ಪ್ರಧಾನಿ ಮೋದಿಯವರು ಪತ್ರಕರ್ತರ ಮೇಲೆ  ಹಲ್ಲೆ ನಡೆದಾಗ ಯಾಕೆ ತುಟಿ ಬಿಚ್ಚುವುದಿಲ್ಲ ? ತಮ್ಮ ಕಾರ್ಯಕರ್ತರಲ್ಲಿ ಶಾಂತಿ ಸ್ಥಾಪನೆಗೆ ಕರೆ ನೀಡುವುದಿಲ್ಲ ? ಈಶಾನ್ಯ ದೆಹಲಿಯ ಗಲಭೆ ಸಂದರ್ಭದಿಂದ ಹಿಡಿದು ನಿನ್ನೆಯ ಪೊಲೀಸ್‌ ದೌರ್ಜನ್ಯದವರೆಗೆ ಪ್ರಧಾನಿಯವರ ದಿವ್ಯ ಮೌನ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ ಎಂದು ದೇಶದ ಅನೇಕ ರಾಜಕೀಯ ನಾಯಕರು, ನ್ಯಾಯವಾದಿಗಳು ಮತ್ತು ಹರಿಯ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಪ್ರಾಯೋಜಿತ ಹಿಂಸಾಚಾರ ಮತ್ತು ಭಿನ್ನಮತವನ್ನು ಪೊಲೀಸ್‌ ಬಲದಿಂದ ದಮನಿಸುವ ಬಿಜೆಪಿ ತಂತದ್ರದ ವಿರುದ್ಧ ಜನರು ಧ್ವನಿ ಎತ್ತಬೇಕು ಎಂದು ಕಾಂಗ್ರೆಸ್‌, ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಕರೆ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ ಮೇಲೆ ಮನಸೋ…

-ರಾಜೇಶ್ ಹೆಬ್ಬಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...