Homeಮುಖಪುಟಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

ಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

- Advertisement -
- Advertisement -

‍ಹಿಂಸಾತ್ಮಕ ಘಟನೆಗಳ ನಡುವೆ ಉತ್ತರ ಪ್ರದೇಶದ ಬ್ಲಾಕ್ ಪ್ರಮುಖರ ಚುನಾವಣೆ ನಡೆದು ಫಲಿತಾಂಶವೂ ಬಂದಿದೆ. ಚುನಾವಣೆಯ ಸಂದರ್ಭದಲ್ಲಿ ಉನ್ನಾವೊ ಜಿಲ್ಲೆಯ ಒಂದು ಘಟನೆ ದೇಶದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ. ಇಲ್ಲಿಯ ಚೀಫ್ ಡೆವಲಪ್‌ಮೆಂಟ್‌ ಅಧಿಕಾರಿ ದಿವ್ಯಾಂಶು ಪಟೇಲ್ ವಿವಾದಕ್ಕೆ ಕಾರಣರಾಗಿದ್ದರೆ. ಚುನಾವಣೆ ಸಮಯದಲ್ಲಿ ಅವರು ಪತ್ರಕರ್ತರನ್ನು ಥಳಿಸಿದ್ದಾರೆ ಎಂದು ಆರೋಪ ಕೇಳಿಬಂದಿದ್ದು ಆ ಸಂಬಂಧ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

IAS ಅಧಿಕಾರಿ ದಿವ್ಯಾಂಶು ಪಟೇಲ್ ಅವರ ಅಮಾನತ್ತಿಗೆ ಅನೇಕ ಹಿರಿಯ ರಾಜಕಾರಣಿಗಳು ಒತ್ತಾಯಿಸಿದ್ದಾರೆ. ಮತ್ತು ಸಿಡಿಒ ಬಂಧನಕ್ಕೆ ಒತ್ತಾಯಿಸಿ ಸೋಶಿಯಲ್ ಮೀಡಿಯಾದಲ್ಲಿ ನಿರಂತರವಾಗಿ ಟ್ರೆಂಡಿಂಗ್ ನಡೆಯುತ್ತಿದೆ.

ಉತ್ತರ ಪ್ರದೇಶದಲ್ಲಿ ನಡೆದ ಬ್ಲಾಕ್‌ ಪ್ರಮುಖ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸುತ್ತಿದ್ದಂತೆ ವ್ಯಾಪಕ ಹಿಂಸಾಚಾರ ನಡೆದಿತ್ತು. ಚುನಾವಣೆ ಫಲಿತಾಂಶ ಘೊಷಣೆ ನಡೆದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ವಿರೋಧ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಟಿ.ವಿ. ವಾಹಿನಿಯ ಪತ್ರಕರ್ತ ಕೃಷ್ಣ ತಿವಾರಿಯವರ ಮೇಲೆ ಬಿಜೆಪಿ ಕಾರ್ಯಕರ್ತರು ಮತ್ತು ಸಿಡಿಒ ದಿವ್ಯಾಂಶು ಪಟೇಲ್‌ ಹಿಗ್ಗಾ ಮುಗ್ಗಾ ಥಳಿಸುತ್ತಿರುವ ವಿಡಿಯೋ ಫೇಸ್‌ಬುಕ್‌ ಮತ್ತು ಟ್ವಿಟ್ಟರ್‌ನಲ್ಲಿ ಹರಿದಾಡುತ್ತಿದೆ. ಪತ್ರಕರ್ತರ ಮೇಲಿನ ಹಲ್ಲೆಯ ದೃಶ್ಯ ಬೆಳಕಿಗೆ ಬರುತ್ತಿದಂತೆ  ಘಟನೆಯನ್ನು ಖಂಡಿಸಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಬ್ರಜೇಶ್‌ ಮಿಶ್ರಾ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

ಕಾಂಗ್ರೆಸ್‌ ನಾಯಕ ಕ್ಯಾಪ್ಟನ್‌ ಅಜಯ್‌ ಸಿಂಗ್‌ ಪತ್ರಕರ್ತರ ಮೇಲೆ ದೌರ್ಜನ್ಯವೆಸಗಿದ ಸಿಡಿಒ ದಿವ್ಯಾಂಶು ಪಟೇಲ್‌ ಅವರ ಅಮಾನತ್ತಿಗೆ ಆಗ್ರಹಿಸಿದ್ದಾರೆ. ಪತ್ರಿಕೋದ್ಯಮ ಸಂವಿಧಾನದ 4 ನೇ ಅಂಗ. IAS ಅಧಿಕಾರಿಯೊಬ್ಬರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಸಂವಿಧಾನದ ಮೇಲೆಯೆ ಹಲ್ಲೆ ನಡೆಸಿದಂತೆ. ಜನರ ಅಭಿಪ್ರಾಯಗಳನ್ನು ವರದಿ ಮಾಡುತ್ತಿದ್ದ ಪತ್ರಕರ್ತ ಕೃಷ್ಣ ತಿವಾರಿಯವರಿಗೆ ಥಳಿಸಿದ ದಿವ್ಯಾಂಶು ಪಟೇಲ್ ಮತ್ತು ಬಿಜೆಪಿ ಕಾರ್ಯಕರ್ತರ ಬಂಧನವಾಗಬೇಕೆಂದು ಅವರು ಟ್ವೀಟ್‌ ಮಾಡಿದ್ದಾರೆ.

ಅತ್ಯಾಚಾರ, ದೌರ್ಜನ್ಯ, ಅಧಿಕಾರದ ಮದ, ಪೊಲೀಸ್ ದಬ್ಬಾಳಿಕೆ ಇದು ಉತ್ತರ ಪ್ರದೇಶ ಸರ್ಕಾರದ ಮುಖ್ಯ ಪ್ರಾಯೋಜಿತ ಕಾರ್ಯಕ್ರಮಗಳು. ಇನ್ನು ಮೌನ ವಹಿಸಿ ಕೂತರೆ ದೇಶದಲ್ಲಿ ಶಾಂತಿ ಮತ್ತು ನೆಮ್ಮದಿ ಮರೀಚಿಕೆಗಳಷ್ಟೆ ಎಂದು ಪತ್ರಕರ್ತನ ಮೇಲಿನ ಹಲ್ಲೆ ಕುರಿತು ಕಾಂಗ್ರೆಸ್‌ ವಕ್ತಾರೆ ಡಾ. ಅರ್ಚನಾ ಶರ್ಮಾ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಿಡಿಒ ದಿವ್ಯಾಂಶು ಪಟೇಲ್‌ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಜಿಲ್ಲಾಡಳಿತ ಘಟನೆಯ ವರದಿಯನ್ನು ಕೇಳಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: 2015-19ರ ನಡುವೆ ದ್ವಿಗುಣಗೊಂಡ ಮಹಿಳೆಯರ ಮೇಲಿನ ದೌರ್ಜನ್ಯ!

ಪತ್ರಕರ್ತರ ಮೇಲಿನ ಹಲ್ಲೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾದಂತಿದೆ. ನಾವು ಪ್ರಜಾಪ್ರಭುತ್ವ ದೇಶದಲ್ಲಿ ಇದ್ದೇವೆಯೇ ಅಥವಾ ಪೊಲೀಸ್‌ ರಾಜ್ಯದಲ್ಲಿರುವುದೋ ಎಂದು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಅನೇಕರು ಆಕ್ರೋಶ ಹೊರಹಾಕಿದ್ದಾರೆ.  ಚುನಾವಣೆಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿದ್ದು ಪೊಲೀಸರ ಎದುರಿನಲ್ಲಿಯೇ ಘರ್ಷಣೆ ಮತ್ತು ಗುಂಡಿನ ದಾಳಿಗಳು ಸಹ ನಡೆದಿವೆ ಎಂದು ರಾಷ್ಟ್ರೀಯ ವಾಹಿನಿಯೊಂದು ವರದಿ ಮಾಡಿದೆ.

ಬ್ಲಾಕ್‌ ಪ್ರಮುಖ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಿಂಗ್‌ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ್ದರು.

ಗ್ರಾಮ ಪಂಚಾಯತಿ, ಬ್ಲಾಕ್‌ ಪಂಚಾಯತಿಯಂತಹ ಸ್ಥಳೀಯ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಅಭಿನಂದಿಸುವ ಪ್ರಧಾನಿ ಮೋದಿಯವರು ಪತ್ರಕರ್ತರ ಮೇಲೆ  ಹಲ್ಲೆ ನಡೆದಾಗ ಯಾಕೆ ತುಟಿ ಬಿಚ್ಚುವುದಿಲ್ಲ ? ತಮ್ಮ ಕಾರ್ಯಕರ್ತರಲ್ಲಿ ಶಾಂತಿ ಸ್ಥಾಪನೆಗೆ ಕರೆ ನೀಡುವುದಿಲ್ಲ ? ಈಶಾನ್ಯ ದೆಹಲಿಯ ಗಲಭೆ ಸಂದರ್ಭದಿಂದ ಹಿಡಿದು ನಿನ್ನೆಯ ಪೊಲೀಸ್‌ ದೌರ್ಜನ್ಯದವರೆಗೆ ಪ್ರಧಾನಿಯವರ ದಿವ್ಯ ಮೌನ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ ಎಂದು ದೇಶದ ಅನೇಕ ರಾಜಕೀಯ ನಾಯಕರು, ನ್ಯಾಯವಾದಿಗಳು ಮತ್ತು ಹರಿಯ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಪ್ರಾಯೋಜಿತ ಹಿಂಸಾಚಾರ ಮತ್ತು ಭಿನ್ನಮತವನ್ನು ಪೊಲೀಸ್‌ ಬಲದಿಂದ ದಮನಿಸುವ ಬಿಜೆಪಿ ತಂತದ್ರದ ವಿರುದ್ಧ ಜನರು ಧ್ವನಿ ಎತ್ತಬೇಕು ಎಂದು ಕಾಂಗ್ರೆಸ್‌, ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಕರೆ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ ಮೇಲೆ ಮನಸೋ…

-ರಾಜೇಶ್ ಹೆಬ್ಬಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...