Homeಮುಖಪುಟಹಿಂದುತ್ವ ಕಾರ್ಯಕರ್ತನನ್ನು ಬಂಧಿಸಿದ್ದ ಪೊಲೀಸ್‌ ಅಧಿಕಾರಿಗೆ ಕಡ್ಡಾಯ ರಜೆ ಶಿಕ್ಷೆ!

ಹಿಂದುತ್ವ ಕಾರ್ಯಕರ್ತನನ್ನು ಬಂಧಿಸಿದ್ದ ಪೊಲೀಸ್‌ ಅಧಿಕಾರಿಗೆ ಕಡ್ಡಾಯ ರಜೆ ಶಿಕ್ಷೆ!

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷಪೂರಿತ ಪೋಸ್ಟ್‌ ಹಾಕಿದ ಹಿಂದುತ್ವ ಕಾರ್ಯಕರ್ತನನ್ನು ಬಂಧಿಸುವ ಮೂಲಕ ಸಿ.ಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಪೊಲೀಸ್‌ ಅಧಿಕಾರಿಯನ್ನು ರಜೆಯ ಮೇಲೆ ಮನೆಗೆ ಕಳಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಜರುಗಿದೆ.

ಸಮಾಜದ ಸಾಮರಸ್ಯ ಹಾಳು ಮಾಡುವ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಆರೋಪದ ಮೇಲೆ ಏಪ್ರಿಲ್‌ 10ರಂದು ಹಾಸನ ಜಿಲ್ಲೆಯ ಬಿಕ್ಕೋಡಿನ ತೇಜಕುಮಾರ್ ಶೆಟ್ಟಿ ಎಂಬುವವರನ್ನು ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲುರವರು ಬಂಧಿಸಿದ್ದರು.

ಘಟನೆ ನಡೆದ ಎರಡು ದಿನಗಳ ನಂತರ ಪ್ರವಾಸೋಧ್ಯಮ ಸಚಿವ ಸಿ.ಟಿ ರವಿರವರು ಆರೋಪಿಯ ರಕ್ಷಣೆಗೆ ಮುಂದಾಗಿದ್ದರು. ಅವರು ಟ್ವಿಟ್ಟರ್‌ನಲ್ಲಿ “ಕೊರೊನ ಸಂಬಂಧ ತಬ್ಲೀಘಿಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನನ್ನ ಸಹೋದ್ಯೋಗಿಗಳಾದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದೇನೆ”. ಎಂದು ಬರೆದುಕೊಂಡಿದ್ದರು.

ಸಿ.ಟಿ ರವಿರವರು ಟ್ವೀಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದುತ್ವ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದರು. ಈಗ ತನಿಖೆ ಬಾಕಿ ಇರುವಾಗಲೇ ಅರೇಹಳ್ಳಿ ಪಿಎಸ್ಐ ಬಾಲುರವರನ್ನು ಕಡ್ಡಾಯ ರಜೆಯ ಮೇಲೆ ಮನೆಗೆ ಕಳುಹಿಸಲಾಗಿದೆ.

ಕಾನೂನು ಸಚಿವ ಮತ್ತು ಹಾಸನ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಮಾತನಾಡಿ “ಪರಿಸ್ಥಿತಿ ಸುಧಾರಿಸುವವರೆಗೂ ಪೊಲೀಸ್‌ ಅಧಿಕಾರಿ ಮನೆಯಲ್ಲಿಯೇ ಇರುವುದಾಗಿ ತಿಳಿಸಿದ್ದಾರೆ. ಹಿಂದುತ್ವ ಕಾರ್ಯಕರ್ತ ಬಿಕ್ಕೋಡಿನ ತೇಜಕುಮಾರ್ ಶೆಟ್ಟಿಯವರ ಬಗ್ಗೆ ಸಂಪೂರ್ಣ ಮಾಹಿತಿಯಿಲ್ಲದೇ ಬಂಧಿಸಿದ್ದಾರೆ. ಈ ಕುರಿತು ಸಚಿವ ಸಿ.ಟಿ ರವಿರವರೊಂದಿಗೆ ಮಾತನಾಡುತ್ತೇನೆ” ಎಂದಿದ್ದಾರೆ.

ಈ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನಾಯಕರ ಪ್ರತಿಕ್ರಿಯೆಗೆ ಟೀಕೆ ವ್ಯಕ್ತವಾಗಿದೆ. ಪೊಲೀಸರಿಗೆ ಸೂಚನೆ: ನೀವು ಬಿಜೆಪಿ ಬೆಂಬಲಿಗರನ್ನು ಬಂಧಿಸುವಾಗ ಎಚ್ಚರವಹಿಸಿ. ನಿಮ್ಮ ಮೇಲೆಯೇ ತನಿಖೆ ನಡೆಯಬಹುದು, ನಿಮ್ಮನ್ನು ರಜೆಯ ಮೇಲೆ ತೆರಳಲು ಸೂಚಿಸಲೂಬಹುದು.
(ರಾಜ್ಯದಲ್ಲಿ ಒಂದೇ ಕಾನೂನು ಇದ್ದು ಅದು ಎಲ್ಲರಿಗೂ ಸಮಾನವಾಗಿ ಅನ್ವಯಿಸುತ್ತದೆ ಎಂದು ತಿಳಿದುಕೊಂಡಿದ್ದರೆ ಆ ನಿಮ್ಮ ತಪ್ಪು ಅಭಿಪ್ರಾಯ ಬದಲಿಸಿಕೊಳ್ಳಿ) ಎಂದು ಚಿಂತಕ ಶ್ರೀನಿವಾಸ ಕಾರ್ಕಳರವರು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ – ಪೊಲೀಸರ ವಿರುದ್ದವೇ ತನಿಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...