Homeಮುಖಪುಟಹಿಂದುತ್ವ ಕಾರ್ಯಕರ್ತನನ್ನು ಬಂಧಿಸಿದ್ದ ಪೊಲೀಸ್‌ ಅಧಿಕಾರಿಗೆ ಕಡ್ಡಾಯ ರಜೆ ಶಿಕ್ಷೆ!

ಹಿಂದುತ್ವ ಕಾರ್ಯಕರ್ತನನ್ನು ಬಂಧಿಸಿದ್ದ ಪೊಲೀಸ್‌ ಅಧಿಕಾರಿಗೆ ಕಡ್ಡಾಯ ರಜೆ ಶಿಕ್ಷೆ!

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷಪೂರಿತ ಪೋಸ್ಟ್‌ ಹಾಕಿದ ಹಿಂದುತ್ವ ಕಾರ್ಯಕರ್ತನನ್ನು ಬಂಧಿಸುವ ಮೂಲಕ ಸಿ.ಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಪೊಲೀಸ್‌ ಅಧಿಕಾರಿಯನ್ನು ರಜೆಯ ಮೇಲೆ ಮನೆಗೆ ಕಳಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಜರುಗಿದೆ.

ಸಮಾಜದ ಸಾಮರಸ್ಯ ಹಾಳು ಮಾಡುವ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಆರೋಪದ ಮೇಲೆ ಏಪ್ರಿಲ್‌ 10ರಂದು ಹಾಸನ ಜಿಲ್ಲೆಯ ಬಿಕ್ಕೋಡಿನ ತೇಜಕುಮಾರ್ ಶೆಟ್ಟಿ ಎಂಬುವವರನ್ನು ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲುರವರು ಬಂಧಿಸಿದ್ದರು.

ಘಟನೆ ನಡೆದ ಎರಡು ದಿನಗಳ ನಂತರ ಪ್ರವಾಸೋಧ್ಯಮ ಸಚಿವ ಸಿ.ಟಿ ರವಿರವರು ಆರೋಪಿಯ ರಕ್ಷಣೆಗೆ ಮುಂದಾಗಿದ್ದರು. ಅವರು ಟ್ವಿಟ್ಟರ್‌ನಲ್ಲಿ “ಕೊರೊನ ಸಂಬಂಧ ತಬ್ಲೀಘಿಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನನ್ನ ಸಹೋದ್ಯೋಗಿಗಳಾದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದೇನೆ”. ಎಂದು ಬರೆದುಕೊಂಡಿದ್ದರು.

ಸಿ.ಟಿ ರವಿರವರು ಟ್ವೀಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದುತ್ವ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದರು. ಈಗ ತನಿಖೆ ಬಾಕಿ ಇರುವಾಗಲೇ ಅರೇಹಳ್ಳಿ ಪಿಎಸ್ಐ ಬಾಲುರವರನ್ನು ಕಡ್ಡಾಯ ರಜೆಯ ಮೇಲೆ ಮನೆಗೆ ಕಳುಹಿಸಲಾಗಿದೆ.

ಕಾನೂನು ಸಚಿವ ಮತ್ತು ಹಾಸನ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಮಾತನಾಡಿ “ಪರಿಸ್ಥಿತಿ ಸುಧಾರಿಸುವವರೆಗೂ ಪೊಲೀಸ್‌ ಅಧಿಕಾರಿ ಮನೆಯಲ್ಲಿಯೇ ಇರುವುದಾಗಿ ತಿಳಿಸಿದ್ದಾರೆ. ಹಿಂದುತ್ವ ಕಾರ್ಯಕರ್ತ ಬಿಕ್ಕೋಡಿನ ತೇಜಕುಮಾರ್ ಶೆಟ್ಟಿಯವರ ಬಗ್ಗೆ ಸಂಪೂರ್ಣ ಮಾಹಿತಿಯಿಲ್ಲದೇ ಬಂಧಿಸಿದ್ದಾರೆ. ಈ ಕುರಿತು ಸಚಿವ ಸಿ.ಟಿ ರವಿರವರೊಂದಿಗೆ ಮಾತನಾಡುತ್ತೇನೆ” ಎಂದಿದ್ದಾರೆ.

ಈ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನಾಯಕರ ಪ್ರತಿಕ್ರಿಯೆಗೆ ಟೀಕೆ ವ್ಯಕ್ತವಾಗಿದೆ. ಪೊಲೀಸರಿಗೆ ಸೂಚನೆ: ನೀವು ಬಿಜೆಪಿ ಬೆಂಬಲಿಗರನ್ನು ಬಂಧಿಸುವಾಗ ಎಚ್ಚರವಹಿಸಿ. ನಿಮ್ಮ ಮೇಲೆಯೇ ತನಿಖೆ ನಡೆಯಬಹುದು, ನಿಮ್ಮನ್ನು ರಜೆಯ ಮೇಲೆ ತೆರಳಲು ಸೂಚಿಸಲೂಬಹುದು.
(ರಾಜ್ಯದಲ್ಲಿ ಒಂದೇ ಕಾನೂನು ಇದ್ದು ಅದು ಎಲ್ಲರಿಗೂ ಸಮಾನವಾಗಿ ಅನ್ವಯಿಸುತ್ತದೆ ಎಂದು ತಿಳಿದುಕೊಂಡಿದ್ದರೆ ಆ ನಿಮ್ಮ ತಪ್ಪು ಅಭಿಪ್ರಾಯ ಬದಲಿಸಿಕೊಳ್ಳಿ) ಎಂದು ಚಿಂತಕ ಶ್ರೀನಿವಾಸ ಕಾರ್ಕಳರವರು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ – ಪೊಲೀಸರ ವಿರುದ್ದವೇ ತನಿಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...