Homeಕರ್ನಾಟಕ‘ಮಜಾ ಮಾಡಿ ಗೌಡ್ರೇ’ ಎಂದು ದಲಿತ ಹೆಣ್ಣುಮಗಳ ಬಗ್ಗೆ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ; ದಸಂಸ ಆಕ್ರೋಶ

‘ಮಜಾ ಮಾಡಿ ಗೌಡ್ರೇ’ ಎಂದು ದಲಿತ ಹೆಣ್ಣುಮಗಳ ಬಗ್ಗೆ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ; ದಸಂಸ ಆಕ್ರೋಶ

- Advertisement -
- Advertisement -

ವಸತಿ ನಿಲಯದಲ್ಲಿ ದಲಿತ ಹೆಣ್ಣುಮಗಳೊಬ್ಬಳಿಗೆ ಹೆರಿಗೆಯಾಗಿದ್ದು, ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ಅವಹೇಳನಕಾರಿಯಾಗಿ ವಾಟ್ಸಾಪ್‌ನಲ್ಲಿ ಪ್ರತಿಕ್ರಿಯಿಸಿದ್ದು ಆಕ್ರೋಶಕ್ಕೆ ಗುರಿಯಾಗಿದೆ.

ವಿದ್ಯಾರ್ಥಿನಿಯೊಬ್ಬಳಿಗೆ ವಸತಿನಿಲಯದಲ್ಲಿ ಹೆರಿಗೆಯಾಗಿರುವ ಸುದ್ದಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಜಯರಾಮ್‌ ‘ಮಜಾ ಮಾಡಿ ಗೌಡ್ರೆ’ ಎಂದು ವಾಟ್ಸಾಪ್‌ನಲ್ಲಿ ಪ್ರತಿಕ್ರಿಯಿಸಿ ದಲಿತ ಹೆಣ್ಣು ಮಗಳಿಗೆ ಅವಹೇಳನ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳ ಐಕ್ಯತಾ ಚಾಲನಾ ಸಮಿತಿ ಆರೋಪಿಸಿದೆ. ಪೊಲೀಸರು ಈ ಆರೋಪವನ್ನು ಅಲ್ಲಗೆಳೆದಿದ್ದಾರೆ.

ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಸಮಿತಿಯ ಮುಖಂಡರಾದ ದಂಟರಮಕ್ಕಿ ಶ್ರೀನಿವಾಸ್, ಅಂಗಡಿ ಚಂದ್ರು, ಮರ್ಲೆ ಅನ್ನಯ್ಯ ಪೊಲೀಸ್‌ ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದಲಿತರಿಗೆ ವಸತಿ ನಿಲಯದಲ್ಲೂ ರಕ್ಷಣೆ ಇಲ್ಲದಂತಾಗಿದೆ. ವಿದ್ಯಾರ್ಥಿನಿ ಪಿಯುಸಿ ಓದುತ್ತಿದ್ದಾಳಷ್ಟೆ. ಪ್ರಕರಣ ಹೊರ ಬರದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ವಾರ್ಡನ್‌ ಹಲವು ಪ್ರಯತ್ನ ನಡೆಸಿದ್ದಾರೆ. ಇದೊಂದು ಆಘಾತಕಾರಿ ವಿಷಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ದಲಿತ ಹೆಣ್ಣು ಮಗಳಿಗೆ ಹೆರಿಗೆಯಾಗಿದೆ ಎಂಬ ಸುದ್ದಿಯನ್ನು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯ ವಾಟ್ಸಾಪ್‌ ಗ್ರೂಪ್‌ನಲ್ಲಿ ಪಿಎಸ್‌ಐ ರನ್ನಗೌಡ ಅವರು ಹಂಚಿಕೊಂಡಿದ್ದರು. ಇದಕ್ಕೆ ಠಾಣೆಯ ಪಿಐ ಜಯರಾಮ್‌, ‘ಮಜಾ ಮಾಡಿ ಗೌಡ್ರೆ’ ಎಂದು ಪ್ರತಿಕ್ರಿಯಿಸಿ ನಂತರ ಡಿಲೀಟ್‌ ಮಾಡಿದ್ದಾರೆ. ದಲಿತ ಹೆಣ್ಣು ಮಗಳ ಬಗ್ಗೆ ಪೊಲೀಸರು ಹಗುರವಾಗಿ ನೀಚತನದಿಂದ ಮಾತನಾಡಿದ್ದಾರೆ. ರಕ್ಷಣೆ ಕೊಡಬೇಕಾದ ಇವರೇ ಹೀಗೆ ಮಾಡಿದರೆ ಹೇಗೆ?” ಎಂದು ಪ್ರಶ್ನಿಸಿದ್ದಾರೆ.

“ವಾಟ್ಸಾಪ್ ಗ್ರೂಪ್‌ನಲ್ಲಿ ಪೊಲೀಸರಿಬ್ಬರು ದಲಿತ ಹೆಣ್ಣು ಮಗಳ ಬಗ್ಗೆ ಕೆಟ್ಟದಾಗಿ ಚರ್ಚಿಸಿದ ವಿಷಯವನ್ನು ಅನಾಮಧೇಯ ವ್ಯಕ್ತಿಯೊಬ್ಬರು ದಲಿತ ಸಂಘಟನೆಗಳ ಮುಖಂಡರ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಕಳುಹಿಸಿದ್ದಾರೆ. ದಲಿತ ಹೆಣ್ಣು ಮಗಳಿಗೆ ಅವಹೇಳನ ಮಾಡಿದ ಪಿಐ ಜಯರಾಮ್‌ ಹಾಗೂ ಪಿಎಸ್ಐ ರನ್ನಗೌಡ ಇಬ್ಬರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪ್ರಕರಣವನ್ನು ವಿಳಂಬ ಅಥವಾ ಮುಚ್ಚಿ ಹಾಕಲು ಪ್ರಯತ್ನಿಸಿದ್ದಲ್ಲಿ, ಒಂದು ವಾರದ ನಂತರ ಎಲ್ಲಾ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಸೇರಿಸಿಕೊಂಡು ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು” ಎಂದು ಐಕ್ಯತಾ ಸಮಿತಿ ಎಚ್ಚರಿಕೆ ನೀಡಿದೆ.

ಮಿಸ್ ಆಗಿ ಗ್ರೂಪ್‌ನಲ್ಲಿ ಮೆಸೇಜ್‌ ಮಾಡಿದ್ದೇನೆ: ಅಧಿಕಾರಿ ಜಯರಾಮ್‌

ಈ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಪಿಐ ಜಯರಾಮ್‌, “ನನ್ನ ಮೇಲೆ ಸುಳ್ಳು ಆರೋಪಗಳು ಬಂದಿವೆ. ನಾನು ಆ ರೀತಿಯಲ್ಲಿ ಪ್ರತಿಕ್ರಿಯೆ ನೀಡಿಲ್ಲ” ಎಂದರು.

“ಪಿಎಸ್‌ಐ ರನ್ನಗೌಡ ಅವರು ನನಗೆ ವೈಯಕ್ತಿಕವಾಗಿ ಹಲವಾರು ತಮಾಷೆಯ ಸಂದೇಶಗಳನ್ನು ಕಳುಹಿಸುತ್ತಾರೆ. ಆ ದಿನ ಕೂಡ ನನಗೆ ಅವರು ವೈಯಕ್ತಿಕವಾಗಿ ಒಂದು ತಮಾಷೆ ವೀಡಿಯೊ ಕಳುಹಿಸಿದ್ದರು. ನಾನು ಅವರಿಗೆ ವೈಯಕ್ತಿಕವಾಗಿ ಪ್ರತಿಕ್ರಿಯಿಸುವಾಗ ಗೊತ್ತಾಗದೆ ಗ್ರೂಪ್‌ನಲ್ಲಿ ಪ್ರತಿಕ್ರಿಯೆ ನೀಡಿದೆ. ನಮ್ಮ ಗ್ರೂಪ್‌ನಲ್ಲೇ ಇದ್ದ ನನಗಾಗದವರು ಇದನ್ನು ತಿರುಚಿ ಅಪಪ್ರಚಾರ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ತಪ್ಪಾಗಿ ಗ್ರೂಪ್‌ನಲ್ಲಿ ಮೆಸೇಜ್ ಹೋಗಿರುವುದು ಗೊತ್ತಾದ ತಕ್ಷಣ ಆ ಸಂದೇಶವನ್ನು ಡಿಲೀಟ್‌ ಮಾಡಿದೆ. ಇದನ್ನೇ ಯಾರೋ ಎತ್ತಿಕೊಂಡು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ನಿಜವಾಗಿಯೂ ಆ ರೀತಿಯಲ್ಲಿ ಪ್ರತಿಕ್ರಿಯಿಸಿಲ್ಲ” ಎಂದು ಹೇಳಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ದಲಿತ ವಿದ್ಯಾರ್ಥಿನಿಗೆ ಹೆರಿಗೆಯಾದ ಕುರಿತು ವರದಿಯಾದಾಗ ದಲಿತ ಸಂಘಟನೆಗಳು ಸಮಾಜ ಕಲ್ಯಾಣ ಇಲಾಖೆ ಮತ್ತು ವಾರ್ಡನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು.

“ಹಾಸ್ಟೆಲ್​ನಲ್ಲಿದ್ದುಕೊಂಡು ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಹೆರಿಗೆಯಾಗಿದೆ. ಆದರೆ ಈ ವಿಚಾರವನ್ನು ಹೊರಬರಲು ಬಿಡದೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಹಾಸ್ಟೆಲ್ ವಾರ್ಡನ್ ಮುಚ್ಚಿ ಹಾಕಿದ್ದಾರೆ. ವಿಷಯ ತಿಳಿದಾಗ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯನ್ನು ಪ್ರಶ್ನಿಸಿದೆವು. ವಿದ್ಯಾರ್ಥಿನಿ ಹೊಟ್ಟೆಗೆ ಬಟ್ಟೆ ಕಟ್ಟಿಕೊಳ್ಳುತ್ತಿದ್ದಳು. ಹಾಗಾಗಿ ಗೊತ್ತಾಗಿಲ್ಲ ಎಂದು ಬೇಜವಾಬ್ದಾರಿಯಿಂದ ಹೇಳಿದ್ದಾರೆ” ಎಂದು ಟೀಕಿಸಿದ್ದವು. ಯುವತಿಯನ್ನು ಮನೆಗೆ ಕಳಿಸಿ ಹುಡುಗನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...