Homeಕರ್ನಾಟಕ‘ಮಜಾ ಮಾಡಿ ಗೌಡ್ರೇ’ ಎಂದು ದಲಿತ ಹೆಣ್ಣುಮಗಳ ಬಗ್ಗೆ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ; ದಸಂಸ ಆಕ್ರೋಶ

‘ಮಜಾ ಮಾಡಿ ಗೌಡ್ರೇ’ ಎಂದು ದಲಿತ ಹೆಣ್ಣುಮಗಳ ಬಗ್ಗೆ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ; ದಸಂಸ ಆಕ್ರೋಶ

- Advertisement -
- Advertisement -

ವಸತಿ ನಿಲಯದಲ್ಲಿ ದಲಿತ ಹೆಣ್ಣುಮಗಳೊಬ್ಬಳಿಗೆ ಹೆರಿಗೆಯಾಗಿದ್ದು, ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ಅವಹೇಳನಕಾರಿಯಾಗಿ ವಾಟ್ಸಾಪ್‌ನಲ್ಲಿ ಪ್ರತಿಕ್ರಿಯಿಸಿದ್ದು ಆಕ್ರೋಶಕ್ಕೆ ಗುರಿಯಾಗಿದೆ.

ವಿದ್ಯಾರ್ಥಿನಿಯೊಬ್ಬಳಿಗೆ ವಸತಿನಿಲಯದಲ್ಲಿ ಹೆರಿಗೆಯಾಗಿರುವ ಸುದ್ದಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಜಯರಾಮ್‌ ‘ಮಜಾ ಮಾಡಿ ಗೌಡ್ರೆ’ ಎಂದು ವಾಟ್ಸಾಪ್‌ನಲ್ಲಿ ಪ್ರತಿಕ್ರಿಯಿಸಿ ದಲಿತ ಹೆಣ್ಣು ಮಗಳಿಗೆ ಅವಹೇಳನ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳ ಐಕ್ಯತಾ ಚಾಲನಾ ಸಮಿತಿ ಆರೋಪಿಸಿದೆ. ಪೊಲೀಸರು ಈ ಆರೋಪವನ್ನು ಅಲ್ಲಗೆಳೆದಿದ್ದಾರೆ.

ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಸಮಿತಿಯ ಮುಖಂಡರಾದ ದಂಟರಮಕ್ಕಿ ಶ್ರೀನಿವಾಸ್, ಅಂಗಡಿ ಚಂದ್ರು, ಮರ್ಲೆ ಅನ್ನಯ್ಯ ಪೊಲೀಸ್‌ ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದಲಿತರಿಗೆ ವಸತಿ ನಿಲಯದಲ್ಲೂ ರಕ್ಷಣೆ ಇಲ್ಲದಂತಾಗಿದೆ. ವಿದ್ಯಾರ್ಥಿನಿ ಪಿಯುಸಿ ಓದುತ್ತಿದ್ದಾಳಷ್ಟೆ. ಪ್ರಕರಣ ಹೊರ ಬರದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ವಾರ್ಡನ್‌ ಹಲವು ಪ್ರಯತ್ನ ನಡೆಸಿದ್ದಾರೆ. ಇದೊಂದು ಆಘಾತಕಾರಿ ವಿಷಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ದಲಿತ ಹೆಣ್ಣು ಮಗಳಿಗೆ ಹೆರಿಗೆಯಾಗಿದೆ ಎಂಬ ಸುದ್ದಿಯನ್ನು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯ ವಾಟ್ಸಾಪ್‌ ಗ್ರೂಪ್‌ನಲ್ಲಿ ಪಿಎಸ್‌ಐ ರನ್ನಗೌಡ ಅವರು ಹಂಚಿಕೊಂಡಿದ್ದರು. ಇದಕ್ಕೆ ಠಾಣೆಯ ಪಿಐ ಜಯರಾಮ್‌, ‘ಮಜಾ ಮಾಡಿ ಗೌಡ್ರೆ’ ಎಂದು ಪ್ರತಿಕ್ರಿಯಿಸಿ ನಂತರ ಡಿಲೀಟ್‌ ಮಾಡಿದ್ದಾರೆ. ದಲಿತ ಹೆಣ್ಣು ಮಗಳ ಬಗ್ಗೆ ಪೊಲೀಸರು ಹಗುರವಾಗಿ ನೀಚತನದಿಂದ ಮಾತನಾಡಿದ್ದಾರೆ. ರಕ್ಷಣೆ ಕೊಡಬೇಕಾದ ಇವರೇ ಹೀಗೆ ಮಾಡಿದರೆ ಹೇಗೆ?” ಎಂದು ಪ್ರಶ್ನಿಸಿದ್ದಾರೆ.

“ವಾಟ್ಸಾಪ್ ಗ್ರೂಪ್‌ನಲ್ಲಿ ಪೊಲೀಸರಿಬ್ಬರು ದಲಿತ ಹೆಣ್ಣು ಮಗಳ ಬಗ್ಗೆ ಕೆಟ್ಟದಾಗಿ ಚರ್ಚಿಸಿದ ವಿಷಯವನ್ನು ಅನಾಮಧೇಯ ವ್ಯಕ್ತಿಯೊಬ್ಬರು ದಲಿತ ಸಂಘಟನೆಗಳ ಮುಖಂಡರ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಕಳುಹಿಸಿದ್ದಾರೆ. ದಲಿತ ಹೆಣ್ಣು ಮಗಳಿಗೆ ಅವಹೇಳನ ಮಾಡಿದ ಪಿಐ ಜಯರಾಮ್‌ ಹಾಗೂ ಪಿಎಸ್ಐ ರನ್ನಗೌಡ ಇಬ್ಬರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪ್ರಕರಣವನ್ನು ವಿಳಂಬ ಅಥವಾ ಮುಚ್ಚಿ ಹಾಕಲು ಪ್ರಯತ್ನಿಸಿದ್ದಲ್ಲಿ, ಒಂದು ವಾರದ ನಂತರ ಎಲ್ಲಾ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಸೇರಿಸಿಕೊಂಡು ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು” ಎಂದು ಐಕ್ಯತಾ ಸಮಿತಿ ಎಚ್ಚರಿಕೆ ನೀಡಿದೆ.

ಮಿಸ್ ಆಗಿ ಗ್ರೂಪ್‌ನಲ್ಲಿ ಮೆಸೇಜ್‌ ಮಾಡಿದ್ದೇನೆ: ಅಧಿಕಾರಿ ಜಯರಾಮ್‌

ಈ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಪಿಐ ಜಯರಾಮ್‌, “ನನ್ನ ಮೇಲೆ ಸುಳ್ಳು ಆರೋಪಗಳು ಬಂದಿವೆ. ನಾನು ಆ ರೀತಿಯಲ್ಲಿ ಪ್ರತಿಕ್ರಿಯೆ ನೀಡಿಲ್ಲ” ಎಂದರು.

“ಪಿಎಸ್‌ಐ ರನ್ನಗೌಡ ಅವರು ನನಗೆ ವೈಯಕ್ತಿಕವಾಗಿ ಹಲವಾರು ತಮಾಷೆಯ ಸಂದೇಶಗಳನ್ನು ಕಳುಹಿಸುತ್ತಾರೆ. ಆ ದಿನ ಕೂಡ ನನಗೆ ಅವರು ವೈಯಕ್ತಿಕವಾಗಿ ಒಂದು ತಮಾಷೆ ವೀಡಿಯೊ ಕಳುಹಿಸಿದ್ದರು. ನಾನು ಅವರಿಗೆ ವೈಯಕ್ತಿಕವಾಗಿ ಪ್ರತಿಕ್ರಿಯಿಸುವಾಗ ಗೊತ್ತಾಗದೆ ಗ್ರೂಪ್‌ನಲ್ಲಿ ಪ್ರತಿಕ್ರಿಯೆ ನೀಡಿದೆ. ನಮ್ಮ ಗ್ರೂಪ್‌ನಲ್ಲೇ ಇದ್ದ ನನಗಾಗದವರು ಇದನ್ನು ತಿರುಚಿ ಅಪಪ್ರಚಾರ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ತಪ್ಪಾಗಿ ಗ್ರೂಪ್‌ನಲ್ಲಿ ಮೆಸೇಜ್ ಹೋಗಿರುವುದು ಗೊತ್ತಾದ ತಕ್ಷಣ ಆ ಸಂದೇಶವನ್ನು ಡಿಲೀಟ್‌ ಮಾಡಿದೆ. ಇದನ್ನೇ ಯಾರೋ ಎತ್ತಿಕೊಂಡು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ನಿಜವಾಗಿಯೂ ಆ ರೀತಿಯಲ್ಲಿ ಪ್ರತಿಕ್ರಿಯಿಸಿಲ್ಲ” ಎಂದು ಹೇಳಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ದಲಿತ ವಿದ್ಯಾರ್ಥಿನಿಗೆ ಹೆರಿಗೆಯಾದ ಕುರಿತು ವರದಿಯಾದಾಗ ದಲಿತ ಸಂಘಟನೆಗಳು ಸಮಾಜ ಕಲ್ಯಾಣ ಇಲಾಖೆ ಮತ್ತು ವಾರ್ಡನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು.

“ಹಾಸ್ಟೆಲ್​ನಲ್ಲಿದ್ದುಕೊಂಡು ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಹೆರಿಗೆಯಾಗಿದೆ. ಆದರೆ ಈ ವಿಚಾರವನ್ನು ಹೊರಬರಲು ಬಿಡದೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಹಾಸ್ಟೆಲ್ ವಾರ್ಡನ್ ಮುಚ್ಚಿ ಹಾಕಿದ್ದಾರೆ. ವಿಷಯ ತಿಳಿದಾಗ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯನ್ನು ಪ್ರಶ್ನಿಸಿದೆವು. ವಿದ್ಯಾರ್ಥಿನಿ ಹೊಟ್ಟೆಗೆ ಬಟ್ಟೆ ಕಟ್ಟಿಕೊಳ್ಳುತ್ತಿದ್ದಳು. ಹಾಗಾಗಿ ಗೊತ್ತಾಗಿಲ್ಲ ಎಂದು ಬೇಜವಾಬ್ದಾರಿಯಿಂದ ಹೇಳಿದ್ದಾರೆ” ಎಂದು ಟೀಕಿಸಿದ್ದವು. ಯುವತಿಯನ್ನು ಮನೆಗೆ ಕಳಿಸಿ ಹುಡುಗನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...