Homeಕರ್ನಾಟಕ‘ಮಜಾ ಮಾಡಿ ಗೌಡ್ರೇ’ ಎಂದು ದಲಿತ ಹೆಣ್ಣುಮಗಳ ಬಗ್ಗೆ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ; ದಸಂಸ ಆಕ್ರೋಶ

‘ಮಜಾ ಮಾಡಿ ಗೌಡ್ರೇ’ ಎಂದು ದಲಿತ ಹೆಣ್ಣುಮಗಳ ಬಗ್ಗೆ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ; ದಸಂಸ ಆಕ್ರೋಶ

- Advertisement -
- Advertisement -

ವಸತಿ ನಿಲಯದಲ್ಲಿ ದಲಿತ ಹೆಣ್ಣುಮಗಳೊಬ್ಬಳಿಗೆ ಹೆರಿಗೆಯಾಗಿದ್ದು, ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ಅವಹೇಳನಕಾರಿಯಾಗಿ ವಾಟ್ಸಾಪ್‌ನಲ್ಲಿ ಪ್ರತಿಕ್ರಿಯಿಸಿದ್ದು ಆಕ್ರೋಶಕ್ಕೆ ಗುರಿಯಾಗಿದೆ.

ವಿದ್ಯಾರ್ಥಿನಿಯೊಬ್ಬಳಿಗೆ ವಸತಿನಿಲಯದಲ್ಲಿ ಹೆರಿಗೆಯಾಗಿರುವ ಸುದ್ದಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಜಯರಾಮ್‌ ‘ಮಜಾ ಮಾಡಿ ಗೌಡ್ರೆ’ ಎಂದು ವಾಟ್ಸಾಪ್‌ನಲ್ಲಿ ಪ್ರತಿಕ್ರಿಯಿಸಿ ದಲಿತ ಹೆಣ್ಣು ಮಗಳಿಗೆ ಅವಹೇಳನ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳ ಐಕ್ಯತಾ ಚಾಲನಾ ಸಮಿತಿ ಆರೋಪಿಸಿದೆ. ಪೊಲೀಸರು ಈ ಆರೋಪವನ್ನು ಅಲ್ಲಗೆಳೆದಿದ್ದಾರೆ.

ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಸಮಿತಿಯ ಮುಖಂಡರಾದ ದಂಟರಮಕ್ಕಿ ಶ್ರೀನಿವಾಸ್, ಅಂಗಡಿ ಚಂದ್ರು, ಮರ್ಲೆ ಅನ್ನಯ್ಯ ಪೊಲೀಸ್‌ ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದಲಿತರಿಗೆ ವಸತಿ ನಿಲಯದಲ್ಲೂ ರಕ್ಷಣೆ ಇಲ್ಲದಂತಾಗಿದೆ. ವಿದ್ಯಾರ್ಥಿನಿ ಪಿಯುಸಿ ಓದುತ್ತಿದ್ದಾಳಷ್ಟೆ. ಪ್ರಕರಣ ಹೊರ ಬರದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ವಾರ್ಡನ್‌ ಹಲವು ಪ್ರಯತ್ನ ನಡೆಸಿದ್ದಾರೆ. ಇದೊಂದು ಆಘಾತಕಾರಿ ವಿಷಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ದಲಿತ ಹೆಣ್ಣು ಮಗಳಿಗೆ ಹೆರಿಗೆಯಾಗಿದೆ ಎಂಬ ಸುದ್ದಿಯನ್ನು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯ ವಾಟ್ಸಾಪ್‌ ಗ್ರೂಪ್‌ನಲ್ಲಿ ಪಿಎಸ್‌ಐ ರನ್ನಗೌಡ ಅವರು ಹಂಚಿಕೊಂಡಿದ್ದರು. ಇದಕ್ಕೆ ಠಾಣೆಯ ಪಿಐ ಜಯರಾಮ್‌, ‘ಮಜಾ ಮಾಡಿ ಗೌಡ್ರೆ’ ಎಂದು ಪ್ರತಿಕ್ರಿಯಿಸಿ ನಂತರ ಡಿಲೀಟ್‌ ಮಾಡಿದ್ದಾರೆ. ದಲಿತ ಹೆಣ್ಣು ಮಗಳ ಬಗ್ಗೆ ಪೊಲೀಸರು ಹಗುರವಾಗಿ ನೀಚತನದಿಂದ ಮಾತನಾಡಿದ್ದಾರೆ. ರಕ್ಷಣೆ ಕೊಡಬೇಕಾದ ಇವರೇ ಹೀಗೆ ಮಾಡಿದರೆ ಹೇಗೆ?” ಎಂದು ಪ್ರಶ್ನಿಸಿದ್ದಾರೆ.

“ವಾಟ್ಸಾಪ್ ಗ್ರೂಪ್‌ನಲ್ಲಿ ಪೊಲೀಸರಿಬ್ಬರು ದಲಿತ ಹೆಣ್ಣು ಮಗಳ ಬಗ್ಗೆ ಕೆಟ್ಟದಾಗಿ ಚರ್ಚಿಸಿದ ವಿಷಯವನ್ನು ಅನಾಮಧೇಯ ವ್ಯಕ್ತಿಯೊಬ್ಬರು ದಲಿತ ಸಂಘಟನೆಗಳ ಮುಖಂಡರ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಕಳುಹಿಸಿದ್ದಾರೆ. ದಲಿತ ಹೆಣ್ಣು ಮಗಳಿಗೆ ಅವಹೇಳನ ಮಾಡಿದ ಪಿಐ ಜಯರಾಮ್‌ ಹಾಗೂ ಪಿಎಸ್ಐ ರನ್ನಗೌಡ ಇಬ್ಬರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪ್ರಕರಣವನ್ನು ವಿಳಂಬ ಅಥವಾ ಮುಚ್ಚಿ ಹಾಕಲು ಪ್ರಯತ್ನಿಸಿದ್ದಲ್ಲಿ, ಒಂದು ವಾರದ ನಂತರ ಎಲ್ಲಾ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಸೇರಿಸಿಕೊಂಡು ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು” ಎಂದು ಐಕ್ಯತಾ ಸಮಿತಿ ಎಚ್ಚರಿಕೆ ನೀಡಿದೆ.

ಮಿಸ್ ಆಗಿ ಗ್ರೂಪ್‌ನಲ್ಲಿ ಮೆಸೇಜ್‌ ಮಾಡಿದ್ದೇನೆ: ಅಧಿಕಾರಿ ಜಯರಾಮ್‌

ಈ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಪಿಐ ಜಯರಾಮ್‌, “ನನ್ನ ಮೇಲೆ ಸುಳ್ಳು ಆರೋಪಗಳು ಬಂದಿವೆ. ನಾನು ಆ ರೀತಿಯಲ್ಲಿ ಪ್ರತಿಕ್ರಿಯೆ ನೀಡಿಲ್ಲ” ಎಂದರು.

“ಪಿಎಸ್‌ಐ ರನ್ನಗೌಡ ಅವರು ನನಗೆ ವೈಯಕ್ತಿಕವಾಗಿ ಹಲವಾರು ತಮಾಷೆಯ ಸಂದೇಶಗಳನ್ನು ಕಳುಹಿಸುತ್ತಾರೆ. ಆ ದಿನ ಕೂಡ ನನಗೆ ಅವರು ವೈಯಕ್ತಿಕವಾಗಿ ಒಂದು ತಮಾಷೆ ವೀಡಿಯೊ ಕಳುಹಿಸಿದ್ದರು. ನಾನು ಅವರಿಗೆ ವೈಯಕ್ತಿಕವಾಗಿ ಪ್ರತಿಕ್ರಿಯಿಸುವಾಗ ಗೊತ್ತಾಗದೆ ಗ್ರೂಪ್‌ನಲ್ಲಿ ಪ್ರತಿಕ್ರಿಯೆ ನೀಡಿದೆ. ನಮ್ಮ ಗ್ರೂಪ್‌ನಲ್ಲೇ ಇದ್ದ ನನಗಾಗದವರು ಇದನ್ನು ತಿರುಚಿ ಅಪಪ್ರಚಾರ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ತಪ್ಪಾಗಿ ಗ್ರೂಪ್‌ನಲ್ಲಿ ಮೆಸೇಜ್ ಹೋಗಿರುವುದು ಗೊತ್ತಾದ ತಕ್ಷಣ ಆ ಸಂದೇಶವನ್ನು ಡಿಲೀಟ್‌ ಮಾಡಿದೆ. ಇದನ್ನೇ ಯಾರೋ ಎತ್ತಿಕೊಂಡು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ನಿಜವಾಗಿಯೂ ಆ ರೀತಿಯಲ್ಲಿ ಪ್ರತಿಕ್ರಿಯಿಸಿಲ್ಲ” ಎಂದು ಹೇಳಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ದಲಿತ ವಿದ್ಯಾರ್ಥಿನಿಗೆ ಹೆರಿಗೆಯಾದ ಕುರಿತು ವರದಿಯಾದಾಗ ದಲಿತ ಸಂಘಟನೆಗಳು ಸಮಾಜ ಕಲ್ಯಾಣ ಇಲಾಖೆ ಮತ್ತು ವಾರ್ಡನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು.

“ಹಾಸ್ಟೆಲ್​ನಲ್ಲಿದ್ದುಕೊಂಡು ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಹೆರಿಗೆಯಾಗಿದೆ. ಆದರೆ ಈ ವಿಚಾರವನ್ನು ಹೊರಬರಲು ಬಿಡದೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಹಾಸ್ಟೆಲ್ ವಾರ್ಡನ್ ಮುಚ್ಚಿ ಹಾಕಿದ್ದಾರೆ. ವಿಷಯ ತಿಳಿದಾಗ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯನ್ನು ಪ್ರಶ್ನಿಸಿದೆವು. ವಿದ್ಯಾರ್ಥಿನಿ ಹೊಟ್ಟೆಗೆ ಬಟ್ಟೆ ಕಟ್ಟಿಕೊಳ್ಳುತ್ತಿದ್ದಳು. ಹಾಗಾಗಿ ಗೊತ್ತಾಗಿಲ್ಲ ಎಂದು ಬೇಜವಾಬ್ದಾರಿಯಿಂದ ಹೇಳಿದ್ದಾರೆ” ಎಂದು ಟೀಕಿಸಿದ್ದವು. ಯುವತಿಯನ್ನು ಮನೆಗೆ ಕಳಿಸಿ ಹುಡುಗನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...