Homeಕರ್ನಾಟಕ‘ಮಜಾ ಮಾಡಿ ಗೌಡ್ರೇ’ ಎಂದು ದಲಿತ ಹೆಣ್ಣುಮಗಳ ಬಗ್ಗೆ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ; ದಸಂಸ ಆಕ್ರೋಶ

‘ಮಜಾ ಮಾಡಿ ಗೌಡ್ರೇ’ ಎಂದು ದಲಿತ ಹೆಣ್ಣುಮಗಳ ಬಗ್ಗೆ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ; ದಸಂಸ ಆಕ್ರೋಶ

- Advertisement -
- Advertisement -

ವಸತಿ ನಿಲಯದಲ್ಲಿ ದಲಿತ ಹೆಣ್ಣುಮಗಳೊಬ್ಬಳಿಗೆ ಹೆರಿಗೆಯಾಗಿದ್ದು, ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ಅವಹೇಳನಕಾರಿಯಾಗಿ ವಾಟ್ಸಾಪ್‌ನಲ್ಲಿ ಪ್ರತಿಕ್ರಿಯಿಸಿದ್ದು ಆಕ್ರೋಶಕ್ಕೆ ಗುರಿಯಾಗಿದೆ.

ವಿದ್ಯಾರ್ಥಿನಿಯೊಬ್ಬಳಿಗೆ ವಸತಿನಿಲಯದಲ್ಲಿ ಹೆರಿಗೆಯಾಗಿರುವ ಸುದ್ದಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಜಯರಾಮ್‌ ‘ಮಜಾ ಮಾಡಿ ಗೌಡ್ರೆ’ ಎಂದು ವಾಟ್ಸಾಪ್‌ನಲ್ಲಿ ಪ್ರತಿಕ್ರಿಯಿಸಿ ದಲಿತ ಹೆಣ್ಣು ಮಗಳಿಗೆ ಅವಹೇಳನ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳ ಐಕ್ಯತಾ ಚಾಲನಾ ಸಮಿತಿ ಆರೋಪಿಸಿದೆ. ಪೊಲೀಸರು ಈ ಆರೋಪವನ್ನು ಅಲ್ಲಗೆಳೆದಿದ್ದಾರೆ.

ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಸಮಿತಿಯ ಮುಖಂಡರಾದ ದಂಟರಮಕ್ಕಿ ಶ್ರೀನಿವಾಸ್, ಅಂಗಡಿ ಚಂದ್ರು, ಮರ್ಲೆ ಅನ್ನಯ್ಯ ಪೊಲೀಸ್‌ ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದಲಿತರಿಗೆ ವಸತಿ ನಿಲಯದಲ್ಲೂ ರಕ್ಷಣೆ ಇಲ್ಲದಂತಾಗಿದೆ. ವಿದ್ಯಾರ್ಥಿನಿ ಪಿಯುಸಿ ಓದುತ್ತಿದ್ದಾಳಷ್ಟೆ. ಪ್ರಕರಣ ಹೊರ ಬರದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ವಾರ್ಡನ್‌ ಹಲವು ಪ್ರಯತ್ನ ನಡೆಸಿದ್ದಾರೆ. ಇದೊಂದು ಆಘಾತಕಾರಿ ವಿಷಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ದಲಿತ ಹೆಣ್ಣು ಮಗಳಿಗೆ ಹೆರಿಗೆಯಾಗಿದೆ ಎಂಬ ಸುದ್ದಿಯನ್ನು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯ ವಾಟ್ಸಾಪ್‌ ಗ್ರೂಪ್‌ನಲ್ಲಿ ಪಿಎಸ್‌ಐ ರನ್ನಗೌಡ ಅವರು ಹಂಚಿಕೊಂಡಿದ್ದರು. ಇದಕ್ಕೆ ಠಾಣೆಯ ಪಿಐ ಜಯರಾಮ್‌, ‘ಮಜಾ ಮಾಡಿ ಗೌಡ್ರೆ’ ಎಂದು ಪ್ರತಿಕ್ರಿಯಿಸಿ ನಂತರ ಡಿಲೀಟ್‌ ಮಾಡಿದ್ದಾರೆ. ದಲಿತ ಹೆಣ್ಣು ಮಗಳ ಬಗ್ಗೆ ಪೊಲೀಸರು ಹಗುರವಾಗಿ ನೀಚತನದಿಂದ ಮಾತನಾಡಿದ್ದಾರೆ. ರಕ್ಷಣೆ ಕೊಡಬೇಕಾದ ಇವರೇ ಹೀಗೆ ಮಾಡಿದರೆ ಹೇಗೆ?” ಎಂದು ಪ್ರಶ್ನಿಸಿದ್ದಾರೆ.

“ವಾಟ್ಸಾಪ್ ಗ್ರೂಪ್‌ನಲ್ಲಿ ಪೊಲೀಸರಿಬ್ಬರು ದಲಿತ ಹೆಣ್ಣು ಮಗಳ ಬಗ್ಗೆ ಕೆಟ್ಟದಾಗಿ ಚರ್ಚಿಸಿದ ವಿಷಯವನ್ನು ಅನಾಮಧೇಯ ವ್ಯಕ್ತಿಯೊಬ್ಬರು ದಲಿತ ಸಂಘಟನೆಗಳ ಮುಖಂಡರ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಕಳುಹಿಸಿದ್ದಾರೆ. ದಲಿತ ಹೆಣ್ಣು ಮಗಳಿಗೆ ಅವಹೇಳನ ಮಾಡಿದ ಪಿಐ ಜಯರಾಮ್‌ ಹಾಗೂ ಪಿಎಸ್ಐ ರನ್ನಗೌಡ ಇಬ್ಬರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪ್ರಕರಣವನ್ನು ವಿಳಂಬ ಅಥವಾ ಮುಚ್ಚಿ ಹಾಕಲು ಪ್ರಯತ್ನಿಸಿದ್ದಲ್ಲಿ, ಒಂದು ವಾರದ ನಂತರ ಎಲ್ಲಾ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಸೇರಿಸಿಕೊಂಡು ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು” ಎಂದು ಐಕ್ಯತಾ ಸಮಿತಿ ಎಚ್ಚರಿಕೆ ನೀಡಿದೆ.

ಮಿಸ್ ಆಗಿ ಗ್ರೂಪ್‌ನಲ್ಲಿ ಮೆಸೇಜ್‌ ಮಾಡಿದ್ದೇನೆ: ಅಧಿಕಾರಿ ಜಯರಾಮ್‌

ಈ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಪಿಐ ಜಯರಾಮ್‌, “ನನ್ನ ಮೇಲೆ ಸುಳ್ಳು ಆರೋಪಗಳು ಬಂದಿವೆ. ನಾನು ಆ ರೀತಿಯಲ್ಲಿ ಪ್ರತಿಕ್ರಿಯೆ ನೀಡಿಲ್ಲ” ಎಂದರು.

“ಪಿಎಸ್‌ಐ ರನ್ನಗೌಡ ಅವರು ನನಗೆ ವೈಯಕ್ತಿಕವಾಗಿ ಹಲವಾರು ತಮಾಷೆಯ ಸಂದೇಶಗಳನ್ನು ಕಳುಹಿಸುತ್ತಾರೆ. ಆ ದಿನ ಕೂಡ ನನಗೆ ಅವರು ವೈಯಕ್ತಿಕವಾಗಿ ಒಂದು ತಮಾಷೆ ವೀಡಿಯೊ ಕಳುಹಿಸಿದ್ದರು. ನಾನು ಅವರಿಗೆ ವೈಯಕ್ತಿಕವಾಗಿ ಪ್ರತಿಕ್ರಿಯಿಸುವಾಗ ಗೊತ್ತಾಗದೆ ಗ್ರೂಪ್‌ನಲ್ಲಿ ಪ್ರತಿಕ್ರಿಯೆ ನೀಡಿದೆ. ನಮ್ಮ ಗ್ರೂಪ್‌ನಲ್ಲೇ ಇದ್ದ ನನಗಾಗದವರು ಇದನ್ನು ತಿರುಚಿ ಅಪಪ್ರಚಾರ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ತಪ್ಪಾಗಿ ಗ್ರೂಪ್‌ನಲ್ಲಿ ಮೆಸೇಜ್ ಹೋಗಿರುವುದು ಗೊತ್ತಾದ ತಕ್ಷಣ ಆ ಸಂದೇಶವನ್ನು ಡಿಲೀಟ್‌ ಮಾಡಿದೆ. ಇದನ್ನೇ ಯಾರೋ ಎತ್ತಿಕೊಂಡು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ನಿಜವಾಗಿಯೂ ಆ ರೀತಿಯಲ್ಲಿ ಪ್ರತಿಕ್ರಿಯಿಸಿಲ್ಲ” ಎಂದು ಹೇಳಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ದಲಿತ ವಿದ್ಯಾರ್ಥಿನಿಗೆ ಹೆರಿಗೆಯಾದ ಕುರಿತು ವರದಿಯಾದಾಗ ದಲಿತ ಸಂಘಟನೆಗಳು ಸಮಾಜ ಕಲ್ಯಾಣ ಇಲಾಖೆ ಮತ್ತು ವಾರ್ಡನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು.

“ಹಾಸ್ಟೆಲ್​ನಲ್ಲಿದ್ದುಕೊಂಡು ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಹೆರಿಗೆಯಾಗಿದೆ. ಆದರೆ ಈ ವಿಚಾರವನ್ನು ಹೊರಬರಲು ಬಿಡದೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಹಾಸ್ಟೆಲ್ ವಾರ್ಡನ್ ಮುಚ್ಚಿ ಹಾಕಿದ್ದಾರೆ. ವಿಷಯ ತಿಳಿದಾಗ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯನ್ನು ಪ್ರಶ್ನಿಸಿದೆವು. ವಿದ್ಯಾರ್ಥಿನಿ ಹೊಟ್ಟೆಗೆ ಬಟ್ಟೆ ಕಟ್ಟಿಕೊಳ್ಳುತ್ತಿದ್ದಳು. ಹಾಗಾಗಿ ಗೊತ್ತಾಗಿಲ್ಲ ಎಂದು ಬೇಜವಾಬ್ದಾರಿಯಿಂದ ಹೇಳಿದ್ದಾರೆ” ಎಂದು ಟೀಕಿಸಿದ್ದವು. ಯುವತಿಯನ್ನು ಮನೆಗೆ ಕಳಿಸಿ ಹುಡುಗನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...