Homeಮುಖಪುಟತಮಿಳುನಾಡು: ಕರ್ತವ್ಯದಲ್ಲಿದ್ದಾಗಲೇ ಬಿಜೆಪಿ ಸದಸ್ಯರಾಗಿ ನೋಂದಾಯಿಸಿಕೊಂಡ ಇಬ್ಬರು ಪೊಲೀಸ್‌ ಅಧಿಕಾರಿಗಳು!

ತಮಿಳುನಾಡು: ಕರ್ತವ್ಯದಲ್ಲಿದ್ದಾಗಲೇ ಬಿಜೆಪಿ ಸದಸ್ಯರಾಗಿ ನೋಂದಾಯಿಸಿಕೊಂಡ ಇಬ್ಬರು ಪೊಲೀಸ್‌ ಅಧಿಕಾರಿಗಳು!

- Advertisement -
- Advertisement -

ತಮಿಳುನಾಡಿನಲ್ಲಿ ಇಬ್ಬರು ಪೊಲೀಸ್‌ ಅಧಿಕಾರಿಗಳು ಕರ್ತವ್ಯದಲ್ಲಿದ್ದಾಗಲೇ ಬಿಜೆಪಿಗೆ ಸೇರಿಕೊಂಡಿದ್ದು, ಪೊಲೀಸ್ ಅಧಿಕಾರಿಗಳ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ‘ಎನ್‌ ಮನ್ನ್‌ ಎನ್ನ ಮಕ್ಕಳ್‌’ ರ್ಯಾಲಿಗೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್‌ ಅಧಿಕಾರಿಗಳು ಬಿಜೆಪಿಯ ಸದಸ್ಯತ್ವವನ್ನು ಪಡೆದುಕೊಂಡಿದ್ದು, ಈ ಬಗ್ಗೆ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಡಿಸೆಂಬರ್ 27 ರಂದು ನಾಗಪಟ್ಟಣಂ ಜಿಲ್ಲೆಯಲ್ಲಿ ಅಣ್ಣಾಮಲೈ ಅವರ ಯಾತ್ರೆಯ ಸಂದರ್ಭದಲ್ಲಿ ಸ್ಥಾಪಿಸಲಾದ ಸ್ಟಾಲ್‌ಗಳಲ್ಲಿ ಸಬ್ ಇನ್ಸ್‌ಪೆಕ್ಟರ್ ಕೆ ರಾಜೇಂದ್ರನ್ ಮತ್ತು ವಿಶೇಷ ಸೆಲ್‌ನ ಸಬ್ ಇನ್ಸ್‌ಪೆಕ್ಟರ್ ಎ ಕಾರ್ತಿಕೇಯನ್ ಬಿಜೆಪಿಯ ಸದಸ್ಯತ್ವನ್ನು ಪಡೆದುಕೊಂಡಿದ್ದಾರೆ. ವೇಲಿಪಾಳ್ಯಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಈ ಇಬ್ಬರು ಅಧಿಕಾರಿಗಳು ದೂರವಾಣಿ ಸಂಖ್ಯೆಗೆ ಮಿಸ್ಡ್ ಕಾಲ್ ನೀಡುವ ಮೂಲಕ ಸದಸ್ಯತ್ವ ಪಡೆದಿದ್ದಾರೆ ಎಂದು ಉನ್ನತ ಪೊಲೀಸರು ತಿಳಿಸಿದ್ದಾರೆ.

ಪೊಲೀಸ್‌ ಅಧಿಕಾರಿಗಳು ಬಿಜೆಪಿಯ ಸದಸ್ಯತ್ವ ನೋಂದಾವಣೆಯ ವಿಡಿಯೋವನ್ನು ಮಾಡಿ  ಹಂಚಿಕೊಳ್ಳಲಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣಗಳ ಬಳಕೆದಾರರು ವ್ಯಾಪಕವಾಗಿ ಆಗ್ರಹಿಸಿದ್ದರು.

ಮೂಲಗಳ ಪ್ರಕಾರ, ಘಟನೆಯು ನಾಗಪಟ್ಟಣಂ ಪೊಲೀಸ್ ವರಿಷ್ಠಾಧಿಕಾರಿ ಹರ್ಷ್ ಸಿಂಗ್ ಅವರ ಗಮನಕ್ಕೆ ಬಂದ ತಕ್ಷಣ ತಮಿಳುನಾಡು ಅಧೀನ ಪೊಲೀಸ್ ಅಧಿಕಾರಿಗಳ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ ಅಧಿಕಾರಿಗಳನ್ನು 36 ಗಂಟೆಗಳ ಒಳಗೆ ಸಶಸ್ತ್ರ ಮೀಸಲು ಪಡೆಗೆ ವರ್ಗಾಯಿಸಲಾಗಿತ್ತು. ಇದಲ್ಲದೆ ಉಪ ಪೊಲೀಸ್ ವರಿಷ್ಠಾಧಿಕಾರಿಯಿಂದ ಇಲಾಖಾ ತನಿಖೆಗೆ ಎಸ್ಪಿ ಸಿಂಗ್ ಆದೇಶಿಸಿದ್ದರು. ವಿಚಾರಣೆಯ ನಂತರ ಅವರು ಬಿಜೆಪಿಯ ಸದಸ್ಯತ್ವ ಪಡೆದಿರುವುದು ಬಯಲಾಗಿದೆ. ಬಳಿಕ ಎಸ್ಪಿ ಸಿಂಗ್ ಅವರ ಶಿಫಾರಸ್ಸಿನ ಮೇರೆಗೆ ತಂಜಾವೂರು ರೇಂಜ್ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಟಿ ಜಯಚಂದ್ರನ್ ಅವರು ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಈ ಬಗ್ಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿಕೆ ನೀಡಿದ್ದು, ಅಧಿಕಾರಿಗಳು ಬಿಜೆಪಿಗೆ ಸೇರ್ಪಡೆಗೊಂಡಿಲ್ಲ. ಈ ಬಗ್ಗೆ ಸ್ಟಾಲ್‌ನ ಪ್ರತಿನಿಧಿಗಳೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ. ಯಾವುದೇ ವಿಚಾರಣೆ ನಡೆಸದೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿರುವುದು ಬೇಸರ ತಂದಿದೆ. ಇದು ಅಧಿಕಾರಿಗಳ ಮೇಲೆ ಮಾತ್ರವಲ್ಲ, ಅವರ ಕುಟುಂಬದ ಮೇಲೂ ಪರಿಣಾಮ ಬೀರುತ್ತದೆ. ಇಂತಹ ಕ್ರಮವು ಪೊಲೀಸ್ ಪಡೆಗೆ ಸೇರಲು ಆಗ್ರಹಿಸುವ ಯುವಕರನ್ನು ನಿರುತ್ಸಾಹಗೊಳಿಸುತ್ತದೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಇದನ್ನು ಓದಿ:ಮೋದಿ ಕುರಿತ ಟೀಕೆ: ಪವನ್ ಖೇರಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ಧತಿಗೆ ಸುಪ್ರೀಂ ನಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...