Homeಮುಖಪುಟತಮಿಳುನಾಡು: ಕರ್ತವ್ಯದಲ್ಲಿದ್ದಾಗಲೇ ಬಿಜೆಪಿ ಸದಸ್ಯರಾಗಿ ನೋಂದಾಯಿಸಿಕೊಂಡ ಇಬ್ಬರು ಪೊಲೀಸ್‌ ಅಧಿಕಾರಿಗಳು!

ತಮಿಳುನಾಡು: ಕರ್ತವ್ಯದಲ್ಲಿದ್ದಾಗಲೇ ಬಿಜೆಪಿ ಸದಸ್ಯರಾಗಿ ನೋಂದಾಯಿಸಿಕೊಂಡ ಇಬ್ಬರು ಪೊಲೀಸ್‌ ಅಧಿಕಾರಿಗಳು!

- Advertisement -
- Advertisement -

ತಮಿಳುನಾಡಿನಲ್ಲಿ ಇಬ್ಬರು ಪೊಲೀಸ್‌ ಅಧಿಕಾರಿಗಳು ಕರ್ತವ್ಯದಲ್ಲಿದ್ದಾಗಲೇ ಬಿಜೆಪಿಗೆ ಸೇರಿಕೊಂಡಿದ್ದು, ಪೊಲೀಸ್ ಅಧಿಕಾರಿಗಳ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ‘ಎನ್‌ ಮನ್ನ್‌ ಎನ್ನ ಮಕ್ಕಳ್‌’ ರ್ಯಾಲಿಗೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್‌ ಅಧಿಕಾರಿಗಳು ಬಿಜೆಪಿಯ ಸದಸ್ಯತ್ವವನ್ನು ಪಡೆದುಕೊಂಡಿದ್ದು, ಈ ಬಗ್ಗೆ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಡಿಸೆಂಬರ್ 27 ರಂದು ನಾಗಪಟ್ಟಣಂ ಜಿಲ್ಲೆಯಲ್ಲಿ ಅಣ್ಣಾಮಲೈ ಅವರ ಯಾತ್ರೆಯ ಸಂದರ್ಭದಲ್ಲಿ ಸ್ಥಾಪಿಸಲಾದ ಸ್ಟಾಲ್‌ಗಳಲ್ಲಿ ಸಬ್ ಇನ್ಸ್‌ಪೆಕ್ಟರ್ ಕೆ ರಾಜೇಂದ್ರನ್ ಮತ್ತು ವಿಶೇಷ ಸೆಲ್‌ನ ಸಬ್ ಇನ್ಸ್‌ಪೆಕ್ಟರ್ ಎ ಕಾರ್ತಿಕೇಯನ್ ಬಿಜೆಪಿಯ ಸದಸ್ಯತ್ವನ್ನು ಪಡೆದುಕೊಂಡಿದ್ದಾರೆ. ವೇಲಿಪಾಳ್ಯಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಈ ಇಬ್ಬರು ಅಧಿಕಾರಿಗಳು ದೂರವಾಣಿ ಸಂಖ್ಯೆಗೆ ಮಿಸ್ಡ್ ಕಾಲ್ ನೀಡುವ ಮೂಲಕ ಸದಸ್ಯತ್ವ ಪಡೆದಿದ್ದಾರೆ ಎಂದು ಉನ್ನತ ಪೊಲೀಸರು ತಿಳಿಸಿದ್ದಾರೆ.

ಪೊಲೀಸ್‌ ಅಧಿಕಾರಿಗಳು ಬಿಜೆಪಿಯ ಸದಸ್ಯತ್ವ ನೋಂದಾವಣೆಯ ವಿಡಿಯೋವನ್ನು ಮಾಡಿ  ಹಂಚಿಕೊಳ್ಳಲಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣಗಳ ಬಳಕೆದಾರರು ವ್ಯಾಪಕವಾಗಿ ಆಗ್ರಹಿಸಿದ್ದರು.

ಮೂಲಗಳ ಪ್ರಕಾರ, ಘಟನೆಯು ನಾಗಪಟ್ಟಣಂ ಪೊಲೀಸ್ ವರಿಷ್ಠಾಧಿಕಾರಿ ಹರ್ಷ್ ಸಿಂಗ್ ಅವರ ಗಮನಕ್ಕೆ ಬಂದ ತಕ್ಷಣ ತಮಿಳುನಾಡು ಅಧೀನ ಪೊಲೀಸ್ ಅಧಿಕಾರಿಗಳ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ ಅಧಿಕಾರಿಗಳನ್ನು 36 ಗಂಟೆಗಳ ಒಳಗೆ ಸಶಸ್ತ್ರ ಮೀಸಲು ಪಡೆಗೆ ವರ್ಗಾಯಿಸಲಾಗಿತ್ತು. ಇದಲ್ಲದೆ ಉಪ ಪೊಲೀಸ್ ವರಿಷ್ಠಾಧಿಕಾರಿಯಿಂದ ಇಲಾಖಾ ತನಿಖೆಗೆ ಎಸ್ಪಿ ಸಿಂಗ್ ಆದೇಶಿಸಿದ್ದರು. ವಿಚಾರಣೆಯ ನಂತರ ಅವರು ಬಿಜೆಪಿಯ ಸದಸ್ಯತ್ವ ಪಡೆದಿರುವುದು ಬಯಲಾಗಿದೆ. ಬಳಿಕ ಎಸ್ಪಿ ಸಿಂಗ್ ಅವರ ಶಿಫಾರಸ್ಸಿನ ಮೇರೆಗೆ ತಂಜಾವೂರು ರೇಂಜ್ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಟಿ ಜಯಚಂದ್ರನ್ ಅವರು ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಈ ಬಗ್ಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿಕೆ ನೀಡಿದ್ದು, ಅಧಿಕಾರಿಗಳು ಬಿಜೆಪಿಗೆ ಸೇರ್ಪಡೆಗೊಂಡಿಲ್ಲ. ಈ ಬಗ್ಗೆ ಸ್ಟಾಲ್‌ನ ಪ್ರತಿನಿಧಿಗಳೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ. ಯಾವುದೇ ವಿಚಾರಣೆ ನಡೆಸದೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿರುವುದು ಬೇಸರ ತಂದಿದೆ. ಇದು ಅಧಿಕಾರಿಗಳ ಮೇಲೆ ಮಾತ್ರವಲ್ಲ, ಅವರ ಕುಟುಂಬದ ಮೇಲೂ ಪರಿಣಾಮ ಬೀರುತ್ತದೆ. ಇಂತಹ ಕ್ರಮವು ಪೊಲೀಸ್ ಪಡೆಗೆ ಸೇರಲು ಆಗ್ರಹಿಸುವ ಯುವಕರನ್ನು ನಿರುತ್ಸಾಹಗೊಳಿಸುತ್ತದೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಇದನ್ನು ಓದಿ:ಮೋದಿ ಕುರಿತ ಟೀಕೆ: ಪವನ್ ಖೇರಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ಧತಿಗೆ ಸುಪ್ರೀಂ ನಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...