Homeಮುಖಪುಟತಮಿಳುನಾಡು: ಕರ್ತವ್ಯದಲ್ಲಿದ್ದಾಗಲೇ ಬಿಜೆಪಿ ಸದಸ್ಯರಾಗಿ ನೋಂದಾಯಿಸಿಕೊಂಡ ಇಬ್ಬರು ಪೊಲೀಸ್‌ ಅಧಿಕಾರಿಗಳು!

ತಮಿಳುನಾಡು: ಕರ್ತವ್ಯದಲ್ಲಿದ್ದಾಗಲೇ ಬಿಜೆಪಿ ಸದಸ್ಯರಾಗಿ ನೋಂದಾಯಿಸಿಕೊಂಡ ಇಬ್ಬರು ಪೊಲೀಸ್‌ ಅಧಿಕಾರಿಗಳು!

- Advertisement -
- Advertisement -

ತಮಿಳುನಾಡಿನಲ್ಲಿ ಇಬ್ಬರು ಪೊಲೀಸ್‌ ಅಧಿಕಾರಿಗಳು ಕರ್ತವ್ಯದಲ್ಲಿದ್ದಾಗಲೇ ಬಿಜೆಪಿಗೆ ಸೇರಿಕೊಂಡಿದ್ದು, ಪೊಲೀಸ್ ಅಧಿಕಾರಿಗಳ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ‘ಎನ್‌ ಮನ್ನ್‌ ಎನ್ನ ಮಕ್ಕಳ್‌’ ರ್ಯಾಲಿಗೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್‌ ಅಧಿಕಾರಿಗಳು ಬಿಜೆಪಿಯ ಸದಸ್ಯತ್ವವನ್ನು ಪಡೆದುಕೊಂಡಿದ್ದು, ಈ ಬಗ್ಗೆ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಡಿಸೆಂಬರ್ 27 ರಂದು ನಾಗಪಟ್ಟಣಂ ಜಿಲ್ಲೆಯಲ್ಲಿ ಅಣ್ಣಾಮಲೈ ಅವರ ಯಾತ್ರೆಯ ಸಂದರ್ಭದಲ್ಲಿ ಸ್ಥಾಪಿಸಲಾದ ಸ್ಟಾಲ್‌ಗಳಲ್ಲಿ ಸಬ್ ಇನ್ಸ್‌ಪೆಕ್ಟರ್ ಕೆ ರಾಜೇಂದ್ರನ್ ಮತ್ತು ವಿಶೇಷ ಸೆಲ್‌ನ ಸಬ್ ಇನ್ಸ್‌ಪೆಕ್ಟರ್ ಎ ಕಾರ್ತಿಕೇಯನ್ ಬಿಜೆಪಿಯ ಸದಸ್ಯತ್ವನ್ನು ಪಡೆದುಕೊಂಡಿದ್ದಾರೆ. ವೇಲಿಪಾಳ್ಯಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಈ ಇಬ್ಬರು ಅಧಿಕಾರಿಗಳು ದೂರವಾಣಿ ಸಂಖ್ಯೆಗೆ ಮಿಸ್ಡ್ ಕಾಲ್ ನೀಡುವ ಮೂಲಕ ಸದಸ್ಯತ್ವ ಪಡೆದಿದ್ದಾರೆ ಎಂದು ಉನ್ನತ ಪೊಲೀಸರು ತಿಳಿಸಿದ್ದಾರೆ.

ಪೊಲೀಸ್‌ ಅಧಿಕಾರಿಗಳು ಬಿಜೆಪಿಯ ಸದಸ್ಯತ್ವ ನೋಂದಾವಣೆಯ ವಿಡಿಯೋವನ್ನು ಮಾಡಿ  ಹಂಚಿಕೊಳ್ಳಲಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣಗಳ ಬಳಕೆದಾರರು ವ್ಯಾಪಕವಾಗಿ ಆಗ್ರಹಿಸಿದ್ದರು.

ಮೂಲಗಳ ಪ್ರಕಾರ, ಘಟನೆಯು ನಾಗಪಟ್ಟಣಂ ಪೊಲೀಸ್ ವರಿಷ್ಠಾಧಿಕಾರಿ ಹರ್ಷ್ ಸಿಂಗ್ ಅವರ ಗಮನಕ್ಕೆ ಬಂದ ತಕ್ಷಣ ತಮಿಳುನಾಡು ಅಧೀನ ಪೊಲೀಸ್ ಅಧಿಕಾರಿಗಳ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ ಅಧಿಕಾರಿಗಳನ್ನು 36 ಗಂಟೆಗಳ ಒಳಗೆ ಸಶಸ್ತ್ರ ಮೀಸಲು ಪಡೆಗೆ ವರ್ಗಾಯಿಸಲಾಗಿತ್ತು. ಇದಲ್ಲದೆ ಉಪ ಪೊಲೀಸ್ ವರಿಷ್ಠಾಧಿಕಾರಿಯಿಂದ ಇಲಾಖಾ ತನಿಖೆಗೆ ಎಸ್ಪಿ ಸಿಂಗ್ ಆದೇಶಿಸಿದ್ದರು. ವಿಚಾರಣೆಯ ನಂತರ ಅವರು ಬಿಜೆಪಿಯ ಸದಸ್ಯತ್ವ ಪಡೆದಿರುವುದು ಬಯಲಾಗಿದೆ. ಬಳಿಕ ಎಸ್ಪಿ ಸಿಂಗ್ ಅವರ ಶಿಫಾರಸ್ಸಿನ ಮೇರೆಗೆ ತಂಜಾವೂರು ರೇಂಜ್ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಟಿ ಜಯಚಂದ್ರನ್ ಅವರು ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಈ ಬಗ್ಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿಕೆ ನೀಡಿದ್ದು, ಅಧಿಕಾರಿಗಳು ಬಿಜೆಪಿಗೆ ಸೇರ್ಪಡೆಗೊಂಡಿಲ್ಲ. ಈ ಬಗ್ಗೆ ಸ್ಟಾಲ್‌ನ ಪ್ರತಿನಿಧಿಗಳೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ. ಯಾವುದೇ ವಿಚಾರಣೆ ನಡೆಸದೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿರುವುದು ಬೇಸರ ತಂದಿದೆ. ಇದು ಅಧಿಕಾರಿಗಳ ಮೇಲೆ ಮಾತ್ರವಲ್ಲ, ಅವರ ಕುಟುಂಬದ ಮೇಲೂ ಪರಿಣಾಮ ಬೀರುತ್ತದೆ. ಇಂತಹ ಕ್ರಮವು ಪೊಲೀಸ್ ಪಡೆಗೆ ಸೇರಲು ಆಗ್ರಹಿಸುವ ಯುವಕರನ್ನು ನಿರುತ್ಸಾಹಗೊಳಿಸುತ್ತದೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಇದನ್ನು ಓದಿ:ಮೋದಿ ಕುರಿತ ಟೀಕೆ: ಪವನ್ ಖೇರಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ಧತಿಗೆ ಸುಪ್ರೀಂ ನಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...