Homeಕರ್ನಾಟಕಪೊಲೀಸ್‌‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸ್‌ ದಬ್ಬಾಳಿಕೆ; ಕಾಂಗ್ರೆಸ್ ಖಂಡನೆ

ಪೊಲೀಸ್‌‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸ್‌ ದಬ್ಬಾಳಿಕೆ; ಕಾಂಗ್ರೆಸ್ ಖಂಡನೆ

- Advertisement -
- Advertisement -

ಪೊಲೀಸ್‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಕಾಂಗ್ರೆಸ್ ಖಂಡಿಸಿದೆ. ಪಿಎಸ್‌ಐ ಹಗರಣದಿಂದ ಸಂತ್ರಸ್ತರಾದ ಅಭ್ಯರ್ಥಿಗಳು, ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ಆಕಾಂಕ್ಷಿಗಳು ಹೋರಾಟ ನಡೆಸುತ್ತಿದ್ದಾರೆ.

ಪಿಎಸ್‌ಐ ಹಗರಣದ ಸಂತ್ರಸ್ತರಿಗೆ ನ್ಯಾಯ ದೊರಕಿಸಬೇಕು. ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ನೇಮಕಾತಿ ವಯೋಮಿತಿ ಹೆಚ್ಚಿಸಬೇಕು ಎಂದು ಆಕಾಂಕ್ಷಿಗಳು ಹೋರಾಟ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರು ತುಮಕೂರಿನಲ್ಲಿ ಹಲ್ಲೆ ನಡೆಸಿದ್ದಾರೆ.

ಪಿಎಸ್‌ಐ ಹುದ್ದೆ ಆಕಾಂಕ್ಷಿ ಮೇಲೆ ಹಲ್ಲೆ ನಡೆದಿದೆ ಎಂದು ಕಾಂಗ್ರೆಸ್‌ ಟ್ವೀಟ್ ಮಾಡಿದ್ದು, ಮತ್ತೊಂದೆಡೆ ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ನೇಮಕಾತಿಯ ವಯೋಮಿತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾಗ ಈ ಘಟನೆ ನಡೆದಿರುವುದಾಗಿ ಆಕಾಂಕ್ಷಿಗಳು ತಿಳಿಸಿದ್ದಾರೆ.

“ಅಭ್ಯರ್ಥಿಗಳನ್ನು ಎದುರುಗೊಳ್ಳಲು, ಅವರ ನೋವು ಆಲಿಸಲು ಧೈರ್ಯವಿಲ್ಲದೆ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ?” ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

“ಆರಗ ಜ್ಞಾನೇಂದ್ರ ಅವರೇ, ಅಕ್ರಮ ನಡೆಸಿದ ಸರ್ಕಾರ ಅಪರಾಧಿ ಸ್ಥಾನದಲ್ಲಿದೆ. ಆದರೆ ಶಿಕ್ಷೆ ಮಾತ್ರ ಅಭ್ಯರ್ಥಿಗಳಿಗೆ. ಅವರು ಉದ್ಯೋಗ ಕೇಳುತ್ತಿದ್ದಾರೆ ಹೊರತು ನಿಮ್ಮ ಕುರ್ಚಿಯನ್ನಲ್ಲ” ಎಂದು ಕಟುವಾಗಿ ಟೀಕಿಸಿದ್ದಾರೆ.

“ಪಿಎಸ್‌ಐ ಅಕ್ರಮದಿಂದ ಸಂತ್ರಸ್ತರಾದ ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ ತುಮಕೂರು ಡಿವೈಎಸ್ಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಆರಗ ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ? ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ” ಎಂದು ಆಗ್ರಹಿಸಿದೆ.

ನ್ಯಾಯಕ್ಕಾಗಿ ಆಗ್ರಹಿಸುತ್ತಾ ಆರಗ ಜ್ಞಾನೇಂದ್ರ ಅವರ ಕಾಲು ಹಿಡಿದು ಅಳುತ್ತಿರುವ ಅಭ್ಯರ್ಥಿಗಳ ವಿಡಿಯೊ ಜೊತೆಗೆ ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್‌, “ಪೊಲೀಸ್ ಕಾನ್‌ಸ್ಟೇಬಲ್‌ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆ, ದುರಹಂಕಾರದ ನಡವಳಿಕೆ ಇದು. ಜನರೊಂದಿಗೆ ನಡೆದುಕೊಳ್ಳುವ ರೀತಿ ಇದೇನಾ? ಉದ್ಯೋಗಕ್ಕಾಗಿ ಪರಿತಪಿಸುವ ಯುವಜನರಿಗೆ ನಿಮ್ಮ ಸ್ಪಂದನೆ ಇದೇನಾ? ಈ ದರ್ಪ, ದೌಲತ್ತುಗಳು ಆಯಸ್ಸು ಕೆಲವೇ ತಿಂಗಳುಗಳಷ್ಟೇ, ನೆನಪಿರಲಿ” ಎಂದು ಎಚ್ಚರಿಸಿದೆ.

ಇದನ್ನೂ ಓದಿರಿ: ‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

ಆರಗ ಅವರ ವರ್ತನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಡಿರುವ ಟ್ವೀಟ್‌ಗೆ ದಿಲೀಪ್ ಲಮಾಣಿ ಎಂಬವರು ಪ್ರತಿಕ್ರಿಯಿಸಿ, “ಸುಮಾರು ದಿನಗಳಿಂದ ಪೋಲೀಸ್ ಕಾನ್‌ಸ್ಟೇಬಲ್‌ ವಯೋಮಿತಿ ಹೆಚ್ಚಳ ಸಲುವಾಗಿ ಮನವಿ ನೀಡುತ್ತಲೇ ಬಂದಿರುತ್ತೇವೆ ಆದರೂ ಈ ಸರ್ಕಾರ ಯುವಕರನ್ನ ಕಡೆಗಣಿಸುತ್ತಿದೆ” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ ನಾಯಕ ಬಾಬುರಾವ್‌ ಚಿಂಚನಸೂರ್ ಅವರ ವಿಡಿಯೊ ತುಣುಕನ್ನು ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ “ಇವತ್ತು ಖಾಲಿ ಪೇಪರ್ ಇದ್ದರೂ ಸಹ ಡಿವೈಎಸ್ಪಿ ಆಗಬಹುದು ಎಂದು ಚಿಂಚನಸೂರ್ ಹೇಳಿದ್ದಾರೆ. ಹಣದೊಂದಿಗೆ ಖಾಲಿ ಪೇಪರ್ ಇದ್ದರೆ ವ್ಯಾಪಾರಕ್ಕಿಟ್ಟಿರುವ ಸರ್ಕಾರಿ ಹುದ್ದೆಗಳು ಸಿಗುತ್ತವೆ ಎಂಬುದನ್ನು ಸೊಗಸಾಗಿ ಹೇಳಿದ್ದಾರೆ ಅಲ್ಲವೇ? ಬೊಮ್ಮಾಯಿಯವರೇ #40PercentSarkaraದ ಅಕ್ರಮ ನೇಮಕಾತಿಗಳು ಖಾಲಿ ಪೇಪರ್‌ನಲ್ಲಿಯೇ ನಡೆಯುತ್ತವೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...