Homeಕರ್ನಾಟಕಪೊಲೀಸ್‌‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸ್‌ ದಬ್ಬಾಳಿಕೆ; ಕಾಂಗ್ರೆಸ್ ಖಂಡನೆ

ಪೊಲೀಸ್‌‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸ್‌ ದಬ್ಬಾಳಿಕೆ; ಕಾಂಗ್ರೆಸ್ ಖಂಡನೆ

- Advertisement -
- Advertisement -

ಪೊಲೀಸ್‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಕಾಂಗ್ರೆಸ್ ಖಂಡಿಸಿದೆ. ಪಿಎಸ್‌ಐ ಹಗರಣದಿಂದ ಸಂತ್ರಸ್ತರಾದ ಅಭ್ಯರ್ಥಿಗಳು, ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ಆಕಾಂಕ್ಷಿಗಳು ಹೋರಾಟ ನಡೆಸುತ್ತಿದ್ದಾರೆ.

ಪಿಎಸ್‌ಐ ಹಗರಣದ ಸಂತ್ರಸ್ತರಿಗೆ ನ್ಯಾಯ ದೊರಕಿಸಬೇಕು. ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ನೇಮಕಾತಿ ವಯೋಮಿತಿ ಹೆಚ್ಚಿಸಬೇಕು ಎಂದು ಆಕಾಂಕ್ಷಿಗಳು ಹೋರಾಟ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರು ತುಮಕೂರಿನಲ್ಲಿ ಹಲ್ಲೆ ನಡೆಸಿದ್ದಾರೆ.

ಪಿಎಸ್‌ಐ ಹುದ್ದೆ ಆಕಾಂಕ್ಷಿ ಮೇಲೆ ಹಲ್ಲೆ ನಡೆದಿದೆ ಎಂದು ಕಾಂಗ್ರೆಸ್‌ ಟ್ವೀಟ್ ಮಾಡಿದ್ದು, ಮತ್ತೊಂದೆಡೆ ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ನೇಮಕಾತಿಯ ವಯೋಮಿತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾಗ ಈ ಘಟನೆ ನಡೆದಿರುವುದಾಗಿ ಆಕಾಂಕ್ಷಿಗಳು ತಿಳಿಸಿದ್ದಾರೆ.

“ಅಭ್ಯರ್ಥಿಗಳನ್ನು ಎದುರುಗೊಳ್ಳಲು, ಅವರ ನೋವು ಆಲಿಸಲು ಧೈರ್ಯವಿಲ್ಲದೆ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ?” ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

“ಆರಗ ಜ್ಞಾನೇಂದ್ರ ಅವರೇ, ಅಕ್ರಮ ನಡೆಸಿದ ಸರ್ಕಾರ ಅಪರಾಧಿ ಸ್ಥಾನದಲ್ಲಿದೆ. ಆದರೆ ಶಿಕ್ಷೆ ಮಾತ್ರ ಅಭ್ಯರ್ಥಿಗಳಿಗೆ. ಅವರು ಉದ್ಯೋಗ ಕೇಳುತ್ತಿದ್ದಾರೆ ಹೊರತು ನಿಮ್ಮ ಕುರ್ಚಿಯನ್ನಲ್ಲ” ಎಂದು ಕಟುವಾಗಿ ಟೀಕಿಸಿದ್ದಾರೆ.

“ಪಿಎಸ್‌ಐ ಅಕ್ರಮದಿಂದ ಸಂತ್ರಸ್ತರಾದ ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ ತುಮಕೂರು ಡಿವೈಎಸ್ಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಆರಗ ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ? ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ” ಎಂದು ಆಗ್ರಹಿಸಿದೆ.

ನ್ಯಾಯಕ್ಕಾಗಿ ಆಗ್ರಹಿಸುತ್ತಾ ಆರಗ ಜ್ಞಾನೇಂದ್ರ ಅವರ ಕಾಲು ಹಿಡಿದು ಅಳುತ್ತಿರುವ ಅಭ್ಯರ್ಥಿಗಳ ವಿಡಿಯೊ ಜೊತೆಗೆ ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್‌, “ಪೊಲೀಸ್ ಕಾನ್‌ಸ್ಟೇಬಲ್‌ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆ, ದುರಹಂಕಾರದ ನಡವಳಿಕೆ ಇದು. ಜನರೊಂದಿಗೆ ನಡೆದುಕೊಳ್ಳುವ ರೀತಿ ಇದೇನಾ? ಉದ್ಯೋಗಕ್ಕಾಗಿ ಪರಿತಪಿಸುವ ಯುವಜನರಿಗೆ ನಿಮ್ಮ ಸ್ಪಂದನೆ ಇದೇನಾ? ಈ ದರ್ಪ, ದೌಲತ್ತುಗಳು ಆಯಸ್ಸು ಕೆಲವೇ ತಿಂಗಳುಗಳಷ್ಟೇ, ನೆನಪಿರಲಿ” ಎಂದು ಎಚ್ಚರಿಸಿದೆ.

ಇದನ್ನೂ ಓದಿರಿ: ‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

ಆರಗ ಅವರ ವರ್ತನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಡಿರುವ ಟ್ವೀಟ್‌ಗೆ ದಿಲೀಪ್ ಲಮಾಣಿ ಎಂಬವರು ಪ್ರತಿಕ್ರಿಯಿಸಿ, “ಸುಮಾರು ದಿನಗಳಿಂದ ಪೋಲೀಸ್ ಕಾನ್‌ಸ್ಟೇಬಲ್‌ ವಯೋಮಿತಿ ಹೆಚ್ಚಳ ಸಲುವಾಗಿ ಮನವಿ ನೀಡುತ್ತಲೇ ಬಂದಿರುತ್ತೇವೆ ಆದರೂ ಈ ಸರ್ಕಾರ ಯುವಕರನ್ನ ಕಡೆಗಣಿಸುತ್ತಿದೆ” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ ನಾಯಕ ಬಾಬುರಾವ್‌ ಚಿಂಚನಸೂರ್ ಅವರ ವಿಡಿಯೊ ತುಣುಕನ್ನು ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ “ಇವತ್ತು ಖಾಲಿ ಪೇಪರ್ ಇದ್ದರೂ ಸಹ ಡಿವೈಎಸ್ಪಿ ಆಗಬಹುದು ಎಂದು ಚಿಂಚನಸೂರ್ ಹೇಳಿದ್ದಾರೆ. ಹಣದೊಂದಿಗೆ ಖಾಲಿ ಪೇಪರ್ ಇದ್ದರೆ ವ್ಯಾಪಾರಕ್ಕಿಟ್ಟಿರುವ ಸರ್ಕಾರಿ ಹುದ್ದೆಗಳು ಸಿಗುತ್ತವೆ ಎಂಬುದನ್ನು ಸೊಗಸಾಗಿ ಹೇಳಿದ್ದಾರೆ ಅಲ್ಲವೇ? ಬೊಮ್ಮಾಯಿಯವರೇ #40PercentSarkaraದ ಅಕ್ರಮ ನೇಮಕಾತಿಗಳು ಖಾಲಿ ಪೇಪರ್‌ನಲ್ಲಿಯೇ ನಡೆಯುತ್ತವೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...