Homeಕರ್ನಾಟಕಪೊಲೀಸ್‌‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸ್‌ ದಬ್ಬಾಳಿಕೆ; ಕಾಂಗ್ರೆಸ್ ಖಂಡನೆ

ಪೊಲೀಸ್‌‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸ್‌ ದಬ್ಬಾಳಿಕೆ; ಕಾಂಗ್ರೆಸ್ ಖಂಡನೆ

- Advertisement -
- Advertisement -

ಪೊಲೀಸ್‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಕಾಂಗ್ರೆಸ್ ಖಂಡಿಸಿದೆ. ಪಿಎಸ್‌ಐ ಹಗರಣದಿಂದ ಸಂತ್ರಸ್ತರಾದ ಅಭ್ಯರ್ಥಿಗಳು, ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ಆಕಾಂಕ್ಷಿಗಳು ಹೋರಾಟ ನಡೆಸುತ್ತಿದ್ದಾರೆ.

ಪಿಎಸ್‌ಐ ಹಗರಣದ ಸಂತ್ರಸ್ತರಿಗೆ ನ್ಯಾಯ ದೊರಕಿಸಬೇಕು. ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ನೇಮಕಾತಿ ವಯೋಮಿತಿ ಹೆಚ್ಚಿಸಬೇಕು ಎಂದು ಆಕಾಂಕ್ಷಿಗಳು ಹೋರಾಟ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರು ತುಮಕೂರಿನಲ್ಲಿ ಹಲ್ಲೆ ನಡೆಸಿದ್ದಾರೆ.

ಪಿಎಸ್‌ಐ ಹುದ್ದೆ ಆಕಾಂಕ್ಷಿ ಮೇಲೆ ಹಲ್ಲೆ ನಡೆದಿದೆ ಎಂದು ಕಾಂಗ್ರೆಸ್‌ ಟ್ವೀಟ್ ಮಾಡಿದ್ದು, ಮತ್ತೊಂದೆಡೆ ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ನೇಮಕಾತಿಯ ವಯೋಮಿತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾಗ ಈ ಘಟನೆ ನಡೆದಿರುವುದಾಗಿ ಆಕಾಂಕ್ಷಿಗಳು ತಿಳಿಸಿದ್ದಾರೆ.

“ಅಭ್ಯರ್ಥಿಗಳನ್ನು ಎದುರುಗೊಳ್ಳಲು, ಅವರ ನೋವು ಆಲಿಸಲು ಧೈರ್ಯವಿಲ್ಲದೆ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ?” ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

“ಆರಗ ಜ್ಞಾನೇಂದ್ರ ಅವರೇ, ಅಕ್ರಮ ನಡೆಸಿದ ಸರ್ಕಾರ ಅಪರಾಧಿ ಸ್ಥಾನದಲ್ಲಿದೆ. ಆದರೆ ಶಿಕ್ಷೆ ಮಾತ್ರ ಅಭ್ಯರ್ಥಿಗಳಿಗೆ. ಅವರು ಉದ್ಯೋಗ ಕೇಳುತ್ತಿದ್ದಾರೆ ಹೊರತು ನಿಮ್ಮ ಕುರ್ಚಿಯನ್ನಲ್ಲ” ಎಂದು ಕಟುವಾಗಿ ಟೀಕಿಸಿದ್ದಾರೆ.

“ಪಿಎಸ್‌ಐ ಅಕ್ರಮದಿಂದ ಸಂತ್ರಸ್ತರಾದ ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ ತುಮಕೂರು ಡಿವೈಎಸ್ಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಆರಗ ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ? ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ” ಎಂದು ಆಗ್ರಹಿಸಿದೆ.

ನ್ಯಾಯಕ್ಕಾಗಿ ಆಗ್ರಹಿಸುತ್ತಾ ಆರಗ ಜ್ಞಾನೇಂದ್ರ ಅವರ ಕಾಲು ಹಿಡಿದು ಅಳುತ್ತಿರುವ ಅಭ್ಯರ್ಥಿಗಳ ವಿಡಿಯೊ ಜೊತೆಗೆ ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್‌, “ಪೊಲೀಸ್ ಕಾನ್‌ಸ್ಟೇಬಲ್‌ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆ, ದುರಹಂಕಾರದ ನಡವಳಿಕೆ ಇದು. ಜನರೊಂದಿಗೆ ನಡೆದುಕೊಳ್ಳುವ ರೀತಿ ಇದೇನಾ? ಉದ್ಯೋಗಕ್ಕಾಗಿ ಪರಿತಪಿಸುವ ಯುವಜನರಿಗೆ ನಿಮ್ಮ ಸ್ಪಂದನೆ ಇದೇನಾ? ಈ ದರ್ಪ, ದೌಲತ್ತುಗಳು ಆಯಸ್ಸು ಕೆಲವೇ ತಿಂಗಳುಗಳಷ್ಟೇ, ನೆನಪಿರಲಿ” ಎಂದು ಎಚ್ಚರಿಸಿದೆ.

ಇದನ್ನೂ ಓದಿರಿ: ‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

ಆರಗ ಅವರ ವರ್ತನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಡಿರುವ ಟ್ವೀಟ್‌ಗೆ ದಿಲೀಪ್ ಲಮಾಣಿ ಎಂಬವರು ಪ್ರತಿಕ್ರಿಯಿಸಿ, “ಸುಮಾರು ದಿನಗಳಿಂದ ಪೋಲೀಸ್ ಕಾನ್‌ಸ್ಟೇಬಲ್‌ ವಯೋಮಿತಿ ಹೆಚ್ಚಳ ಸಲುವಾಗಿ ಮನವಿ ನೀಡುತ್ತಲೇ ಬಂದಿರುತ್ತೇವೆ ಆದರೂ ಈ ಸರ್ಕಾರ ಯುವಕರನ್ನ ಕಡೆಗಣಿಸುತ್ತಿದೆ” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ ನಾಯಕ ಬಾಬುರಾವ್‌ ಚಿಂಚನಸೂರ್ ಅವರ ವಿಡಿಯೊ ತುಣುಕನ್ನು ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ “ಇವತ್ತು ಖಾಲಿ ಪೇಪರ್ ಇದ್ದರೂ ಸಹ ಡಿವೈಎಸ್ಪಿ ಆಗಬಹುದು ಎಂದು ಚಿಂಚನಸೂರ್ ಹೇಳಿದ್ದಾರೆ. ಹಣದೊಂದಿಗೆ ಖಾಲಿ ಪೇಪರ್ ಇದ್ದರೆ ವ್ಯಾಪಾರಕ್ಕಿಟ್ಟಿರುವ ಸರ್ಕಾರಿ ಹುದ್ದೆಗಳು ಸಿಗುತ್ತವೆ ಎಂಬುದನ್ನು ಸೊಗಸಾಗಿ ಹೇಳಿದ್ದಾರೆ ಅಲ್ಲವೇ? ಬೊಮ್ಮಾಯಿಯವರೇ #40PercentSarkaraದ ಅಕ್ರಮ ನೇಮಕಾತಿಗಳು ಖಾಲಿ ಪೇಪರ್‌ನಲ್ಲಿಯೇ ನಡೆಯುತ್ತವೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...