Homeಕರ್ನಾಟಕಪೊಲೀಸ್‌‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸ್‌ ದಬ್ಬಾಳಿಕೆ; ಕಾಂಗ್ರೆಸ್ ಖಂಡನೆ

ಪೊಲೀಸ್‌‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸ್‌ ದಬ್ಬಾಳಿಕೆ; ಕಾಂಗ್ರೆಸ್ ಖಂಡನೆ

- Advertisement -
- Advertisement -

ಪೊಲೀಸ್‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಕಾಂಗ್ರೆಸ್ ಖಂಡಿಸಿದೆ. ಪಿಎಸ್‌ಐ ಹಗರಣದಿಂದ ಸಂತ್ರಸ್ತರಾದ ಅಭ್ಯರ್ಥಿಗಳು, ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ಆಕಾಂಕ್ಷಿಗಳು ಹೋರಾಟ ನಡೆಸುತ್ತಿದ್ದಾರೆ.

ಪಿಎಸ್‌ಐ ಹಗರಣದ ಸಂತ್ರಸ್ತರಿಗೆ ನ್ಯಾಯ ದೊರಕಿಸಬೇಕು. ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ನೇಮಕಾತಿ ವಯೋಮಿತಿ ಹೆಚ್ಚಿಸಬೇಕು ಎಂದು ಆಕಾಂಕ್ಷಿಗಳು ಹೋರಾಟ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರು ತುಮಕೂರಿನಲ್ಲಿ ಹಲ್ಲೆ ನಡೆಸಿದ್ದಾರೆ.

ಪಿಎಸ್‌ಐ ಹುದ್ದೆ ಆಕಾಂಕ್ಷಿ ಮೇಲೆ ಹಲ್ಲೆ ನಡೆದಿದೆ ಎಂದು ಕಾಂಗ್ರೆಸ್‌ ಟ್ವೀಟ್ ಮಾಡಿದ್ದು, ಮತ್ತೊಂದೆಡೆ ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ನೇಮಕಾತಿಯ ವಯೋಮಿತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾಗ ಈ ಘಟನೆ ನಡೆದಿರುವುದಾಗಿ ಆಕಾಂಕ್ಷಿಗಳು ತಿಳಿಸಿದ್ದಾರೆ.

“ಅಭ್ಯರ್ಥಿಗಳನ್ನು ಎದುರುಗೊಳ್ಳಲು, ಅವರ ನೋವು ಆಲಿಸಲು ಧೈರ್ಯವಿಲ್ಲದೆ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ?” ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

“ಆರಗ ಜ್ಞಾನೇಂದ್ರ ಅವರೇ, ಅಕ್ರಮ ನಡೆಸಿದ ಸರ್ಕಾರ ಅಪರಾಧಿ ಸ್ಥಾನದಲ್ಲಿದೆ. ಆದರೆ ಶಿಕ್ಷೆ ಮಾತ್ರ ಅಭ್ಯರ್ಥಿಗಳಿಗೆ. ಅವರು ಉದ್ಯೋಗ ಕೇಳುತ್ತಿದ್ದಾರೆ ಹೊರತು ನಿಮ್ಮ ಕುರ್ಚಿಯನ್ನಲ್ಲ” ಎಂದು ಕಟುವಾಗಿ ಟೀಕಿಸಿದ್ದಾರೆ.

“ಪಿಎಸ್‌ಐ ಅಕ್ರಮದಿಂದ ಸಂತ್ರಸ್ತರಾದ ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ ತುಮಕೂರು ಡಿವೈಎಸ್ಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಆರಗ ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ? ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ” ಎಂದು ಆಗ್ರಹಿಸಿದೆ.

ನ್ಯಾಯಕ್ಕಾಗಿ ಆಗ್ರಹಿಸುತ್ತಾ ಆರಗ ಜ್ಞಾನೇಂದ್ರ ಅವರ ಕಾಲು ಹಿಡಿದು ಅಳುತ್ತಿರುವ ಅಭ್ಯರ್ಥಿಗಳ ವಿಡಿಯೊ ಜೊತೆಗೆ ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್‌, “ಪೊಲೀಸ್ ಕಾನ್‌ಸ್ಟೇಬಲ್‌ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆ, ದುರಹಂಕಾರದ ನಡವಳಿಕೆ ಇದು. ಜನರೊಂದಿಗೆ ನಡೆದುಕೊಳ್ಳುವ ರೀತಿ ಇದೇನಾ? ಉದ್ಯೋಗಕ್ಕಾಗಿ ಪರಿತಪಿಸುವ ಯುವಜನರಿಗೆ ನಿಮ್ಮ ಸ್ಪಂದನೆ ಇದೇನಾ? ಈ ದರ್ಪ, ದೌಲತ್ತುಗಳು ಆಯಸ್ಸು ಕೆಲವೇ ತಿಂಗಳುಗಳಷ್ಟೇ, ನೆನಪಿರಲಿ” ಎಂದು ಎಚ್ಚರಿಸಿದೆ.

ಇದನ್ನೂ ಓದಿರಿ: ‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

ಆರಗ ಅವರ ವರ್ತನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಡಿರುವ ಟ್ವೀಟ್‌ಗೆ ದಿಲೀಪ್ ಲಮಾಣಿ ಎಂಬವರು ಪ್ರತಿಕ್ರಿಯಿಸಿ, “ಸುಮಾರು ದಿನಗಳಿಂದ ಪೋಲೀಸ್ ಕಾನ್‌ಸ್ಟೇಬಲ್‌ ವಯೋಮಿತಿ ಹೆಚ್ಚಳ ಸಲುವಾಗಿ ಮನವಿ ನೀಡುತ್ತಲೇ ಬಂದಿರುತ್ತೇವೆ ಆದರೂ ಈ ಸರ್ಕಾರ ಯುವಕರನ್ನ ಕಡೆಗಣಿಸುತ್ತಿದೆ” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ ನಾಯಕ ಬಾಬುರಾವ್‌ ಚಿಂಚನಸೂರ್ ಅವರ ವಿಡಿಯೊ ತುಣುಕನ್ನು ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ “ಇವತ್ತು ಖಾಲಿ ಪೇಪರ್ ಇದ್ದರೂ ಸಹ ಡಿವೈಎಸ್ಪಿ ಆಗಬಹುದು ಎಂದು ಚಿಂಚನಸೂರ್ ಹೇಳಿದ್ದಾರೆ. ಹಣದೊಂದಿಗೆ ಖಾಲಿ ಪೇಪರ್ ಇದ್ದರೆ ವ್ಯಾಪಾರಕ್ಕಿಟ್ಟಿರುವ ಸರ್ಕಾರಿ ಹುದ್ದೆಗಳು ಸಿಗುತ್ತವೆ ಎಂಬುದನ್ನು ಸೊಗಸಾಗಿ ಹೇಳಿದ್ದಾರೆ ಅಲ್ಲವೇ? ಬೊಮ್ಮಾಯಿಯವರೇ #40PercentSarkaraದ ಅಕ್ರಮ ನೇಮಕಾತಿಗಳು ಖಾಲಿ ಪೇಪರ್‌ನಲ್ಲಿಯೇ ನಡೆಯುತ್ತವೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...