Homeಕರ್ನಾಟಕಪೊಲೀಸ್‌‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸ್‌ ದಬ್ಬಾಳಿಕೆ; ಕಾಂಗ್ರೆಸ್ ಖಂಡನೆ

ಪೊಲೀಸ್‌‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸ್‌ ದಬ್ಬಾಳಿಕೆ; ಕಾಂಗ್ರೆಸ್ ಖಂಡನೆ

- Advertisement -
- Advertisement -

ಪೊಲೀಸ್‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಕಾಂಗ್ರೆಸ್ ಖಂಡಿಸಿದೆ. ಪಿಎಸ್‌ಐ ಹಗರಣದಿಂದ ಸಂತ್ರಸ್ತರಾದ ಅಭ್ಯರ್ಥಿಗಳು, ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ಆಕಾಂಕ್ಷಿಗಳು ಹೋರಾಟ ನಡೆಸುತ್ತಿದ್ದಾರೆ.

ಪಿಎಸ್‌ಐ ಹಗರಣದ ಸಂತ್ರಸ್ತರಿಗೆ ನ್ಯಾಯ ದೊರಕಿಸಬೇಕು. ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ನೇಮಕಾತಿ ವಯೋಮಿತಿ ಹೆಚ್ಚಿಸಬೇಕು ಎಂದು ಆಕಾಂಕ್ಷಿಗಳು ಹೋರಾಟ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರು ತುಮಕೂರಿನಲ್ಲಿ ಹಲ್ಲೆ ನಡೆಸಿದ್ದಾರೆ.

ಪಿಎಸ್‌ಐ ಹುದ್ದೆ ಆಕಾಂಕ್ಷಿ ಮೇಲೆ ಹಲ್ಲೆ ನಡೆದಿದೆ ಎಂದು ಕಾಂಗ್ರೆಸ್‌ ಟ್ವೀಟ್ ಮಾಡಿದ್ದು, ಮತ್ತೊಂದೆಡೆ ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ನೇಮಕಾತಿಯ ವಯೋಮಿತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾಗ ಈ ಘಟನೆ ನಡೆದಿರುವುದಾಗಿ ಆಕಾಂಕ್ಷಿಗಳು ತಿಳಿಸಿದ್ದಾರೆ.

“ಅಭ್ಯರ್ಥಿಗಳನ್ನು ಎದುರುಗೊಳ್ಳಲು, ಅವರ ನೋವು ಆಲಿಸಲು ಧೈರ್ಯವಿಲ್ಲದೆ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ?” ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

“ಆರಗ ಜ್ಞಾನೇಂದ್ರ ಅವರೇ, ಅಕ್ರಮ ನಡೆಸಿದ ಸರ್ಕಾರ ಅಪರಾಧಿ ಸ್ಥಾನದಲ್ಲಿದೆ. ಆದರೆ ಶಿಕ್ಷೆ ಮಾತ್ರ ಅಭ್ಯರ್ಥಿಗಳಿಗೆ. ಅವರು ಉದ್ಯೋಗ ಕೇಳುತ್ತಿದ್ದಾರೆ ಹೊರತು ನಿಮ್ಮ ಕುರ್ಚಿಯನ್ನಲ್ಲ” ಎಂದು ಕಟುವಾಗಿ ಟೀಕಿಸಿದ್ದಾರೆ.

“ಪಿಎಸ್‌ಐ ಅಕ್ರಮದಿಂದ ಸಂತ್ರಸ್ತರಾದ ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ ತುಮಕೂರು ಡಿವೈಎಸ್ಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಆರಗ ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ? ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ” ಎಂದು ಆಗ್ರಹಿಸಿದೆ.

ನ್ಯಾಯಕ್ಕಾಗಿ ಆಗ್ರಹಿಸುತ್ತಾ ಆರಗ ಜ್ಞಾನೇಂದ್ರ ಅವರ ಕಾಲು ಹಿಡಿದು ಅಳುತ್ತಿರುವ ಅಭ್ಯರ್ಥಿಗಳ ವಿಡಿಯೊ ಜೊತೆಗೆ ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್‌, “ಪೊಲೀಸ್ ಕಾನ್‌ಸ್ಟೇಬಲ್‌ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆ, ದುರಹಂಕಾರದ ನಡವಳಿಕೆ ಇದು. ಜನರೊಂದಿಗೆ ನಡೆದುಕೊಳ್ಳುವ ರೀತಿ ಇದೇನಾ? ಉದ್ಯೋಗಕ್ಕಾಗಿ ಪರಿತಪಿಸುವ ಯುವಜನರಿಗೆ ನಿಮ್ಮ ಸ್ಪಂದನೆ ಇದೇನಾ? ಈ ದರ್ಪ, ದೌಲತ್ತುಗಳು ಆಯಸ್ಸು ಕೆಲವೇ ತಿಂಗಳುಗಳಷ್ಟೇ, ನೆನಪಿರಲಿ” ಎಂದು ಎಚ್ಚರಿಸಿದೆ.

ಇದನ್ನೂ ಓದಿರಿ: ‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

ಆರಗ ಅವರ ವರ್ತನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಡಿರುವ ಟ್ವೀಟ್‌ಗೆ ದಿಲೀಪ್ ಲಮಾಣಿ ಎಂಬವರು ಪ್ರತಿಕ್ರಿಯಿಸಿ, “ಸುಮಾರು ದಿನಗಳಿಂದ ಪೋಲೀಸ್ ಕಾನ್‌ಸ್ಟೇಬಲ್‌ ವಯೋಮಿತಿ ಹೆಚ್ಚಳ ಸಲುವಾಗಿ ಮನವಿ ನೀಡುತ್ತಲೇ ಬಂದಿರುತ್ತೇವೆ ಆದರೂ ಈ ಸರ್ಕಾರ ಯುವಕರನ್ನ ಕಡೆಗಣಿಸುತ್ತಿದೆ” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ ನಾಯಕ ಬಾಬುರಾವ್‌ ಚಿಂಚನಸೂರ್ ಅವರ ವಿಡಿಯೊ ತುಣುಕನ್ನು ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ “ಇವತ್ತು ಖಾಲಿ ಪೇಪರ್ ಇದ್ದರೂ ಸಹ ಡಿವೈಎಸ್ಪಿ ಆಗಬಹುದು ಎಂದು ಚಿಂಚನಸೂರ್ ಹೇಳಿದ್ದಾರೆ. ಹಣದೊಂದಿಗೆ ಖಾಲಿ ಪೇಪರ್ ಇದ್ದರೆ ವ್ಯಾಪಾರಕ್ಕಿಟ್ಟಿರುವ ಸರ್ಕಾರಿ ಹುದ್ದೆಗಳು ಸಿಗುತ್ತವೆ ಎಂಬುದನ್ನು ಸೊಗಸಾಗಿ ಹೇಳಿದ್ದಾರೆ ಅಲ್ಲವೇ? ಬೊಮ್ಮಾಯಿಯವರೇ #40PercentSarkaraದ ಅಕ್ರಮ ನೇಮಕಾತಿಗಳು ಖಾಲಿ ಪೇಪರ್‌ನಲ್ಲಿಯೇ ನಡೆಯುತ್ತವೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...