Homeಮುಖಪುಟಬಜರಂಗದಳದಿಂದ ಮತಾಂತರ ಆರೋಪ: ಕ್ರೈಸ್ತ ಸನ್ಯಾಸಿನಿ, 19 ಆದಿವಾಸಿ ಅಪ್ರಾಪ್ತರನ್ನು ವಿಚಾರಣೆಗೊಳಪಡಿಸಿದ ಪೊಲೀಸರು

ಬಜರಂಗದಳದಿಂದ ಮತಾಂತರ ಆರೋಪ: ಕ್ರೈಸ್ತ ಸನ್ಯಾಸಿನಿ, 19 ಆದಿವಾಸಿ ಅಪ್ರಾಪ್ತರನ್ನು ವಿಚಾರಣೆಗೊಳಪಡಿಸಿದ ಪೊಲೀಸರು

- Advertisement -
- Advertisement -

ಬಜರಂಗದಳದ ಮತಾಂತರ ಮತ್ತು ಮಾನವ ಕಳ್ಳ ಸಾಗಣಿಕೆ ಆರೋಪದ ಬಳಿಕ, ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಪೊಲೀಸರು ಬಂಧಿಸಿದ ಪ್ರಕರಣ ಕಳೆದ ಜುಲೈ ತಿಂಗಳಲ್ಲಿ ಛತ್ತೀಸ್‌ಗಢದಲ್ಲಿ ನಡೆದಿತ್ತು. ಇದು ದೇಶದಾದ್ಯಂತ ದೊಡ್ಡ ಮಟ್ಟದ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು.

ಅದೇ ರೀತಿ, ಬಜರಂಗದಳ ಸದಸ್ಯರು ಮತಾಂತರದ ಆರೋಪ ಮಾಡಿದ ಹಿನ್ನೆಲೆ, ಕ್ಯಾಥೋಲಿಕ್ ಸನ್ಯಾಸಿನಿ ಮತ್ತು 19 ಆದಿವಾಸಿ ಅಪ್ರಾಪ್ತ ವಯಸ್ಕರನ್ನು ವಶಕ್ಕೆ ಪಡೆದ ಪೊಲೀಸರು, ಸುಮಾರು ಐದು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ ಘಟನೆ ಶುಕ್ರವಾರ (ಸೆ.19) ರಾತ್ರಿ ಜಾರ್ಖಂಡ್‌ನ ಟಾಟಾ ನಗರ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ಪ್ರಕರಣದ ಚರ್ಚೆಯೂ ದಿನಕಳೆದಂತೆ ಕಾವು ಪಡೆದುಕೊಳ್ಳುತ್ತಿದೆ.

ವಿಚಾರಣೆಯ ಬಳಿಕ ಬಜರಂಗದಳದ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಲ್ವರು ಹುಡುಗರು ಮತ್ತು 15 ಹುಡುಗಿಯರನ್ನು ಒಳಗೊಂಡ, ಒಟ್ಟು 19 ಜನರ ಗುಂಪು ಎರಡು ದಿನಗಳ ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕಾಗಿ ದಕ್ಷಿಣ ಬಿಹಾರ ಎಕ್ಸ್‌ಪ್ರೆಸ್ ಮೂಲಕ ಜಾರ್ಖಂಡ್‌ನ ಜಮ್ಶೆಡ್‌ಪುರಕ್ಕೆ ತೆರಳಿದ್ದರು. ಜಾರ್ಖಂಡ್‌ನ ಸರೈಕೇಲಾ-ಖರ್ಸವಾನ್ ಜಿಲ್ಲೆಯಲ್ಲಿ ಹದಿಹರೆಯದ ಜಾಗೃತಿ ಯೋಜನೆಗಳಲ್ಲಿ ಕೆಲಸ ಮಾಡುವ ಕ್ರೈಸ್ತ ಸನ್ಯಾಸಿನಿ ತಂಡದ ನೇತೃತ್ವ ವಹಿಸಿದ್ದರು.

“ರೈಲು ಪ್ರಯಾಣದ ಸಮಯದಲ್ಲಿ ಒಂದಷ್ಟು ಜನರು ತನ್ನನ್ನು ಮತ್ತು ಮಕ್ಕಳನ್ನು ಹಿಂಬಾಲಿಸುತ್ತಿದ್ದರು. ಈ ನಡುವೆ ಟಿಟಿಇ ಬಂದು ಮಕ್ಕಳನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದೀರಿ? ಎಂದು ಪ್ರಶ್ನಿಸಿದರು. ಅದಾದ, ಬಳಿಕ ಒಂದು ಗುಂಪು ಜಮಾಯಿಸಿತು. ನಂತರ ಆ ಗುಂಪು ಮತ್ತು ಟಿಟಿಇ ಮಕ್ಕಳಲ್ಲಿ ಅವರ ಧರ್ಮ ಕೇಳಲು ಪ್ರಾರಂಭಿಸಿದರು” ಎಂದು ಸನ್ಯಾಸಿನಿ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಹೇಳಿದೆ.

“ಹದಿಹರೆಯದವರ ಆರೋಗ್ಯ ಮತ್ತು ಕೌಶಲ್ಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿ ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಕ್ಕಳನ್ನು ಆಹ್ವಾನಿಸಲಾಗಿತ್ತು. ಸೆಪ್ಟೆಂಬರ್ 20-21 ರಂದು ಸುಂದರನಗರದಲ್ಲಿರುವ ಎನ್‌ಜಿಒ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು.”

“ಪ್ರತಿ ಕೆಲವು ತಿಂಗಳಿಗೊಮ್ಮೆ ನಡೆಸುವ ಕಾರ್ಯಕ್ರಮದಲ್ಲಿ ಮಕ್ಕಳು ಭಾಗವಹಿಸಲು ಅನುಮತಿ ನೀಡುವ ಪೋಷಕರು ಮತ್ತು ಗ್ರಾಮದ ಮುಖ್ಯಸ್ಥರು (ಮುಖ್ಯಸ್ಥ) ಸಹಿ ಮಾಡಿದ ಅನುಮತಿ ಪತ್ರಗಳನ್ನು ತೋರಿಸಿರುವುದಾಗಿ ನಾನು ನಮ್ಮನ್ನು ಸುತ್ತುವರಿದಿದ್ದ ಗುಂಪಿಗೆ ಹೇಳಿದೆ” ಎಂದು ಸನ್ಯಾಸಿನಿ ವಿವರಿಸಿದ್ದಾರೆ.

“ನನ್ನ ಜೊತೆಗಿದ್ದ ಮಕ್ಕಳಲ್ಲಿ ಕೆಲವರು ಹಲವು ವರ್ಷಗಳಿಂದ ನಮ್ಮೊಂದಿಗಿದ್ದಾರೆ. ಅನೇಕರು ತಮ್ಮದೇ ಆದ ಧರ್ಮವನ್ನು ಅನುಸರಿಸುತ್ತಿರುವ ಕ್ರೈಸ್ತೇತರ ಕುಟುಂಬಗಳಿಂದ ಬಂದವರು. ಕೆಲವು ಮಕ್ಕಳು ಕೊನೆಯ ಕ್ಷಣದಲ್ಲಿ ಸೇರಿಕೊಂಡ ಕಾರಣ ಅವರ ಆಧಾರ್ ಕಾರ್ಡ್‌ಗಳನ್ನು ಹೊಂದಿರಲಿಲ್ಲ” ಎಂದಿದ್ದಾರೆ.

“ಪರಿಸ್ಥಿತಿ ಉಲ್ಬಣಗೊಳ್ಳುವ ಭಯದಿಂದ ನಾನು ಕಾರ್ಯಕ್ರಮದ ನಿರ್ದೇಶಕ ಮತ್ತು ಪಾದ್ರಿ ಬೀರೇಂದ್ರ ಟೆಟೆ ಅವರಿಗೆ ಕರೆ ಮಾಡಿದೆ. ಅವರು ಬಂದಾಗ, ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಅಪ್ರಾಪ್ತ ವಯಸ್ಕರು ಕುಳಿತಿರುವುದನ್ನು ಮತ್ತು ಬಜರಂಗದಳ ಸದಸ್ಯರು ಹುಡುಗಿಯರ ಛಾಯಾಚಿತ್ರ ತೆಗೆಯುತ್ತಿದ್ದುದನ್ನು ಕಂಡರು” ಎಂದು ಸನ್ಯಾಸಿನಿ ಹೇಳಿದ್ದಾರೆ.

“ಮಕ್ಕಳನ್ನು ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 4 ಗಂಟೆಯವರೆಗೆ ರೈಲು ನಿಲ್ದಾಣದಲ್ಲಿ ಇರಿಸಲಾಗಿತ್ತು. ಮೊದಲು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ನಂತರ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಡಿಯಲ್ಲಿ ಇರಿಸಲಾಗಿತ್ತು. ಅಂತಿಮವಾಗಿ ತರಬೇತಿ ಅವಧಿಗೆ ಹಾಜರಾಗಲು ಅವಕಾಶ ನೀಡಲಾಯಿತು” ಎಂದು ಸನ್ಯಾಸಿನಿ ತಿಳಿಸಿದ್ದಾರೆ.

ಶನಿವಾರ ಬೆಳಗಿನ ಜಾವ 3 ಗಂಟೆಯವರೆಗೆ ಸನ್ಯಾಸಿನಿಯನ್ನು ಪೊಲೀಸ್ ಠಾಣೆಯಲ್ಲಿ ಕೂರಿಸಲಾಗಿತ್ತು. ನಂತರ ಪೊಲೀಸರು ಅವರನ್ನು ಜೆಮ್ಶೆಡ್‌ಪುರದ ಸುಂದರ್‌ನಗರದಲ್ಲಿರುವ ಕ್ಯಾಥೋಲಿಕ್ ದತ್ತಿ ಕೇಂದ್ರಕ್ಕೆ ಕರೆದೊಯ್ದರು ವರದಿಗಳು ಹೇಳಿವೆ.

ಮಕ್ಕಳ ಸಹಾಯವಾಣಿ 1098ರ ಪಂಕಜ್ ಗುಪ್ತಾ ಅವರು ಅಧಿಕಾರಿಗಳಿಗೆ ‘ಯಾವುದೇ ಅನುಮಾನಾಸ್ಪದ ಚಟುವಟಿಕೆ’ ಕಂಡುಬಂದಿಲ್ಲ ಎಂದು ದೃಢಪಡಿಸಿದ್ದಾರೆ. ಸನ್ಯಾಸಿನಿಯ ಉದ್ದೇಶ ಮಕ್ಕಳನ್ನು ಜಾಗೃತಿ ಕಾರ್ಯಕ್ರಮಕ್ಕೆ ಕರೆದೊಯ್ಯುವುದೇ ಆಗಿತ್ತು ಎಂದು ಒತ್ತಿ ಹೇಳಿದ್ದಾರೆ.

ಜಿಆರ್‌ಪಿ ಉಪ ಅಧೀಕ್ಷಕಿ ಜಯಶ್ರೀ ಕುಜೂರ್ ಅವರು “ಇಲ್ಲಿಯವರೆಗೆ ಯಾವುದೇ ದೃಢೀಕೃತ ಧಾರ್ಮಿಕ ಮತಾಂತರ ಪ್ರಕರಣ ನಡೆದಿಲ್ಲ” ಎಂದು ಹೇಳಿದ್ದಾರೆ. ಆದರೆ, ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಬಜರಂಗದಳದ ಸ್ಥಳೀಯ ಮುಖ್ಯಸ್ಥ ಅರುಣ್ ಸಿಂಗ್ ತಮ್ಮ ಹಸ್ತಕ್ಷೇಪವನ್ನು ಸಮರ್ಥಿಸಿಕೊಂಡಿದ್ದಾರೆ. ಅವರ ಪ್ರಕಾರ, ಬಜರಂಗದಳದ ಒಬ್ಬ ಕಾರ್ಯಕರ್ತ ಚಿಕ್ಕ ಮಕ್ಕಳ ಕೈಯಲ್ಲಿ ಕ್ರೈಸ್ತರ “ರಕ್ಷಾ ದಾರ” (ಪವಿತ್ರ ದಾರ) ಇರುವುದನ್ನು ಗಮನಿಸಿ ಸಂದೇಹ ವ್ಯಕ್ತಪಡಿಸಿದ್ದರು. ಆ ಬಳಿಕ ಸನ್ಯಾಸಿನಿ ಮತ್ತು ಮಕ್ಕಳನ್ನು ವಿಚಾರಣೆ ನಡೆಸಲಾಗಿದೆ.

“ಮಕ್ಕಳಿಗೆ ಸ್ಪಷ್ಟ ಉತ್ತರಗಳನ್ನು ನೀಡಲು ಸಾಧ್ಯವಾಗಿಲ್ಲ. ಆದರೆ, ಸನ್ಯಾಸಿನಿ ಮತ್ತು ಪಾದ್ರಿಯವರು ಮಕ್ಕಳ ಪೋಷಕರಿಂದ ಅನುಮತಿ ಇದೆ ಎಂದು ಹೇಳಿದ್ದಾರೆ. ನಮಗೆ ಆ ಮಕ್ಕಳು ಈ ಕಾರ್ಯಕ್ರಮವನ್ನು ಅರ್ಥಮಾಡಿಕೊಳ್ಳಲು ತುಂಬಾ ಚಿಕ್ಕವರು ಎನಿಸಿದ್ದಾರೆ” ಎಂದು ಅರುಣ್ ಸಿಂಗ್ ಹೇಳಿದ್ದಾರೆ. ಅಪ್ರಾಪ್ತ ಹುಡುಗಿಯ ಪೋಟೋಗಳನ್ನು ಸಾಕ್ಷ್ಯ ಸಂಗ್ರಹಕ್ಕೆ ತೆಗೆದುಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಅಡೆತಡೆಗಳ ಹೊರತಾಗಿಯೂ, ಅಪ್ರಾಪ್ತ ವಯಸ್ಕರು ಅಂತಿಮವಾಗಿ ಮನೆಗೆ ಮರಳುವ ಮೊದಲು ಎರಡು ದಿನಗಳ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ.

ಮಕ್ಕಳ ಫೋಟೋ, ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ ಎಂದು ಕ್ರಿಶ್ಚಿಯನ್ ಹಕ್ಕುಗಳ ಗುಂಪುಗಳು ಬಜರಂಗದಳದ ವಿರುದ್ದ ಆರೋಪ ಮಾಡಿದೆ. ಆಲ್ ಇಂಡಿಯಾ ಕ್ರಿಶ್ಚಿಯನ್ ಮೈನಾರಿಟಿ ಫ್ರಂಟ್ ಉಪಾಧ್ಯಕ್ಷ ಅಜಿತ್ ಟಿರ್ಕಿ, ಈ ​​ವಿಷಯವನ್ನು ಅಧಿಕಾರಿಗಳೊಂದಿಗೆ ಪ್ರಸ್ತಾಪಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸುವುದಾಗಿ ಹೇಳಿದ್ದಾರೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಘೋಷಿತ ದೇವಮಾನವನ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...