Homeಮುಖಪುಟಬಜರಂಗದಳದಿಂದ ಮತಾಂತರ ಆರೋಪ: ಕ್ರೈಸ್ತ ಸನ್ಯಾಸಿನಿ, 19 ಆದಿವಾಸಿ ಅಪ್ರಾಪ್ತರನ್ನು ವಿಚಾರಣೆಗೊಳಪಡಿಸಿದ ಪೊಲೀಸರು

ಬಜರಂಗದಳದಿಂದ ಮತಾಂತರ ಆರೋಪ: ಕ್ರೈಸ್ತ ಸನ್ಯಾಸಿನಿ, 19 ಆದಿವಾಸಿ ಅಪ್ರಾಪ್ತರನ್ನು ವಿಚಾರಣೆಗೊಳಪಡಿಸಿದ ಪೊಲೀಸರು

- Advertisement -
- Advertisement -

ಬಜರಂಗದಳದ ಮತಾಂತರ ಮತ್ತು ಮಾನವ ಕಳ್ಳ ಸಾಗಣಿಕೆ ಆರೋಪದ ಬಳಿಕ, ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಪೊಲೀಸರು ಬಂಧಿಸಿದ ಪ್ರಕರಣ ಕಳೆದ ಜುಲೈ ತಿಂಗಳಲ್ಲಿ ಛತ್ತೀಸ್‌ಗಢದಲ್ಲಿ ನಡೆದಿತ್ತು. ಇದು ದೇಶದಾದ್ಯಂತ ದೊಡ್ಡ ಮಟ್ಟದ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು.

ಅದೇ ರೀತಿ, ಬಜರಂಗದಳ ಸದಸ್ಯರು ಮತಾಂತರದ ಆರೋಪ ಮಾಡಿದ ಹಿನ್ನೆಲೆ, ಕ್ಯಾಥೋಲಿಕ್ ಸನ್ಯಾಸಿನಿ ಮತ್ತು 19 ಆದಿವಾಸಿ ಅಪ್ರಾಪ್ತ ವಯಸ್ಕರನ್ನು ವಶಕ್ಕೆ ಪಡೆದ ಪೊಲೀಸರು, ಸುಮಾರು ಐದು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ ಘಟನೆ ಶುಕ್ರವಾರ (ಸೆ.19) ರಾತ್ರಿ ಜಾರ್ಖಂಡ್‌ನ ಟಾಟಾ ನಗರ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ಪ್ರಕರಣದ ಚರ್ಚೆಯೂ ದಿನಕಳೆದಂತೆ ಕಾವು ಪಡೆದುಕೊಳ್ಳುತ್ತಿದೆ.

ವಿಚಾರಣೆಯ ಬಳಿಕ ಬಜರಂಗದಳದ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಲ್ವರು ಹುಡುಗರು ಮತ್ತು 15 ಹುಡುಗಿಯರನ್ನು ಒಳಗೊಂಡ, ಒಟ್ಟು 19 ಜನರ ಗುಂಪು ಎರಡು ದಿನಗಳ ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕಾಗಿ ದಕ್ಷಿಣ ಬಿಹಾರ ಎಕ್ಸ್‌ಪ್ರೆಸ್ ಮೂಲಕ ಜಾರ್ಖಂಡ್‌ನ ಜಮ್ಶೆಡ್‌ಪುರಕ್ಕೆ ತೆರಳಿದ್ದರು. ಜಾರ್ಖಂಡ್‌ನ ಸರೈಕೇಲಾ-ಖರ್ಸವಾನ್ ಜಿಲ್ಲೆಯಲ್ಲಿ ಹದಿಹರೆಯದ ಜಾಗೃತಿ ಯೋಜನೆಗಳಲ್ಲಿ ಕೆಲಸ ಮಾಡುವ ಕ್ರೈಸ್ತ ಸನ್ಯಾಸಿನಿ ತಂಡದ ನೇತೃತ್ವ ವಹಿಸಿದ್ದರು.

“ರೈಲು ಪ್ರಯಾಣದ ಸಮಯದಲ್ಲಿ ಒಂದಷ್ಟು ಜನರು ತನ್ನನ್ನು ಮತ್ತು ಮಕ್ಕಳನ್ನು ಹಿಂಬಾಲಿಸುತ್ತಿದ್ದರು. ಈ ನಡುವೆ ಟಿಟಿಇ ಬಂದು ಮಕ್ಕಳನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದೀರಿ? ಎಂದು ಪ್ರಶ್ನಿಸಿದರು. ಅದಾದ, ಬಳಿಕ ಒಂದು ಗುಂಪು ಜಮಾಯಿಸಿತು. ನಂತರ ಆ ಗುಂಪು ಮತ್ತು ಟಿಟಿಇ ಮಕ್ಕಳಲ್ಲಿ ಅವರ ಧರ್ಮ ಕೇಳಲು ಪ್ರಾರಂಭಿಸಿದರು” ಎಂದು ಸನ್ಯಾಸಿನಿ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಹೇಳಿದೆ.

“ಹದಿಹರೆಯದವರ ಆರೋಗ್ಯ ಮತ್ತು ಕೌಶಲ್ಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿ ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಕ್ಕಳನ್ನು ಆಹ್ವಾನಿಸಲಾಗಿತ್ತು. ಸೆಪ್ಟೆಂಬರ್ 20-21 ರಂದು ಸುಂದರನಗರದಲ್ಲಿರುವ ಎನ್‌ಜಿಒ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು.”

“ಪ್ರತಿ ಕೆಲವು ತಿಂಗಳಿಗೊಮ್ಮೆ ನಡೆಸುವ ಕಾರ್ಯಕ್ರಮದಲ್ಲಿ ಮಕ್ಕಳು ಭಾಗವಹಿಸಲು ಅನುಮತಿ ನೀಡುವ ಪೋಷಕರು ಮತ್ತು ಗ್ರಾಮದ ಮುಖ್ಯಸ್ಥರು (ಮುಖ್ಯಸ್ಥ) ಸಹಿ ಮಾಡಿದ ಅನುಮತಿ ಪತ್ರಗಳನ್ನು ತೋರಿಸಿರುವುದಾಗಿ ನಾನು ನಮ್ಮನ್ನು ಸುತ್ತುವರಿದಿದ್ದ ಗುಂಪಿಗೆ ಹೇಳಿದೆ” ಎಂದು ಸನ್ಯಾಸಿನಿ ವಿವರಿಸಿದ್ದಾರೆ.

“ನನ್ನ ಜೊತೆಗಿದ್ದ ಮಕ್ಕಳಲ್ಲಿ ಕೆಲವರು ಹಲವು ವರ್ಷಗಳಿಂದ ನಮ್ಮೊಂದಿಗಿದ್ದಾರೆ. ಅನೇಕರು ತಮ್ಮದೇ ಆದ ಧರ್ಮವನ್ನು ಅನುಸರಿಸುತ್ತಿರುವ ಕ್ರೈಸ್ತೇತರ ಕುಟುಂಬಗಳಿಂದ ಬಂದವರು. ಕೆಲವು ಮಕ್ಕಳು ಕೊನೆಯ ಕ್ಷಣದಲ್ಲಿ ಸೇರಿಕೊಂಡ ಕಾರಣ ಅವರ ಆಧಾರ್ ಕಾರ್ಡ್‌ಗಳನ್ನು ಹೊಂದಿರಲಿಲ್ಲ” ಎಂದಿದ್ದಾರೆ.

“ಪರಿಸ್ಥಿತಿ ಉಲ್ಬಣಗೊಳ್ಳುವ ಭಯದಿಂದ ನಾನು ಕಾರ್ಯಕ್ರಮದ ನಿರ್ದೇಶಕ ಮತ್ತು ಪಾದ್ರಿ ಬೀರೇಂದ್ರ ಟೆಟೆ ಅವರಿಗೆ ಕರೆ ಮಾಡಿದೆ. ಅವರು ಬಂದಾಗ, ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಅಪ್ರಾಪ್ತ ವಯಸ್ಕರು ಕುಳಿತಿರುವುದನ್ನು ಮತ್ತು ಬಜರಂಗದಳ ಸದಸ್ಯರು ಹುಡುಗಿಯರ ಛಾಯಾಚಿತ್ರ ತೆಗೆಯುತ್ತಿದ್ದುದನ್ನು ಕಂಡರು” ಎಂದು ಸನ್ಯಾಸಿನಿ ಹೇಳಿದ್ದಾರೆ.

“ಮಕ್ಕಳನ್ನು ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 4 ಗಂಟೆಯವರೆಗೆ ರೈಲು ನಿಲ್ದಾಣದಲ್ಲಿ ಇರಿಸಲಾಗಿತ್ತು. ಮೊದಲು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ನಂತರ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಡಿಯಲ್ಲಿ ಇರಿಸಲಾಗಿತ್ತು. ಅಂತಿಮವಾಗಿ ತರಬೇತಿ ಅವಧಿಗೆ ಹಾಜರಾಗಲು ಅವಕಾಶ ನೀಡಲಾಯಿತು” ಎಂದು ಸನ್ಯಾಸಿನಿ ತಿಳಿಸಿದ್ದಾರೆ.

ಶನಿವಾರ ಬೆಳಗಿನ ಜಾವ 3 ಗಂಟೆಯವರೆಗೆ ಸನ್ಯಾಸಿನಿಯನ್ನು ಪೊಲೀಸ್ ಠಾಣೆಯಲ್ಲಿ ಕೂರಿಸಲಾಗಿತ್ತು. ನಂತರ ಪೊಲೀಸರು ಅವರನ್ನು ಜೆಮ್ಶೆಡ್‌ಪುರದ ಸುಂದರ್‌ನಗರದಲ್ಲಿರುವ ಕ್ಯಾಥೋಲಿಕ್ ದತ್ತಿ ಕೇಂದ್ರಕ್ಕೆ ಕರೆದೊಯ್ದರು ವರದಿಗಳು ಹೇಳಿವೆ.

ಮಕ್ಕಳ ಸಹಾಯವಾಣಿ 1098ರ ಪಂಕಜ್ ಗುಪ್ತಾ ಅವರು ಅಧಿಕಾರಿಗಳಿಗೆ ‘ಯಾವುದೇ ಅನುಮಾನಾಸ್ಪದ ಚಟುವಟಿಕೆ’ ಕಂಡುಬಂದಿಲ್ಲ ಎಂದು ದೃಢಪಡಿಸಿದ್ದಾರೆ. ಸನ್ಯಾಸಿನಿಯ ಉದ್ದೇಶ ಮಕ್ಕಳನ್ನು ಜಾಗೃತಿ ಕಾರ್ಯಕ್ರಮಕ್ಕೆ ಕರೆದೊಯ್ಯುವುದೇ ಆಗಿತ್ತು ಎಂದು ಒತ್ತಿ ಹೇಳಿದ್ದಾರೆ.

ಜಿಆರ್‌ಪಿ ಉಪ ಅಧೀಕ್ಷಕಿ ಜಯಶ್ರೀ ಕುಜೂರ್ ಅವರು “ಇಲ್ಲಿಯವರೆಗೆ ಯಾವುದೇ ದೃಢೀಕೃತ ಧಾರ್ಮಿಕ ಮತಾಂತರ ಪ್ರಕರಣ ನಡೆದಿಲ್ಲ” ಎಂದು ಹೇಳಿದ್ದಾರೆ. ಆದರೆ, ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಬಜರಂಗದಳದ ಸ್ಥಳೀಯ ಮುಖ್ಯಸ್ಥ ಅರುಣ್ ಸಿಂಗ್ ತಮ್ಮ ಹಸ್ತಕ್ಷೇಪವನ್ನು ಸಮರ್ಥಿಸಿಕೊಂಡಿದ್ದಾರೆ. ಅವರ ಪ್ರಕಾರ, ಬಜರಂಗದಳದ ಒಬ್ಬ ಕಾರ್ಯಕರ್ತ ಚಿಕ್ಕ ಮಕ್ಕಳ ಕೈಯಲ್ಲಿ ಕ್ರೈಸ್ತರ “ರಕ್ಷಾ ದಾರ” (ಪವಿತ್ರ ದಾರ) ಇರುವುದನ್ನು ಗಮನಿಸಿ ಸಂದೇಹ ವ್ಯಕ್ತಪಡಿಸಿದ್ದರು. ಆ ಬಳಿಕ ಸನ್ಯಾಸಿನಿ ಮತ್ತು ಮಕ್ಕಳನ್ನು ವಿಚಾರಣೆ ನಡೆಸಲಾಗಿದೆ.

“ಮಕ್ಕಳಿಗೆ ಸ್ಪಷ್ಟ ಉತ್ತರಗಳನ್ನು ನೀಡಲು ಸಾಧ್ಯವಾಗಿಲ್ಲ. ಆದರೆ, ಸನ್ಯಾಸಿನಿ ಮತ್ತು ಪಾದ್ರಿಯವರು ಮಕ್ಕಳ ಪೋಷಕರಿಂದ ಅನುಮತಿ ಇದೆ ಎಂದು ಹೇಳಿದ್ದಾರೆ. ನಮಗೆ ಆ ಮಕ್ಕಳು ಈ ಕಾರ್ಯಕ್ರಮವನ್ನು ಅರ್ಥಮಾಡಿಕೊಳ್ಳಲು ತುಂಬಾ ಚಿಕ್ಕವರು ಎನಿಸಿದ್ದಾರೆ” ಎಂದು ಅರುಣ್ ಸಿಂಗ್ ಹೇಳಿದ್ದಾರೆ. ಅಪ್ರಾಪ್ತ ಹುಡುಗಿಯ ಪೋಟೋಗಳನ್ನು ಸಾಕ್ಷ್ಯ ಸಂಗ್ರಹಕ್ಕೆ ತೆಗೆದುಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಅಡೆತಡೆಗಳ ಹೊರತಾಗಿಯೂ, ಅಪ್ರಾಪ್ತ ವಯಸ್ಕರು ಅಂತಿಮವಾಗಿ ಮನೆಗೆ ಮರಳುವ ಮೊದಲು ಎರಡು ದಿನಗಳ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ.

ಮಕ್ಕಳ ಫೋಟೋ, ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ ಎಂದು ಕ್ರಿಶ್ಚಿಯನ್ ಹಕ್ಕುಗಳ ಗುಂಪುಗಳು ಬಜರಂಗದಳದ ವಿರುದ್ದ ಆರೋಪ ಮಾಡಿದೆ. ಆಲ್ ಇಂಡಿಯಾ ಕ್ರಿಶ್ಚಿಯನ್ ಮೈನಾರಿಟಿ ಫ್ರಂಟ್ ಉಪಾಧ್ಯಕ್ಷ ಅಜಿತ್ ಟಿರ್ಕಿ, ಈ ​​ವಿಷಯವನ್ನು ಅಧಿಕಾರಿಗಳೊಂದಿಗೆ ಪ್ರಸ್ತಾಪಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸುವುದಾಗಿ ಹೇಳಿದ್ದಾರೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಘೋಷಿತ ದೇವಮಾನವನ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...