Homeಕರ್ನಾಟಕಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸ್ ದರ್ಪ; ಭುಗಿಲೆದ್ದ ಜನಾಕ್ರೋಶ

ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸ್ ದರ್ಪ; ಭುಗಿಲೆದ್ದ ಜನಾಕ್ರೋಶ

- Advertisement -
- Advertisement -

ಅಪ್ರಾಪ್ತ ಮತ್ತು ವಯಸ್ಕ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್‌ನನ್ನು ಬಂಧಿಸಬೇಕೆಂದು ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ತೋರಿಸುವ  ದರ್ಪಕ್ಕೆ ಜನಾಕ್ರೋಶ ವ್ಯಕ್ತವಾಗಿದೆ.

ಕರ್ನಾಟಕದ ಅನೇಕ ಜನರು ಈ ಘಟನೆಯನ್ನು ಖಂಡಿಸಿದ್ದಾರೆ. ನೂತನ ಸಂಸತ್‌ ಭವನದ ಉದ್ಘಾಟನೆಯ ವೈಭವದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವಿದ್ದರೆ, ದೇಶಕ್ಕಾಗಿ ಪದಕಗಳನ್ನು ತಂದುಕೊಟ್ಟ ಕುಸ್ತಿಪಟುಗಳು ಬಂಧನಕ್ಕೊಳಗಾಗಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಆಕ್ರೋಶ ಹೊರಹಾಕುತ್ತಿರುವ ಜನತೆ, ಮೋದಿ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ. ದೇಶಕ್ಕಾಗಿ ಪದಕಗಳನ್ನು ತಂದ ಕುಸ್ತಿಪಟುಗಳ ಸಾಧನೆಯನ್ನು ಸ್ಮರಿಸಿದ್ದಾರೆ. ಕುಸ್ತಿಪಟುಗಳನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಪ್ರತಿಭಟನೆಯೂ ನಡೆದಿದೆ.

ಲೈಂಗಿಕ ಕುರುಕುಳ ಪ್ರಕರಣದ ಆರೋಪಿ ಬ್ರಿಜ್‌ಭೂಷಣ್ ಶರಣ್‌ಸಿಂಗ್‌ನನ್ನು ಬಂಧಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಯಿತು.

“ಕಲ್ಲಿನ ಕಟ್ಟಡದೊಳಗೆ ನಿಂತು ಭಾರತ‌ಮಾತೆಗೆ ಜೈ ಎನ್ನುವವರಿಗೆ ಬೀದಿಯಲ್ಲಿ ಭಾರತ ಮಾತೆಯರನ್ನು ಎಳೆದಾಡುತ್ತಿರುವುದು ಕಾಣುತ್ತಿಲ್ಲವಲ್ಲ, ನಾಚಿಕೆಗೇಡು. ಬಂಧಿಸಲಾದ ಎಲ್ಲ ಕುಸ್ತಿಪಟುಗಳು ಮತ್ತು ಹೋರಾಟಗಾರ್ತಿಯರನ್ನು ಬಿಡುಗಡೆ ಮಾಡಲೇಬೇಕು. ಲೈಂಗಿಕ ದೌರ್ಜನ್ಯದ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಲಿಂಗತ್ವ ಅಲ್ಪಸಂಖ್ಯಾತ ಹೋರಾಟಗಾರ್ತಿ ಮಲ್ಲು ಕುಂಬಾರ್‌ ಆಗ್ರಹಿಸಿದ್ದಾರೆ.

“ಅಂದು ಈ ಮಹಿಳಾ ಕುಸ್ತಿಪಟುಗಳು ದೇಶಕ್ಕೆ ಪದಕದ ಜೊತೆ ಕೀರ್ತಿ ಹೊತ್ತು ತಂದರು. ಇಂದು ನ್ಯಾಯ ಬೇಡಿದ್ದೆ ತಪ್ಪಾಗಿ, ಹೊಡೆದು ಬಡಿದು ಚಿತ್ರಹಿಂಸೆ ನೀಡಿ ಅವರನ್ನು ಜೈಲಿಗೆ ಅಟ್ಟುತ್ತಿದ್ದಾರೆ. ಎಂಥ ದರಿದ್ರ ಆಡಳಿತದಲ್ಲಿ ನಾವಿಂದು ಬದುಕುತ್ತಿದ್ದೇವೆ. ಹೆಣ್ಣುಮಕ್ಕಳಿಗೆ ಗೌರವ ಕೊಡದವನು ಯಾವ ರಾಜದಂಡ ಹಿಡಿದರೇನು ಪ್ರಯೋಜನ?” ಎಂದು ಮಂಜುನಾಥ್ ಎಂಬವರು ಪ್ರಶ್ನಿಸಿದ್ದಾರೆ.

ಲೇಖಕಿ ಪಲ್ಲವಿ ಇಡೂರು ಪ್ರತಿಕ್ರಿಯಿಸಿ, “ನನ್ನಂತಹ ಕೋಟ್ಯಂತರ ಮಂದಿಯ ಮನಸ್ಸು ಬಿಜೆಪಿ ಅಥವಾ ಬಲಪಂಥೀಯರ ಅಸಹ್ಯದ ರಾಜಕಾರಣದೆಡೆಗೆ ತಿರುಗುವುದಿಲ್ಲ, ಆದರೆ ಅದಾಗಲೇ ಭಕ್ತಿಯಲ್ಲಿ ಮಿಂದೇಳುತ್ತಿರುವ ಅಸಹ್ಯದ ಹುಳುಗಳು ಬದಲಾಗುತ್ತಾರೆ ಎನ್ನುವ ಭ್ರಮೆಯೂ ನನಗಿಲ್ಲ. ಇನ್ನು ಅವರನ್ನು ದಿನ ಬೆಳಗಾದರೆ ಖಂಡಿಸುತ್ತಾ ಕೂರುವುದರಿಂದ ನನ್ನ ಮಾನಸಿಕ ಸ್ಥಿತಿ ಒತ್ತಡಕ್ಕೊಳಗಾಗಿ ಜೀವನಕ್ಕೆ ಮಾರಕವೇ ಹೊರತು ಬೇರೆ ಉಪಯೋಗವಂತೂ ಆಗಲಾರದು. ಮನುಷ್ಯ ಪ್ರತಿಯೊಬ್ಬನೂ ಪ್ರತಿಕ್ರಿಯಿಸುವುದು ತನಗೆ ಬಿಸಿಯ ಅನುಭವವಾದಾಗಲೇ! ನಾವೆಷ್ಟೇ ಎಚ್ಚರಿಸಿದರೂ ಎಚ್ಚರಗೊಳ್ಳಲಾರರು” ಎಂದು ವಿಷಾದಿಸಿದ್ದಾರೆ.

“ಈಗ ಹೀಗೆ ಬೀದಿಯಲ್ಲಿ ನಿಂತು ಪ್ರತಿಭಟಿಸುತ್ತಿರುವ ದೇಶದ ಅತ್ಯುನ್ನತ ಕ್ರೀಡಾಪಟುಗಳು ಅವರ ಸಾಧನೆಯ ಸಲುವಾಗಿಯಾದರೂ ಚರ್ಚೆಗೊಳಗಾಗುತ್ತಿದ್ದಾರೆ. ನನ್ನಂತವರು ಹೀಗೆ ಬೀದಿಗಿಳಿದರೆ ಕೇಳುವವರೇ ಇರುವುದಿಲ್ಲ. ಕಹಿ ಅನಿಸಬಹುದು ಆದರೆ ಇದೇ ಸತ್ಯ. ಇಲ್ಲಿ ಸೋಶಿಯಲ್ ಮೀಡಿಯಾಗಳಲ್ಲಿ ಸಾಲಿಡಾರಿಟಿಯ ಪೋಸ್ಟ್‌ಗಳನ್ನು ಬರೆಯಲೂ ನಮಗೆ ಕಮ್ಯುನಿಟಿ ಸ್ಟಾಂಡರ್ಡ್ ಫಿಕ್ಸ್ ಮಾಡಲಾಗಿದೆ. ಇಂತದ್ದೊಂದು ಕೈಕಾಲು ಮುರಿದುಕೊಂಡ ಪ್ರಜಾಪ್ರಭುತ್ವದಲ್ಲಿ ಒಗ್ಗಟ್ಟಿನ ವಿರೋಧ ಮತಗಟ್ಟೆಯಲ್ಲಷ್ಟೇ ತೋರಿಸಲು ಸಾಧ್ಯ ಅನ್ನುವ ದಿವ್ಯಸತ್ಯದ ಅರಿವಾಗಿರುವುದಕ್ಕೇ ಮಾತಿಗಿಂತ ಕೃತಿ ಮೇಲೆನ್ನಿಸಿರುವುದು. ಅಂದಹಾಗೆ ಒಂದುಕಾಲದಲ್ಲಿ ಬಿಜೆಪಿಯ ಪ್ರಧಾನಮಂತ್ರಿಯವರ ಆರಾಧಕರಾಗಿದ್ದ ಈ ಕ್ರೀಡಾಪಟುಗಳು ತಮ್ಮ ಹಕ್ಕಿಗಾಗಿ ತಮ್ಮದೇ ಸರ್ಕಾರದ ಮುಂದೆ ಹೀಗೆ ಬೀದಿ ಬದಿಯಲ್ಲಿ ತುಳಿತಕ್ಕೊಳಗಾಗಬೇಕಾದ ಈ ಪರಿಸ್ಥಿತಿಯನ್ನು ನೋಡುವಾಗ ನೋವಾಗುವುದಂತೂ ನಿಜ. ಸಂವೇದನೆಯನ್ನು ಕಳೆದುಕೊಂಡಿರುವ ಈ ದೇಶದ ಭಕ್ತರು ಬೇಗ ಎಚ್ಚೆತ್ತುಕೊಂಡು ದೇಶ ಉಳಿಸಲಿ ಅನ್ನುವುದಷ್ಟೇ ನನ್ನ ಈ ಕ್ಷಣದ ಆಸೆ” ಎಂದು ಆಶಿಸಿದ್ದಾರೆ.

“ನಿಮ್ಮ ಆತ್ಮವಂಚನೆಗೆ, ಅಷಾಢಭೂತಿತನಕ್ಕೆ ಕೊನೆಯೇ ಇಲ್ಲವೇ ಮಿಸ್ಟರ್ ಪಿಎಂ?” ಎಂದು ಪತ್ರಕರ್ತ ಶಶಿ ಸಂಪಳ್ಳಿ ಪ್ರಶ್ನಿಸಿದ್ದಾರೆ.

“ಸರ್ವಾಧಿಕಾರಿ ಆಡಳಿತದಲ್ಲಿ ಇದೆಲ್ಲಾ ಸಹಜವಾಗಿಯೇ ನಡೆಯುವ ಘಟನಾವಳಿಗಳು ನ್ಯಾಯ ಎಲ್ಲಿದೆ?” ಎಂದು ಯುವ ಹೋರಾಟಗಾರ ಹನುಮೇಶ್ ಗುಂಡೂರು ಪ್ರತಿಕ್ರಿಯಿಸಿದ್ದಾರೆ.

“ಲೈಂಗಿಕ ಕಿರುಕುಳ ನೀಡಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಂಜಿಕೆಯಿಲ್ಲದೆ ಬೀದಿ ಸುತ್ತುತ್ತಿದ್ದಾನೆ. ಸಂತ್ರಸ್ತ ಹೆಣ್ಮಕ್ಳು ಲಾಠಿ, ಬೂಟುಗಳ ಪೆಟ್ಟು ತಿಂದು ಬಂಧಿಯಾಗಿದ್ದಾರೆ. ದೇಶಕ್ಕೆ ಪದಕ, ಹೆಮ್ಮೆ ತಂದ ಕುಸ್ತಿಪಟುಗಳ ಪರಿಸ್ಥಿತಿಯೇ ಹೀಗಾದರೆ, ನ್ಯಾಯಕ್ಕಾಗಿ ಜನಸಾಮಾನ್ಯರು ಧ್ವನಿ ಎತ್ತಿದರೆ ಅವರ ಪಾಡೇನು? ಮಿಸ್ಟರ್ ಮೋದಿ ಅಮಿತ್ ಷಾ ಅವರೇ, ಬೇಟಿ ಬಚಾವೋ, ಬೇಟಿ ಪಡಾವೋ ಎಂಬ ಘೋಷವಾಕ್ಯಕ್ಕೆ ಅರ್ಥವಿದೆಯಾ?” ಎಂದು ಯುವ ಪತ್ರಕರ್ತೆ ಧನಲಕ್ಷ್ಮಿ ಪೋಸ್ಟ್‌ ಮಾಡಿದ್ದಾರೆ.

“ಅಗೋ ಅಲ್ಲಿ ನೋಡಿ ಭವ್ಯ ಸಂಸತ್ತು, ಸಂವಿಧಾನವನ್ನು ಪಕ್ಕಕ್ಕೆ ಎಸೆದು ನಮ್ಮ ಕೋಟ್ಯಾಂತರ ರೂಪಾಯಿ ತೆರಿಗೆ ಹಣದಲ್ಲಿ ಕಟ್ಟಿಸಿ ಸ್ವಂತ ಮನೆಯಂತೆ ಗೃಹ ಪ್ರವೇಶ ಮಾಡಿದ ಕೆಟ್ಟ ಪ್ರಧಾನಿ. ಇಲ್ಲಿ ನೋಡಿ, ನಮ್ಮ ದೇಶದ ಹೆಮ್ಮೆಯ ಕುಸ್ತಿಪಟುಗಳು. ದೇಶದ ಹೆಮ್ಮೆ ಎಂದು ಟೀ ಕುಡಿಯಲು, ಸೆಲ್ಫಿ ತೆಗೆದುಕೊಳ್ಳಲು ಕರೆದ ಸೋಗಲಾಡಿಗೆ ಈಗ ಇವರು ಯಾರು ನೆನಪಿಲ್ಲ. ರಸ್ತೆಯಲ್ಲಿ ಹೀಗೇ ಹೀನಾಯವಾಗಿ ಎಳೆದಾಡುತ್ತಿದ್ದರೂ ಬಿಜೆಪಿಯ ಯಾವ ಮಹಿಳಾ ನಾಯಕಿಯು ತುಟಿ ಬಿಚ್ಚಿಲ್ಲ. ಇವರು ಕೇಳುತ್ತಿರುವುದು ಕೂಡ ಏಳು ಹೆಣ್ಣು ಮಕ್ಕಳ ಮೇಲೆ ಅದರಲ್ಲೂ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಒಬ್ಬ ಬಿಜೆಪಿ ಸಂಸದನ ವಿರುದ್ಧ ಕ್ರಮ! ಅದು ಬಿಜೆಪಿ ಸಾಧ್ಯವಿಲ್ಲ. ಆತ ಮುಂದಿನ ತಿಂಗಳು ಅಯೋಧ್ಯೆಯಲ್ಲಿ ಬೃಹತ್ ರ್‍ಯಾಲಿ ನಡೆಸುತ್ತಿದ್ದಾನೆ. ನೆನಪಿಡಿ ನೀವು ರೈತರನ್ನು ಹೀಗೆ ನಡೆಸಿಕೊಂಡಿದ್ದಿರಿ, ಕೊನೆಗೆ ಏನಾಯಿತು?” ಎಂಬ ಸಂದೇಶವನ್ನು ಶರಣು ಎಂಬವರು ಹಂಚಿಕೊಂಡಿದ್ದಾರೆ.

“ಅವರೆಲ್ಲಾ ದೇಶವನ್ನು ಪ್ರತಿನಿಧಿಸಿ, ದೇಶದ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಹಾರಿಸುವ ಕನಸು ಹೊತ್ತು ಕುಸ್ತಿಪಟುಗಳಾಗಲು ಮುಂದಾದವರು. ಅಪ್ರಾಪ್ತ ವಯಸ್ಸಿನಲ್ಲೇ ಅಭ್ಯಾಸ ನಿರತರಾಗಿ, ವಿಶೇಷ ಕೋಚಿಂಗ್ ಪಡೆದು ಕುಸ್ತಿಪಟುಗಳಾಗಿ ದೇಶಕ್ಕೆ ಒಲಂಪಿಕ್ ನಲ್ಲಿ ಪದಕವನ್ನೂ ತಂದುಕೊಟ್ಟ ಭಾರತಾಂಬೆಯ ಹೆಮ್ಮೆಯ ಕುವರಿಯರು. ಲೈಂಗಿಕ ದೌರ್ಜನ್ಯ ಎಸಗಿದ್ದಾರೆನ್ನುವ ಆರೋಪ ಹೊರಿಸಿರುವ ಮಹಿಳಾ ಕುಸ್ತಿಪಟುಗಳು ತಮಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ತನ್ನ ಸಂಸದನ ಪರವಾಗಿ ನಿಂತು ಈ ಹೆಣ್ಣುಮಕ್ಕಳನ್ನೇ ಬಂಧಿಸಿದೆ ಇಂದು? ಇದೆಂತಹ ಅನ್ಯಾಯ ಸ್ವಾಮಿ, ಈ ದೇಶದಲ್ಲಿ ಕಾನೂನು ಇದೆಯೋ ಇಲ್ಲವೋ? ಲೈಂಗಿಕ ದೌರ್ಜನ್ಯ ಆಗಿದೆ ಎಂದು ನೊಂದು ಪ್ರತಿಭಟಿಸುವ ಈ ಹೆಣ್ಣು ಮಕ್ಕಳನ್ನು ಹಾದಿಬೀದಿಯಲ್ಲಿ ಪ್ರಾಣಿಗಳಂತೆ ಎಳೆದೊಯ್ಯುತ್ತಿರುವುದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಲ್ಲವೇ?” ಎಂದು ಸುಬ್ರಮಣ್ಯ ಭಟ್‌ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...