Homeಕರ್ನಾಟಕಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸ್ ದರ್ಪ; ಭುಗಿಲೆದ್ದ ಜನಾಕ್ರೋಶ

ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸ್ ದರ್ಪ; ಭುಗಿಲೆದ್ದ ಜನಾಕ್ರೋಶ

- Advertisement -
- Advertisement -

ಅಪ್ರಾಪ್ತ ಮತ್ತು ವಯಸ್ಕ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್‌ನನ್ನು ಬಂಧಿಸಬೇಕೆಂದು ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ತೋರಿಸುವ  ದರ್ಪಕ್ಕೆ ಜನಾಕ್ರೋಶ ವ್ಯಕ್ತವಾಗಿದೆ.

ಕರ್ನಾಟಕದ ಅನೇಕ ಜನರು ಈ ಘಟನೆಯನ್ನು ಖಂಡಿಸಿದ್ದಾರೆ. ನೂತನ ಸಂಸತ್‌ ಭವನದ ಉದ್ಘಾಟನೆಯ ವೈಭವದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವಿದ್ದರೆ, ದೇಶಕ್ಕಾಗಿ ಪದಕಗಳನ್ನು ತಂದುಕೊಟ್ಟ ಕುಸ್ತಿಪಟುಗಳು ಬಂಧನಕ್ಕೊಳಗಾಗಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಆಕ್ರೋಶ ಹೊರಹಾಕುತ್ತಿರುವ ಜನತೆ, ಮೋದಿ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ. ದೇಶಕ್ಕಾಗಿ ಪದಕಗಳನ್ನು ತಂದ ಕುಸ್ತಿಪಟುಗಳ ಸಾಧನೆಯನ್ನು ಸ್ಮರಿಸಿದ್ದಾರೆ. ಕುಸ್ತಿಪಟುಗಳನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಪ್ರತಿಭಟನೆಯೂ ನಡೆದಿದೆ.

ಲೈಂಗಿಕ ಕುರುಕುಳ ಪ್ರಕರಣದ ಆರೋಪಿ ಬ್ರಿಜ್‌ಭೂಷಣ್ ಶರಣ್‌ಸಿಂಗ್‌ನನ್ನು ಬಂಧಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಯಿತು.

“ಕಲ್ಲಿನ ಕಟ್ಟಡದೊಳಗೆ ನಿಂತು ಭಾರತ‌ಮಾತೆಗೆ ಜೈ ಎನ್ನುವವರಿಗೆ ಬೀದಿಯಲ್ಲಿ ಭಾರತ ಮಾತೆಯರನ್ನು ಎಳೆದಾಡುತ್ತಿರುವುದು ಕಾಣುತ್ತಿಲ್ಲವಲ್ಲ, ನಾಚಿಕೆಗೇಡು. ಬಂಧಿಸಲಾದ ಎಲ್ಲ ಕುಸ್ತಿಪಟುಗಳು ಮತ್ತು ಹೋರಾಟಗಾರ್ತಿಯರನ್ನು ಬಿಡುಗಡೆ ಮಾಡಲೇಬೇಕು. ಲೈಂಗಿಕ ದೌರ್ಜನ್ಯದ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಲಿಂಗತ್ವ ಅಲ್ಪಸಂಖ್ಯಾತ ಹೋರಾಟಗಾರ್ತಿ ಮಲ್ಲು ಕುಂಬಾರ್‌ ಆಗ್ರಹಿಸಿದ್ದಾರೆ.

“ಅಂದು ಈ ಮಹಿಳಾ ಕುಸ್ತಿಪಟುಗಳು ದೇಶಕ್ಕೆ ಪದಕದ ಜೊತೆ ಕೀರ್ತಿ ಹೊತ್ತು ತಂದರು. ಇಂದು ನ್ಯಾಯ ಬೇಡಿದ್ದೆ ತಪ್ಪಾಗಿ, ಹೊಡೆದು ಬಡಿದು ಚಿತ್ರಹಿಂಸೆ ನೀಡಿ ಅವರನ್ನು ಜೈಲಿಗೆ ಅಟ್ಟುತ್ತಿದ್ದಾರೆ. ಎಂಥ ದರಿದ್ರ ಆಡಳಿತದಲ್ಲಿ ನಾವಿಂದು ಬದುಕುತ್ತಿದ್ದೇವೆ. ಹೆಣ್ಣುಮಕ್ಕಳಿಗೆ ಗೌರವ ಕೊಡದವನು ಯಾವ ರಾಜದಂಡ ಹಿಡಿದರೇನು ಪ್ರಯೋಜನ?” ಎಂದು ಮಂಜುನಾಥ್ ಎಂಬವರು ಪ್ರಶ್ನಿಸಿದ್ದಾರೆ.

ಲೇಖಕಿ ಪಲ್ಲವಿ ಇಡೂರು ಪ್ರತಿಕ್ರಿಯಿಸಿ, “ನನ್ನಂತಹ ಕೋಟ್ಯಂತರ ಮಂದಿಯ ಮನಸ್ಸು ಬಿಜೆಪಿ ಅಥವಾ ಬಲಪಂಥೀಯರ ಅಸಹ್ಯದ ರಾಜಕಾರಣದೆಡೆಗೆ ತಿರುಗುವುದಿಲ್ಲ, ಆದರೆ ಅದಾಗಲೇ ಭಕ್ತಿಯಲ್ಲಿ ಮಿಂದೇಳುತ್ತಿರುವ ಅಸಹ್ಯದ ಹುಳುಗಳು ಬದಲಾಗುತ್ತಾರೆ ಎನ್ನುವ ಭ್ರಮೆಯೂ ನನಗಿಲ್ಲ. ಇನ್ನು ಅವರನ್ನು ದಿನ ಬೆಳಗಾದರೆ ಖಂಡಿಸುತ್ತಾ ಕೂರುವುದರಿಂದ ನನ್ನ ಮಾನಸಿಕ ಸ್ಥಿತಿ ಒತ್ತಡಕ್ಕೊಳಗಾಗಿ ಜೀವನಕ್ಕೆ ಮಾರಕವೇ ಹೊರತು ಬೇರೆ ಉಪಯೋಗವಂತೂ ಆಗಲಾರದು. ಮನುಷ್ಯ ಪ್ರತಿಯೊಬ್ಬನೂ ಪ್ರತಿಕ್ರಿಯಿಸುವುದು ತನಗೆ ಬಿಸಿಯ ಅನುಭವವಾದಾಗಲೇ! ನಾವೆಷ್ಟೇ ಎಚ್ಚರಿಸಿದರೂ ಎಚ್ಚರಗೊಳ್ಳಲಾರರು” ಎಂದು ವಿಷಾದಿಸಿದ್ದಾರೆ.

“ಈಗ ಹೀಗೆ ಬೀದಿಯಲ್ಲಿ ನಿಂತು ಪ್ರತಿಭಟಿಸುತ್ತಿರುವ ದೇಶದ ಅತ್ಯುನ್ನತ ಕ್ರೀಡಾಪಟುಗಳು ಅವರ ಸಾಧನೆಯ ಸಲುವಾಗಿಯಾದರೂ ಚರ್ಚೆಗೊಳಗಾಗುತ್ತಿದ್ದಾರೆ. ನನ್ನಂತವರು ಹೀಗೆ ಬೀದಿಗಿಳಿದರೆ ಕೇಳುವವರೇ ಇರುವುದಿಲ್ಲ. ಕಹಿ ಅನಿಸಬಹುದು ಆದರೆ ಇದೇ ಸತ್ಯ. ಇಲ್ಲಿ ಸೋಶಿಯಲ್ ಮೀಡಿಯಾಗಳಲ್ಲಿ ಸಾಲಿಡಾರಿಟಿಯ ಪೋಸ್ಟ್‌ಗಳನ್ನು ಬರೆಯಲೂ ನಮಗೆ ಕಮ್ಯುನಿಟಿ ಸ್ಟಾಂಡರ್ಡ್ ಫಿಕ್ಸ್ ಮಾಡಲಾಗಿದೆ. ಇಂತದ್ದೊಂದು ಕೈಕಾಲು ಮುರಿದುಕೊಂಡ ಪ್ರಜಾಪ್ರಭುತ್ವದಲ್ಲಿ ಒಗ್ಗಟ್ಟಿನ ವಿರೋಧ ಮತಗಟ್ಟೆಯಲ್ಲಷ್ಟೇ ತೋರಿಸಲು ಸಾಧ್ಯ ಅನ್ನುವ ದಿವ್ಯಸತ್ಯದ ಅರಿವಾಗಿರುವುದಕ್ಕೇ ಮಾತಿಗಿಂತ ಕೃತಿ ಮೇಲೆನ್ನಿಸಿರುವುದು. ಅಂದಹಾಗೆ ಒಂದುಕಾಲದಲ್ಲಿ ಬಿಜೆಪಿಯ ಪ್ರಧಾನಮಂತ್ರಿಯವರ ಆರಾಧಕರಾಗಿದ್ದ ಈ ಕ್ರೀಡಾಪಟುಗಳು ತಮ್ಮ ಹಕ್ಕಿಗಾಗಿ ತಮ್ಮದೇ ಸರ್ಕಾರದ ಮುಂದೆ ಹೀಗೆ ಬೀದಿ ಬದಿಯಲ್ಲಿ ತುಳಿತಕ್ಕೊಳಗಾಗಬೇಕಾದ ಈ ಪರಿಸ್ಥಿತಿಯನ್ನು ನೋಡುವಾಗ ನೋವಾಗುವುದಂತೂ ನಿಜ. ಸಂವೇದನೆಯನ್ನು ಕಳೆದುಕೊಂಡಿರುವ ಈ ದೇಶದ ಭಕ್ತರು ಬೇಗ ಎಚ್ಚೆತ್ತುಕೊಂಡು ದೇಶ ಉಳಿಸಲಿ ಅನ್ನುವುದಷ್ಟೇ ನನ್ನ ಈ ಕ್ಷಣದ ಆಸೆ” ಎಂದು ಆಶಿಸಿದ್ದಾರೆ.

“ನಿಮ್ಮ ಆತ್ಮವಂಚನೆಗೆ, ಅಷಾಢಭೂತಿತನಕ್ಕೆ ಕೊನೆಯೇ ಇಲ್ಲವೇ ಮಿಸ್ಟರ್ ಪಿಎಂ?” ಎಂದು ಪತ್ರಕರ್ತ ಶಶಿ ಸಂಪಳ್ಳಿ ಪ್ರಶ್ನಿಸಿದ್ದಾರೆ.

“ಸರ್ವಾಧಿಕಾರಿ ಆಡಳಿತದಲ್ಲಿ ಇದೆಲ್ಲಾ ಸಹಜವಾಗಿಯೇ ನಡೆಯುವ ಘಟನಾವಳಿಗಳು ನ್ಯಾಯ ಎಲ್ಲಿದೆ?” ಎಂದು ಯುವ ಹೋರಾಟಗಾರ ಹನುಮೇಶ್ ಗುಂಡೂರು ಪ್ರತಿಕ್ರಿಯಿಸಿದ್ದಾರೆ.

“ಲೈಂಗಿಕ ಕಿರುಕುಳ ನೀಡಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಂಜಿಕೆಯಿಲ್ಲದೆ ಬೀದಿ ಸುತ್ತುತ್ತಿದ್ದಾನೆ. ಸಂತ್ರಸ್ತ ಹೆಣ್ಮಕ್ಳು ಲಾಠಿ, ಬೂಟುಗಳ ಪೆಟ್ಟು ತಿಂದು ಬಂಧಿಯಾಗಿದ್ದಾರೆ. ದೇಶಕ್ಕೆ ಪದಕ, ಹೆಮ್ಮೆ ತಂದ ಕುಸ್ತಿಪಟುಗಳ ಪರಿಸ್ಥಿತಿಯೇ ಹೀಗಾದರೆ, ನ್ಯಾಯಕ್ಕಾಗಿ ಜನಸಾಮಾನ್ಯರು ಧ್ವನಿ ಎತ್ತಿದರೆ ಅವರ ಪಾಡೇನು? ಮಿಸ್ಟರ್ ಮೋದಿ ಅಮಿತ್ ಷಾ ಅವರೇ, ಬೇಟಿ ಬಚಾವೋ, ಬೇಟಿ ಪಡಾವೋ ಎಂಬ ಘೋಷವಾಕ್ಯಕ್ಕೆ ಅರ್ಥವಿದೆಯಾ?” ಎಂದು ಯುವ ಪತ್ರಕರ್ತೆ ಧನಲಕ್ಷ್ಮಿ ಪೋಸ್ಟ್‌ ಮಾಡಿದ್ದಾರೆ.

“ಅಗೋ ಅಲ್ಲಿ ನೋಡಿ ಭವ್ಯ ಸಂಸತ್ತು, ಸಂವಿಧಾನವನ್ನು ಪಕ್ಕಕ್ಕೆ ಎಸೆದು ನಮ್ಮ ಕೋಟ್ಯಾಂತರ ರೂಪಾಯಿ ತೆರಿಗೆ ಹಣದಲ್ಲಿ ಕಟ್ಟಿಸಿ ಸ್ವಂತ ಮನೆಯಂತೆ ಗೃಹ ಪ್ರವೇಶ ಮಾಡಿದ ಕೆಟ್ಟ ಪ್ರಧಾನಿ. ಇಲ್ಲಿ ನೋಡಿ, ನಮ್ಮ ದೇಶದ ಹೆಮ್ಮೆಯ ಕುಸ್ತಿಪಟುಗಳು. ದೇಶದ ಹೆಮ್ಮೆ ಎಂದು ಟೀ ಕುಡಿಯಲು, ಸೆಲ್ಫಿ ತೆಗೆದುಕೊಳ್ಳಲು ಕರೆದ ಸೋಗಲಾಡಿಗೆ ಈಗ ಇವರು ಯಾರು ನೆನಪಿಲ್ಲ. ರಸ್ತೆಯಲ್ಲಿ ಹೀಗೇ ಹೀನಾಯವಾಗಿ ಎಳೆದಾಡುತ್ತಿದ್ದರೂ ಬಿಜೆಪಿಯ ಯಾವ ಮಹಿಳಾ ನಾಯಕಿಯು ತುಟಿ ಬಿಚ್ಚಿಲ್ಲ. ಇವರು ಕೇಳುತ್ತಿರುವುದು ಕೂಡ ಏಳು ಹೆಣ್ಣು ಮಕ್ಕಳ ಮೇಲೆ ಅದರಲ್ಲೂ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಒಬ್ಬ ಬಿಜೆಪಿ ಸಂಸದನ ವಿರುದ್ಧ ಕ್ರಮ! ಅದು ಬಿಜೆಪಿ ಸಾಧ್ಯವಿಲ್ಲ. ಆತ ಮುಂದಿನ ತಿಂಗಳು ಅಯೋಧ್ಯೆಯಲ್ಲಿ ಬೃಹತ್ ರ್‍ಯಾಲಿ ನಡೆಸುತ್ತಿದ್ದಾನೆ. ನೆನಪಿಡಿ ನೀವು ರೈತರನ್ನು ಹೀಗೆ ನಡೆಸಿಕೊಂಡಿದ್ದಿರಿ, ಕೊನೆಗೆ ಏನಾಯಿತು?” ಎಂಬ ಸಂದೇಶವನ್ನು ಶರಣು ಎಂಬವರು ಹಂಚಿಕೊಂಡಿದ್ದಾರೆ.

“ಅವರೆಲ್ಲಾ ದೇಶವನ್ನು ಪ್ರತಿನಿಧಿಸಿ, ದೇಶದ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಹಾರಿಸುವ ಕನಸು ಹೊತ್ತು ಕುಸ್ತಿಪಟುಗಳಾಗಲು ಮುಂದಾದವರು. ಅಪ್ರಾಪ್ತ ವಯಸ್ಸಿನಲ್ಲೇ ಅಭ್ಯಾಸ ನಿರತರಾಗಿ, ವಿಶೇಷ ಕೋಚಿಂಗ್ ಪಡೆದು ಕುಸ್ತಿಪಟುಗಳಾಗಿ ದೇಶಕ್ಕೆ ಒಲಂಪಿಕ್ ನಲ್ಲಿ ಪದಕವನ್ನೂ ತಂದುಕೊಟ್ಟ ಭಾರತಾಂಬೆಯ ಹೆಮ್ಮೆಯ ಕುವರಿಯರು. ಲೈಂಗಿಕ ದೌರ್ಜನ್ಯ ಎಸಗಿದ್ದಾರೆನ್ನುವ ಆರೋಪ ಹೊರಿಸಿರುವ ಮಹಿಳಾ ಕುಸ್ತಿಪಟುಗಳು ತಮಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ತನ್ನ ಸಂಸದನ ಪರವಾಗಿ ನಿಂತು ಈ ಹೆಣ್ಣುಮಕ್ಕಳನ್ನೇ ಬಂಧಿಸಿದೆ ಇಂದು? ಇದೆಂತಹ ಅನ್ಯಾಯ ಸ್ವಾಮಿ, ಈ ದೇಶದಲ್ಲಿ ಕಾನೂನು ಇದೆಯೋ ಇಲ್ಲವೋ? ಲೈಂಗಿಕ ದೌರ್ಜನ್ಯ ಆಗಿದೆ ಎಂದು ನೊಂದು ಪ್ರತಿಭಟಿಸುವ ಈ ಹೆಣ್ಣು ಮಕ್ಕಳನ್ನು ಹಾದಿಬೀದಿಯಲ್ಲಿ ಪ್ರಾಣಿಗಳಂತೆ ಎಳೆದೊಯ್ಯುತ್ತಿರುವುದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಲ್ಲವೇ?” ಎಂದು ಸುಬ್ರಮಣ್ಯ ಭಟ್‌ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...