Homeಕರ್ನಾಟಕಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸ್ ದರ್ಪ; ಭುಗಿಲೆದ್ದ ಜನಾಕ್ರೋಶ

ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸ್ ದರ್ಪ; ಭುಗಿಲೆದ್ದ ಜನಾಕ್ರೋಶ

- Advertisement -
- Advertisement -

ಅಪ್ರಾಪ್ತ ಮತ್ತು ವಯಸ್ಕ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್‌ನನ್ನು ಬಂಧಿಸಬೇಕೆಂದು ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ತೋರಿಸುವ  ದರ್ಪಕ್ಕೆ ಜನಾಕ್ರೋಶ ವ್ಯಕ್ತವಾಗಿದೆ.

ಕರ್ನಾಟಕದ ಅನೇಕ ಜನರು ಈ ಘಟನೆಯನ್ನು ಖಂಡಿಸಿದ್ದಾರೆ. ನೂತನ ಸಂಸತ್‌ ಭವನದ ಉದ್ಘಾಟನೆಯ ವೈಭವದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವಿದ್ದರೆ, ದೇಶಕ್ಕಾಗಿ ಪದಕಗಳನ್ನು ತಂದುಕೊಟ್ಟ ಕುಸ್ತಿಪಟುಗಳು ಬಂಧನಕ್ಕೊಳಗಾಗಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಆಕ್ರೋಶ ಹೊರಹಾಕುತ್ತಿರುವ ಜನತೆ, ಮೋದಿ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ. ದೇಶಕ್ಕಾಗಿ ಪದಕಗಳನ್ನು ತಂದ ಕುಸ್ತಿಪಟುಗಳ ಸಾಧನೆಯನ್ನು ಸ್ಮರಿಸಿದ್ದಾರೆ. ಕುಸ್ತಿಪಟುಗಳನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಪ್ರತಿಭಟನೆಯೂ ನಡೆದಿದೆ.

ಲೈಂಗಿಕ ಕುರುಕುಳ ಪ್ರಕರಣದ ಆರೋಪಿ ಬ್ರಿಜ್‌ಭೂಷಣ್ ಶರಣ್‌ಸಿಂಗ್‌ನನ್ನು ಬಂಧಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಯಿತು.

“ಕಲ್ಲಿನ ಕಟ್ಟಡದೊಳಗೆ ನಿಂತು ಭಾರತ‌ಮಾತೆಗೆ ಜೈ ಎನ್ನುವವರಿಗೆ ಬೀದಿಯಲ್ಲಿ ಭಾರತ ಮಾತೆಯರನ್ನು ಎಳೆದಾಡುತ್ತಿರುವುದು ಕಾಣುತ್ತಿಲ್ಲವಲ್ಲ, ನಾಚಿಕೆಗೇಡು. ಬಂಧಿಸಲಾದ ಎಲ್ಲ ಕುಸ್ತಿಪಟುಗಳು ಮತ್ತು ಹೋರಾಟಗಾರ್ತಿಯರನ್ನು ಬಿಡುಗಡೆ ಮಾಡಲೇಬೇಕು. ಲೈಂಗಿಕ ದೌರ್ಜನ್ಯದ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಲಿಂಗತ್ವ ಅಲ್ಪಸಂಖ್ಯಾತ ಹೋರಾಟಗಾರ್ತಿ ಮಲ್ಲು ಕುಂಬಾರ್‌ ಆಗ್ರಹಿಸಿದ್ದಾರೆ.

“ಅಂದು ಈ ಮಹಿಳಾ ಕುಸ್ತಿಪಟುಗಳು ದೇಶಕ್ಕೆ ಪದಕದ ಜೊತೆ ಕೀರ್ತಿ ಹೊತ್ತು ತಂದರು. ಇಂದು ನ್ಯಾಯ ಬೇಡಿದ್ದೆ ತಪ್ಪಾಗಿ, ಹೊಡೆದು ಬಡಿದು ಚಿತ್ರಹಿಂಸೆ ನೀಡಿ ಅವರನ್ನು ಜೈಲಿಗೆ ಅಟ್ಟುತ್ತಿದ್ದಾರೆ. ಎಂಥ ದರಿದ್ರ ಆಡಳಿತದಲ್ಲಿ ನಾವಿಂದು ಬದುಕುತ್ತಿದ್ದೇವೆ. ಹೆಣ್ಣುಮಕ್ಕಳಿಗೆ ಗೌರವ ಕೊಡದವನು ಯಾವ ರಾಜದಂಡ ಹಿಡಿದರೇನು ಪ್ರಯೋಜನ?” ಎಂದು ಮಂಜುನಾಥ್ ಎಂಬವರು ಪ್ರಶ್ನಿಸಿದ್ದಾರೆ.

ಲೇಖಕಿ ಪಲ್ಲವಿ ಇಡೂರು ಪ್ರತಿಕ್ರಿಯಿಸಿ, “ನನ್ನಂತಹ ಕೋಟ್ಯಂತರ ಮಂದಿಯ ಮನಸ್ಸು ಬಿಜೆಪಿ ಅಥವಾ ಬಲಪಂಥೀಯರ ಅಸಹ್ಯದ ರಾಜಕಾರಣದೆಡೆಗೆ ತಿರುಗುವುದಿಲ್ಲ, ಆದರೆ ಅದಾಗಲೇ ಭಕ್ತಿಯಲ್ಲಿ ಮಿಂದೇಳುತ್ತಿರುವ ಅಸಹ್ಯದ ಹುಳುಗಳು ಬದಲಾಗುತ್ತಾರೆ ಎನ್ನುವ ಭ್ರಮೆಯೂ ನನಗಿಲ್ಲ. ಇನ್ನು ಅವರನ್ನು ದಿನ ಬೆಳಗಾದರೆ ಖಂಡಿಸುತ್ತಾ ಕೂರುವುದರಿಂದ ನನ್ನ ಮಾನಸಿಕ ಸ್ಥಿತಿ ಒತ್ತಡಕ್ಕೊಳಗಾಗಿ ಜೀವನಕ್ಕೆ ಮಾರಕವೇ ಹೊರತು ಬೇರೆ ಉಪಯೋಗವಂತೂ ಆಗಲಾರದು. ಮನುಷ್ಯ ಪ್ರತಿಯೊಬ್ಬನೂ ಪ್ರತಿಕ್ರಿಯಿಸುವುದು ತನಗೆ ಬಿಸಿಯ ಅನುಭವವಾದಾಗಲೇ! ನಾವೆಷ್ಟೇ ಎಚ್ಚರಿಸಿದರೂ ಎಚ್ಚರಗೊಳ್ಳಲಾರರು” ಎಂದು ವಿಷಾದಿಸಿದ್ದಾರೆ.

“ಈಗ ಹೀಗೆ ಬೀದಿಯಲ್ಲಿ ನಿಂತು ಪ್ರತಿಭಟಿಸುತ್ತಿರುವ ದೇಶದ ಅತ್ಯುನ್ನತ ಕ್ರೀಡಾಪಟುಗಳು ಅವರ ಸಾಧನೆಯ ಸಲುವಾಗಿಯಾದರೂ ಚರ್ಚೆಗೊಳಗಾಗುತ್ತಿದ್ದಾರೆ. ನನ್ನಂತವರು ಹೀಗೆ ಬೀದಿಗಿಳಿದರೆ ಕೇಳುವವರೇ ಇರುವುದಿಲ್ಲ. ಕಹಿ ಅನಿಸಬಹುದು ಆದರೆ ಇದೇ ಸತ್ಯ. ಇಲ್ಲಿ ಸೋಶಿಯಲ್ ಮೀಡಿಯಾಗಳಲ್ಲಿ ಸಾಲಿಡಾರಿಟಿಯ ಪೋಸ್ಟ್‌ಗಳನ್ನು ಬರೆಯಲೂ ನಮಗೆ ಕಮ್ಯುನಿಟಿ ಸ್ಟಾಂಡರ್ಡ್ ಫಿಕ್ಸ್ ಮಾಡಲಾಗಿದೆ. ಇಂತದ್ದೊಂದು ಕೈಕಾಲು ಮುರಿದುಕೊಂಡ ಪ್ರಜಾಪ್ರಭುತ್ವದಲ್ಲಿ ಒಗ್ಗಟ್ಟಿನ ವಿರೋಧ ಮತಗಟ್ಟೆಯಲ್ಲಷ್ಟೇ ತೋರಿಸಲು ಸಾಧ್ಯ ಅನ್ನುವ ದಿವ್ಯಸತ್ಯದ ಅರಿವಾಗಿರುವುದಕ್ಕೇ ಮಾತಿಗಿಂತ ಕೃತಿ ಮೇಲೆನ್ನಿಸಿರುವುದು. ಅಂದಹಾಗೆ ಒಂದುಕಾಲದಲ್ಲಿ ಬಿಜೆಪಿಯ ಪ್ರಧಾನಮಂತ್ರಿಯವರ ಆರಾಧಕರಾಗಿದ್ದ ಈ ಕ್ರೀಡಾಪಟುಗಳು ತಮ್ಮ ಹಕ್ಕಿಗಾಗಿ ತಮ್ಮದೇ ಸರ್ಕಾರದ ಮುಂದೆ ಹೀಗೆ ಬೀದಿ ಬದಿಯಲ್ಲಿ ತುಳಿತಕ್ಕೊಳಗಾಗಬೇಕಾದ ಈ ಪರಿಸ್ಥಿತಿಯನ್ನು ನೋಡುವಾಗ ನೋವಾಗುವುದಂತೂ ನಿಜ. ಸಂವೇದನೆಯನ್ನು ಕಳೆದುಕೊಂಡಿರುವ ಈ ದೇಶದ ಭಕ್ತರು ಬೇಗ ಎಚ್ಚೆತ್ತುಕೊಂಡು ದೇಶ ಉಳಿಸಲಿ ಅನ್ನುವುದಷ್ಟೇ ನನ್ನ ಈ ಕ್ಷಣದ ಆಸೆ” ಎಂದು ಆಶಿಸಿದ್ದಾರೆ.

“ನಿಮ್ಮ ಆತ್ಮವಂಚನೆಗೆ, ಅಷಾಢಭೂತಿತನಕ್ಕೆ ಕೊನೆಯೇ ಇಲ್ಲವೇ ಮಿಸ್ಟರ್ ಪಿಎಂ?” ಎಂದು ಪತ್ರಕರ್ತ ಶಶಿ ಸಂಪಳ್ಳಿ ಪ್ರಶ್ನಿಸಿದ್ದಾರೆ.

“ಸರ್ವಾಧಿಕಾರಿ ಆಡಳಿತದಲ್ಲಿ ಇದೆಲ್ಲಾ ಸಹಜವಾಗಿಯೇ ನಡೆಯುವ ಘಟನಾವಳಿಗಳು ನ್ಯಾಯ ಎಲ್ಲಿದೆ?” ಎಂದು ಯುವ ಹೋರಾಟಗಾರ ಹನುಮೇಶ್ ಗುಂಡೂರು ಪ್ರತಿಕ್ರಿಯಿಸಿದ್ದಾರೆ.

“ಲೈಂಗಿಕ ಕಿರುಕುಳ ನೀಡಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಂಜಿಕೆಯಿಲ್ಲದೆ ಬೀದಿ ಸುತ್ತುತ್ತಿದ್ದಾನೆ. ಸಂತ್ರಸ್ತ ಹೆಣ್ಮಕ್ಳು ಲಾಠಿ, ಬೂಟುಗಳ ಪೆಟ್ಟು ತಿಂದು ಬಂಧಿಯಾಗಿದ್ದಾರೆ. ದೇಶಕ್ಕೆ ಪದಕ, ಹೆಮ್ಮೆ ತಂದ ಕುಸ್ತಿಪಟುಗಳ ಪರಿಸ್ಥಿತಿಯೇ ಹೀಗಾದರೆ, ನ್ಯಾಯಕ್ಕಾಗಿ ಜನಸಾಮಾನ್ಯರು ಧ್ವನಿ ಎತ್ತಿದರೆ ಅವರ ಪಾಡೇನು? ಮಿಸ್ಟರ್ ಮೋದಿ ಅಮಿತ್ ಷಾ ಅವರೇ, ಬೇಟಿ ಬಚಾವೋ, ಬೇಟಿ ಪಡಾವೋ ಎಂಬ ಘೋಷವಾಕ್ಯಕ್ಕೆ ಅರ್ಥವಿದೆಯಾ?” ಎಂದು ಯುವ ಪತ್ರಕರ್ತೆ ಧನಲಕ್ಷ್ಮಿ ಪೋಸ್ಟ್‌ ಮಾಡಿದ್ದಾರೆ.

“ಅಗೋ ಅಲ್ಲಿ ನೋಡಿ ಭವ್ಯ ಸಂಸತ್ತು, ಸಂವಿಧಾನವನ್ನು ಪಕ್ಕಕ್ಕೆ ಎಸೆದು ನಮ್ಮ ಕೋಟ್ಯಾಂತರ ರೂಪಾಯಿ ತೆರಿಗೆ ಹಣದಲ್ಲಿ ಕಟ್ಟಿಸಿ ಸ್ವಂತ ಮನೆಯಂತೆ ಗೃಹ ಪ್ರವೇಶ ಮಾಡಿದ ಕೆಟ್ಟ ಪ್ರಧಾನಿ. ಇಲ್ಲಿ ನೋಡಿ, ನಮ್ಮ ದೇಶದ ಹೆಮ್ಮೆಯ ಕುಸ್ತಿಪಟುಗಳು. ದೇಶದ ಹೆಮ್ಮೆ ಎಂದು ಟೀ ಕುಡಿಯಲು, ಸೆಲ್ಫಿ ತೆಗೆದುಕೊಳ್ಳಲು ಕರೆದ ಸೋಗಲಾಡಿಗೆ ಈಗ ಇವರು ಯಾರು ನೆನಪಿಲ್ಲ. ರಸ್ತೆಯಲ್ಲಿ ಹೀಗೇ ಹೀನಾಯವಾಗಿ ಎಳೆದಾಡುತ್ತಿದ್ದರೂ ಬಿಜೆಪಿಯ ಯಾವ ಮಹಿಳಾ ನಾಯಕಿಯು ತುಟಿ ಬಿಚ್ಚಿಲ್ಲ. ಇವರು ಕೇಳುತ್ತಿರುವುದು ಕೂಡ ಏಳು ಹೆಣ್ಣು ಮಕ್ಕಳ ಮೇಲೆ ಅದರಲ್ಲೂ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಒಬ್ಬ ಬಿಜೆಪಿ ಸಂಸದನ ವಿರುದ್ಧ ಕ್ರಮ! ಅದು ಬಿಜೆಪಿ ಸಾಧ್ಯವಿಲ್ಲ. ಆತ ಮುಂದಿನ ತಿಂಗಳು ಅಯೋಧ್ಯೆಯಲ್ಲಿ ಬೃಹತ್ ರ್‍ಯಾಲಿ ನಡೆಸುತ್ತಿದ್ದಾನೆ. ನೆನಪಿಡಿ ನೀವು ರೈತರನ್ನು ಹೀಗೆ ನಡೆಸಿಕೊಂಡಿದ್ದಿರಿ, ಕೊನೆಗೆ ಏನಾಯಿತು?” ಎಂಬ ಸಂದೇಶವನ್ನು ಶರಣು ಎಂಬವರು ಹಂಚಿಕೊಂಡಿದ್ದಾರೆ.

“ಅವರೆಲ್ಲಾ ದೇಶವನ್ನು ಪ್ರತಿನಿಧಿಸಿ, ದೇಶದ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಹಾರಿಸುವ ಕನಸು ಹೊತ್ತು ಕುಸ್ತಿಪಟುಗಳಾಗಲು ಮುಂದಾದವರು. ಅಪ್ರಾಪ್ತ ವಯಸ್ಸಿನಲ್ಲೇ ಅಭ್ಯಾಸ ನಿರತರಾಗಿ, ವಿಶೇಷ ಕೋಚಿಂಗ್ ಪಡೆದು ಕುಸ್ತಿಪಟುಗಳಾಗಿ ದೇಶಕ್ಕೆ ಒಲಂಪಿಕ್ ನಲ್ಲಿ ಪದಕವನ್ನೂ ತಂದುಕೊಟ್ಟ ಭಾರತಾಂಬೆಯ ಹೆಮ್ಮೆಯ ಕುವರಿಯರು. ಲೈಂಗಿಕ ದೌರ್ಜನ್ಯ ಎಸಗಿದ್ದಾರೆನ್ನುವ ಆರೋಪ ಹೊರಿಸಿರುವ ಮಹಿಳಾ ಕುಸ್ತಿಪಟುಗಳು ತಮಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ತನ್ನ ಸಂಸದನ ಪರವಾಗಿ ನಿಂತು ಈ ಹೆಣ್ಣುಮಕ್ಕಳನ್ನೇ ಬಂಧಿಸಿದೆ ಇಂದು? ಇದೆಂತಹ ಅನ್ಯಾಯ ಸ್ವಾಮಿ, ಈ ದೇಶದಲ್ಲಿ ಕಾನೂನು ಇದೆಯೋ ಇಲ್ಲವೋ? ಲೈಂಗಿಕ ದೌರ್ಜನ್ಯ ಆಗಿದೆ ಎಂದು ನೊಂದು ಪ್ರತಿಭಟಿಸುವ ಈ ಹೆಣ್ಣು ಮಕ್ಕಳನ್ನು ಹಾದಿಬೀದಿಯಲ್ಲಿ ಪ್ರಾಣಿಗಳಂತೆ ಎಳೆದೊಯ್ಯುತ್ತಿರುವುದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಲ್ಲವೇ?” ಎಂದು ಸುಬ್ರಮಣ್ಯ ಭಟ್‌ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...