Homeಮುಖಪುಟತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

- Advertisement -
- Advertisement -

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ ‘ಭಗವದ್ಗೀತೆ’ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ.

ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ ಜೀವನವನ್ನು ನಡೆಸುವತ್ತ ಮಾರ್ಗದರ್ಶನ ನೀಡುವ ಗುರಿಯನ್ನು ಈ ಮೂಲಕ ಹೊಂದಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ತರಬೇತಿ) ರಾಜಾ ಬಾಬು ಸಿಂಗ್ ಸಮರ್ಥಿಸಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಭಗವದ್ಗೀತೆಯ ಪಾರಾಯಣ ಹೊಸದಾಗಿ ನೇಮಕಗೊಂಡ ಪೊಲೀಸರಲ್ಲಿ ಬುದ್ಧಿಮತ್ತೆಯ ಅಂಶ (ಐಕ್ಯೂ) ಮತ್ತು ಭಾವನಾತ್ಮಕ ಅಂಶ (ಇಕ್ಯೂ) ನಡುವಿನ ಸಮತೋಲನವನ್ನು ಸಾಧಿಸಲು ಸಹಾಯ ಮಾಡುತ್ತದೆ. ಭೋಪಾಲ್‌ನಲ್ಲಿ ಕರ್ತವ್ಯ ನಿರತ ಕಾನ್‌ಸ್ಟೆಬಲ್‌ಗಳಿನಿಂದ ಯುವ ವಿದ್ಯಾರ್ಥಿಯೊಬ್ಬ ಕೊಲ್ಲಲ್ಪಟ್ಟಿರುವಾಗ, ಭಗವದ್ಗೀತೆಯ ಅಧ್ಯಾಯಗಳನ್ನು ಓದುವುದು ಹೊಸದಾಗಿ ನೇಮಕಗೊಂಡ ಪೊಲೀಸರ ಜೀವನದ ಮೇಲೆ ಖಂಡಿತವಾಗಿಯೂ ಸಕಾರಾತ್ಮಕ ಪರಿಣಾಮ ಬೀರುತ್ತದೆ” ಎಂದು ಎಡಿಜಿ (ತರಬೇತಿ) ಶುಕ್ರವಾರ ಹೇಳಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವಿವರಿಸಿದೆ.

“ಗುರುವಾರದಿಂದ ಪ್ರಾರಂಭವಾದ ಮಾರ್ಗಶಿರ ಮಾಸವು ಶಾಸ್ತ್ರಗಳ ಪ್ರಕಾರ ಶ್ರೀಕೃಷ್ಣನ ಮಾಸ. ಅವರೇ ಶ್ರೀಮದ್ ಭಗವದ್ಗೀತೆಯಲ್ಲಿ ‘ಮಾಸಾನಂ ಮಾರ್ಗಶೀರ್ಷೋಹಂ’ ಅಂದರೆ ತಿಂಗಳುಗಳಲ್ಲಿ ನಾನು ಮಾರ್ಗಶೀರ್ಷ ಎಂದು ಹೇಳುತ್ತಾರೆ. ಪವಿತ್ರ ಮಾರ್ಗಶಿರ ಮಾಸದುದ್ದಕ್ಕೂ ರಾತ್ರಿ ಧ್ಯಾನಕ್ಕೆ ಮುಂಚಿತವಾಗಿ ಸಾಧ್ಯವಾದರೆ ಶ್ರೀಮದ್ ಭಗವದ್ಗೀತೆಯ ಒಂದು ಅಧ್ಯಾಯವನ್ನು ಓದಲು ಎಲ್ಲಾ ಪೊಲೀಸ್ ತರಬೇತಿ ಶಾಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೇಳಲಾಗಿದೆ. ಭಗವದ್ಗೀತೆಯನ್ನು ಓದುವುದರಿಂದ ನೇಮಕಾತಿ ಹೊಂದಿದವರಿಗೆ ಸ್ವತಂತ್ರ ಜೀವನವನ್ನು ನಡೆಸುವ ಕಲೆಯನ್ನು ಕಲಿಯಲು ಸಹಾಯವಾಗುತ್ತದೆ” ಎಂದು ಎಡಿಜಿ ಹೇಳಿದ್ದಾರೆ” ಎಂದಿದೆ.

ಗಮನಾರ್ಹವಾಗಿ, ತರಬೇತಿಯಲ್ಲಿ ಪೊಲೀಸರಿಗೆ ಗೋಸ್ವಾಮಿ ತುಳಸಿದಾಸರ ರಾಮಚರಿತಮಾನಸದ ಶ್ಲೋಕಗಳನ್ನು ಪಠಿಸುವಂತೆ ಪ್ರೋತ್ಸಾಹಿಸಿದ ನಾಲ್ಕು ತಿಂಗಳ ನಂತರ, ಭಗವದ್ಗೀತೆ ಪಾರಾಯಣದ ನಿರ್ದೇಶನ ನೀಡಲಾಗಿದೆ. ರಾಮಚರಿತಮಾನಸ ತರಬೇತಿ ನಿರತ ಪೊಲೀಸರಲ್ಲಿ ಶಿಸ್ತು ಮತ್ತು ನೈತಿಕ ಸ್ಪಷ್ಟತೆಯನ್ನು ತುಂಬುತ್ತದೆ ಎಂದು ಹೇಳಲಾಗಿತ್ತು.

ಮಧ್ಯಪ್ರದೇಶದ ವಿರೋಧ ಪಕ್ಷ ಕಾಂಗ್ರೆಸ್ ಹಿರಿಯ ಪೊಲೀಸ್ ಅಧಿಕಾರಿಯ ನಿರ್ದೇಶನವನ್ನು ಟೀಕಿಸಿದೆ. ಪೊಲೀಸ್ ಪಡೆಯನ್ನು “ಮೂಲಭೂತವಾಧೀಕರಣ ಮತ್ತು ಕೇಸರಿಕರಣ’ ಮಾಡುವ ಪ್ರಯತ್ನ ಎಂದಿದೆ.

“ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ, ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಧರ್ಮ ಮತ್ತು ನಂಬಿಕೆಯನ್ನು ಅನುಸರಿಸಲು ಸ್ವಾತಂತ್ರ್ಯವನ್ನು ಹೊಂದಿದ್ದಾರೆ. ಎಡಿಜಿ (ತರಬೇತಿ) ನಿರ್ದೇಶಿಸಲ್ಪಟ್ಟಿರುವುದು ಮಧ್ಯಪ್ರದೇಶದಲ್ಲಿ ಪೊಲೀಸ್ ಪಡೆಯನ್ನು ಮೂಲಭೂತಗೊಳಿಸುವ ಪ್ರಯತ್ನವಾಗಿದೆ. ಇದು ನಮ್ಮ ದೇಶದ ಸಂವಿಧಾನದ ಮನೋಭಾವಕ್ಕೆ ಅನುಗುಣವಾಗಿಲ್ಲ” ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಭೂಪೇಂದ್ರ ಗುಪ್ತಾ ಹೇಳಿದ್ದಾರೆ. ರಾಜ್ಯ ಪೊಲೀಸರ ತರಬೇತಿ ವಿಭಾಗದ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆಡಳಿತಾರೂಢ ಬಿಜೆಪಿ ಪಕ್ಷವು ಎಡಿಜಿ (ತರಬೇತಿ) ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಅದನ್ನು ವಿರೋಧಿಸಿದ್ದಕ್ಕಾಗಿ ಕಾಂಗ್ರೆಸ್ ಅನ್ನು ಟೀಕಿಸಿದೆ.

“ಒಂದು ರಾಜಕೀಯ ಪಕ್ಷದ ಜನರು ಭಗವದ್ಗೀತೆಯನ್ನು ಕೋಮುವಾದ ಎಂದು ಕರೆಯುತ್ತಿರುವುದು ಆಘಾತಕಾರಿ. ಈ ಪ್ರಾಚೀನ ಪುಸ್ತಕವು ಧರ್ಮಕ್ಕಿಂತ ಜೀವನದ ತತ್ವಶಾಸ್ತ್ರದ ಬಗ್ಗೆ ಇರುವ ವಿಷಯಕ್ಕಾಗಿ ಪ್ರಪಂಚದಾದ್ಯಂತ ಜನರಿಂದ ಪೂಜಿಸಲ್ಪಟ್ಟಿದೆ. ಆದರೆ, ಕಾಂಗ್ರೆಸ್ ಅದನ್ನು ಕೋಮುವಾದೀಕರಿಸಲು ದೃಢನಿಶ್ಚಯವನ್ನು ಹೊಂದಿರುವಂತೆ ತೋರುತ್ತದೆ” ಎಂದು ಬಿಜೆಪಿ ಹೇಳಿದೆ.

ಎಡಿಜಿ (ತರಬೇತಿ) ರಾಜಾ ಬಾಬು ಸಿಂಗ್ ಅವರ ಭಗವದ್ಗೀತೆಗೆ ಸಂಬಂಧಿಸಿದ ನಿರ್ದೇಶನ ಹೊಸದಲ್ಲ. ಕೆಲವು ವರ್ಷಗಳ ಹಿಂದೆ ಗ್ವಾಲಿಯರ್ ಶ್ರೇಣಿಯ ಎಡಿಜಿಯಾಗಿ ನೇಮಕಗೊಂಡಾಗಲೂ ಕೂಡ ಅವರು ಜೈಲು ಕೈದಿಗಳಿಗೆ ಭಗವದ್ಗೀತೆಯ ಪ್ರತಿಗಳನ್ನು ವಿತರಿಸಿದ್ದರು ಮತ್ತು ಅಂತಹುದೇ ಓದುವ ಅವಧಿಗಳನ್ನು ಪ್ರಾರಂಭಿಸಿದ್ದರು ಎಂದು ವರದಿಗಳು ವಿವರಿಸಿವೆ.

ಸಿಂಗ್ ಅವರು ಡಿಸೆಂಬರ್ 4 ರವರೆಗೆ ಪ್ರತಿದಿನ ಸಂಜೆ ಎಂಟು ಪೊಲೀಸ್ ತರಬೇತಿ ಕೇಂದ್ರಗಳಲ್ಲಿ ಭಗವದ್ಗೀತೆಯ ಅಧ್ಯಾಯಗಳನ್ನು ತರಬೇತಿ ನಿರತ ಪೊಲೀಸರು ಪಠಿಸುವಂತೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಡಿಸೆಂಬರ್ 21 ರ ವಿಶ್ವ ಧ್ಯಾನ ದಿನವನ್ನು ಗುರುತಿಸಲು, ಡಿಸೆಂಬರ್ 19 ಮತ್ತು 21 ರ ನಡುವೆ ಮೂರು ದಿನಗಳ ಕಾಲ ಹಾರ್ಟ್‌ಫುಲ್‌ನೆಸ್ ಧ್ಯಾನ ಅವಧಿಗಳನ್ನು ನಡೆಸಲು ಅವರು ಯೋಜಿಸಿದ್ದಾರೆ. ಅಪ್ಪರ್ ಲೇಕ್ (ಭೋಪಾಲ್), ರಾಜ್‌ವಾಡ (ಇಂದೋರ್), ಧುಂಧರ್ ಜಲಪಾತ (ಜಬಲ್‌ಪುರ), ಮಹಾಕಾಳೇಶ್ವರ ದೇವಸ್ಥಾನ (ಉಜ್ಜಯಿನಿ) ಮತ್ತು ಖಜುರಾಹೊ ದೇವಸ್ಥಾನಗಳು (ಛತ್ತರ್‌ಪುರ) ನಂತಹ ಪಾರಂಪರಿಕ ಮತ್ತು ಐತಿಹಾಸಿಕ ತಾಣಗಳಲ್ಲಿ ಕಾರ್ಯಕ್ರಮ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ.

ಈ ಕಾರ್ಯಕ್ರಮವು ಎಲ್ಲಾ ನಾಗರಿಕರಿಗೆ ಮುಕ್ತವಾಗಿದ್ದು, 55 ಜಿಲ್ಲೆಗಳಾದ್ಯಂತ ಪೊಲೀಸ್ ಶ್ರೇಣಿಯ 76 ತರಬೇತಿ ಪಡೆದ ಹಾರ್ಟ್‌ಫುಲ್‌ನೆಸ್ ಬೋಧಕರು ಇದರ ನೇತೃತ್ವ ವಹಿಸಲಿದ್ದಾರೆ. ಇದರಿಂದ ಇಲಾಖೆಗೆ ಯಾವುದೇ ವೆಚ್ಚವಿಲ್ಲ ಎಂದು ವರದಿಯಾಗಿದೆ.

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...