Homeಮುಖಪುಟತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

- Advertisement -
- Advertisement -

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ ‘ಭಗವದ್ಗೀತೆ’ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ.

ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ ಜೀವನವನ್ನು ನಡೆಸುವತ್ತ ಮಾರ್ಗದರ್ಶನ ನೀಡುವ ಗುರಿಯನ್ನು ಈ ಮೂಲಕ ಹೊಂದಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ತರಬೇತಿ) ರಾಜಾ ಬಾಬು ಸಿಂಗ್ ಸಮರ್ಥಿಸಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಭಗವದ್ಗೀತೆಯ ಪಾರಾಯಣ ಹೊಸದಾಗಿ ನೇಮಕಗೊಂಡ ಪೊಲೀಸರಲ್ಲಿ ಬುದ್ಧಿಮತ್ತೆಯ ಅಂಶ (ಐಕ್ಯೂ) ಮತ್ತು ಭಾವನಾತ್ಮಕ ಅಂಶ (ಇಕ್ಯೂ) ನಡುವಿನ ಸಮತೋಲನವನ್ನು ಸಾಧಿಸಲು ಸಹಾಯ ಮಾಡುತ್ತದೆ. ಭೋಪಾಲ್‌ನಲ್ಲಿ ಕರ್ತವ್ಯ ನಿರತ ಕಾನ್‌ಸ್ಟೆಬಲ್‌ಗಳಿನಿಂದ ಯುವ ವಿದ್ಯಾರ್ಥಿಯೊಬ್ಬ ಕೊಲ್ಲಲ್ಪಟ್ಟಿರುವಾಗ, ಭಗವದ್ಗೀತೆಯ ಅಧ್ಯಾಯಗಳನ್ನು ಓದುವುದು ಹೊಸದಾಗಿ ನೇಮಕಗೊಂಡ ಪೊಲೀಸರ ಜೀವನದ ಮೇಲೆ ಖಂಡಿತವಾಗಿಯೂ ಸಕಾರಾತ್ಮಕ ಪರಿಣಾಮ ಬೀರುತ್ತದೆ” ಎಂದು ಎಡಿಜಿ (ತರಬೇತಿ) ಶುಕ್ರವಾರ ಹೇಳಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವಿವರಿಸಿದೆ.

“ಗುರುವಾರದಿಂದ ಪ್ರಾರಂಭವಾದ ಮಾರ್ಗಶಿರ ಮಾಸವು ಶಾಸ್ತ್ರಗಳ ಪ್ರಕಾರ ಶ್ರೀಕೃಷ್ಣನ ಮಾಸ. ಅವರೇ ಶ್ರೀಮದ್ ಭಗವದ್ಗೀತೆಯಲ್ಲಿ ‘ಮಾಸಾನಂ ಮಾರ್ಗಶೀರ್ಷೋಹಂ’ ಅಂದರೆ ತಿಂಗಳುಗಳಲ್ಲಿ ನಾನು ಮಾರ್ಗಶೀರ್ಷ ಎಂದು ಹೇಳುತ್ತಾರೆ. ಪವಿತ್ರ ಮಾರ್ಗಶಿರ ಮಾಸದುದ್ದಕ್ಕೂ ರಾತ್ರಿ ಧ್ಯಾನಕ್ಕೆ ಮುಂಚಿತವಾಗಿ ಸಾಧ್ಯವಾದರೆ ಶ್ರೀಮದ್ ಭಗವದ್ಗೀತೆಯ ಒಂದು ಅಧ್ಯಾಯವನ್ನು ಓದಲು ಎಲ್ಲಾ ಪೊಲೀಸ್ ತರಬೇತಿ ಶಾಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೇಳಲಾಗಿದೆ. ಭಗವದ್ಗೀತೆಯನ್ನು ಓದುವುದರಿಂದ ನೇಮಕಾತಿ ಹೊಂದಿದವರಿಗೆ ಸ್ವತಂತ್ರ ಜೀವನವನ್ನು ನಡೆಸುವ ಕಲೆಯನ್ನು ಕಲಿಯಲು ಸಹಾಯವಾಗುತ್ತದೆ” ಎಂದು ಎಡಿಜಿ ಹೇಳಿದ್ದಾರೆ” ಎಂದಿದೆ.

ಗಮನಾರ್ಹವಾಗಿ, ತರಬೇತಿಯಲ್ಲಿ ಪೊಲೀಸರಿಗೆ ಗೋಸ್ವಾಮಿ ತುಳಸಿದಾಸರ ರಾಮಚರಿತಮಾನಸದ ಶ್ಲೋಕಗಳನ್ನು ಪಠಿಸುವಂತೆ ಪ್ರೋತ್ಸಾಹಿಸಿದ ನಾಲ್ಕು ತಿಂಗಳ ನಂತರ, ಭಗವದ್ಗೀತೆ ಪಾರಾಯಣದ ನಿರ್ದೇಶನ ನೀಡಲಾಗಿದೆ. ರಾಮಚರಿತಮಾನಸ ತರಬೇತಿ ನಿರತ ಪೊಲೀಸರಲ್ಲಿ ಶಿಸ್ತು ಮತ್ತು ನೈತಿಕ ಸ್ಪಷ್ಟತೆಯನ್ನು ತುಂಬುತ್ತದೆ ಎಂದು ಹೇಳಲಾಗಿತ್ತು.

ಮಧ್ಯಪ್ರದೇಶದ ವಿರೋಧ ಪಕ್ಷ ಕಾಂಗ್ರೆಸ್ ಹಿರಿಯ ಪೊಲೀಸ್ ಅಧಿಕಾರಿಯ ನಿರ್ದೇಶನವನ್ನು ಟೀಕಿಸಿದೆ. ಪೊಲೀಸ್ ಪಡೆಯನ್ನು “ಮೂಲಭೂತವಾಧೀಕರಣ ಮತ್ತು ಕೇಸರಿಕರಣ’ ಮಾಡುವ ಪ್ರಯತ್ನ ಎಂದಿದೆ.

“ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ, ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಧರ್ಮ ಮತ್ತು ನಂಬಿಕೆಯನ್ನು ಅನುಸರಿಸಲು ಸ್ವಾತಂತ್ರ್ಯವನ್ನು ಹೊಂದಿದ್ದಾರೆ. ಎಡಿಜಿ (ತರಬೇತಿ) ನಿರ್ದೇಶಿಸಲ್ಪಟ್ಟಿರುವುದು ಮಧ್ಯಪ್ರದೇಶದಲ್ಲಿ ಪೊಲೀಸ್ ಪಡೆಯನ್ನು ಮೂಲಭೂತಗೊಳಿಸುವ ಪ್ರಯತ್ನವಾಗಿದೆ. ಇದು ನಮ್ಮ ದೇಶದ ಸಂವಿಧಾನದ ಮನೋಭಾವಕ್ಕೆ ಅನುಗುಣವಾಗಿಲ್ಲ” ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಭೂಪೇಂದ್ರ ಗುಪ್ತಾ ಹೇಳಿದ್ದಾರೆ. ರಾಜ್ಯ ಪೊಲೀಸರ ತರಬೇತಿ ವಿಭಾಗದ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆಡಳಿತಾರೂಢ ಬಿಜೆಪಿ ಪಕ್ಷವು ಎಡಿಜಿ (ತರಬೇತಿ) ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಅದನ್ನು ವಿರೋಧಿಸಿದ್ದಕ್ಕಾಗಿ ಕಾಂಗ್ರೆಸ್ ಅನ್ನು ಟೀಕಿಸಿದೆ.

“ಒಂದು ರಾಜಕೀಯ ಪಕ್ಷದ ಜನರು ಭಗವದ್ಗೀತೆಯನ್ನು ಕೋಮುವಾದ ಎಂದು ಕರೆಯುತ್ತಿರುವುದು ಆಘಾತಕಾರಿ. ಈ ಪ್ರಾಚೀನ ಪುಸ್ತಕವು ಧರ್ಮಕ್ಕಿಂತ ಜೀವನದ ತತ್ವಶಾಸ್ತ್ರದ ಬಗ್ಗೆ ಇರುವ ವಿಷಯಕ್ಕಾಗಿ ಪ್ರಪಂಚದಾದ್ಯಂತ ಜನರಿಂದ ಪೂಜಿಸಲ್ಪಟ್ಟಿದೆ. ಆದರೆ, ಕಾಂಗ್ರೆಸ್ ಅದನ್ನು ಕೋಮುವಾದೀಕರಿಸಲು ದೃಢನಿಶ್ಚಯವನ್ನು ಹೊಂದಿರುವಂತೆ ತೋರುತ್ತದೆ” ಎಂದು ಬಿಜೆಪಿ ಹೇಳಿದೆ.

ಎಡಿಜಿ (ತರಬೇತಿ) ರಾಜಾ ಬಾಬು ಸಿಂಗ್ ಅವರ ಭಗವದ್ಗೀತೆಗೆ ಸಂಬಂಧಿಸಿದ ನಿರ್ದೇಶನ ಹೊಸದಲ್ಲ. ಕೆಲವು ವರ್ಷಗಳ ಹಿಂದೆ ಗ್ವಾಲಿಯರ್ ಶ್ರೇಣಿಯ ಎಡಿಜಿಯಾಗಿ ನೇಮಕಗೊಂಡಾಗಲೂ ಕೂಡ ಅವರು ಜೈಲು ಕೈದಿಗಳಿಗೆ ಭಗವದ್ಗೀತೆಯ ಪ್ರತಿಗಳನ್ನು ವಿತರಿಸಿದ್ದರು ಮತ್ತು ಅಂತಹುದೇ ಓದುವ ಅವಧಿಗಳನ್ನು ಪ್ರಾರಂಭಿಸಿದ್ದರು ಎಂದು ವರದಿಗಳು ವಿವರಿಸಿವೆ.

ಸಿಂಗ್ ಅವರು ಡಿಸೆಂಬರ್ 4 ರವರೆಗೆ ಪ್ರತಿದಿನ ಸಂಜೆ ಎಂಟು ಪೊಲೀಸ್ ತರಬೇತಿ ಕೇಂದ್ರಗಳಲ್ಲಿ ಭಗವದ್ಗೀತೆಯ ಅಧ್ಯಾಯಗಳನ್ನು ತರಬೇತಿ ನಿರತ ಪೊಲೀಸರು ಪಠಿಸುವಂತೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಡಿಸೆಂಬರ್ 21 ರ ವಿಶ್ವ ಧ್ಯಾನ ದಿನವನ್ನು ಗುರುತಿಸಲು, ಡಿಸೆಂಬರ್ 19 ಮತ್ತು 21 ರ ನಡುವೆ ಮೂರು ದಿನಗಳ ಕಾಲ ಹಾರ್ಟ್‌ಫುಲ್‌ನೆಸ್ ಧ್ಯಾನ ಅವಧಿಗಳನ್ನು ನಡೆಸಲು ಅವರು ಯೋಜಿಸಿದ್ದಾರೆ. ಅಪ್ಪರ್ ಲೇಕ್ (ಭೋಪಾಲ್), ರಾಜ್‌ವಾಡ (ಇಂದೋರ್), ಧುಂಧರ್ ಜಲಪಾತ (ಜಬಲ್‌ಪುರ), ಮಹಾಕಾಳೇಶ್ವರ ದೇವಸ್ಥಾನ (ಉಜ್ಜಯಿನಿ) ಮತ್ತು ಖಜುರಾಹೊ ದೇವಸ್ಥಾನಗಳು (ಛತ್ತರ್‌ಪುರ) ನಂತಹ ಪಾರಂಪರಿಕ ಮತ್ತು ಐತಿಹಾಸಿಕ ತಾಣಗಳಲ್ಲಿ ಕಾರ್ಯಕ್ರಮ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ.

ಈ ಕಾರ್ಯಕ್ರಮವು ಎಲ್ಲಾ ನಾಗರಿಕರಿಗೆ ಮುಕ್ತವಾಗಿದ್ದು, 55 ಜಿಲ್ಲೆಗಳಾದ್ಯಂತ ಪೊಲೀಸ್ ಶ್ರೇಣಿಯ 76 ತರಬೇತಿ ಪಡೆದ ಹಾರ್ಟ್‌ಫುಲ್‌ನೆಸ್ ಬೋಧಕರು ಇದರ ನೇತೃತ್ವ ವಹಿಸಲಿದ್ದಾರೆ. ಇದರಿಂದ ಇಲಾಖೆಗೆ ಯಾವುದೇ ವೆಚ್ಚವಿಲ್ಲ ಎಂದು ವರದಿಯಾಗಿದೆ.

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...