Homeಮುಖಪುಟಎಫ್‌ಐಆರ್ ದಾಖಲಿಸಿದ ಪೊಲೀಸರು : ಚು. ಆಯೋಗ 'ಪಕ್ಷಪಾತಿ' ಎಂದ ದೆಹಲಿ ಸಿಎಂ ಅತಿಶಿ

ಎಫ್‌ಐಆರ್ ದಾಖಲಿಸಿದ ಪೊಲೀಸರು : ಚು. ಆಯೋಗ ‘ಪಕ್ಷಪಾತಿ’ ಎಂದ ದೆಹಲಿ ಸಿಎಂ ಅತಿಶಿ

- Advertisement -
- Advertisement -

ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಮತ್ತು ಕರ್ತವ್ಯದಲ್ಲಿರುವ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೆಹಲಿಯ ಮುಖ್ಯಮಂತ್ರಿ ಹಾಗೂ ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಅತಿಶಿ ಮರ್ಲೇನಾ ವಿರುದ್ಧ ಪೊಲೀಸರು ಮಂಗಳವಾರ (ಫೆಬ್ರವರಿ 4,2025) ಎಫ್‌ಐಆರ್ ದಾಖಲಿಸಿದ್ದಾರೆ.

“ನಾವು ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿಯ ವಿರುದ್ಧ ಗೋವಿಂದಪುರಿ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಫತೇ ಸಿಂಗ್ ಮಾರ್ಗದಲ್ಲಿ 50-70 ಬೆಂಬಲಿಗರು ಮತ್ತು 10 ವಾಹನಗಳೊಂದಿಗೆ ಅತಿಶಿ ಅವರು ಕಾಣಿಸಿಕೊಂಡಿದ್ದರು. ಚುನಾವಣೆಯ ಮಾದರಿ ನೀತಿ ಸಂಹಿತೆಯ ಮಾರ್ಗಸೂಚಿಗಳ ಪ್ರಕಾರ, ಆ ಪ್ರದೇಶವನ್ನು ಖಾಲಿ ಮಾಡುವಂತೆ ಪೊಲೀಸರು ಸೂಚಿಸಿದ್ದರು. ಆದರೆ, ಅತಿಶಿ ಅವರು ಅಧಿಕಾರಿಯೊಬ್ಬರು ತಮ್ಮ ಕರ್ತವ್ಯ ನಿರ್ವಹಿಸದಂತೆ ತಡೆದಿದ್ದಾರೆ. ಹಾಗಾಗಿ, ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಾಗಿರುವ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅತಿಶಿ ಅವರು ಚುನಾವಣಾ ಆಯೋಗದ ವಿರುದ್ದ ಕಿಡಿಕಾರಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಮತ್ತು ಅವರ ಕುಟುಂಬದ ಸದಸ್ಯರು ಬಹಿರಂಗವಾಗಿ ‘ಗೂಂಡಾಗಿರಿ’ ನಡೆಸುತ್ತಿದ್ದಾರೆ. ಅವರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅತಿಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದು, “ದೆಹಲಿ ಸಿಎಂ ಬಹಿರಂಗ ಗೂಂಡಾಗಿರಿಯ ಬಗ್ಗೆ ದೂರು ನೀಡಿದ ನಂತರ ಚುನಾವಣಾ ಆಯೋಗ ಅವರ ವಿರುದ್ಧವೇ ಪೊಲೀಸ್ ಪ್ರಕರಣ ದಾಖಲಿಸಿದೆ” ಎಂದು ಆರೋಪಿಸಿದ್ದಾರೆ.

“ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕೃತ ನಿಲುವು ಇದು. ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗದ ಕೆಲಸವೆಂದರೆ ಆಮ್ ಆದ್ಮಿ ಪಕ್ಷದ ವಿರುದ್ಧ ಗೂಂಡಾಗಿರಿ ಮಾಡುವುದು. ಬಿಜೆಪಿಯ ಗೂಂಡಾಗಿರಿಗೆ ರಕ್ಷಣೆ ನೀಡುವುದು. ಮದ್ಯ, ಹಣ ಮತ್ತು ವಸ್ತುಗಳನ್ನು ವಿತರಿಸುವುದು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದೆ, ಚು. ಆಯೋಗ ಪಕ್ಷಪಾತಿ”: ಅತಿಶಿ

ಎಫ್‌ಐಆರ್ ದಾಖಲಾದ ನಂತರ, ಅತಿಶಿ ಅವರು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ‘ಗೂಂಡಾಗಿರಿ’ಯಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. ಚುನಾವಣಾ ಆಯೋಗ ಮತ್ತು ದೆಹಲಿ ಪೊಲೀಸರು ಎಎಪಿ ನಾಯಕರು ಮತ್ತು ಸದಸ್ಯರನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ಕೇಸರಿ ಪಕ್ಷದ ಕಾರ್ಯಕರ್ತರನ್ನು ರಕ್ಷಿಸುತ್ತಿದ್ದಾರೆ” ಎಂದು ಅತಿಶಿ ಆರೋಪಿಸಿದ್ದಾರೆ.

ಭಾರತದ ಪ್ರಜಾಪ್ರಭುತ್ವ ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಕೈಯಲ್ಲಿದೆ. ಅದು ರಾಷ್ಟ್ರ ರಾಜಧಾನಿಯಲ್ಲಿ ಉಳಿಯುತ್ತದೆಯೇ ಎಂದು ದೇಶ ನೋಡುತ್ತಿದೆ ಎಂದು ಅತಿಶಿ ಹೇಳಿದ್ದಾರೆ.

“ಬಿಜೆಪಿ ಬಹಿರಂಗವಾಗಿ ಗೂಂಡಾಗಿರಿಯಲ್ಲಿ ತೊಡಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ದೆಹಲಿ ಪೊಲೀಸರು ರಕ್ಷಿಸುತ್ತಿದ್ದಾರೆ. ಚುನಾವಣಾ ಆಯೋಗ ದೂರು ನೀಡುತ್ತಿರುವವರ ವಿರುದ್ಧವೇ ಪ್ರಕರಣಗಳನ್ನು ದಾಖಲಿಸುತ್ತಿದೆ” ಎಂದು ಅತಿಶಿ ಆರೋಪಿಸಿದ್ದಾರೆ.

ತನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಮತ್ತು ಅವರ ಕುಟುಂಬ ಸದಸ್ಯರು ಕಲ್ಕಾಜಿಯಲ್ಲಿ ‘ಗೂಂಡಾಗಿರಿ’ಯಲ್ಲಿ ತೊಡಗಿದ್ದಾರೆ ಎಂದು ಅತಿಶಿ ನಿರ್ದಿಷ್ಟವಾಗಿ ಆರೋಪಿಸಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

“ದೆಹಲಿಯ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಒಂದೆಡೆ, ಉಚಿತ ಕಲ್ಯಾಣ ಯೋಜನೆಗಳನ್ನು ನಿಲ್ಲಿಸಲು ಬಯಸುವ ಮತ್ತು ಹಿಂಸಾಚಾರದಲ್ಲಿ ತೊಡಗಿರುವ ಪಕ್ಷವಿದೆ. ಮತ್ತೊಂದೆಡೆ, ಪ್ರತಿ ಮನೆಯೂ ತಿಂಗಳಿಗೆ ₹25,000 ಉಳಿಸುವಂತೆ ಎಎಪಿ ಕೆಲಸ ಮಾಡುತ್ತಿದೆ” ಎಂದು ಅತಿಶಿ ಪ್ರತಿಪಾದಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಫೆಬ್ರವರಿ 5ರಂದು ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಮಹಾರಾಷ್ಟ್ರ | ಎಲ್ಲಾ ಸರ್ಕಾರಿ ಸಂವಹನಗಳಿಗೆ ಮರಾಠಿ ಭಾಷೆ ಬಳಕೆ ಕಡ್ಡಾಯ ಮಾಡಿದ ರಾಜ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...