Homeಮುಖಪುಟಎಫ್‌ಐಆರ್ ದಾಖಲಿಸಿದ ಪೊಲೀಸರು : ಚು. ಆಯೋಗ 'ಪಕ್ಷಪಾತಿ' ಎಂದ ದೆಹಲಿ ಸಿಎಂ ಅತಿಶಿ

ಎಫ್‌ಐಆರ್ ದಾಖಲಿಸಿದ ಪೊಲೀಸರು : ಚು. ಆಯೋಗ ‘ಪಕ್ಷಪಾತಿ’ ಎಂದ ದೆಹಲಿ ಸಿಎಂ ಅತಿಶಿ

- Advertisement -
- Advertisement -

ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಮತ್ತು ಕರ್ತವ್ಯದಲ್ಲಿರುವ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೆಹಲಿಯ ಮುಖ್ಯಮಂತ್ರಿ ಹಾಗೂ ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಅತಿಶಿ ಮರ್ಲೇನಾ ವಿರುದ್ಧ ಪೊಲೀಸರು ಮಂಗಳವಾರ (ಫೆಬ್ರವರಿ 4,2025) ಎಫ್‌ಐಆರ್ ದಾಖಲಿಸಿದ್ದಾರೆ.

“ನಾವು ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿಯ ವಿರುದ್ಧ ಗೋವಿಂದಪುರಿ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಫತೇ ಸಿಂಗ್ ಮಾರ್ಗದಲ್ಲಿ 50-70 ಬೆಂಬಲಿಗರು ಮತ್ತು 10 ವಾಹನಗಳೊಂದಿಗೆ ಅತಿಶಿ ಅವರು ಕಾಣಿಸಿಕೊಂಡಿದ್ದರು. ಚುನಾವಣೆಯ ಮಾದರಿ ನೀತಿ ಸಂಹಿತೆಯ ಮಾರ್ಗಸೂಚಿಗಳ ಪ್ರಕಾರ, ಆ ಪ್ರದೇಶವನ್ನು ಖಾಲಿ ಮಾಡುವಂತೆ ಪೊಲೀಸರು ಸೂಚಿಸಿದ್ದರು. ಆದರೆ, ಅತಿಶಿ ಅವರು ಅಧಿಕಾರಿಯೊಬ್ಬರು ತಮ್ಮ ಕರ್ತವ್ಯ ನಿರ್ವಹಿಸದಂತೆ ತಡೆದಿದ್ದಾರೆ. ಹಾಗಾಗಿ, ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಾಗಿರುವ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅತಿಶಿ ಅವರು ಚುನಾವಣಾ ಆಯೋಗದ ವಿರುದ್ದ ಕಿಡಿಕಾರಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಮತ್ತು ಅವರ ಕುಟುಂಬದ ಸದಸ್ಯರು ಬಹಿರಂಗವಾಗಿ ‘ಗೂಂಡಾಗಿರಿ’ ನಡೆಸುತ್ತಿದ್ದಾರೆ. ಅವರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅತಿಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದು, “ದೆಹಲಿ ಸಿಎಂ ಬಹಿರಂಗ ಗೂಂಡಾಗಿರಿಯ ಬಗ್ಗೆ ದೂರು ನೀಡಿದ ನಂತರ ಚುನಾವಣಾ ಆಯೋಗ ಅವರ ವಿರುದ್ಧವೇ ಪೊಲೀಸ್ ಪ್ರಕರಣ ದಾಖಲಿಸಿದೆ” ಎಂದು ಆರೋಪಿಸಿದ್ದಾರೆ.

“ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕೃತ ನಿಲುವು ಇದು. ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗದ ಕೆಲಸವೆಂದರೆ ಆಮ್ ಆದ್ಮಿ ಪಕ್ಷದ ವಿರುದ್ಧ ಗೂಂಡಾಗಿರಿ ಮಾಡುವುದು. ಬಿಜೆಪಿಯ ಗೂಂಡಾಗಿರಿಗೆ ರಕ್ಷಣೆ ನೀಡುವುದು. ಮದ್ಯ, ಹಣ ಮತ್ತು ವಸ್ತುಗಳನ್ನು ವಿತರಿಸುವುದು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದೆ, ಚು. ಆಯೋಗ ಪಕ್ಷಪಾತಿ”: ಅತಿಶಿ

ಎಫ್‌ಐಆರ್ ದಾಖಲಾದ ನಂತರ, ಅತಿಶಿ ಅವರು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ‘ಗೂಂಡಾಗಿರಿ’ಯಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. ಚುನಾವಣಾ ಆಯೋಗ ಮತ್ತು ದೆಹಲಿ ಪೊಲೀಸರು ಎಎಪಿ ನಾಯಕರು ಮತ್ತು ಸದಸ್ಯರನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ಕೇಸರಿ ಪಕ್ಷದ ಕಾರ್ಯಕರ್ತರನ್ನು ರಕ್ಷಿಸುತ್ತಿದ್ದಾರೆ” ಎಂದು ಅತಿಶಿ ಆರೋಪಿಸಿದ್ದಾರೆ.

ಭಾರತದ ಪ್ರಜಾಪ್ರಭುತ್ವ ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಕೈಯಲ್ಲಿದೆ. ಅದು ರಾಷ್ಟ್ರ ರಾಜಧಾನಿಯಲ್ಲಿ ಉಳಿಯುತ್ತದೆಯೇ ಎಂದು ದೇಶ ನೋಡುತ್ತಿದೆ ಎಂದು ಅತಿಶಿ ಹೇಳಿದ್ದಾರೆ.

“ಬಿಜೆಪಿ ಬಹಿರಂಗವಾಗಿ ಗೂಂಡಾಗಿರಿಯಲ್ಲಿ ತೊಡಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ದೆಹಲಿ ಪೊಲೀಸರು ರಕ್ಷಿಸುತ್ತಿದ್ದಾರೆ. ಚುನಾವಣಾ ಆಯೋಗ ದೂರು ನೀಡುತ್ತಿರುವವರ ವಿರುದ್ಧವೇ ಪ್ರಕರಣಗಳನ್ನು ದಾಖಲಿಸುತ್ತಿದೆ” ಎಂದು ಅತಿಶಿ ಆರೋಪಿಸಿದ್ದಾರೆ.

ತನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಮತ್ತು ಅವರ ಕುಟುಂಬ ಸದಸ್ಯರು ಕಲ್ಕಾಜಿಯಲ್ಲಿ ‘ಗೂಂಡಾಗಿರಿ’ಯಲ್ಲಿ ತೊಡಗಿದ್ದಾರೆ ಎಂದು ಅತಿಶಿ ನಿರ್ದಿಷ್ಟವಾಗಿ ಆರೋಪಿಸಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

“ದೆಹಲಿಯ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಒಂದೆಡೆ, ಉಚಿತ ಕಲ್ಯಾಣ ಯೋಜನೆಗಳನ್ನು ನಿಲ್ಲಿಸಲು ಬಯಸುವ ಮತ್ತು ಹಿಂಸಾಚಾರದಲ್ಲಿ ತೊಡಗಿರುವ ಪಕ್ಷವಿದೆ. ಮತ್ತೊಂದೆಡೆ, ಪ್ರತಿ ಮನೆಯೂ ತಿಂಗಳಿಗೆ ₹25,000 ಉಳಿಸುವಂತೆ ಎಎಪಿ ಕೆಲಸ ಮಾಡುತ್ತಿದೆ” ಎಂದು ಅತಿಶಿ ಪ್ರತಿಪಾದಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಫೆಬ್ರವರಿ 5ರಂದು ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಮಹಾರಾಷ್ಟ್ರ | ಎಲ್ಲಾ ಸರ್ಕಾರಿ ಸಂವಹನಗಳಿಗೆ ಮರಾಠಿ ಭಾಷೆ ಬಳಕೆ ಕಡ್ಡಾಯ ಮಾಡಿದ ರಾಜ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...