Homeಮುಖಪುಟಎಫ್‌ಐಆರ್ ದಾಖಲಿಸಿದ ಪೊಲೀಸರು : ಚು. ಆಯೋಗ 'ಪಕ್ಷಪಾತಿ' ಎಂದ ದೆಹಲಿ ಸಿಎಂ ಅತಿಶಿ

ಎಫ್‌ಐಆರ್ ದಾಖಲಿಸಿದ ಪೊಲೀಸರು : ಚು. ಆಯೋಗ ‘ಪಕ್ಷಪಾತಿ’ ಎಂದ ದೆಹಲಿ ಸಿಎಂ ಅತಿಶಿ

- Advertisement -
- Advertisement -

ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಮತ್ತು ಕರ್ತವ್ಯದಲ್ಲಿರುವ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೆಹಲಿಯ ಮುಖ್ಯಮಂತ್ರಿ ಹಾಗೂ ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಅತಿಶಿ ಮರ್ಲೇನಾ ವಿರುದ್ಧ ಪೊಲೀಸರು ಮಂಗಳವಾರ (ಫೆಬ್ರವರಿ 4,2025) ಎಫ್‌ಐಆರ್ ದಾಖಲಿಸಿದ್ದಾರೆ.

“ನಾವು ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿಯ ವಿರುದ್ಧ ಗೋವಿಂದಪುರಿ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಫತೇ ಸಿಂಗ್ ಮಾರ್ಗದಲ್ಲಿ 50-70 ಬೆಂಬಲಿಗರು ಮತ್ತು 10 ವಾಹನಗಳೊಂದಿಗೆ ಅತಿಶಿ ಅವರು ಕಾಣಿಸಿಕೊಂಡಿದ್ದರು. ಚುನಾವಣೆಯ ಮಾದರಿ ನೀತಿ ಸಂಹಿತೆಯ ಮಾರ್ಗಸೂಚಿಗಳ ಪ್ರಕಾರ, ಆ ಪ್ರದೇಶವನ್ನು ಖಾಲಿ ಮಾಡುವಂತೆ ಪೊಲೀಸರು ಸೂಚಿಸಿದ್ದರು. ಆದರೆ, ಅತಿಶಿ ಅವರು ಅಧಿಕಾರಿಯೊಬ್ಬರು ತಮ್ಮ ಕರ್ತವ್ಯ ನಿರ್ವಹಿಸದಂತೆ ತಡೆದಿದ್ದಾರೆ. ಹಾಗಾಗಿ, ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಾಗಿರುವ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅತಿಶಿ ಅವರು ಚುನಾವಣಾ ಆಯೋಗದ ವಿರುದ್ದ ಕಿಡಿಕಾರಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಮತ್ತು ಅವರ ಕುಟುಂಬದ ಸದಸ್ಯರು ಬಹಿರಂಗವಾಗಿ ‘ಗೂಂಡಾಗಿರಿ’ ನಡೆಸುತ್ತಿದ್ದಾರೆ. ಅವರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅತಿಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದು, “ದೆಹಲಿ ಸಿಎಂ ಬಹಿರಂಗ ಗೂಂಡಾಗಿರಿಯ ಬಗ್ಗೆ ದೂರು ನೀಡಿದ ನಂತರ ಚುನಾವಣಾ ಆಯೋಗ ಅವರ ವಿರುದ್ಧವೇ ಪೊಲೀಸ್ ಪ್ರಕರಣ ದಾಖಲಿಸಿದೆ” ಎಂದು ಆರೋಪಿಸಿದ್ದಾರೆ.

“ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕೃತ ನಿಲುವು ಇದು. ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗದ ಕೆಲಸವೆಂದರೆ ಆಮ್ ಆದ್ಮಿ ಪಕ್ಷದ ವಿರುದ್ಧ ಗೂಂಡಾಗಿರಿ ಮಾಡುವುದು. ಬಿಜೆಪಿಯ ಗೂಂಡಾಗಿರಿಗೆ ರಕ್ಷಣೆ ನೀಡುವುದು. ಮದ್ಯ, ಹಣ ಮತ್ತು ವಸ್ತುಗಳನ್ನು ವಿತರಿಸುವುದು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದೆ, ಚು. ಆಯೋಗ ಪಕ್ಷಪಾತಿ”: ಅತಿಶಿ

ಎಫ್‌ಐಆರ್ ದಾಖಲಾದ ನಂತರ, ಅತಿಶಿ ಅವರು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ‘ಗೂಂಡಾಗಿರಿ’ಯಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. ಚುನಾವಣಾ ಆಯೋಗ ಮತ್ತು ದೆಹಲಿ ಪೊಲೀಸರು ಎಎಪಿ ನಾಯಕರು ಮತ್ತು ಸದಸ್ಯರನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ಕೇಸರಿ ಪಕ್ಷದ ಕಾರ್ಯಕರ್ತರನ್ನು ರಕ್ಷಿಸುತ್ತಿದ್ದಾರೆ” ಎಂದು ಅತಿಶಿ ಆರೋಪಿಸಿದ್ದಾರೆ.

ಭಾರತದ ಪ್ರಜಾಪ್ರಭುತ್ವ ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಕೈಯಲ್ಲಿದೆ. ಅದು ರಾಷ್ಟ್ರ ರಾಜಧಾನಿಯಲ್ಲಿ ಉಳಿಯುತ್ತದೆಯೇ ಎಂದು ದೇಶ ನೋಡುತ್ತಿದೆ ಎಂದು ಅತಿಶಿ ಹೇಳಿದ್ದಾರೆ.

“ಬಿಜೆಪಿ ಬಹಿರಂಗವಾಗಿ ಗೂಂಡಾಗಿರಿಯಲ್ಲಿ ತೊಡಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ದೆಹಲಿ ಪೊಲೀಸರು ರಕ್ಷಿಸುತ್ತಿದ್ದಾರೆ. ಚುನಾವಣಾ ಆಯೋಗ ದೂರು ನೀಡುತ್ತಿರುವವರ ವಿರುದ್ಧವೇ ಪ್ರಕರಣಗಳನ್ನು ದಾಖಲಿಸುತ್ತಿದೆ” ಎಂದು ಅತಿಶಿ ಆರೋಪಿಸಿದ್ದಾರೆ.

ತನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಮತ್ತು ಅವರ ಕುಟುಂಬ ಸದಸ್ಯರು ಕಲ್ಕಾಜಿಯಲ್ಲಿ ‘ಗೂಂಡಾಗಿರಿ’ಯಲ್ಲಿ ತೊಡಗಿದ್ದಾರೆ ಎಂದು ಅತಿಶಿ ನಿರ್ದಿಷ್ಟವಾಗಿ ಆರೋಪಿಸಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

“ದೆಹಲಿಯ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಒಂದೆಡೆ, ಉಚಿತ ಕಲ್ಯಾಣ ಯೋಜನೆಗಳನ್ನು ನಿಲ್ಲಿಸಲು ಬಯಸುವ ಮತ್ತು ಹಿಂಸಾಚಾರದಲ್ಲಿ ತೊಡಗಿರುವ ಪಕ್ಷವಿದೆ. ಮತ್ತೊಂದೆಡೆ, ಪ್ರತಿ ಮನೆಯೂ ತಿಂಗಳಿಗೆ ₹25,000 ಉಳಿಸುವಂತೆ ಎಎಪಿ ಕೆಲಸ ಮಾಡುತ್ತಿದೆ” ಎಂದು ಅತಿಶಿ ಪ್ರತಿಪಾದಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಫೆಬ್ರವರಿ 5ರಂದು ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಮಹಾರಾಷ್ಟ್ರ | ಎಲ್ಲಾ ಸರ್ಕಾರಿ ಸಂವಹನಗಳಿಗೆ ಮರಾಠಿ ಭಾಷೆ ಬಳಕೆ ಕಡ್ಡಾಯ ಮಾಡಿದ ರಾಜ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...