Homeಮುಖಪುಟಎಫ್‌ಐಆರ್ ದಾಖಲಿಸಿದ ಪೊಲೀಸರು : ಚು. ಆಯೋಗ 'ಪಕ್ಷಪಾತಿ' ಎಂದ ದೆಹಲಿ ಸಿಎಂ ಅತಿಶಿ

ಎಫ್‌ಐಆರ್ ದಾಖಲಿಸಿದ ಪೊಲೀಸರು : ಚು. ಆಯೋಗ ‘ಪಕ್ಷಪಾತಿ’ ಎಂದ ದೆಹಲಿ ಸಿಎಂ ಅತಿಶಿ

- Advertisement -
- Advertisement -

ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಮತ್ತು ಕರ್ತವ್ಯದಲ್ಲಿರುವ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೆಹಲಿಯ ಮುಖ್ಯಮಂತ್ರಿ ಹಾಗೂ ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಅತಿಶಿ ಮರ್ಲೇನಾ ವಿರುದ್ಧ ಪೊಲೀಸರು ಮಂಗಳವಾರ (ಫೆಬ್ರವರಿ 4,2025) ಎಫ್‌ಐಆರ್ ದಾಖಲಿಸಿದ್ದಾರೆ.

“ನಾವು ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿಯ ವಿರುದ್ಧ ಗೋವಿಂದಪುರಿ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಫತೇ ಸಿಂಗ್ ಮಾರ್ಗದಲ್ಲಿ 50-70 ಬೆಂಬಲಿಗರು ಮತ್ತು 10 ವಾಹನಗಳೊಂದಿಗೆ ಅತಿಶಿ ಅವರು ಕಾಣಿಸಿಕೊಂಡಿದ್ದರು. ಚುನಾವಣೆಯ ಮಾದರಿ ನೀತಿ ಸಂಹಿತೆಯ ಮಾರ್ಗಸೂಚಿಗಳ ಪ್ರಕಾರ, ಆ ಪ್ರದೇಶವನ್ನು ಖಾಲಿ ಮಾಡುವಂತೆ ಪೊಲೀಸರು ಸೂಚಿಸಿದ್ದರು. ಆದರೆ, ಅತಿಶಿ ಅವರು ಅಧಿಕಾರಿಯೊಬ್ಬರು ತಮ್ಮ ಕರ್ತವ್ಯ ನಿರ್ವಹಿಸದಂತೆ ತಡೆದಿದ್ದಾರೆ. ಹಾಗಾಗಿ, ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಾಗಿರುವ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅತಿಶಿ ಅವರು ಚುನಾವಣಾ ಆಯೋಗದ ವಿರುದ್ದ ಕಿಡಿಕಾರಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಮತ್ತು ಅವರ ಕುಟುಂಬದ ಸದಸ್ಯರು ಬಹಿರಂಗವಾಗಿ ‘ಗೂಂಡಾಗಿರಿ’ ನಡೆಸುತ್ತಿದ್ದಾರೆ. ಅವರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅತಿಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದು, “ದೆಹಲಿ ಸಿಎಂ ಬಹಿರಂಗ ಗೂಂಡಾಗಿರಿಯ ಬಗ್ಗೆ ದೂರು ನೀಡಿದ ನಂತರ ಚುನಾವಣಾ ಆಯೋಗ ಅವರ ವಿರುದ್ಧವೇ ಪೊಲೀಸ್ ಪ್ರಕರಣ ದಾಖಲಿಸಿದೆ” ಎಂದು ಆರೋಪಿಸಿದ್ದಾರೆ.

“ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕೃತ ನಿಲುವು ಇದು. ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗದ ಕೆಲಸವೆಂದರೆ ಆಮ್ ಆದ್ಮಿ ಪಕ್ಷದ ವಿರುದ್ಧ ಗೂಂಡಾಗಿರಿ ಮಾಡುವುದು. ಬಿಜೆಪಿಯ ಗೂಂಡಾಗಿರಿಗೆ ರಕ್ಷಣೆ ನೀಡುವುದು. ಮದ್ಯ, ಹಣ ಮತ್ತು ವಸ್ತುಗಳನ್ನು ವಿತರಿಸುವುದು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದೆ, ಚು. ಆಯೋಗ ಪಕ್ಷಪಾತಿ”: ಅತಿಶಿ

ಎಫ್‌ಐಆರ್ ದಾಖಲಾದ ನಂತರ, ಅತಿಶಿ ಅವರು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ‘ಗೂಂಡಾಗಿರಿ’ಯಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. ಚುನಾವಣಾ ಆಯೋಗ ಮತ್ತು ದೆಹಲಿ ಪೊಲೀಸರು ಎಎಪಿ ನಾಯಕರು ಮತ್ತು ಸದಸ್ಯರನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ಕೇಸರಿ ಪಕ್ಷದ ಕಾರ್ಯಕರ್ತರನ್ನು ರಕ್ಷಿಸುತ್ತಿದ್ದಾರೆ” ಎಂದು ಅತಿಶಿ ಆರೋಪಿಸಿದ್ದಾರೆ.

ಭಾರತದ ಪ್ರಜಾಪ್ರಭುತ್ವ ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಕೈಯಲ್ಲಿದೆ. ಅದು ರಾಷ್ಟ್ರ ರಾಜಧಾನಿಯಲ್ಲಿ ಉಳಿಯುತ್ತದೆಯೇ ಎಂದು ದೇಶ ನೋಡುತ್ತಿದೆ ಎಂದು ಅತಿಶಿ ಹೇಳಿದ್ದಾರೆ.

“ಬಿಜೆಪಿ ಬಹಿರಂಗವಾಗಿ ಗೂಂಡಾಗಿರಿಯಲ್ಲಿ ತೊಡಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ದೆಹಲಿ ಪೊಲೀಸರು ರಕ್ಷಿಸುತ್ತಿದ್ದಾರೆ. ಚುನಾವಣಾ ಆಯೋಗ ದೂರು ನೀಡುತ್ತಿರುವವರ ವಿರುದ್ಧವೇ ಪ್ರಕರಣಗಳನ್ನು ದಾಖಲಿಸುತ್ತಿದೆ” ಎಂದು ಅತಿಶಿ ಆರೋಪಿಸಿದ್ದಾರೆ.

ತನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಮತ್ತು ಅವರ ಕುಟುಂಬ ಸದಸ್ಯರು ಕಲ್ಕಾಜಿಯಲ್ಲಿ ‘ಗೂಂಡಾಗಿರಿ’ಯಲ್ಲಿ ತೊಡಗಿದ್ದಾರೆ ಎಂದು ಅತಿಶಿ ನಿರ್ದಿಷ್ಟವಾಗಿ ಆರೋಪಿಸಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

“ದೆಹಲಿಯ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಒಂದೆಡೆ, ಉಚಿತ ಕಲ್ಯಾಣ ಯೋಜನೆಗಳನ್ನು ನಿಲ್ಲಿಸಲು ಬಯಸುವ ಮತ್ತು ಹಿಂಸಾಚಾರದಲ್ಲಿ ತೊಡಗಿರುವ ಪಕ್ಷವಿದೆ. ಮತ್ತೊಂದೆಡೆ, ಪ್ರತಿ ಮನೆಯೂ ತಿಂಗಳಿಗೆ ₹25,000 ಉಳಿಸುವಂತೆ ಎಎಪಿ ಕೆಲಸ ಮಾಡುತ್ತಿದೆ” ಎಂದು ಅತಿಶಿ ಪ್ರತಿಪಾದಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಫೆಬ್ರವರಿ 5ರಂದು ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಮಹಾರಾಷ್ಟ್ರ | ಎಲ್ಲಾ ಸರ್ಕಾರಿ ಸಂವಹನಗಳಿಗೆ ಮರಾಠಿ ಭಾಷೆ ಬಳಕೆ ಕಡ್ಡಾಯ ಮಾಡಿದ ರಾಜ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...