Homeಕರ್ನಾಟಕಸೌಜನ್ಯ ಪರ ಹೋರಾಟದ ದಿಕ್ಸೂಚಿ ಸಭೆಗೆ ಪೊಲೀಸರಿಂದ ನೋಟಿಸ್: ಸಭೆ ನಡೆದೇ ನಡೆಯುತ್ತದೆ ಎಂದ ಆಯೋಜಕರು

ಸೌಜನ್ಯ ಪರ ಹೋರಾಟದ ದಿಕ್ಸೂಚಿ ಸಭೆಗೆ ಪೊಲೀಸರಿಂದ ನೋಟಿಸ್: ಸಭೆ ನಡೆದೇ ನಡೆಯುತ್ತದೆ ಎಂದ ಆಯೋಜಕರು

- Advertisement -
- Advertisement -

ಅತ್ಯಾಚಾರಕ್ಕೆ ಒಳಗಾಗಿ, ನಂತರ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾಳ ನ್ಯಾಯಕ್ಕೆ ಆಗ್ರಹಿಸಿ ಮತ್ತು ಊಳಿಗಮಾನ್ಯ ದರ್ಪದ ವಿರುದ್ಧ ಆಯೋಜಿಸಿದ್ದ ಸಮಾನ ಮನಸ್ಕ ಸಾಹಿತಿ, ಚಿಂತಕರ ಹೋರಾಟದ ದಿಕ್ಸೂಚಿ ಸಭೆಗೆ ಮತ್ತೆ ಅವಕಾಶ ನಿರಾಕರಿಸಲಾಗಿದೆ.

ನ್ಯಾಯಾಲಯದ ನಿರ್ದೇಶನದ ಕಾರಣ ನೀಡಿ, ಬೆಂಗಳೂರಿನ ಶೇಷಾದ್ರಿಪುರದ ಎಐಟಿಯುಸಿ ಸಭಾಂಗಣದಲ್ಲಿ ಇಂದು (18 ಮಾರ್ಚ್ ಮಂಗಳವಾರ) ಸಂಜೆ 5ಗಂಟೆಗೆ ‘ಸಮಾನ ಮನಸ್ಕರ ವೇದಿಕೆ’ ಆಯೋಜಿಸಿರುವ ಸಭೆಯನ್ನು ನಡೆಸಲು ಅವಕಾಶ ಇಲ್ಲ ಎಂದು ಪೊಲೀಸರು ಆಯೋಜಕರಿಗೆ ನೋಟಿಸ್ ನೀಡಿದ್ದಾರೆ.

ಹೈಕೋರ್ಟ್ ಆದೇಶವನ್ನು ನೋಟಿಸ್‌ನಲ್ಲಿ ಉಲ್ಲೇಖಿಸಿರುವ ಶೇಷಾದ್ರಿಪುರಂ ಠಾಣೆ ಪೊಲೀಸರು, “ಈ ರೀತಿಯ ಪ್ರತಿಭಟನೆಗೆ ಅವಕಾಶವಿಲ್ಲ. ಒಂದು ವೇಳೆ ತಾವು ಕಾನೂನು ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ್ದಲ್ಲಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು”ಎಂದು ತಿಳಿಸಿದ್ದಾರೆ. ಆದರೆ, ನಮಗೆ ಲಭ್ಯವಾದ ಡಿಜಿಟಲ್ ಪೋಸ್ಟರ್‌ನಲ್ಲಿ ದಿಕ್ಸೂಚಿ ಸಭೆ ಎಂದು ಉಲ್ಲೇಖಿಸಲಾಗಿದೆ, ಪ್ರತಿಭಟನೆ ಎಂದಿಲ್ಲ

ಪೊಲೀಸರ ನೋಟಿಸ್‌ನಲ್ಲಿ ಏನಿದೆ?

“ಸಾರಿಗೆ ನೌಕರರ ಹಿತ ರಕ್ಷಣಾ ವೇದಿಕೆಯ ನವೀನ್ ಶೀನಿವಾಸ್, ಕರ್ನಾಟಕ ರಣಧೀರ ಪಡೆಯ ಭೈರಪ್ಪ ಹರೀಶ್ ಕುಮಾರ್, ವಕೀಲರಾದ ಮೈತ್ರಿಯವರ ನೇತೃತ್ವದಲ್ಲಿ ‘ಸೌಜನ್ಯ ನ್ಯಾಯಕ್ಕೆ ಆಗ್ರಹಿಸಿ, ಊಳಿಗೆಮಾನ್ಯ ದರ್ಪದ ವಿರುದ್ಧ – ಸಾಹಿತಿ, ಚಿಂತಕ ಹೋರಾಟ ದಿಕ್ಕೂಚಿ ಸಭೆ ಹಮ್ಮಿಕೊಂಡಿದ್ದಾರೆ. ಪ್ರಸ್ತುತ ಸಭೆಯಲ್ಲಿ ಸಮಾಜದಲ್ಲಿ ಸಂವಿಧಾನ ವಿರೋಧಿ ಚಟುವಟಿಕೆ ಹೆಚ್ಚಾಗುತ್ತಿರುವ ಕುರಿತು ಮತ್ತು ಸೌಜನ್ಯ ಪ್ರಕರಣದ ಕಾನೂನು ಹೋರಾಟದ ರೂಪುರೇಷೆ ಚರ್ಚೆಯಾಗಲಿದೆ. ಈ ಸಭೆಯಲ್ಲಿ 40-50 ಜನರು ಭಾಗವಹಿಸಲಿದ್ದಾರೆ ಎಂಬ ಮಾಹಿತಿಯಿದೆ. ಕರ್ನಾಟಕ ಹೈಕೋರ್ಟ್ ಆದೇಶದಂತೆ ಈ ರೀತಿಯ ಪ್ರತಿಭಟನೆಗೆ ಅವಕಾಶವಿರುವುದಿಲ್ಲ. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ್ದಲ್ಲಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ನೋಟಿಸ್ ನಲ್ಲಿ ತಿಳಿಸಲಾಗಿದೆ.

“ಸಭೆ ನಡೆದೇ ನಡೆಯುತ್ತದೆ”

ಪೊಲೀಸರ ನೋಟಿಸ್‌ ಕುರಿತು ಪ್ರತಿಕ್ರಿಯಿಸಿರುವ ಆಯೋಜಕರು “ಕರ್ನಾಟಕದಲ್ಲಿ ಫ್ಯೂಡಲ್ ಅಧೀನದ ಪೊಲೀಸ್ ವ್ಯವಸ್ಥೆ ಜಾರಿಯಲ್ಲಿದೆಯೇ? ಹೈಕೋರ್ಟ್ ಆದೇಶವನ್ನು ತಿರುಚಿ ಸೌಜನ್ಯ ಪರ ಹೋರಾಟವನ್ನು ನಿಲ್ಲಿಸಲು ಪೊಲೀಸರು ರಾತ್ರಿ ಹಗಲು ಶ್ರಮಿಸುತ್ತಿರುವುದೇಕೆ? ಕಚೇರಿಯೊಳಗೆ ಸಮಾಲೋಚನಾ ಸಭೆ/ದಿಕ್ಸೂಚಿ ಸಭೆ ನಡೆಸುವಂತಿಲ್ಲವೇ? ನಾಳೆ ಮನೆಯೊಳಗೂ ಮನೆ ಮಂದಿಯ ಜೊತೆಗೂ ಸೌಜನ್ಯ ಬಗ್ಗೆ ಮಾತನಾಡಬಾರದು ಎಂದು ಪೊಲೀಸರು ನೋಟಿಸ್ ನೀಡಬಹುದೇ? ಯಾರದ್ದೇ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದರೆ ಪೊಲೀಸರು ಕ್ರಮ ತೆಗೆದುಕೊಳ್ಳಬಹುದೇ ವಿನಃ ಸಮಾಲೋಚನಾ ಸಭೆಗಳ ಮೇಲಲ್ಲ. ಹಾಗಾಗಿ ಕಾನೂನು ತಜ್ಞರು ನಮಗೆ ನೀಡಿದ ವ್ಯಾಖ್ಯಾನದಂತೆ, ದಿನಾಂಕ 18.03.2025 ಮಂಗಳವಾರ ಸಂಜೆ 5 ಗಂಟೆಗೆ ನಡೆಸಲು ಉದ್ದೇಶಿಸಿದ ಸಾಹಿತಿ-ಚಿಂತಕ- ಹೋರಾಟಗಾರರ ದಿಕ್ಸೂಚಿ ಸಭೆ ಸಾಂಗವಾಗಿ ನಡೆಯಲಿದೆ” ಎಂದಿದ್ದಾರೆ.

“ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವಾ?.. ಸರ್ವಾಧಿಕಾರದಲ್ಲಿದ್ದೇವಾ?”

ಎರಡನೇ ಬಾರಿಗೆ ಸಭೆ ನಡೆಸದಂತೆ ನೋಟಿಸ್ ಬಂದಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. “ಈ ಹಿಂದೆ ಇದೇ ವಿಷಯಕ್ಕೆ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಆಯೋಜಿಸಿದ್ದ ಸಮಾಲೋಚನಾ ಸಭೆಯನ್ನೇ ಧರ್ಮಸ್ಥಳದ‌ ವಕೀಲ ಮತ್ತು ಪೊಲೀಸರ ಒತ್ತಡದಿಂದಾಗಿ ರದ್ದುಪಡಿಸಲಾಗಿತ್ತು. ಈಗ ಆಂತರಿಕ ಸಮಾಲೋಚನಾ ಸಭೆಯನ್ನೂ ತಡೆಯಲು ನೋಡುತ್ತಿದ್ದಾರೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆಯೇ ಅಥವಾ ಸರ್ವಾಧಿಕಾರದಲ್ಲಿದ್ದೇವೆಯೇ?” ಎಂದು ಜನರು ಪ್ರಶ್ನಿಸಿದ್ದಾರೆ.

ಕಸಾಪದಲ್ಲಿ ಏರ್ಪಡಿಸಿದ್ದ ಸಭೆಗೆ ಕೊನೆ ಕ್ಷಣದಲ್ಲಿ ಅನುಮತಿ ರದ್ದು 

ಮಾರ್ಚ್ 9ರಂದು ಭಾನುವಾರ ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್‌ನ ಅಕ್ಕಮಹಾದೇವಿ ಸಭಾಂಗಣದಲ್ಲಿ ಸೌಜನ್ಯ ಪರ ಸಮಾಲೋಚನಾ ಸಭೆ ಏರ್ಪಡಿಸಲಾಗಿತ್ತು. ಅದಕ್ಕೆ ಅಂತಿಮ ಕ್ಷಣದಲ್ಲಿ ಅನುಮತಿ ನಿರಾಕರಿಸಿದ ಕಾರಣ, ಸಭೆ ಮುಂದೂಡಿಕೆಯಾಗಿತ್ತು.

ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣವನ್ನು ಬಾಡಿಗೆ ಪಾವತಿಸಿ ಕಾರ್ಯಕ್ರಮಕ್ಕೆ ನಿಗದಿಗೊಳಿಸಲಾಗಿತ್ತು. ಕಾರ್ಯಕ್ರಮದ ಬಗ್ಗೆ ಪರಿಷತ್ ಜೊತೆಗೆ ಚರ್ಚೆ ನಡೆಸಲಾಗಿತ್ತು. ಆದರೆ, ಸಾಹಿತ್ಯ ಪರಿಷತ್‌ಗೆ ಬಂದ ಲೀಗಲ್ ನೋಟಿಸ್ ಮತ್ತು ಪೊಲೀಸ್ ನೋಟಿಸ್ ಆಧಾರದಲ್ಲಿ ಸಭಾಂಗಣವನ್ನು ನೀಡಲಾಗುವುದಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಮಾರ್ಚ್ 8ರ ರಾತ್ರಿ 10.30ಕ್ಕೆ ಸಂಘಟಕರಲ್ಲೋರ್ವರಾದ ಬೈರಪ್ಪ ಹರೀಶ್ ಕುಮಾರ್ ಅವರಿಗೆ ಲಿಖಿತ ನೋಟಿಸ್ ಕಳಿಸಿದ್ದಾರೆ‌ ಈ ಕಾರಣಕ್ಕೆ ಸಭೆ ಮುಂದೂಡಲಾಗಿದೆ ಎನ್ನಲಾಗಿತ್ತು.

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಲೀಗಲ್‌ ನೋಟಿಸ್ 

ಧರ್ಮಸ್ಥಳದ ವಕೀಲರು ಲೀಗಲ್ ನೋಟಿಸ್ ನೀಡಿದ್ದಾರೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಕಸಾಪ ಸಭಾಂಗಣದಲ್ಲಿ ಸೌಜನ್ಯ ಪರ ಸಭೆ ನಡೆಸಲು ಅನುಮತಿ ನಿರಾಕರಿಸಿದ ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ಪರವಾಗಿ ಎಸ್.ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ.

ಬಾಲನ್ ಅವರು ನೀಡಿರುವ ಲೀಗಲ್ ನೋಟಿಸ್‌ನಲ್ಲಿ ”ಧರ್ಮಸ್ಥಳದ ವಕೀಲರ ಹೆಸರಿನಲ್ಲಿ ನೀಡಲಾದ ಲೀಗಲ್ ನೋಟಿಸ್‌ಗೆ ವಿಳಾಸ, ಲೆಟರ್ ಹೆಡ್, ಸಂಪರ್ಕ ಸೇರಿದಂತೆ ಯಾವುದೇ ತಲೆ-ಬಾಲ ಇಲ್ಲವಾಗಿದ್ದು, ಸೌಜನ್ಯ ಪರ ಹೋರಾಟಗಾರರನ್ನು ದಾರಿ ತಪ್ಪಿಸಲು ಹೈಕೋರ್ಟ್ ಆದೇಶವನ್ನು ತಿರುಚಿ ವಂಚನೆ ಮಾಡಲಾಗಿದೆ” ಎಂದು ವಿವರಿಸಲಾಗಿದೆ.

“ತಲೆ ಮತ್ತು ಬಾಲವಿಲ್ಲದ ಲೀಗಲ್ ನೋಟಿಸ್ ಆಧಾರದ ಮೇಲೆ ನೀವು ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಮಾಡಲಾಗಿದ್ದ ಸಭಾಂಗಣದ ಬುಕಿಂಗ್ ಅನ್ನು ಹೇಗೆ ರದ್ದುಗೊಳಿಸಿದ್ದೀರಿ” ಎಂದು ಸೌಜನ್ಯ ಪರ ಹೋರಾಟಗಾರರ ಪರ ವಕೀಲ ಬಾಲನ್ ಪ್ರಶ್ನಿಸಿದ್ದಾರೆ.

ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...