Homeಮುಖಪುಟವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

- Advertisement -
- Advertisement -

ಮೂರು ವರ್ಷಗಳ ಹಿಂದೆ ಜಾರ್ಖಂಡ್ ಪೊಲೀಸರು ವಾಹನವೊಂದನ್ನು ತಡೆದು, ಅದರಿಂದ ಭಾರೀ ಪ್ರಮಾಣದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದರು. 2024ರಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವಾಗ, ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಪೊಲೀಸರು, ಅದನ್ನು ಮಲ್ಖಾನಾದಲ್ಲಿ ಸಂಗ್ರಹಿಸಿಟ್ಟಿದ್ದಾಗ ಇಲಿಗಳು ತಿಂದಿವೆ ಎಂದು ಸಬೂಬು ಹೇಳಿದ್ದರು.

ಹಾಗಾಗಿ, ಪ್ರಕರಣದ ಏಕೈಕ ಆರೋಪಿಯನ್ನು ರಾಂಚಿಯ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು ಖುಲಾಸೆಗೊಳಿಸಿದೆ. ಬರೋಬ್ಬರಿ 200 ಕೆ.ಜಿ ಗಾಂಜಾವನ್ನು ಇಲಿಗಳು ತಿಂದಿವೆ ಎಂಬ ತನಿಖಾಧಿಕಾರಿಯ ಬೇಜವ್ದಾರಿ ಹೇಳಿಕೆ ಸೇರಿದಂತೆ, ತನಿಖೆಯಲ್ಲಿ ದೊಡ್ಡಮಟ್ಟದ ಲೋಪವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಪ್ರಾಸಿಕ್ಯೂಷನ್ ಪ್ರಕಾರ, ರಾಂಚಿಯಿಂದ ರಾಮಗಢಕ್ಕೆ ಗಾಂಜಾ ಸಾಗಿಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ, ರಾಂಚಿ ಜಿಲ್ಲೆಯ ಓರ್ಮಾಂಜಿ ಪೊಲೀಸರು ಜನವರಿ 17, 2022ರಂದು ರಾಷ್ಟ್ರೀಯ ಹೆದ್ದಾರಿ-20ರಲ್ಲಿ ಬಿಳಿ ಬಣ್ಣದ ಬೊಲೆರೊ ವಾಹನವನ್ನು ತಡೆದಿದ್ದರು.

ಪೊಲೀಸರು ವಾಹನವನ್ನು ತಡೆದ ನಂತರ, ಮೂವರು ವ್ಯಕ್ತಿಗಳು ಅದರಿಂದ ಹಾರಿ ಪರಾರಿಯಾಗಲು ಪ್ರಯತ್ನಿಸಿದ್ದರು. ಅವರಲ್ಲಿ ಇಂದ್ರಜೀತ್ ರೈ ಅಲಿಯಾಸ್ ಅನರ್ಜಿತ್ ರೈ ಎಂಬಾತ ಸಿಕ್ಕಿಬಿದ್ದರೆ, ವಿಕಾಸ್ ಚೌರಾಸಿಯಾ ಮತ್ತು ಕುಂದನ್ ರೈ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಪೊಲೀಸರು ವಾಹನವನ್ನು ಶೋಧಿಸಿದಾಗ, ವಿಶೇಷವಾಗಿ ರಚಿಸಲಾದ ಕಂಪಾರ್ಟ್‌ಮೆಂಟ್‌ಗಳಲ್ಲಿ ಸುಮಾರು 170 ಪ್ಯಾಕೆಟ್‌ಗಳಲ್ಲಿ ಪ್ಯಾಕ್ ಮಾಡಲಾದ 200 ಕೆಜಿ ಗಾಂಜಾ ಸಿಕ್ಕಿತ್ತು. ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಈ ಸಂಬಂಧ ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ (ಎನ್‌ಡಿಪಿಎಸ್‌) ಕಾಯ್ದೆಯ ಸೆಕ್ಷನ್ 20(b)(ii)(c) ಮತ್ತು 22(c) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಬಂಧಿತ ಆರೋಪಿ ರೈ ವಿಚಾರಣೆ ಸಮಯದಲ್ಲಿ ಕಸ್ಟಡಿಯಲ್ಲಿದ್ದರು.

ಡಿಸೆಂಬರ್ 19, 2025ರಂದು ರಾಂಚಿಯ ಹೆಚ್ಚುವರಿ ನ್ಯಾಯಾಂಗ ಆಯುಕ್ತ-III-ಹಾಗೂ-ವಿಶೇಷ ನ್ಯಾಯಾಧೀಶ ಆನಂದ್ ಪ್ರಕಾಶ್ ಅವರು ಇಂದ್ರಜೀತ್ ರೈಯನ್ನು ಖುಲಾಸೆಗೊಳಿಸಿದ್ದಾರೆ. ಪ್ರಾಸಿಕ್ಯೂಷನ್ ಆರೋಪಗಳನ್ನು ಅನುಮಾನ ಮೀರಿ ಸಾಬೀತುಪಡಿಸಲು ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಮಾದಕ ದ್ರವ್ಯದ ವಶಪಡಿಸಿಕೊಳ್ಳುವಿಕೆ ಮತ್ತು ನಿರ್ವಹಣೆಯ ಬಗ್ಗೆಯೂ ನ್ಯಾಯಾಲಯ ಅನುಮಾನಗಳನ್ನು ಎತ್ತಿದೆ.

ವಶಪಡಿಸಿಕೊಂಡ ಗಾಂಜಾವನ್ನು ಇಲಿಗಳು ನಾಶಪಡಿಸಿವೆ ಎಂದು ಹೇಳುವ ಠಾಣೆಯ ಡೈರಿ ನಮೂದನ್ನು ಉಲ್ಲೇಖಿಸಿ, ನ್ಯಾಯಾಲಯವು ತನ್ನ ತೀರ್ಪಿನಲ್ಲಿ, “ಇದು ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವ ಮತ್ತು ಪೊಲೀಸರು ಅದನ್ನು ನಿರ್ವಹಿಸುತ್ತಿರುವ ರೀತಿಯ ಮೇಲೆ ಅನುಮಾನವನ್ನು ಮೂಡಿಸುತ್ತದೆ” ಎಂದು ಹೇಳಿದೆ.

ನ್ಯಾಯಾಲಯದ ಆದೇಶದ ಪ್ರಕಾರ, ಗಾಂಜಾ ಪ್ಯಾಕೆಟ್‌ಗಳು ವಿಕಾಶ್ ಚೌರಾಸಿಯಾ ಮತ್ತು ಕುಂದನ್ ರೈ ಅವರಿಗೆ ಸೇರಿದ್ದು ಎಂದು ರೈ ಪೊಲೀಸರಿಗೆ ತಿಳಿಸಿದ್ದು, ಅವರು ಓಡಿ ಹೋಗಿದ್ದಾರೆ. ಅವರ ನಿರ್ದೇಶನದ ಮೇರೆಗೆ ರೈ ಗಾಂಜಾವನ್ನು ಬಿಹಾರದ ಭಕ್ತಿಯಾರ್‌ಪುರಕ್ಕೆ ಸಾಗಿಸುತ್ತಿದ್ದರು.

ಆದಾಗ್ಯೂ, ಏಳು ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು (ಎಲ್ಲರೂ ಪೊಲೀಸ್ ಸಿಬ್ಬಂದಿ) ವಿಚಾರಣೆ ನಡೆಸಿದಾಗ ವಾಹನವನ್ನು ತಡೆಹಿಡಿದ ಸಮಯ, ಮಾದಕವಸ್ತು ವಶಪಡಿಸಿಕೊಂಡ ನಿಖರವಾದ ಸ್ಥಳ, ಆರೋಪಿಯನ್ನು ಯಾರು ಬಂಧಿಸಿದರು ಮತ್ತು ಇತರ ಇಬ್ಬರು ಆರೋಪಿಗಳು ಯಾವ ದಿಕ್ಕಿನಲ್ಲಿ ಪರಾರಿಯಾಗಿದ್ದಾರೆ ಎಂಬಂತಹ ಪ್ರಮುಖ ಅಂಶಗಳ ಕುರಿತು ಅವರ ಸಾಕ್ಷ್ಯಗಳಲ್ಲಿ ಹಲವಾರು ವಿರೋಧಾಭಾಸಗಳು ಕಂಡುಬಂದಿವೆ.

“ಅವರ ಹೇಳಿಕೆಗಳಲ್ಲಿ ಹಲವಾರು ವಿರೋಧಾಭಾಸಗಳಿವೆ… ಇದು ಆಪಾದಿತ ಆರೋಪಿಯನ್ನು ಪ್ರಾಸಿಕ್ಯೂಷನ್ ಹೇಳಿದಂತೆ ಸ್ಥಳದಲ್ಲಿಯೇ ಹಿಡಿಯಲಾಗಿದೆಯೇ ಅಥವಾ ಬೇರೆಡೆಯಿಂದ ಹಿಡಿಯಲಾಗಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕುತ್ತದೆ” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಜನನಿಬಿಡ ರಾಷ್ಟ್ರೀಯ ಹೆದ್ದಾರಿಯಲ್ಲಿ ವಸತಿ ಪ್ರದೇಶದಲ್ಲಿ ಮಾದಕ ವಸ್ತು ವಶಪಡಿಸಿಕೊಂಡರೂ ,ಯಾವುದೇ ಸ್ವತಂತ್ರ ಸಾರ್ವಜನಿಕ ಸಾಕ್ಷಿಯನ್ನು ವಿಚಾರಣೆ ನಡೆಸಲಾಗಿಲ್ಲ ಎಂಬ ಅಂಶವನ್ನು ನ್ಯಾಯಾಲಯವು ಗಮನಿಸಿದೆ.

ಆರೋಪಿ ಮತ್ತು ವಶಪಡಿಸಿಕೊಂಡ ವಾಹನದ ನಡುವೆ ಯಾವುದೇ ಸಂಬಂಧವನ್ನು ಸ್ಥಾಪಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. “ವಾಹನವು ಆರೋಪಿಯೊಂದಿಗೆ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿದೆ ಎಂದು ತೋರಿಸುವ ಯಾವುದೇ ಇತರ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಲಾಗಿಲ್ಲ” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಪ್ರಕರಣದ ತನಿಖಾಧಿಕಾರಿ (ಐಒ) ವಿಚಾರಣೆಯ ಸಮಯದಲ್ಲಿ ವಶಪಡಿಸಿಕೊಂಡಿದ್ದಾರೆ ಎನ್ನಲಾದ ವಾಹನದಲ್ಲಿ ಇಂಜಿನ್‌ ಅಥವಾ ಚಾಸಿಸ್ ಸಂಖ್ಯೆ ಇರಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಈ ಸಂಗತಿಯನ್ನು ಪ್ರಕರಣದ ಡೈರಿಯಲ್ಲಿ ಸರಿಯಾಗಿ ದಾಖಲಿಸಲಾಗಿಲ್ಲ ಅಥವಾ ಸಾರಿಗೆ ಅಧಿಕಾರಿಗಳಿಗೆ ವರದಿ ಮಾಡಲಾಗಿಲ್ಲ, ಇದು ಪ್ರಾಸಿಕ್ಯೂಷನ್ ಪ್ರಕರಣವನ್ನು ಮತ್ತಷ್ಟು ದುರ್ಬಲಗೊಳಿಸಿದೆ ಎಂದು ನ್ಯಾಯಾಲಯ ಹೇಳಿದೆ.

ಪೊಲೀಸ್ ಮಲ್ಖಾನಾದಲ್ಲಿ ಸಂಗ್ರಹಿಸಲಾಗಿದ್ದ ಮಾದಕ ವಸ್ತುಗಳನ್ನು ಇಲಿಗಳು ತಿಂದು ಹಾಕಿವೆ ಎಂದು ಪ್ರಾಸಿಕ್ಯೂಷನ್ ಸ್ವತಃ ಒಪ್ಪಿಕೊಂಡಿದ್ದು, ಇದು ಪ್ರಕರಣಕ್ಕೆ ಪ್ರಮುಖ ಹೊಡೆತವಾಗಿದೆ. ವಿಚಾರಣೆಯ ಸಮಯದಲ್ಲಿ ಈ ವಸ್ತುಗಳನ್ನು ಹಾಜರುಪಡಿಸುವ ಮೊದಲು, ಫೆಬ್ರವರಿ 2024ರಲ್ಲಿ ನ್ಯಾಯಾಲಯದಲ್ಲಿ ಈ ಕುರಿತು ಠಾಣೆಯ ಡೈರಿ ನಮೂದನ್ನು ಸಲ್ಲಿಸಲಾಗಿದೆ.

ಮಾದರಿಗಳನ್ನು ಯಾವಾಗ ತೆಗೆದುಕೊಳ್ಳಲಾಗಿದೆ ಅಥವಾ ಅವುಗಳನ್ನು ಹೇಗೆ ಗುರುತಿಸಲಾಗಿದೆ ಎಂಬುದನ್ನು ಹಲವಾರು ಸಾಕ್ಷಿಗಳು ಸ್ಪಷ್ಟವಾಗಿ ಹೇಳಲು ಸಾಧ್ಯವಾಗದ ಕಾರಣ, ಮಾದರಿ ಸಂಗ್ರಹಣೆ, ಸೀಲಿಂಗ್ ಮತ್ತು ಸಾಕ್ಷ್ಯಗಳನ್ನು ಸಂರಕ್ಷಿಸುವಲ್ಲಿ ಗಂಭೀರ ಅಂತರವನ್ನು ನ್ಯಾಯಾಲಯವು ಎತ್ತಿ ತೋರಿಸಿದೆ.

ಪ್ರಾಸಿಕ್ಯೂಷನ್ ಅನುಮಾನ ಮೀರಿ ತಪ್ಪಿತಸ್ಥರೆಂದು ಸಾಬೀತುಪಡಿಸಲು ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು, ಇಂದ್ರಜೀತ್ ರೈ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ. “ಆರೋಪಿಯನ್ನು ವಶಪಡಿಸಿಕೊಂಡ ವಾಹನದೊಂದಿಗೆ ಪರಸ್ಪರ ಸಂಬಂಧಿಸಲು ಮತ್ತು ಆರೋಪಿಯನ್ನು ಅದೇ ಸ್ಥಳದಲ್ಲಿ ಬಂಧಿಸಲಾಗಿದೆ ಎಂಬ ಅನುಮಾನವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿ ಬಂಧಿತರಾಗಿರದಿದ್ದರೆ, ಅವರನ್ನು ಬಿಡುಗಡೆ ಮಾಡುವಂತೆ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನ್ಯಾಯಯುತ ಮತ್ತು...

ಉತ್ತರಾಖಂಡ: ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ

ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಢ-ಪಿಪಲ್ಕೋಟಿ ಜಲ ವಿದ್ಯುತ್ ಯೋಜನೆಯ ಸುರಂಗದ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು, ಸರಕು ರೈಲಿಗೆ ಡಿಕ್ಕಿ ಹೊಡೆದು ಸುಮಾರು...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30)...

ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ; ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ರದ್ದು

ಧಾರವಾಡದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ವಿವಿ...

ಯುಪಿ: ತಂದೆ ಮತ್ತು ಮಾನಸಿಕ ಅಸ್ವಸ್ಥ ಮಗಳನ್ನು ಐದು ವರ್ಷ ಕೋಣೆಯಲ್ಲಿ ಕೂಡಿ ಹಾಕಿದ ಸೇವಕ ದಂಪತಿ: ತಂದೆ ಸಾವು, ಅಸ್ಥಿಪಂಜರದಂತೆ ಪತ್ತೆಯಾದ ಮಗಳು

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಿವೃತ್ತ ರೈಲ್ವೆ ಉದ್ಯೋಗಿ ಮತ್ತು ಅವರ ಮಾನಸಿಕ ಅಸ್ವಸ್ಥ ಮಗಳನ್ನು ಅವರ ಆರೈಕೆದಾರರು ಐದು ವರ್ಷಗಳ ಕಾಲ ಬಂಧಿಯಾಗಿಟ್ಟು ಚಿತ್ರಹಿಂಸೆ ನೀಡಿ, ಆ ವ್ಯಕ್ತಿಯ ಸಾವಿಗೆ ಕಾರಣವಾದ...

ಈಶಾನ್ಯ ಭಾರತ ನಾಗರಿಕರ ವಿರುದ್ಧದ ಜನಾಂಗೀಯ ಹಿಂಸಾಚಾರ: ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಈಶಾನ್ಯ ರಾಜ್ಯಗಳು ಮತ್ತು ಇತರ ಗಡಿ ಪ್ರದೇಶಗಳ ನಾಗರಿಕರ ಮೇಲಿನ ಜನಾಂಗೀಯ ತಾರತಮ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟುವಲ್ಲಿ, ಪ್ರತಿಕ್ರಿಯಿಸುವಲ್ಲಿ ನಿರಂತರ ಸಾಂವಿಧಾನಿಕ ವೈಫಲ್ಯವನ್ನು ಪರಿಹರಿಸಲು ನ್ಯಾಯಾಂಗ ಹಸ್ತಕ್ಷೇಪವನ್ನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ...

ಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ ಬ್ಯಾನರ್ಜಿ ಎಚ್ಚರಿಕೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡ ನಂತರ ಅಂತಿಮ ಮತದಾರರ ಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೆ, ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಘೇರಾವ್ ಹಾಕುವುದಾಗಿ...

ಬೀದಿ ನಾಯಿ ಎಣಿಕೆ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿಲ್ಲ: ದೆಹಲಿ ಸರ್ಕಾರದ ಸ್ಪಷ್ಟನೆ

ನಗರದಲ್ಲಿ ಬೀದಿ ನಾಯಿಗಳ ಎಣಿಕೆಗೆ ಯಾವುದೇ ಶಾಲಾ ಶಿಕ್ಷಕರನ್ನು ನಿಯೋಜಿಸಲಾಗಿಲ್ಲ ಎಂದು ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ. ಶಿಕ್ಷಕರಿಗೆ ಜನಗಣತಿ ಸಂಬಂಧಿತ ಕರ್ತವ್ಯಗಳಿಗೆ ಮಾತ್ರ ನಿಯೋಜಿಸಲಾಗಿದೆ. ಬೀದಿ ನಾಯಿ ಸಂಬಂಧಿತ ವಿಷಯಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಸಂಸ್ಥೆಗಳಿಗೆ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ ರೇವಣ್ಣ ಖುಲಾಸೆ

ಮನೆ ಕೆಲಸದ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಸೋಮವಾರ (ಡಿ.29) ಆರೋಪ ಮುಕ್ತಗೊಳಿಸಿ ಮಹತ್ವದ ಆದೇಶ ನೀಡಿದೆ. ಕಳೆದ ತಿಂಗಳು...

ಅಧಿಕಾರಕ್ಕೆ ಬಂದರೆ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುತ್ತೇವೆ: ಅಮಿತ್ ಶಾ

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುವುದು ಬಿಜೆಪಿಯ ಮೊದಲ ಕೆಲಸ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ...