Homeಮುಖಪುಟವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

- Advertisement -
- Advertisement -

ಮೂರು ವರ್ಷಗಳ ಹಿಂದೆ ಜಾರ್ಖಂಡ್ ಪೊಲೀಸರು ವಾಹನವೊಂದನ್ನು ತಡೆದು, ಅದರಿಂದ ಭಾರೀ ಪ್ರಮಾಣದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದರು. 2024ರಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವಾಗ, ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಪೊಲೀಸರು, ಅದನ್ನು ಮಲ್ಖಾನಾದಲ್ಲಿ ಸಂಗ್ರಹಿಸಿಟ್ಟಿದ್ದಾಗ ಇಲಿಗಳು ತಿಂದಿವೆ ಎಂದು ಸಬೂಬು ಹೇಳಿದ್ದರು.

ಹಾಗಾಗಿ, ಪ್ರಕರಣದ ಏಕೈಕ ಆರೋಪಿಯನ್ನು ರಾಂಚಿಯ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು ಖುಲಾಸೆಗೊಳಿಸಿದೆ. ಬರೋಬ್ಬರಿ 200 ಕೆ.ಜಿ ಗಾಂಜಾವನ್ನು ಇಲಿಗಳು ತಿಂದಿವೆ ಎಂಬ ತನಿಖಾಧಿಕಾರಿಯ ಬೇಜವ್ದಾರಿ ಹೇಳಿಕೆ ಸೇರಿದಂತೆ, ತನಿಖೆಯಲ್ಲಿ ದೊಡ್ಡಮಟ್ಟದ ಲೋಪವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಪ್ರಾಸಿಕ್ಯೂಷನ್ ಪ್ರಕಾರ, ರಾಂಚಿಯಿಂದ ರಾಮಗಢಕ್ಕೆ ಗಾಂಜಾ ಸಾಗಿಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ, ರಾಂಚಿ ಜಿಲ್ಲೆಯ ಓರ್ಮಾಂಜಿ ಪೊಲೀಸರು ಜನವರಿ 17, 2022ರಂದು ರಾಷ್ಟ್ರೀಯ ಹೆದ್ದಾರಿ-20ರಲ್ಲಿ ಬಿಳಿ ಬಣ್ಣದ ಬೊಲೆರೊ ವಾಹನವನ್ನು ತಡೆದಿದ್ದರು.

ಪೊಲೀಸರು ವಾಹನವನ್ನು ತಡೆದ ನಂತರ, ಮೂವರು ವ್ಯಕ್ತಿಗಳು ಅದರಿಂದ ಹಾರಿ ಪರಾರಿಯಾಗಲು ಪ್ರಯತ್ನಿಸಿದ್ದರು. ಅವರಲ್ಲಿ ಇಂದ್ರಜೀತ್ ರೈ ಅಲಿಯಾಸ್ ಅನರ್ಜಿತ್ ರೈ ಎಂಬಾತ ಸಿಕ್ಕಿಬಿದ್ದರೆ, ವಿಕಾಸ್ ಚೌರಾಸಿಯಾ ಮತ್ತು ಕುಂದನ್ ರೈ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಪೊಲೀಸರು ವಾಹನವನ್ನು ಶೋಧಿಸಿದಾಗ, ವಿಶೇಷವಾಗಿ ರಚಿಸಲಾದ ಕಂಪಾರ್ಟ್‌ಮೆಂಟ್‌ಗಳಲ್ಲಿ ಸುಮಾರು 170 ಪ್ಯಾಕೆಟ್‌ಗಳಲ್ಲಿ ಪ್ಯಾಕ್ ಮಾಡಲಾದ 200 ಕೆಜಿ ಗಾಂಜಾ ಸಿಕ್ಕಿತ್ತು. ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಈ ಸಂಬಂಧ ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ (ಎನ್‌ಡಿಪಿಎಸ್‌) ಕಾಯ್ದೆಯ ಸೆಕ್ಷನ್ 20(b)(ii)(c) ಮತ್ತು 22(c) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಬಂಧಿತ ಆರೋಪಿ ರೈ ವಿಚಾರಣೆ ಸಮಯದಲ್ಲಿ ಕಸ್ಟಡಿಯಲ್ಲಿದ್ದರು.

ಡಿಸೆಂಬರ್ 19, 2025ರಂದು ರಾಂಚಿಯ ಹೆಚ್ಚುವರಿ ನ್ಯಾಯಾಂಗ ಆಯುಕ್ತ-III-ಹಾಗೂ-ವಿಶೇಷ ನ್ಯಾಯಾಧೀಶ ಆನಂದ್ ಪ್ರಕಾಶ್ ಅವರು ಇಂದ್ರಜೀತ್ ರೈಯನ್ನು ಖುಲಾಸೆಗೊಳಿಸಿದ್ದಾರೆ. ಪ್ರಾಸಿಕ್ಯೂಷನ್ ಆರೋಪಗಳನ್ನು ಅನುಮಾನ ಮೀರಿ ಸಾಬೀತುಪಡಿಸಲು ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಮಾದಕ ದ್ರವ್ಯದ ವಶಪಡಿಸಿಕೊಳ್ಳುವಿಕೆ ಮತ್ತು ನಿರ್ವಹಣೆಯ ಬಗ್ಗೆಯೂ ನ್ಯಾಯಾಲಯ ಅನುಮಾನಗಳನ್ನು ಎತ್ತಿದೆ.

ವಶಪಡಿಸಿಕೊಂಡ ಗಾಂಜಾವನ್ನು ಇಲಿಗಳು ನಾಶಪಡಿಸಿವೆ ಎಂದು ಹೇಳುವ ಠಾಣೆಯ ಡೈರಿ ನಮೂದನ್ನು ಉಲ್ಲೇಖಿಸಿ, ನ್ಯಾಯಾಲಯವು ತನ್ನ ತೀರ್ಪಿನಲ್ಲಿ, “ಇದು ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವ ಮತ್ತು ಪೊಲೀಸರು ಅದನ್ನು ನಿರ್ವಹಿಸುತ್ತಿರುವ ರೀತಿಯ ಮೇಲೆ ಅನುಮಾನವನ್ನು ಮೂಡಿಸುತ್ತದೆ” ಎಂದು ಹೇಳಿದೆ.

ನ್ಯಾಯಾಲಯದ ಆದೇಶದ ಪ್ರಕಾರ, ಗಾಂಜಾ ಪ್ಯಾಕೆಟ್‌ಗಳು ವಿಕಾಶ್ ಚೌರಾಸಿಯಾ ಮತ್ತು ಕುಂದನ್ ರೈ ಅವರಿಗೆ ಸೇರಿದ್ದು ಎಂದು ರೈ ಪೊಲೀಸರಿಗೆ ತಿಳಿಸಿದ್ದು, ಅವರು ಓಡಿ ಹೋಗಿದ್ದಾರೆ. ಅವರ ನಿರ್ದೇಶನದ ಮೇರೆಗೆ ರೈ ಗಾಂಜಾವನ್ನು ಬಿಹಾರದ ಭಕ್ತಿಯಾರ್‌ಪುರಕ್ಕೆ ಸಾಗಿಸುತ್ತಿದ್ದರು.

ಆದಾಗ್ಯೂ, ಏಳು ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು (ಎಲ್ಲರೂ ಪೊಲೀಸ್ ಸಿಬ್ಬಂದಿ) ವಿಚಾರಣೆ ನಡೆಸಿದಾಗ ವಾಹನವನ್ನು ತಡೆಹಿಡಿದ ಸಮಯ, ಮಾದಕವಸ್ತು ವಶಪಡಿಸಿಕೊಂಡ ನಿಖರವಾದ ಸ್ಥಳ, ಆರೋಪಿಯನ್ನು ಯಾರು ಬಂಧಿಸಿದರು ಮತ್ತು ಇತರ ಇಬ್ಬರು ಆರೋಪಿಗಳು ಯಾವ ದಿಕ್ಕಿನಲ್ಲಿ ಪರಾರಿಯಾಗಿದ್ದಾರೆ ಎಂಬಂತಹ ಪ್ರಮುಖ ಅಂಶಗಳ ಕುರಿತು ಅವರ ಸಾಕ್ಷ್ಯಗಳಲ್ಲಿ ಹಲವಾರು ವಿರೋಧಾಭಾಸಗಳು ಕಂಡುಬಂದಿವೆ.

“ಅವರ ಹೇಳಿಕೆಗಳಲ್ಲಿ ಹಲವಾರು ವಿರೋಧಾಭಾಸಗಳಿವೆ… ಇದು ಆಪಾದಿತ ಆರೋಪಿಯನ್ನು ಪ್ರಾಸಿಕ್ಯೂಷನ್ ಹೇಳಿದಂತೆ ಸ್ಥಳದಲ್ಲಿಯೇ ಹಿಡಿಯಲಾಗಿದೆಯೇ ಅಥವಾ ಬೇರೆಡೆಯಿಂದ ಹಿಡಿಯಲಾಗಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕುತ್ತದೆ” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಜನನಿಬಿಡ ರಾಷ್ಟ್ರೀಯ ಹೆದ್ದಾರಿಯಲ್ಲಿ ವಸತಿ ಪ್ರದೇಶದಲ್ಲಿ ಮಾದಕ ವಸ್ತು ವಶಪಡಿಸಿಕೊಂಡರೂ ,ಯಾವುದೇ ಸ್ವತಂತ್ರ ಸಾರ್ವಜನಿಕ ಸಾಕ್ಷಿಯನ್ನು ವಿಚಾರಣೆ ನಡೆಸಲಾಗಿಲ್ಲ ಎಂಬ ಅಂಶವನ್ನು ನ್ಯಾಯಾಲಯವು ಗಮನಿಸಿದೆ.

ಆರೋಪಿ ಮತ್ತು ವಶಪಡಿಸಿಕೊಂಡ ವಾಹನದ ನಡುವೆ ಯಾವುದೇ ಸಂಬಂಧವನ್ನು ಸ್ಥಾಪಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. “ವಾಹನವು ಆರೋಪಿಯೊಂದಿಗೆ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿದೆ ಎಂದು ತೋರಿಸುವ ಯಾವುದೇ ಇತರ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಲಾಗಿಲ್ಲ” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಪ್ರಕರಣದ ತನಿಖಾಧಿಕಾರಿ (ಐಒ) ವಿಚಾರಣೆಯ ಸಮಯದಲ್ಲಿ ವಶಪಡಿಸಿಕೊಂಡಿದ್ದಾರೆ ಎನ್ನಲಾದ ವಾಹನದಲ್ಲಿ ಇಂಜಿನ್‌ ಅಥವಾ ಚಾಸಿಸ್ ಸಂಖ್ಯೆ ಇರಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಈ ಸಂಗತಿಯನ್ನು ಪ್ರಕರಣದ ಡೈರಿಯಲ್ಲಿ ಸರಿಯಾಗಿ ದಾಖಲಿಸಲಾಗಿಲ್ಲ ಅಥವಾ ಸಾರಿಗೆ ಅಧಿಕಾರಿಗಳಿಗೆ ವರದಿ ಮಾಡಲಾಗಿಲ್ಲ, ಇದು ಪ್ರಾಸಿಕ್ಯೂಷನ್ ಪ್ರಕರಣವನ್ನು ಮತ್ತಷ್ಟು ದುರ್ಬಲಗೊಳಿಸಿದೆ ಎಂದು ನ್ಯಾಯಾಲಯ ಹೇಳಿದೆ.

ಪೊಲೀಸ್ ಮಲ್ಖಾನಾದಲ್ಲಿ ಸಂಗ್ರಹಿಸಲಾಗಿದ್ದ ಮಾದಕ ವಸ್ತುಗಳನ್ನು ಇಲಿಗಳು ತಿಂದು ಹಾಕಿವೆ ಎಂದು ಪ್ರಾಸಿಕ್ಯೂಷನ್ ಸ್ವತಃ ಒಪ್ಪಿಕೊಂಡಿದ್ದು, ಇದು ಪ್ರಕರಣಕ್ಕೆ ಪ್ರಮುಖ ಹೊಡೆತವಾಗಿದೆ. ವಿಚಾರಣೆಯ ಸಮಯದಲ್ಲಿ ಈ ವಸ್ತುಗಳನ್ನು ಹಾಜರುಪಡಿಸುವ ಮೊದಲು, ಫೆಬ್ರವರಿ 2024ರಲ್ಲಿ ನ್ಯಾಯಾಲಯದಲ್ಲಿ ಈ ಕುರಿತು ಠಾಣೆಯ ಡೈರಿ ನಮೂದನ್ನು ಸಲ್ಲಿಸಲಾಗಿದೆ.

ಮಾದರಿಗಳನ್ನು ಯಾವಾಗ ತೆಗೆದುಕೊಳ್ಳಲಾಗಿದೆ ಅಥವಾ ಅವುಗಳನ್ನು ಹೇಗೆ ಗುರುತಿಸಲಾಗಿದೆ ಎಂಬುದನ್ನು ಹಲವಾರು ಸಾಕ್ಷಿಗಳು ಸ್ಪಷ್ಟವಾಗಿ ಹೇಳಲು ಸಾಧ್ಯವಾಗದ ಕಾರಣ, ಮಾದರಿ ಸಂಗ್ರಹಣೆ, ಸೀಲಿಂಗ್ ಮತ್ತು ಸಾಕ್ಷ್ಯಗಳನ್ನು ಸಂರಕ್ಷಿಸುವಲ್ಲಿ ಗಂಭೀರ ಅಂತರವನ್ನು ನ್ಯಾಯಾಲಯವು ಎತ್ತಿ ತೋರಿಸಿದೆ.

ಪ್ರಾಸಿಕ್ಯೂಷನ್ ಅನುಮಾನ ಮೀರಿ ತಪ್ಪಿತಸ್ಥರೆಂದು ಸಾಬೀತುಪಡಿಸಲು ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು, ಇಂದ್ರಜೀತ್ ರೈ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ. “ಆರೋಪಿಯನ್ನು ವಶಪಡಿಸಿಕೊಂಡ ವಾಹನದೊಂದಿಗೆ ಪರಸ್ಪರ ಸಂಬಂಧಿಸಲು ಮತ್ತು ಆರೋಪಿಯನ್ನು ಅದೇ ಸ್ಥಳದಲ್ಲಿ ಬಂಧಿಸಲಾಗಿದೆ ಎಂಬ ಅನುಮಾನವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿ ಬಂಧಿತರಾಗಿರದಿದ್ದರೆ, ಅವರನ್ನು ಬಿಡುಗಡೆ ಮಾಡುವಂತೆ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು,...

ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ...

ಕರ್ನಾಟಕ: ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಮೇಲಿನ ಅಪರಾಧಗಳು ಶೇ. 37.7 ರಷ್ಟು ಏರಿಕೆ; ಬೆಂಗಳೂರಿನದೇ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಈ ಸಮುದಾಯಗಳ ಮೇಲಿನ ಅಪರಾಧಗಳು ಕಳೆದ ಐದು ವರ್ಷಗಳಲ್ಲಿ ಶೇ. 37.74 ರಷ್ಟು ಹೆಚ್ಚಾಗಿದ್ದು,...

‘ನಿತಿನ್ ನಬಿನ್ ನನ್ನ ಬಾಸ್, ನಾನು ಕೆಲಸಗಾರ..’; ಬಿಜೆಪಿ ನೂತನ ಮುಖ್ಯಸ್ಥರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವಯಸ್ಸಿನ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಪಕ್ಷದ ಪರಂಪರೆಯನ್ನು ಮುಂದುವರಿಸುವ 'ಸಹಸ್ರಮಾನದ' ವ್ಯಕ್ತಿ ಎಂದು ಕರೆದರು. "ಪಕ್ಷದ...