Homeಮುಖಪುಟಥಾಣೆ | ಶಿಕ್ಷಕಿ ಮೇಲೆಯೆ ಅತ್ಯಾಚಾರ ಎಸಗಿದ ಶಿಕ್ಷಣ ಸಂಸ್ಥೆಯ ಸ್ಥಾಪಕ

ಥಾಣೆ | ಶಿಕ್ಷಕಿ ಮೇಲೆಯೆ ಅತ್ಯಾಚಾರ ಎಸಗಿದ ಶಿಕ್ಷಣ ಸಂಸ್ಥೆಯ ಸ್ಥಾಪಕ

- Advertisement -
- Advertisement -

ಮಹಾರಾಷ್ಟ್ರದ ಥಾಣೆಯ ಶಿಕ್ಷಣ ಸಂಸ್ಥೆಯೊಂದರ ಸ್ಥಾಪಕನೊಬ್ಬನನ್ನು ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಆರೋಪಿಯನ್ನು 54 ವರ್ಷದ ರಮೇಶ್ಚಂದ್ರ ಶೋಭನಾಥ್ ಮಿಶ್ರಾ ಎಂದು ಗುರುತಿಸಲಾಗಿದ್ದು, ಆತನನ್ನು ಗುರುವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ ಎಂದು ಶ್ರೀ ನಗರದ ಹಿರಿಯ ಇನ್ಸ್‌ಪೆಕ್ಟರ್ ಗುಲ್ಜರಿಲಾಲ್ ಫಡ್ತಾರೆ ತಿಳಿಸಿದ್ದಾರೆ. ಥಾಣೆ

ಸಂತ್ರಸ್ತೆಯಾಗಿರುವ 42 ವರ್ಷದ ಶಿಕ್ಷಕಿ ನೀಡಿದ ದೂರಿನ ಪ್ರಕಾರ, ಆರೋಪಿ ತನಗೆ ಕೆಲಸ ಕೊಡಿಸುವುದಾಗಿ ತನ್ನಿಂದ 6 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಎಂದು ದೂರಿದ್ದಾರೆ. ಅಲ್ಲದೆ, ಅವರ ಶಿಕ್ಷಣ ಸಂಸ್ಥೆಯ ಉದ್ಯೋಗದಲ್ಲಿ ಮುಂದುವರಿಸಲು 2015 ರಿಂದ ತನ್ನ ಮೇಲೆ ಆರೋಪಿಯು ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಶಿಕ್ಷಕಿ ಆರೋಪಿಸಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಲ್ಲದೆ, ಶಿಕ್ಷಕಿಯನ್ನು ಖಾಯಂ ಮಾಡುವುದಾಗಿಯೂ ಆರೋಪಿ ಭರವಸೆ ನೀಡಿದ್ದ ಎಂದು ಶಿಕ್ಷಕಿ ಪೊಲೀಸರಿಗೆ ತಿಳಿಸಿದ್ದಾರೆ. ಥಾಣೆ

ಇತ್ತಿಚೆಗಷ್ಟೆ, ಕೆಲವು ಶಿಕ್ಷಕರ ದೂರಿನ ಮೇರೆಗೆ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮಿಶ್ರಾ ಸೇರಿದಂತೆ ನಾಲ್ವರು ವ್ಯಕ್ತಿಗಳ ಮೇಲೆ ಇತ್ತೀಚೆಗೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಾಗಿತ್ತು. ಹಾಗಾಗಿ, ಮಹಿಳೆಯು ಪೊಲೀಸರನ್ನು ಸಂಪರ್ಕಿಸಿ ದೂರು ಸಲ್ಲಿಸುವ ಧೈರ್ಯ ಮಾಡಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಇತ್ತೀಚಿನ ದೂರಿಗೆ ಸಂಬಂಧಿಸಿದಂತೆ ಮಿಶ್ರಾ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಮುಂಬೈ | ಅತ್ಯಾಚಾರ ಸಂತ್ರಸ್ತೆಗೆ ಆರೋಪಿ ಶಾಲಾ ಶಿಕ್ಷಕನ ಸಂಬಂಧಿಕರಿಂದ ಬೆದರಿಕೆ ಆರೋಪ

ಮುಂಬೈಯ 14 ವರ್ಷದ ಅತ್ಯಾಚಾರ ಸಂತ್ರಸ್ತೆ ಪೆಲ್ಹಾರ್ ಪೊಲೀಸ್ ಠಾಣೆಯಲ್ಲಿ ಹೊಸ ದೂರು ದಾಖಲಿಸಿದ್ದಾರೆ. ಆರೋಪಿ ಶಿಕ್ಷಕನ ಸಂಬಂಧಿಕರು ಮತ್ತು ಶಾಲಾ ಆಡಳಿತ ಮಂಡಳಿಯ ವಿರುದ್ಧ ಪೋಕ್ಸೋ ಕಾಯ್ದೆಯ ಕಠಿಣ ವಿಭಾಗಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಎಫ್‌ಐಆರ್ ದಾಖಲಾಗಿದಾಗಿನಿಂದ ಅವರು ತನ್ನನ್ನು ಮತ್ತು ತನ್ನ ಕುಟುಂಬವನ್ನು ಕ್ರಿಮಿನಲ್ ರೀತಿಯಲ್ಲಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತೆ ನೀಡಿರುವ ಒಂದು ಪುಟದ ದೂರಿನಲ್ಲಿ, ಆರೋಪಿಯ ಆಪ್ತ ಸಂಬಂಧಿಕರಿಂದ ತನಗೆ ಜೀವ ಬೆದರಿಕೆ ಬರುತ್ತಿದೆ ಎಂದು ಅತ್ಯಾಚಾರ ಸಂತ್ರಸ್ತೆ ಆರೋಪಿಸಿದ್ದಾರೆ. ಮಾರ್ಚ್‌ನಿಂದ ಅವರು (ಶಾಲಾ ಬಾಲಕಿ) ತನ್ನನ್ನು ಅತ್ಯಾಚಾರ ಮಾಡಿದ ಶಿಕ್ಷಕನನ್ನೇ ಮದುವೆಯಾಗುವಂತೆ ಎಂದು ಪದೇ ಪದೇ ಒತ್ತಾಯಿಸುತ್ತಿದ್ದಾರೆ ಎಂದು ಬಾಲಕಿ ಹೇಳಿದ್ದಾರೆ.

“ಅವರು ಪ್ರಭಾವಶಾಲಿಗಳಾಗಿರುವುದರಿಂದ ಮತ್ತು ನಾನು ಒಂಟಿಯಾಗಿರುವುದರಿಂದ ನಾನು ಭಯದಲ್ಲಿದ್ದೇನೆ” ಎಂದು ತನಿಖಾಧಿಕಾರಿಯ ಮುಂದೆ ಸಲ್ಲಿಸಲಾದ ದೂರು ಪತ್ರದಲ್ಲಿ ಸಂತ್ರಸ್ತೆ ಹೇಳಿದ್ದಾರೆ. ನಾನು ತೀವ್ರ ಒತ್ತಡ ಎದುರಿಸುತ್ತಿದ್ದು, ದಯವಿಟ್ಟು ಈ ವಿಷಯದ ಬಗ್ಗೆ ಗಮನ ಕೊಡಿ ಎಂದು ಸೆಪ್ಟೆಂಬರ್ 9 ರಂದು ಪೆಲ್ಹಾರ್ ಪೊಲೀಸ್ ಠಾಣೆಗೆ ಸಲ್ಲಿಸಲಾದ ದೂರಿನಲ್ಲಿ ತಿಳಿಸಲಾಗಿದೆ.

ಕಳೆದ ತಿಂಗಳು ಬಾಲಕಿ ಮಹಾರಾಷ್ಟ್ರದ ನಲಸೋಪರಾ ಪೂರ್ವದ ಪೆಲ್ಹಾರ್ ಪೊಲೀಸ್ ಠಾಣೆಗೆ ತನ್ನ ಮೇಲೆ ನಡೆದ ಅತ್ಯಾಚಾರದ ಬಗ್ಗೆ ದೂರು ನೀಡಿದ್ದರು. ನಂತರ ಆರೋಪಿ ಶಿಕ್ಷಕನನ್ನು ಬಂಧಿಸಲಾತ್ತು. ಆದಾಗ್ಯೂ, ಗಂಭೀರ ಅಪರಾಧದ ಬಗ್ಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಪ್ರಾಂಶುಪಾಲರು ಮತ್ತು ಮೇಲ್ವಿಚಾರಕರು ಸೇರಿದಂತೆ ಶಾಲಾ ಆಡಳಿತ ಮಂಡಳಿಯು ಶಿಕ್ಷಕನ ವಿರುದ್ಧ ಕ್ರಮಕೈಗೊಂಡಿರಲಿಲ್ಲ. ಆದರೆ, ಘಟನೆ ಬೆಳಕಿಗೆ ಬಂದ ನಂತರ, ಪ್ರಾಂಶುಪಾಲರು ಮತ್ತು ಮೇಲ್ವಿಚಾರಕರ ವಿರುದ್ಧವೂ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂಓದಿ:  ಕಾಲ್ತುಳಿತದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಮುಚ್ಚಿಟಿದೆ: ಅಖಿಲೇಶ್ ಯಾದವ್

ಕಾಲ್ತುಳಿತದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಮುಚ್ಚಿಟಿದೆ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...