Homeಮುಖಪುಟಥಾಣೆ | ಶಿಕ್ಷಕಿ ಮೇಲೆಯೆ ಅತ್ಯಾಚಾರ ಎಸಗಿದ ಶಿಕ್ಷಣ ಸಂಸ್ಥೆಯ ಸ್ಥಾಪಕ

ಥಾಣೆ | ಶಿಕ್ಷಕಿ ಮೇಲೆಯೆ ಅತ್ಯಾಚಾರ ಎಸಗಿದ ಶಿಕ್ಷಣ ಸಂಸ್ಥೆಯ ಸ್ಥಾಪಕ

- Advertisement -
- Advertisement -

ಮಹಾರಾಷ್ಟ್ರದ ಥಾಣೆಯ ಶಿಕ್ಷಣ ಸಂಸ್ಥೆಯೊಂದರ ಸ್ಥಾಪಕನೊಬ್ಬನನ್ನು ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಆರೋಪಿಯನ್ನು 54 ವರ್ಷದ ರಮೇಶ್ಚಂದ್ರ ಶೋಭನಾಥ್ ಮಿಶ್ರಾ ಎಂದು ಗುರುತಿಸಲಾಗಿದ್ದು, ಆತನನ್ನು ಗುರುವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ ಎಂದು ಶ್ರೀ ನಗರದ ಹಿರಿಯ ಇನ್ಸ್‌ಪೆಕ್ಟರ್ ಗುಲ್ಜರಿಲಾಲ್ ಫಡ್ತಾರೆ ತಿಳಿಸಿದ್ದಾರೆ. ಥಾಣೆ

ಸಂತ್ರಸ್ತೆಯಾಗಿರುವ 42 ವರ್ಷದ ಶಿಕ್ಷಕಿ ನೀಡಿದ ದೂರಿನ ಪ್ರಕಾರ, ಆರೋಪಿ ತನಗೆ ಕೆಲಸ ಕೊಡಿಸುವುದಾಗಿ ತನ್ನಿಂದ 6 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಎಂದು ದೂರಿದ್ದಾರೆ. ಅಲ್ಲದೆ, ಅವರ ಶಿಕ್ಷಣ ಸಂಸ್ಥೆಯ ಉದ್ಯೋಗದಲ್ಲಿ ಮುಂದುವರಿಸಲು 2015 ರಿಂದ ತನ್ನ ಮೇಲೆ ಆರೋಪಿಯು ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಶಿಕ್ಷಕಿ ಆರೋಪಿಸಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಲ್ಲದೆ, ಶಿಕ್ಷಕಿಯನ್ನು ಖಾಯಂ ಮಾಡುವುದಾಗಿಯೂ ಆರೋಪಿ ಭರವಸೆ ನೀಡಿದ್ದ ಎಂದು ಶಿಕ್ಷಕಿ ಪೊಲೀಸರಿಗೆ ತಿಳಿಸಿದ್ದಾರೆ. ಥಾಣೆ

ಇತ್ತಿಚೆಗಷ್ಟೆ, ಕೆಲವು ಶಿಕ್ಷಕರ ದೂರಿನ ಮೇರೆಗೆ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮಿಶ್ರಾ ಸೇರಿದಂತೆ ನಾಲ್ವರು ವ್ಯಕ್ತಿಗಳ ಮೇಲೆ ಇತ್ತೀಚೆಗೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಾಗಿತ್ತು. ಹಾಗಾಗಿ, ಮಹಿಳೆಯು ಪೊಲೀಸರನ್ನು ಸಂಪರ್ಕಿಸಿ ದೂರು ಸಲ್ಲಿಸುವ ಧೈರ್ಯ ಮಾಡಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಇತ್ತೀಚಿನ ದೂರಿಗೆ ಸಂಬಂಧಿಸಿದಂತೆ ಮಿಶ್ರಾ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಮುಂಬೈ | ಅತ್ಯಾಚಾರ ಸಂತ್ರಸ್ತೆಗೆ ಆರೋಪಿ ಶಾಲಾ ಶಿಕ್ಷಕನ ಸಂಬಂಧಿಕರಿಂದ ಬೆದರಿಕೆ ಆರೋಪ

ಮುಂಬೈಯ 14 ವರ್ಷದ ಅತ್ಯಾಚಾರ ಸಂತ್ರಸ್ತೆ ಪೆಲ್ಹಾರ್ ಪೊಲೀಸ್ ಠಾಣೆಯಲ್ಲಿ ಹೊಸ ದೂರು ದಾಖಲಿಸಿದ್ದಾರೆ. ಆರೋಪಿ ಶಿಕ್ಷಕನ ಸಂಬಂಧಿಕರು ಮತ್ತು ಶಾಲಾ ಆಡಳಿತ ಮಂಡಳಿಯ ವಿರುದ್ಧ ಪೋಕ್ಸೋ ಕಾಯ್ದೆಯ ಕಠಿಣ ವಿಭಾಗಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಎಫ್‌ಐಆರ್ ದಾಖಲಾಗಿದಾಗಿನಿಂದ ಅವರು ತನ್ನನ್ನು ಮತ್ತು ತನ್ನ ಕುಟುಂಬವನ್ನು ಕ್ರಿಮಿನಲ್ ರೀತಿಯಲ್ಲಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತೆ ನೀಡಿರುವ ಒಂದು ಪುಟದ ದೂರಿನಲ್ಲಿ, ಆರೋಪಿಯ ಆಪ್ತ ಸಂಬಂಧಿಕರಿಂದ ತನಗೆ ಜೀವ ಬೆದರಿಕೆ ಬರುತ್ತಿದೆ ಎಂದು ಅತ್ಯಾಚಾರ ಸಂತ್ರಸ್ತೆ ಆರೋಪಿಸಿದ್ದಾರೆ. ಮಾರ್ಚ್‌ನಿಂದ ಅವರು (ಶಾಲಾ ಬಾಲಕಿ) ತನ್ನನ್ನು ಅತ್ಯಾಚಾರ ಮಾಡಿದ ಶಿಕ್ಷಕನನ್ನೇ ಮದುವೆಯಾಗುವಂತೆ ಎಂದು ಪದೇ ಪದೇ ಒತ್ತಾಯಿಸುತ್ತಿದ್ದಾರೆ ಎಂದು ಬಾಲಕಿ ಹೇಳಿದ್ದಾರೆ.

“ಅವರು ಪ್ರಭಾವಶಾಲಿಗಳಾಗಿರುವುದರಿಂದ ಮತ್ತು ನಾನು ಒಂಟಿಯಾಗಿರುವುದರಿಂದ ನಾನು ಭಯದಲ್ಲಿದ್ದೇನೆ” ಎಂದು ತನಿಖಾಧಿಕಾರಿಯ ಮುಂದೆ ಸಲ್ಲಿಸಲಾದ ದೂರು ಪತ್ರದಲ್ಲಿ ಸಂತ್ರಸ್ತೆ ಹೇಳಿದ್ದಾರೆ. ನಾನು ತೀವ್ರ ಒತ್ತಡ ಎದುರಿಸುತ್ತಿದ್ದು, ದಯವಿಟ್ಟು ಈ ವಿಷಯದ ಬಗ್ಗೆ ಗಮನ ಕೊಡಿ ಎಂದು ಸೆಪ್ಟೆಂಬರ್ 9 ರಂದು ಪೆಲ್ಹಾರ್ ಪೊಲೀಸ್ ಠಾಣೆಗೆ ಸಲ್ಲಿಸಲಾದ ದೂರಿನಲ್ಲಿ ತಿಳಿಸಲಾಗಿದೆ.

ಕಳೆದ ತಿಂಗಳು ಬಾಲಕಿ ಮಹಾರಾಷ್ಟ್ರದ ನಲಸೋಪರಾ ಪೂರ್ವದ ಪೆಲ್ಹಾರ್ ಪೊಲೀಸ್ ಠಾಣೆಗೆ ತನ್ನ ಮೇಲೆ ನಡೆದ ಅತ್ಯಾಚಾರದ ಬಗ್ಗೆ ದೂರು ನೀಡಿದ್ದರು. ನಂತರ ಆರೋಪಿ ಶಿಕ್ಷಕನನ್ನು ಬಂಧಿಸಲಾತ್ತು. ಆದಾಗ್ಯೂ, ಗಂಭೀರ ಅಪರಾಧದ ಬಗ್ಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಪ್ರಾಂಶುಪಾಲರು ಮತ್ತು ಮೇಲ್ವಿಚಾರಕರು ಸೇರಿದಂತೆ ಶಾಲಾ ಆಡಳಿತ ಮಂಡಳಿಯು ಶಿಕ್ಷಕನ ವಿರುದ್ಧ ಕ್ರಮಕೈಗೊಂಡಿರಲಿಲ್ಲ. ಆದರೆ, ಘಟನೆ ಬೆಳಕಿಗೆ ಬಂದ ನಂತರ, ಪ್ರಾಂಶುಪಾಲರು ಮತ್ತು ಮೇಲ್ವಿಚಾರಕರ ವಿರುದ್ಧವೂ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂಓದಿ:  ಕಾಲ್ತುಳಿತದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಮುಚ್ಚಿಟಿದೆ: ಅಖಿಲೇಶ್ ಯಾದವ್

ಕಾಲ್ತುಳಿತದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಮುಚ್ಚಿಟಿದೆ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...