Homeಮುಖಪುಟಥಾಣೆ | ಶಿಕ್ಷಕಿ ಮೇಲೆಯೆ ಅತ್ಯಾಚಾರ ಎಸಗಿದ ಶಿಕ್ಷಣ ಸಂಸ್ಥೆಯ ಸ್ಥಾಪಕ

ಥಾಣೆ | ಶಿಕ್ಷಕಿ ಮೇಲೆಯೆ ಅತ್ಯಾಚಾರ ಎಸಗಿದ ಶಿಕ್ಷಣ ಸಂಸ್ಥೆಯ ಸ್ಥಾಪಕ

- Advertisement -
- Advertisement -

ಮಹಾರಾಷ್ಟ್ರದ ಥಾಣೆಯ ಶಿಕ್ಷಣ ಸಂಸ್ಥೆಯೊಂದರ ಸ್ಥಾಪಕನೊಬ್ಬನನ್ನು ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಆರೋಪಿಯನ್ನು 54 ವರ್ಷದ ರಮೇಶ್ಚಂದ್ರ ಶೋಭನಾಥ್ ಮಿಶ್ರಾ ಎಂದು ಗುರುತಿಸಲಾಗಿದ್ದು, ಆತನನ್ನು ಗುರುವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ ಎಂದು ಶ್ರೀ ನಗರದ ಹಿರಿಯ ಇನ್ಸ್‌ಪೆಕ್ಟರ್ ಗುಲ್ಜರಿಲಾಲ್ ಫಡ್ತಾರೆ ತಿಳಿಸಿದ್ದಾರೆ. ಥಾಣೆ

ಸಂತ್ರಸ್ತೆಯಾಗಿರುವ 42 ವರ್ಷದ ಶಿಕ್ಷಕಿ ನೀಡಿದ ದೂರಿನ ಪ್ರಕಾರ, ಆರೋಪಿ ತನಗೆ ಕೆಲಸ ಕೊಡಿಸುವುದಾಗಿ ತನ್ನಿಂದ 6 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಎಂದು ದೂರಿದ್ದಾರೆ. ಅಲ್ಲದೆ, ಅವರ ಶಿಕ್ಷಣ ಸಂಸ್ಥೆಯ ಉದ್ಯೋಗದಲ್ಲಿ ಮುಂದುವರಿಸಲು 2015 ರಿಂದ ತನ್ನ ಮೇಲೆ ಆರೋಪಿಯು ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಶಿಕ್ಷಕಿ ಆರೋಪಿಸಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಲ್ಲದೆ, ಶಿಕ್ಷಕಿಯನ್ನು ಖಾಯಂ ಮಾಡುವುದಾಗಿಯೂ ಆರೋಪಿ ಭರವಸೆ ನೀಡಿದ್ದ ಎಂದು ಶಿಕ್ಷಕಿ ಪೊಲೀಸರಿಗೆ ತಿಳಿಸಿದ್ದಾರೆ. ಥಾಣೆ

ಇತ್ತಿಚೆಗಷ್ಟೆ, ಕೆಲವು ಶಿಕ್ಷಕರ ದೂರಿನ ಮೇರೆಗೆ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮಿಶ್ರಾ ಸೇರಿದಂತೆ ನಾಲ್ವರು ವ್ಯಕ್ತಿಗಳ ಮೇಲೆ ಇತ್ತೀಚೆಗೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಾಗಿತ್ತು. ಹಾಗಾಗಿ, ಮಹಿಳೆಯು ಪೊಲೀಸರನ್ನು ಸಂಪರ್ಕಿಸಿ ದೂರು ಸಲ್ಲಿಸುವ ಧೈರ್ಯ ಮಾಡಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಇತ್ತೀಚಿನ ದೂರಿಗೆ ಸಂಬಂಧಿಸಿದಂತೆ ಮಿಶ್ರಾ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಮುಂಬೈ | ಅತ್ಯಾಚಾರ ಸಂತ್ರಸ್ತೆಗೆ ಆರೋಪಿ ಶಾಲಾ ಶಿಕ್ಷಕನ ಸಂಬಂಧಿಕರಿಂದ ಬೆದರಿಕೆ ಆರೋಪ

ಮುಂಬೈಯ 14 ವರ್ಷದ ಅತ್ಯಾಚಾರ ಸಂತ್ರಸ್ತೆ ಪೆಲ್ಹಾರ್ ಪೊಲೀಸ್ ಠಾಣೆಯಲ್ಲಿ ಹೊಸ ದೂರು ದಾಖಲಿಸಿದ್ದಾರೆ. ಆರೋಪಿ ಶಿಕ್ಷಕನ ಸಂಬಂಧಿಕರು ಮತ್ತು ಶಾಲಾ ಆಡಳಿತ ಮಂಡಳಿಯ ವಿರುದ್ಧ ಪೋಕ್ಸೋ ಕಾಯ್ದೆಯ ಕಠಿಣ ವಿಭಾಗಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಎಫ್‌ಐಆರ್ ದಾಖಲಾಗಿದಾಗಿನಿಂದ ಅವರು ತನ್ನನ್ನು ಮತ್ತು ತನ್ನ ಕುಟುಂಬವನ್ನು ಕ್ರಿಮಿನಲ್ ರೀತಿಯಲ್ಲಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತೆ ನೀಡಿರುವ ಒಂದು ಪುಟದ ದೂರಿನಲ್ಲಿ, ಆರೋಪಿಯ ಆಪ್ತ ಸಂಬಂಧಿಕರಿಂದ ತನಗೆ ಜೀವ ಬೆದರಿಕೆ ಬರುತ್ತಿದೆ ಎಂದು ಅತ್ಯಾಚಾರ ಸಂತ್ರಸ್ತೆ ಆರೋಪಿಸಿದ್ದಾರೆ. ಮಾರ್ಚ್‌ನಿಂದ ಅವರು (ಶಾಲಾ ಬಾಲಕಿ) ತನ್ನನ್ನು ಅತ್ಯಾಚಾರ ಮಾಡಿದ ಶಿಕ್ಷಕನನ್ನೇ ಮದುವೆಯಾಗುವಂತೆ ಎಂದು ಪದೇ ಪದೇ ಒತ್ತಾಯಿಸುತ್ತಿದ್ದಾರೆ ಎಂದು ಬಾಲಕಿ ಹೇಳಿದ್ದಾರೆ.

“ಅವರು ಪ್ರಭಾವಶಾಲಿಗಳಾಗಿರುವುದರಿಂದ ಮತ್ತು ನಾನು ಒಂಟಿಯಾಗಿರುವುದರಿಂದ ನಾನು ಭಯದಲ್ಲಿದ್ದೇನೆ” ಎಂದು ತನಿಖಾಧಿಕಾರಿಯ ಮುಂದೆ ಸಲ್ಲಿಸಲಾದ ದೂರು ಪತ್ರದಲ್ಲಿ ಸಂತ್ರಸ್ತೆ ಹೇಳಿದ್ದಾರೆ. ನಾನು ತೀವ್ರ ಒತ್ತಡ ಎದುರಿಸುತ್ತಿದ್ದು, ದಯವಿಟ್ಟು ಈ ವಿಷಯದ ಬಗ್ಗೆ ಗಮನ ಕೊಡಿ ಎಂದು ಸೆಪ್ಟೆಂಬರ್ 9 ರಂದು ಪೆಲ್ಹಾರ್ ಪೊಲೀಸ್ ಠಾಣೆಗೆ ಸಲ್ಲಿಸಲಾದ ದೂರಿನಲ್ಲಿ ತಿಳಿಸಲಾಗಿದೆ.

ಕಳೆದ ತಿಂಗಳು ಬಾಲಕಿ ಮಹಾರಾಷ್ಟ್ರದ ನಲಸೋಪರಾ ಪೂರ್ವದ ಪೆಲ್ಹಾರ್ ಪೊಲೀಸ್ ಠಾಣೆಗೆ ತನ್ನ ಮೇಲೆ ನಡೆದ ಅತ್ಯಾಚಾರದ ಬಗ್ಗೆ ದೂರು ನೀಡಿದ್ದರು. ನಂತರ ಆರೋಪಿ ಶಿಕ್ಷಕನನ್ನು ಬಂಧಿಸಲಾತ್ತು. ಆದಾಗ್ಯೂ, ಗಂಭೀರ ಅಪರಾಧದ ಬಗ್ಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಪ್ರಾಂಶುಪಾಲರು ಮತ್ತು ಮೇಲ್ವಿಚಾರಕರು ಸೇರಿದಂತೆ ಶಾಲಾ ಆಡಳಿತ ಮಂಡಳಿಯು ಶಿಕ್ಷಕನ ವಿರುದ್ಧ ಕ್ರಮಕೈಗೊಂಡಿರಲಿಲ್ಲ. ಆದರೆ, ಘಟನೆ ಬೆಳಕಿಗೆ ಬಂದ ನಂತರ, ಪ್ರಾಂಶುಪಾಲರು ಮತ್ತು ಮೇಲ್ವಿಚಾರಕರ ವಿರುದ್ಧವೂ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂಓದಿ:  ಕಾಲ್ತುಳಿತದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಮುಚ್ಚಿಟಿದೆ: ಅಖಿಲೇಶ್ ಯಾದವ್

ಕಾಲ್ತುಳಿತದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಮುಚ್ಚಿಟಿದೆ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...