Homeಮುಖಪುಟಥಾಣೆ | ಶಿಕ್ಷಕಿ ಮೇಲೆಯೆ ಅತ್ಯಾಚಾರ ಎಸಗಿದ ಶಿಕ್ಷಣ ಸಂಸ್ಥೆಯ ಸ್ಥಾಪಕ

ಥಾಣೆ | ಶಿಕ್ಷಕಿ ಮೇಲೆಯೆ ಅತ್ಯಾಚಾರ ಎಸಗಿದ ಶಿಕ್ಷಣ ಸಂಸ್ಥೆಯ ಸ್ಥಾಪಕ

- Advertisement -
- Advertisement -

ಮಹಾರಾಷ್ಟ್ರದ ಥಾಣೆಯ ಶಿಕ್ಷಣ ಸಂಸ್ಥೆಯೊಂದರ ಸ್ಥಾಪಕನೊಬ್ಬನನ್ನು ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಆರೋಪಿಯನ್ನು 54 ವರ್ಷದ ರಮೇಶ್ಚಂದ್ರ ಶೋಭನಾಥ್ ಮಿಶ್ರಾ ಎಂದು ಗುರುತಿಸಲಾಗಿದ್ದು, ಆತನನ್ನು ಗುರುವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ ಎಂದು ಶ್ರೀ ನಗರದ ಹಿರಿಯ ಇನ್ಸ್‌ಪೆಕ್ಟರ್ ಗುಲ್ಜರಿಲಾಲ್ ಫಡ್ತಾರೆ ತಿಳಿಸಿದ್ದಾರೆ. ಥಾಣೆ

ಸಂತ್ರಸ್ತೆಯಾಗಿರುವ 42 ವರ್ಷದ ಶಿಕ್ಷಕಿ ನೀಡಿದ ದೂರಿನ ಪ್ರಕಾರ, ಆರೋಪಿ ತನಗೆ ಕೆಲಸ ಕೊಡಿಸುವುದಾಗಿ ತನ್ನಿಂದ 6 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಎಂದು ದೂರಿದ್ದಾರೆ. ಅಲ್ಲದೆ, ಅವರ ಶಿಕ್ಷಣ ಸಂಸ್ಥೆಯ ಉದ್ಯೋಗದಲ್ಲಿ ಮುಂದುವರಿಸಲು 2015 ರಿಂದ ತನ್ನ ಮೇಲೆ ಆರೋಪಿಯು ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಶಿಕ್ಷಕಿ ಆರೋಪಿಸಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಲ್ಲದೆ, ಶಿಕ್ಷಕಿಯನ್ನು ಖಾಯಂ ಮಾಡುವುದಾಗಿಯೂ ಆರೋಪಿ ಭರವಸೆ ನೀಡಿದ್ದ ಎಂದು ಶಿಕ್ಷಕಿ ಪೊಲೀಸರಿಗೆ ತಿಳಿಸಿದ್ದಾರೆ. ಥಾಣೆ

ಇತ್ತಿಚೆಗಷ್ಟೆ, ಕೆಲವು ಶಿಕ್ಷಕರ ದೂರಿನ ಮೇರೆಗೆ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮಿಶ್ರಾ ಸೇರಿದಂತೆ ನಾಲ್ವರು ವ್ಯಕ್ತಿಗಳ ಮೇಲೆ ಇತ್ತೀಚೆಗೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಾಗಿತ್ತು. ಹಾಗಾಗಿ, ಮಹಿಳೆಯು ಪೊಲೀಸರನ್ನು ಸಂಪರ್ಕಿಸಿ ದೂರು ಸಲ್ಲಿಸುವ ಧೈರ್ಯ ಮಾಡಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಇತ್ತೀಚಿನ ದೂರಿಗೆ ಸಂಬಂಧಿಸಿದಂತೆ ಮಿಶ್ರಾ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಮುಂಬೈ | ಅತ್ಯಾಚಾರ ಸಂತ್ರಸ್ತೆಗೆ ಆರೋಪಿ ಶಾಲಾ ಶಿಕ್ಷಕನ ಸಂಬಂಧಿಕರಿಂದ ಬೆದರಿಕೆ ಆರೋಪ

ಮುಂಬೈಯ 14 ವರ್ಷದ ಅತ್ಯಾಚಾರ ಸಂತ್ರಸ್ತೆ ಪೆಲ್ಹಾರ್ ಪೊಲೀಸ್ ಠಾಣೆಯಲ್ಲಿ ಹೊಸ ದೂರು ದಾಖಲಿಸಿದ್ದಾರೆ. ಆರೋಪಿ ಶಿಕ್ಷಕನ ಸಂಬಂಧಿಕರು ಮತ್ತು ಶಾಲಾ ಆಡಳಿತ ಮಂಡಳಿಯ ವಿರುದ್ಧ ಪೋಕ್ಸೋ ಕಾಯ್ದೆಯ ಕಠಿಣ ವಿಭಾಗಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಎಫ್‌ಐಆರ್ ದಾಖಲಾಗಿದಾಗಿನಿಂದ ಅವರು ತನ್ನನ್ನು ಮತ್ತು ತನ್ನ ಕುಟುಂಬವನ್ನು ಕ್ರಿಮಿನಲ್ ರೀತಿಯಲ್ಲಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತೆ ನೀಡಿರುವ ಒಂದು ಪುಟದ ದೂರಿನಲ್ಲಿ, ಆರೋಪಿಯ ಆಪ್ತ ಸಂಬಂಧಿಕರಿಂದ ತನಗೆ ಜೀವ ಬೆದರಿಕೆ ಬರುತ್ತಿದೆ ಎಂದು ಅತ್ಯಾಚಾರ ಸಂತ್ರಸ್ತೆ ಆರೋಪಿಸಿದ್ದಾರೆ. ಮಾರ್ಚ್‌ನಿಂದ ಅವರು (ಶಾಲಾ ಬಾಲಕಿ) ತನ್ನನ್ನು ಅತ್ಯಾಚಾರ ಮಾಡಿದ ಶಿಕ್ಷಕನನ್ನೇ ಮದುವೆಯಾಗುವಂತೆ ಎಂದು ಪದೇ ಪದೇ ಒತ್ತಾಯಿಸುತ್ತಿದ್ದಾರೆ ಎಂದು ಬಾಲಕಿ ಹೇಳಿದ್ದಾರೆ.

“ಅವರು ಪ್ರಭಾವಶಾಲಿಗಳಾಗಿರುವುದರಿಂದ ಮತ್ತು ನಾನು ಒಂಟಿಯಾಗಿರುವುದರಿಂದ ನಾನು ಭಯದಲ್ಲಿದ್ದೇನೆ” ಎಂದು ತನಿಖಾಧಿಕಾರಿಯ ಮುಂದೆ ಸಲ್ಲಿಸಲಾದ ದೂರು ಪತ್ರದಲ್ಲಿ ಸಂತ್ರಸ್ತೆ ಹೇಳಿದ್ದಾರೆ. ನಾನು ತೀವ್ರ ಒತ್ತಡ ಎದುರಿಸುತ್ತಿದ್ದು, ದಯವಿಟ್ಟು ಈ ವಿಷಯದ ಬಗ್ಗೆ ಗಮನ ಕೊಡಿ ಎಂದು ಸೆಪ್ಟೆಂಬರ್ 9 ರಂದು ಪೆಲ್ಹಾರ್ ಪೊಲೀಸ್ ಠಾಣೆಗೆ ಸಲ್ಲಿಸಲಾದ ದೂರಿನಲ್ಲಿ ತಿಳಿಸಲಾಗಿದೆ.

ಕಳೆದ ತಿಂಗಳು ಬಾಲಕಿ ಮಹಾರಾಷ್ಟ್ರದ ನಲಸೋಪರಾ ಪೂರ್ವದ ಪೆಲ್ಹಾರ್ ಪೊಲೀಸ್ ಠಾಣೆಗೆ ತನ್ನ ಮೇಲೆ ನಡೆದ ಅತ್ಯಾಚಾರದ ಬಗ್ಗೆ ದೂರು ನೀಡಿದ್ದರು. ನಂತರ ಆರೋಪಿ ಶಿಕ್ಷಕನನ್ನು ಬಂಧಿಸಲಾತ್ತು. ಆದಾಗ್ಯೂ, ಗಂಭೀರ ಅಪರಾಧದ ಬಗ್ಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಪ್ರಾಂಶುಪಾಲರು ಮತ್ತು ಮೇಲ್ವಿಚಾರಕರು ಸೇರಿದಂತೆ ಶಾಲಾ ಆಡಳಿತ ಮಂಡಳಿಯು ಶಿಕ್ಷಕನ ವಿರುದ್ಧ ಕ್ರಮಕೈಗೊಂಡಿರಲಿಲ್ಲ. ಆದರೆ, ಘಟನೆ ಬೆಳಕಿಗೆ ಬಂದ ನಂತರ, ಪ್ರಾಂಶುಪಾಲರು ಮತ್ತು ಮೇಲ್ವಿಚಾರಕರ ವಿರುದ್ಧವೂ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂಓದಿ:  ಕಾಲ್ತುಳಿತದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಮುಚ್ಚಿಟಿದೆ: ಅಖಿಲೇಶ್ ಯಾದವ್

ಕಾಲ್ತುಳಿತದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಮುಚ್ಚಿಟಿದೆ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...