Homeಮುಖಪುಟಥಾಣೆ | ಶಿಕ್ಷಕಿ ಮೇಲೆಯೆ ಅತ್ಯಾಚಾರ ಎಸಗಿದ ಶಿಕ್ಷಣ ಸಂಸ್ಥೆಯ ಸ್ಥಾಪಕ

ಥಾಣೆ | ಶಿಕ್ಷಕಿ ಮೇಲೆಯೆ ಅತ್ಯಾಚಾರ ಎಸಗಿದ ಶಿಕ್ಷಣ ಸಂಸ್ಥೆಯ ಸ್ಥಾಪಕ

- Advertisement -
- Advertisement -

ಮಹಾರಾಷ್ಟ್ರದ ಥಾಣೆಯ ಶಿಕ್ಷಣ ಸಂಸ್ಥೆಯೊಂದರ ಸ್ಥಾಪಕನೊಬ್ಬನನ್ನು ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಆರೋಪಿಯನ್ನು 54 ವರ್ಷದ ರಮೇಶ್ಚಂದ್ರ ಶೋಭನಾಥ್ ಮಿಶ್ರಾ ಎಂದು ಗುರುತಿಸಲಾಗಿದ್ದು, ಆತನನ್ನು ಗುರುವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ ಎಂದು ಶ್ರೀ ನಗರದ ಹಿರಿಯ ಇನ್ಸ್‌ಪೆಕ್ಟರ್ ಗುಲ್ಜರಿಲಾಲ್ ಫಡ್ತಾರೆ ತಿಳಿಸಿದ್ದಾರೆ. ಥಾಣೆ

ಸಂತ್ರಸ್ತೆಯಾಗಿರುವ 42 ವರ್ಷದ ಶಿಕ್ಷಕಿ ನೀಡಿದ ದೂರಿನ ಪ್ರಕಾರ, ಆರೋಪಿ ತನಗೆ ಕೆಲಸ ಕೊಡಿಸುವುದಾಗಿ ತನ್ನಿಂದ 6 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಎಂದು ದೂರಿದ್ದಾರೆ. ಅಲ್ಲದೆ, ಅವರ ಶಿಕ್ಷಣ ಸಂಸ್ಥೆಯ ಉದ್ಯೋಗದಲ್ಲಿ ಮುಂದುವರಿಸಲು 2015 ರಿಂದ ತನ್ನ ಮೇಲೆ ಆರೋಪಿಯು ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಶಿಕ್ಷಕಿ ಆರೋಪಿಸಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಲ್ಲದೆ, ಶಿಕ್ಷಕಿಯನ್ನು ಖಾಯಂ ಮಾಡುವುದಾಗಿಯೂ ಆರೋಪಿ ಭರವಸೆ ನೀಡಿದ್ದ ಎಂದು ಶಿಕ್ಷಕಿ ಪೊಲೀಸರಿಗೆ ತಿಳಿಸಿದ್ದಾರೆ. ಥಾಣೆ

ಇತ್ತಿಚೆಗಷ್ಟೆ, ಕೆಲವು ಶಿಕ್ಷಕರ ದೂರಿನ ಮೇರೆಗೆ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮಿಶ್ರಾ ಸೇರಿದಂತೆ ನಾಲ್ವರು ವ್ಯಕ್ತಿಗಳ ಮೇಲೆ ಇತ್ತೀಚೆಗೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಾಗಿತ್ತು. ಹಾಗಾಗಿ, ಮಹಿಳೆಯು ಪೊಲೀಸರನ್ನು ಸಂಪರ್ಕಿಸಿ ದೂರು ಸಲ್ಲಿಸುವ ಧೈರ್ಯ ಮಾಡಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಇತ್ತೀಚಿನ ದೂರಿಗೆ ಸಂಬಂಧಿಸಿದಂತೆ ಮಿಶ್ರಾ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಮುಂಬೈ | ಅತ್ಯಾಚಾರ ಸಂತ್ರಸ್ತೆಗೆ ಆರೋಪಿ ಶಾಲಾ ಶಿಕ್ಷಕನ ಸಂಬಂಧಿಕರಿಂದ ಬೆದರಿಕೆ ಆರೋಪ

ಮುಂಬೈಯ 14 ವರ್ಷದ ಅತ್ಯಾಚಾರ ಸಂತ್ರಸ್ತೆ ಪೆಲ್ಹಾರ್ ಪೊಲೀಸ್ ಠಾಣೆಯಲ್ಲಿ ಹೊಸ ದೂರು ದಾಖಲಿಸಿದ್ದಾರೆ. ಆರೋಪಿ ಶಿಕ್ಷಕನ ಸಂಬಂಧಿಕರು ಮತ್ತು ಶಾಲಾ ಆಡಳಿತ ಮಂಡಳಿಯ ವಿರುದ್ಧ ಪೋಕ್ಸೋ ಕಾಯ್ದೆಯ ಕಠಿಣ ವಿಭಾಗಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಎಫ್‌ಐಆರ್ ದಾಖಲಾಗಿದಾಗಿನಿಂದ ಅವರು ತನ್ನನ್ನು ಮತ್ತು ತನ್ನ ಕುಟುಂಬವನ್ನು ಕ್ರಿಮಿನಲ್ ರೀತಿಯಲ್ಲಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತೆ ನೀಡಿರುವ ಒಂದು ಪುಟದ ದೂರಿನಲ್ಲಿ, ಆರೋಪಿಯ ಆಪ್ತ ಸಂಬಂಧಿಕರಿಂದ ತನಗೆ ಜೀವ ಬೆದರಿಕೆ ಬರುತ್ತಿದೆ ಎಂದು ಅತ್ಯಾಚಾರ ಸಂತ್ರಸ್ತೆ ಆರೋಪಿಸಿದ್ದಾರೆ. ಮಾರ್ಚ್‌ನಿಂದ ಅವರು (ಶಾಲಾ ಬಾಲಕಿ) ತನ್ನನ್ನು ಅತ್ಯಾಚಾರ ಮಾಡಿದ ಶಿಕ್ಷಕನನ್ನೇ ಮದುವೆಯಾಗುವಂತೆ ಎಂದು ಪದೇ ಪದೇ ಒತ್ತಾಯಿಸುತ್ತಿದ್ದಾರೆ ಎಂದು ಬಾಲಕಿ ಹೇಳಿದ್ದಾರೆ.

“ಅವರು ಪ್ರಭಾವಶಾಲಿಗಳಾಗಿರುವುದರಿಂದ ಮತ್ತು ನಾನು ಒಂಟಿಯಾಗಿರುವುದರಿಂದ ನಾನು ಭಯದಲ್ಲಿದ್ದೇನೆ” ಎಂದು ತನಿಖಾಧಿಕಾರಿಯ ಮುಂದೆ ಸಲ್ಲಿಸಲಾದ ದೂರು ಪತ್ರದಲ್ಲಿ ಸಂತ್ರಸ್ತೆ ಹೇಳಿದ್ದಾರೆ. ನಾನು ತೀವ್ರ ಒತ್ತಡ ಎದುರಿಸುತ್ತಿದ್ದು, ದಯವಿಟ್ಟು ಈ ವಿಷಯದ ಬಗ್ಗೆ ಗಮನ ಕೊಡಿ ಎಂದು ಸೆಪ್ಟೆಂಬರ್ 9 ರಂದು ಪೆಲ್ಹಾರ್ ಪೊಲೀಸ್ ಠಾಣೆಗೆ ಸಲ್ಲಿಸಲಾದ ದೂರಿನಲ್ಲಿ ತಿಳಿಸಲಾಗಿದೆ.

ಕಳೆದ ತಿಂಗಳು ಬಾಲಕಿ ಮಹಾರಾಷ್ಟ್ರದ ನಲಸೋಪರಾ ಪೂರ್ವದ ಪೆಲ್ಹಾರ್ ಪೊಲೀಸ್ ಠಾಣೆಗೆ ತನ್ನ ಮೇಲೆ ನಡೆದ ಅತ್ಯಾಚಾರದ ಬಗ್ಗೆ ದೂರು ನೀಡಿದ್ದರು. ನಂತರ ಆರೋಪಿ ಶಿಕ್ಷಕನನ್ನು ಬಂಧಿಸಲಾತ್ತು. ಆದಾಗ್ಯೂ, ಗಂಭೀರ ಅಪರಾಧದ ಬಗ್ಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಪ್ರಾಂಶುಪಾಲರು ಮತ್ತು ಮೇಲ್ವಿಚಾರಕರು ಸೇರಿದಂತೆ ಶಾಲಾ ಆಡಳಿತ ಮಂಡಳಿಯು ಶಿಕ್ಷಕನ ವಿರುದ್ಧ ಕ್ರಮಕೈಗೊಂಡಿರಲಿಲ್ಲ. ಆದರೆ, ಘಟನೆ ಬೆಳಕಿಗೆ ಬಂದ ನಂತರ, ಪ್ರಾಂಶುಪಾಲರು ಮತ್ತು ಮೇಲ್ವಿಚಾರಕರ ವಿರುದ್ಧವೂ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂಓದಿ:  ಕಾಲ್ತುಳಿತದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಮುಚ್ಚಿಟಿದೆ: ಅಖಿಲೇಶ್ ಯಾದವ್

ಕಾಲ್ತುಳಿತದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಮುಚ್ಚಿಟಿದೆ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...