Homeಮುಖಪುಟಲಾರೆನ್ಸ್ ಬಿಷ್ಣೋಯ್ ಟಿವಿ ಸಂದರ್ಶನಕ್ಕೆ ಪೊಲೀಸ್ ಠಾಣೆಯನ್ನು ಸ್ಟುಡಿಯೋ ರೀತಿ ಬಳಸಲಾಗಿತ್ತು : ಹೈಕೋರ್ಟ್

ಲಾರೆನ್ಸ್ ಬಿಷ್ಣೋಯ್ ಟಿವಿ ಸಂದರ್ಶನಕ್ಕೆ ಪೊಲೀಸ್ ಠಾಣೆಯನ್ನು ಸ್ಟುಡಿಯೋ ರೀತಿ ಬಳಸಲಾಗಿತ್ತು : ಹೈಕೋರ್ಟ್

- Advertisement -
- Advertisement -

ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಭಾಗವಹಿಸಲು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿಗೆ ಪಂಜಾಬ್ ಪೊಲೀಸರು ಸ್ಟುಡಿಯೋ ರೀತಿಯ ವ್ಯವಸ್ಥೆ ಮಾಡಿಕೊಟ್ಟಿದ್ದರು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಹೇಳಿದೆ.

ಬಿಷ್ಣೋಯ್ ಟಿವಿ ವಾಹಿನಿಗೆ ಸಂದರ್ಶನ ನೀಡಿದ್ದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರದ್ದತಿ ವರದಿಯನ್ನು ಸಲ್ಲಿಸುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನಿರ್ಧಾರವನ್ನು ಪ್ರಶ್ನಿಸುವಾಗ ನ್ಯಾಯಮೂರ್ತಿಗಳಾದ ಅನುಪಿಂದರ್ ಸಿಂಗ್ ಗ್ರೆವಾಲ್ ಮತ್ತು ಲಪಿತಾ ಬ್ಯಾನರ್ಜಿ ಅವರ ಪೀಠವು ಈ ಹೇಳಿಕೆ ನೀಡಿದೆ.

ಪಂಜಾಬಿ ಗಾಯಕ ಶುಭದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಬಿಷ್ಣೋಯ್ ಶಂಕಿತ ಆರೋಪಿಯಾಗಿದ್ದಾನೆ. ಆತನ ಸಂದರ್ಶನವನ್ನು ಮಾರ್ಚ್ 2023ರಲ್ಲಿ ಎಬಿಪಿ ನ್ಯೂಸ್‌ ಪ್ರಸಾರ ಮಾಡಿತ್ತು. ಅದರಲ್ಲಿ ಆತ ಮೂಸೆವಾಲಾ ಕೊಲೆಯ ಸಂಚಿನ ಬಗ್ಗೆ ಗೊತ್ತು ಎಂದಿದ್ದ.

ಪಂಜಾಬ್ ಪೊಲೀಸ್‌ನ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಖರಾರ್‌ನ ಸಿಐಎ ಸಿಬ್ಬಂದಿ ಆವರಣದಲ್ಲಿ ಸಂದರ್ಶನ ನಡೆದಿದೆ ಎಂದು ಕೋರ್ಟ್ ಹೇಳಿದೆ.

ಪಂಜಾಬ್ ರಾಜ್ಯ ಮಾನವ ಹಕ್ಕುಗಳ ಆಯೋಗದ ವಿಶೇಷ ಡಿಜಿಪಿ ಪ್ರಬೋಧ್ ಕುಮಾರ್ ಅವರು ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣ ಸೇರಿದಂತೆ ಇತರ ಅಪರಾಧಗಳನ್ನು ಪರಿಶೀಲಿಸುವ ಅಧಿಕಾರವನ್ನು ಎಸ್‌ಐಟಿ ಹೊಂದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಆದರೆ, ಇದನ್ನು ಒಪ್ಪದ ಕೋರ್ಟ್, ಪ್ರಕರಣದ ಕುರಿತು ಹೆಚ್ಚಿನ ತನಿಖೆಗೆ ಆದೇಶಿಸಿದೆ.

ಲಾರೆನ್ಸ್ ಬಿಷ್ಣೋಯ್ ಸಂದರ್ಶನಕ್ಕೆ ಅವಕಾಶ ಮಾಡಿಕೊಟ್ಟ ಕಾರಣಕ್ಕೆ ಇಬ್ಬರು ಗೆಜೆಟೆಡ್ ಅಧಿಕಾರಿಗಳು ಸೇರಿದಂತೆ ಏಳು ಮಂದಿ ಪಂಜಾಬ್ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. 8 ಅಧಿಕಾರಿಗಳ ವಿರುದ್ಧ ಇಲಾಖಾ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಈ ಹಿಂದೆ ತಿಳಿಸಲಾಗಿತ್ತು.

ಸಿಐಎ ಖರಾರ್ ಪೊಲೀಸ್ ಠಾಣೆಯ ಆಗಿನ ಪ್ರಭಾರಿ ಅಧಿಕಾರಿಯಾಗಿದ್ದ ಇನ್‌ಸ್ಪೆಕ್ಟರ್ ಶಿವಕುಮಾರ್ ಅವರನ್ನು ಸೇವೆಯಲ್ಲಿ ಮುಂದುವರೆಸಲಾಗಿದೆ ಎಂದೂ ಹೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾಯಾಲಯ, ಸಂದರ್ಶನಕ್ಕೆ ಅನುಕೂಲ ಮಾಡಿಕೊಟ್ಟ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೆಳಹಂತದ ಅಧಿಕಾರಿಗಳ ಮೇಲೆ ಗದಾಪ್ರಹಾರ ಮಾಡಿ ಹರಕೆ ತೀರಿಸಬಾರದು ಎಂದಿತ್ತು.

ಪೊಲೀಸರ ಅಧಿಕೃತ ಪ್ರತಿಕ್ರಿಯೆಯು ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದ ಕಾರಣ, ಈ ಬಗ್ಗೆ ಅಫಿಡವಿಟ್ ಸಲ್ಲಿಸಲು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನ್ಯಾಯಾಲಯ ಹೇಳಿದೆ. ಸಂದರ್ಶನವು ಪಂಜಾಬ್‌ನ ಯಾವುದೇ ಜೈಲಿನಲ್ಲಿ ನಡೆದಿಲ್ಲ ಎಂದು ಹಿಂದಿನ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯನ್ನು ವಿವರಿಸಲು ಡಿಜಿಪಿಯನ್ನು ಕೇಳಿದೆ. ಇದೇ ವೇಳೆ ಇಂಟರ್‌ನೆಟ್‌ನಲ್ಲಿ ಸಂದರ್ಶನ ಹರಿದಾಡುತ್ತಿದ್ದರೆ ಅದನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಕೋರ್ಟ್‌ ಆದೇಶಿಸಿದೆ.

ಇದನ್ನೂ ಓದಿ : ಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...