Homeಮುಖಪುಟಲಾರೆನ್ಸ್ ಬಿಷ್ಣೋಯ್ ಟಿವಿ ಸಂದರ್ಶನಕ್ಕೆ ಪೊಲೀಸ್ ಠಾಣೆಯನ್ನು ಸ್ಟುಡಿಯೋ ರೀತಿ ಬಳಸಲಾಗಿತ್ತು : ಹೈಕೋರ್ಟ್

ಲಾರೆನ್ಸ್ ಬಿಷ್ಣೋಯ್ ಟಿವಿ ಸಂದರ್ಶನಕ್ಕೆ ಪೊಲೀಸ್ ಠಾಣೆಯನ್ನು ಸ್ಟುಡಿಯೋ ರೀತಿ ಬಳಸಲಾಗಿತ್ತು : ಹೈಕೋರ್ಟ್

- Advertisement -
- Advertisement -

ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಭಾಗವಹಿಸಲು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿಗೆ ಪಂಜಾಬ್ ಪೊಲೀಸರು ಸ್ಟುಡಿಯೋ ರೀತಿಯ ವ್ಯವಸ್ಥೆ ಮಾಡಿಕೊಟ್ಟಿದ್ದರು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಹೇಳಿದೆ.

ಬಿಷ್ಣೋಯ್ ಟಿವಿ ವಾಹಿನಿಗೆ ಸಂದರ್ಶನ ನೀಡಿದ್ದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರದ್ದತಿ ವರದಿಯನ್ನು ಸಲ್ಲಿಸುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನಿರ್ಧಾರವನ್ನು ಪ್ರಶ್ನಿಸುವಾಗ ನ್ಯಾಯಮೂರ್ತಿಗಳಾದ ಅನುಪಿಂದರ್ ಸಿಂಗ್ ಗ್ರೆವಾಲ್ ಮತ್ತು ಲಪಿತಾ ಬ್ಯಾನರ್ಜಿ ಅವರ ಪೀಠವು ಈ ಹೇಳಿಕೆ ನೀಡಿದೆ.

ಪಂಜಾಬಿ ಗಾಯಕ ಶುಭದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಬಿಷ್ಣೋಯ್ ಶಂಕಿತ ಆರೋಪಿಯಾಗಿದ್ದಾನೆ. ಆತನ ಸಂದರ್ಶನವನ್ನು ಮಾರ್ಚ್ 2023ರಲ್ಲಿ ಎಬಿಪಿ ನ್ಯೂಸ್‌ ಪ್ರಸಾರ ಮಾಡಿತ್ತು. ಅದರಲ್ಲಿ ಆತ ಮೂಸೆವಾಲಾ ಕೊಲೆಯ ಸಂಚಿನ ಬಗ್ಗೆ ಗೊತ್ತು ಎಂದಿದ್ದ.

ಪಂಜಾಬ್ ಪೊಲೀಸ್‌ನ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಖರಾರ್‌ನ ಸಿಐಎ ಸಿಬ್ಬಂದಿ ಆವರಣದಲ್ಲಿ ಸಂದರ್ಶನ ನಡೆದಿದೆ ಎಂದು ಕೋರ್ಟ್ ಹೇಳಿದೆ.

ಪಂಜಾಬ್ ರಾಜ್ಯ ಮಾನವ ಹಕ್ಕುಗಳ ಆಯೋಗದ ವಿಶೇಷ ಡಿಜಿಪಿ ಪ್ರಬೋಧ್ ಕುಮಾರ್ ಅವರು ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣ ಸೇರಿದಂತೆ ಇತರ ಅಪರಾಧಗಳನ್ನು ಪರಿಶೀಲಿಸುವ ಅಧಿಕಾರವನ್ನು ಎಸ್‌ಐಟಿ ಹೊಂದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಆದರೆ, ಇದನ್ನು ಒಪ್ಪದ ಕೋರ್ಟ್, ಪ್ರಕರಣದ ಕುರಿತು ಹೆಚ್ಚಿನ ತನಿಖೆಗೆ ಆದೇಶಿಸಿದೆ.

ಲಾರೆನ್ಸ್ ಬಿಷ್ಣೋಯ್ ಸಂದರ್ಶನಕ್ಕೆ ಅವಕಾಶ ಮಾಡಿಕೊಟ್ಟ ಕಾರಣಕ್ಕೆ ಇಬ್ಬರು ಗೆಜೆಟೆಡ್ ಅಧಿಕಾರಿಗಳು ಸೇರಿದಂತೆ ಏಳು ಮಂದಿ ಪಂಜಾಬ್ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. 8 ಅಧಿಕಾರಿಗಳ ವಿರುದ್ಧ ಇಲಾಖಾ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಈ ಹಿಂದೆ ತಿಳಿಸಲಾಗಿತ್ತು.

ಸಿಐಎ ಖರಾರ್ ಪೊಲೀಸ್ ಠಾಣೆಯ ಆಗಿನ ಪ್ರಭಾರಿ ಅಧಿಕಾರಿಯಾಗಿದ್ದ ಇನ್‌ಸ್ಪೆಕ್ಟರ್ ಶಿವಕುಮಾರ್ ಅವರನ್ನು ಸೇವೆಯಲ್ಲಿ ಮುಂದುವರೆಸಲಾಗಿದೆ ಎಂದೂ ಹೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾಯಾಲಯ, ಸಂದರ್ಶನಕ್ಕೆ ಅನುಕೂಲ ಮಾಡಿಕೊಟ್ಟ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೆಳಹಂತದ ಅಧಿಕಾರಿಗಳ ಮೇಲೆ ಗದಾಪ್ರಹಾರ ಮಾಡಿ ಹರಕೆ ತೀರಿಸಬಾರದು ಎಂದಿತ್ತು.

ಪೊಲೀಸರ ಅಧಿಕೃತ ಪ್ರತಿಕ್ರಿಯೆಯು ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದ ಕಾರಣ, ಈ ಬಗ್ಗೆ ಅಫಿಡವಿಟ್ ಸಲ್ಲಿಸಲು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನ್ಯಾಯಾಲಯ ಹೇಳಿದೆ. ಸಂದರ್ಶನವು ಪಂಜಾಬ್‌ನ ಯಾವುದೇ ಜೈಲಿನಲ್ಲಿ ನಡೆದಿಲ್ಲ ಎಂದು ಹಿಂದಿನ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯನ್ನು ವಿವರಿಸಲು ಡಿಜಿಪಿಯನ್ನು ಕೇಳಿದೆ. ಇದೇ ವೇಳೆ ಇಂಟರ್‌ನೆಟ್‌ನಲ್ಲಿ ಸಂದರ್ಶನ ಹರಿದಾಡುತ್ತಿದ್ದರೆ ಅದನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಕೋರ್ಟ್‌ ಆದೇಶಿಸಿದೆ.

ಇದನ್ನೂ ಓದಿ : ಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...