Homeಚಳವಳಿಬೆಳಗಾವಿಯಲ್ಲಿ ಜನ-ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇ‌ಡ್ ತಡೆದ ಪೊಲೀಸರು: ಟ್ರ್ಯಾಕ್ಟರ್‌ಗಳನ್ನು ಸೀಜ್ ಮಾಡುವುದಾಗಿ ಬೆದರಿಕೆ

ಬೆಳಗಾವಿಯಲ್ಲಿ ಜನ-ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇ‌ಡ್ ತಡೆದ ಪೊಲೀಸರು: ಟ್ರ್ಯಾಕ್ಟರ್‌ಗಳನ್ನು ಸೀಜ್ ಮಾಡುವುದಾಗಿ ಬೆದರಿಕೆ

ರಾಜ್ಯದ ಐದು ದಿಕ್ಕುಗಳಿಂದಲೂ ಬರುವ ಟ್ರಾಕ್ಟರ್‌ಗಳು ಜನವರಿ 26 ರಂದು ಬೆಂಗಳೂರು ನಗರವನ್ನು ಪ್ರವೇಶಿಸಿ ಪರೇಡ್ ನಡೆಸಲಾಗುತ್ತದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

- Advertisement -
- Advertisement -

ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವವನ್ನು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಟ್ರ್ಯಾಕ್ಟರ್‌ ಪರೇ‌ಡ್ ನಡೆಸುವ ಮೂಲಕ ವಿಭಿನ್ನವಾಗಿ ಹೋರಾಟ ಮುಂದುವರೆಸಲು ದೇಶಾದ್ಯಂತ ರೈತ ಸಂಘಟನೆಗಳು ತೀರ್ಮಾನಿಸಿವೆ. ಇದರ ಭಾಗವಾಗಿ ಇಂದು ಬೆಳಗಾವಿಯಲ್ಲಿ ಆರಂಭವಾಗಬೇಕಿದ್ದ ಟ್ಯ್ರಾಕ್ಟರ್ ರ್ಯಾಲಿಗೆ ಪೊಲೀಸ್ ಮತ್ತು ಆರ್‌ಟಿಓ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ. ತಮ್ಮ ಆದೇಶ ಉಲ್ಲಂಘಿಸಿ ಪರೇಡ್ ನಡೆಸುವ ಟ್ಯ್ರಾಕ್ಟರ್‌ಗಳನ್ನು ಸೀಜ್ ಮಾಡುವುದಾಗಿ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಜ.26 ರಂದು ಬೆಂಗಳೂರಿನಲ್ಲಿ ಜನ-ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇ‌ಡ್ ನಡೆಸಲು ನೂರಾರು ಸಂಘಟನೆಗಳು ತೀರ್ಮಾನಿಸಿವೆ. ಅದರ ಭಾಗವಾಗಿ ರಾಜ್ಯದ ಹಲವು ಭಾಗಗಳಿಂದ ರೈತರು ಟ್ರ್ಯಾಕ್ಟರ್‌ಗಳ ಮೂಲಕ ಹಲವು ಜಿಲ್ಲೆಗಳಲ್ಲಿ ರ್ಯಾಲಿ ನಡೆಸಿ ಜನವರಿ 26 ರಂದು ಬೆಂಗಳೂರು ತಲುಪಲು ನಿರ್ಧರಿಸಿದ್ದರು. ಅದರಂತೆ ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಟ್ಯ್ರಾಕ್ಟರ್‌ ರ್ಯಾಲಿ ಆರಂಭವಾಗಿದ್ದು, ಹಿರಿಯ ಹೋರಾಟಗಾರ ಸಿರಿಮನೆ ನಾಗರಾಜ್ ಜಾಥಾಗೆ ಚಾಲನೆ ನೀಡಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆ ತಲುಪಿ ನಂತರ ಧಾರವಾಡದ ಮೂಲಕ ಸಂಜೆಗೆ ಹುಬ್ಬಳ್ಳಿ ತಲುಪಲು ಯೋಜಿಸಲಾಗಿತ್ತು. ಆದರೆ ಇದನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಆರ್‌ಟಿಓ ಅಧಿಕಾರಿಗಳೊಂದಿಗೆ ಶಾಮೀಲಾಗಿದ್ದು ರೈತರ ವಾಹನಗಳನ್ನು ವಶಕ್ಕೆ ಪಡೆಯುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ರೈತರು ದೂರಿದ್ದಾರೆ.

“ನಿಮ್ಮ ಟ್ರ್ಯಾಕ್ಟರ್‌ಗಳಿಗೆ ಇನ್ಶೂರೆನ್ಸ್ ಕಟ್ಟಿಲ್ಲ ಎಂಬುದನ್ನು ಮರೆಯಬೇಡಿ. ನಾವು ಹೋಗಲಿ ಎಂದು ಸುಮ್ಮನಿದ್ದೇವೆ. ಈಗ ನೀವು ರ್ಯಾಲಿ ಹೊರಟರೆ ಖಂಡಿತ ನಿಮ್ಮ ವಾಹನಗಳನ್ನು ಸೀಜ್‌ ಮಾಡುವುದಾಗಿ ಆರ್‌ಟಿಓ ಅಧಿಕಾರಿಗಳು ಬೆದರಿಸುತ್ತಿದ್ದಾರೆ. ಇದಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಆದೇಶ ನೀಡಿದ್ದಾರೆ” ಎಂದು ರೈತರು ತಿಳಿಸಿದ್ದಾರೆ.

ನಾವು ಈ ಕುರಿತು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಡನೆ ಮಾತನಾಡಲು ಕರೆ ಮಾಡುತ್ತಿದ್ದೇವೆ. ಆದರೆ ನಮ್ಮ ಯಾವುದೇ ಕರೆಗಳನ್ನು ಅವರು ಸ್ವೀಕರಿಸುತ್ತಿಲ್ಲ. ಬೇಕಂತಲೇ ಅವು ನಮ್ಮ ಕರೆ ಸ್ವೀಕರಿಸದೇ ಈ ನ್ಯಾಯಯುತ ರೈತ ಹೋರಾಟ ಹಣಿಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸಫಲವಾಗುವುದಿಲ್ಲ. ನಮ್ಮ ಟ್ಯ್ರಾಕ್ಟರ್ ರ್ಯಾಲಿಗೆ ಅನುಮತಿ ನೀಡದಿದ್ದರೆ ಸರ್ಕಾರ ತೀವ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಡಗು ಮೈಸೂರು ಕಡೆಯಿಂದ, ಹೈದರಾಬಾದ್ ಕರ್ನಾಟಕ ಕಡೆಯಿಂದ, ಕೋಲಾರ- ಚಿಕ್ಕಬಳ್ಳಾಪುರದಿಂದ, ಹಾಸನ-ಚಿಕ್ಕಮಗಳೂರು ಕಡೆಯಿಂದ ಸೇರಿದಂತೆ ರಾಜ್ಯದ ಐದು ದಿಕ್ಕುಗಳಿಂದಲೂ ಬರುವ ಟ್ರಾಕ್ಟರ್‌ಗಳು ಜನವರಿ 26 ರಂದು ಬೆಂಗಳೂರು ನಗರವನ್ನು ಪ್ರವೇಶಿಸಿ ಪರೇಡ್ ನಡೆಸಲಾಗುತ್ತದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...