Homeಚಳವಳಿಬೆಳಗಾವಿಯಲ್ಲಿ ಜನ-ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇ‌ಡ್ ತಡೆದ ಪೊಲೀಸರು: ಟ್ರ್ಯಾಕ್ಟರ್‌ಗಳನ್ನು ಸೀಜ್ ಮಾಡುವುದಾಗಿ ಬೆದರಿಕೆ

ಬೆಳಗಾವಿಯಲ್ಲಿ ಜನ-ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇ‌ಡ್ ತಡೆದ ಪೊಲೀಸರು: ಟ್ರ್ಯಾಕ್ಟರ್‌ಗಳನ್ನು ಸೀಜ್ ಮಾಡುವುದಾಗಿ ಬೆದರಿಕೆ

ರಾಜ್ಯದ ಐದು ದಿಕ್ಕುಗಳಿಂದಲೂ ಬರುವ ಟ್ರಾಕ್ಟರ್‌ಗಳು ಜನವರಿ 26 ರಂದು ಬೆಂಗಳೂರು ನಗರವನ್ನು ಪ್ರವೇಶಿಸಿ ಪರೇಡ್ ನಡೆಸಲಾಗುತ್ತದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

- Advertisement -
- Advertisement -

ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವವನ್ನು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಟ್ರ್ಯಾಕ್ಟರ್‌ ಪರೇ‌ಡ್ ನಡೆಸುವ ಮೂಲಕ ವಿಭಿನ್ನವಾಗಿ ಹೋರಾಟ ಮುಂದುವರೆಸಲು ದೇಶಾದ್ಯಂತ ರೈತ ಸಂಘಟನೆಗಳು ತೀರ್ಮಾನಿಸಿವೆ. ಇದರ ಭಾಗವಾಗಿ ಇಂದು ಬೆಳಗಾವಿಯಲ್ಲಿ ಆರಂಭವಾಗಬೇಕಿದ್ದ ಟ್ಯ್ರಾಕ್ಟರ್ ರ್ಯಾಲಿಗೆ ಪೊಲೀಸ್ ಮತ್ತು ಆರ್‌ಟಿಓ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ. ತಮ್ಮ ಆದೇಶ ಉಲ್ಲಂಘಿಸಿ ಪರೇಡ್ ನಡೆಸುವ ಟ್ಯ್ರಾಕ್ಟರ್‌ಗಳನ್ನು ಸೀಜ್ ಮಾಡುವುದಾಗಿ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಜ.26 ರಂದು ಬೆಂಗಳೂರಿನಲ್ಲಿ ಜನ-ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇ‌ಡ್ ನಡೆಸಲು ನೂರಾರು ಸಂಘಟನೆಗಳು ತೀರ್ಮಾನಿಸಿವೆ. ಅದರ ಭಾಗವಾಗಿ ರಾಜ್ಯದ ಹಲವು ಭಾಗಗಳಿಂದ ರೈತರು ಟ್ರ್ಯಾಕ್ಟರ್‌ಗಳ ಮೂಲಕ ಹಲವು ಜಿಲ್ಲೆಗಳಲ್ಲಿ ರ್ಯಾಲಿ ನಡೆಸಿ ಜನವರಿ 26 ರಂದು ಬೆಂಗಳೂರು ತಲುಪಲು ನಿರ್ಧರಿಸಿದ್ದರು. ಅದರಂತೆ ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಟ್ಯ್ರಾಕ್ಟರ್‌ ರ್ಯಾಲಿ ಆರಂಭವಾಗಿದ್ದು, ಹಿರಿಯ ಹೋರಾಟಗಾರ ಸಿರಿಮನೆ ನಾಗರಾಜ್ ಜಾಥಾಗೆ ಚಾಲನೆ ನೀಡಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆ ತಲುಪಿ ನಂತರ ಧಾರವಾಡದ ಮೂಲಕ ಸಂಜೆಗೆ ಹುಬ್ಬಳ್ಳಿ ತಲುಪಲು ಯೋಜಿಸಲಾಗಿತ್ತು. ಆದರೆ ಇದನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಆರ್‌ಟಿಓ ಅಧಿಕಾರಿಗಳೊಂದಿಗೆ ಶಾಮೀಲಾಗಿದ್ದು ರೈತರ ವಾಹನಗಳನ್ನು ವಶಕ್ಕೆ ಪಡೆಯುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ರೈತರು ದೂರಿದ್ದಾರೆ.

“ನಿಮ್ಮ ಟ್ರ್ಯಾಕ್ಟರ್‌ಗಳಿಗೆ ಇನ್ಶೂರೆನ್ಸ್ ಕಟ್ಟಿಲ್ಲ ಎಂಬುದನ್ನು ಮರೆಯಬೇಡಿ. ನಾವು ಹೋಗಲಿ ಎಂದು ಸುಮ್ಮನಿದ್ದೇವೆ. ಈಗ ನೀವು ರ್ಯಾಲಿ ಹೊರಟರೆ ಖಂಡಿತ ನಿಮ್ಮ ವಾಹನಗಳನ್ನು ಸೀಜ್‌ ಮಾಡುವುದಾಗಿ ಆರ್‌ಟಿಓ ಅಧಿಕಾರಿಗಳು ಬೆದರಿಸುತ್ತಿದ್ದಾರೆ. ಇದಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಆದೇಶ ನೀಡಿದ್ದಾರೆ” ಎಂದು ರೈತರು ತಿಳಿಸಿದ್ದಾರೆ.

ನಾವು ಈ ಕುರಿತು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಡನೆ ಮಾತನಾಡಲು ಕರೆ ಮಾಡುತ್ತಿದ್ದೇವೆ. ಆದರೆ ನಮ್ಮ ಯಾವುದೇ ಕರೆಗಳನ್ನು ಅವರು ಸ್ವೀಕರಿಸುತ್ತಿಲ್ಲ. ಬೇಕಂತಲೇ ಅವು ನಮ್ಮ ಕರೆ ಸ್ವೀಕರಿಸದೇ ಈ ನ್ಯಾಯಯುತ ರೈತ ಹೋರಾಟ ಹಣಿಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸಫಲವಾಗುವುದಿಲ್ಲ. ನಮ್ಮ ಟ್ಯ್ರಾಕ್ಟರ್ ರ್ಯಾಲಿಗೆ ಅನುಮತಿ ನೀಡದಿದ್ದರೆ ಸರ್ಕಾರ ತೀವ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಡಗು ಮೈಸೂರು ಕಡೆಯಿಂದ, ಹೈದರಾಬಾದ್ ಕರ್ನಾಟಕ ಕಡೆಯಿಂದ, ಕೋಲಾರ- ಚಿಕ್ಕಬಳ್ಳಾಪುರದಿಂದ, ಹಾಸನ-ಚಿಕ್ಕಮಗಳೂರು ಕಡೆಯಿಂದ ಸೇರಿದಂತೆ ರಾಜ್ಯದ ಐದು ದಿಕ್ಕುಗಳಿಂದಲೂ ಬರುವ ಟ್ರಾಕ್ಟರ್‌ಗಳು ಜನವರಿ 26 ರಂದು ಬೆಂಗಳೂರು ನಗರವನ್ನು ಪ್ರವೇಶಿಸಿ ಪರೇಡ್ ನಡೆಸಲಾಗುತ್ತದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...

ಹತ್ಯೆಯ ಕೆಲವೇ ಗಂಟೆಗಳ ಮೊದಲು ನಾನು ಹಮಾಸ್ ಮುಖ್ಯಸ್ಥರನ್ನು ಭೇಟಿಯಾಗಿದ್ದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಟೆಹ್ರಾನ್‌ನಲ್ಲಿ ಹಮಾಸ್‌ನ ಮಾಜಿ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಅವರನ್ನು ಭೇಟಿಯಾಗಿದ್ದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಹಿರಂಗಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಅಧ್ಯಕ್ಷ...

ಕರ್ನಾಟಕ ಜನಶಕ್ತಿ ಸಕ್ರಿಯ ಕಾರ್ಯಕರ್ತೆ, ಹೋರಾಟದ ಒಡನಾಡಿ ಕೆ.ಪದ್ಮಾ ಇನ್ನಿಲ್ಲ

ಹಿರಿಯ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿ ಸಂಘಟನೆಯ ಸಕ್ರಿಯ ಕಾರ್ಯಕರ್ತೆ ಕೆ ಪದ್ಮಾ ಅವರು ಹೋರಾಟದ ಬದುಕನ್ನು ಮುಗಿಸಿದ್ದಾರೆ. ಬುಧವಾರ ರಾತ್ರಿ, ಬೆಂಗಳೂರಿನಲ್ಲಿ ಕೊನೆಯುಸಿಳೆದಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು, ತಮ್ಮನ್ನು ಬಾಧಿಸುತ್ತಿದ್ದ...

ದೇಶದ ಹಲವೆಡೆ ಕ್ರೈಸ್ತರ ಮೇಲೆ ಮತಾಂಧ ಕೋಮುವಾದಿಗಳ ದಾಳಿ : ಕ್ರಿಸ್‌ಮಸ್ ಆಚರಣೆಗೆ ಅಡ್ಡಿ

ಪ್ರತಿ ವರ್ಷದಂತೆ ಈ ವರ್ಷವೂ ಡಿಸೆಂಬರ್ ತಿಂಗಳಲ್ಲಿ, ವಿಶೇಷವಾಗಿ ಡಿಸೆಂಬರ್ 25ರಂದು ಇಡೀ ಜಗತ್ತು ಕ್ರಿಸ್‌ಮಸ್ ಹಬ್ಬದ ಸಂಭ್ರಮದಲ್ಲಿದೆ. ಏಸು ಕ್ರಿಸ್ತನ ಜನ್ಮದಿನದ ಪ್ರಯುಕ್ತ ಜನರು ಗಡಿಗಳನ್ನು ಮೀರಿ ಪರಸ್ಪರ ಸಂತಸ ಹಂಚಿಕೊಳ್ಳುತ್ತಿದ್ದಾರೆ. ಈ...

ಹರಿಯಾಣ| ಕಳ್ಳತನ ಆರೋಪದ ಮೇಲೆ 12 ವರ್ಷದ ದಲಿತ ಬಾಲಕನಿಗೆ ಚಿತ್ರಹಿಂಸೆ; ಕಟ್ಟಿಹಾಕಿ ದೌರ್ಜನ್ಯ

12 ವರ್ಷದ ದಲಿತ ಬಾಲಕನ ಮೇಲೆ ಕಳ್ಳತನದ ಶಂಕೆಯಿಂದ ಹಲವಾರು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿ ಅಕ್ರಮ ಬಂಧನದಲ್ಲಿಟ್ಟ ಆರೋಪದ ಮೇಲೆ ಕುಟುಂಬವೊಂದರ 10 ಸದಸ್ಯರ ವಿರುದ್ಧ ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಪ್ರಕರಣ...

ಉನ್ನಾವೋ ಅತ್ಯಾಚಾರಿಯ ಶಿಕ್ಷೆ ಅಮಾನತು : ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲು ಮುಂದಾದ ಸಿಬಿಐ

ಉನ್ನಾವೋ ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತಿನಲ್ಲಿಟ್ಟ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕೇಂದ್ರ ತನಿಖಾ ದಳ (ಸಿಬಿಐ) ಮುಂದಾಗಿದೆ ಎಂದು ಬುಧವಾರ (ಡಿ.24) ವರದಿಯಾಗಿದೆ. ಸಿಬಿಐ ಈ ಪ್ರಕರಣದ ತನಿಖೆ...

ಚಿತ್ರದುರ್ಗ | ಹೊತ್ತಿ ಉರಿದ ಖಾಸಗಿ ಬಸ್​​​​ : 10ಕ್ಕೂ ಹೆಚ್ಚು ಜನರು ಸಜೀವ ದಹನ, ಹಲವರಿಗೆ ಗಾಯ

ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದ ಪರಿಣಾಮ 10ಕ್ಕೂ ಹೆಚ್ಚು ಜನರು ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಗುರುವಾರ (ಡಿ.25) ನಡೆದಿದೆ. ರಾಷ್ಟ್ರೀಯ ಹೆದ್ದಾರಿ...