Homeಚಳವಳಿಬೆಳಗಾವಿಯಲ್ಲಿ ಜನ-ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇ‌ಡ್ ತಡೆದ ಪೊಲೀಸರು: ಟ್ರ್ಯಾಕ್ಟರ್‌ಗಳನ್ನು ಸೀಜ್ ಮಾಡುವುದಾಗಿ ಬೆದರಿಕೆ

ಬೆಳಗಾವಿಯಲ್ಲಿ ಜನ-ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇ‌ಡ್ ತಡೆದ ಪೊಲೀಸರು: ಟ್ರ್ಯಾಕ್ಟರ್‌ಗಳನ್ನು ಸೀಜ್ ಮಾಡುವುದಾಗಿ ಬೆದರಿಕೆ

ರಾಜ್ಯದ ಐದು ದಿಕ್ಕುಗಳಿಂದಲೂ ಬರುವ ಟ್ರಾಕ್ಟರ್‌ಗಳು ಜನವರಿ 26 ರಂದು ಬೆಂಗಳೂರು ನಗರವನ್ನು ಪ್ರವೇಶಿಸಿ ಪರೇಡ್ ನಡೆಸಲಾಗುತ್ತದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

- Advertisement -
- Advertisement -

ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವವನ್ನು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಟ್ರ್ಯಾಕ್ಟರ್‌ ಪರೇ‌ಡ್ ನಡೆಸುವ ಮೂಲಕ ವಿಭಿನ್ನವಾಗಿ ಹೋರಾಟ ಮುಂದುವರೆಸಲು ದೇಶಾದ್ಯಂತ ರೈತ ಸಂಘಟನೆಗಳು ತೀರ್ಮಾನಿಸಿವೆ. ಇದರ ಭಾಗವಾಗಿ ಇಂದು ಬೆಳಗಾವಿಯಲ್ಲಿ ಆರಂಭವಾಗಬೇಕಿದ್ದ ಟ್ಯ್ರಾಕ್ಟರ್ ರ್ಯಾಲಿಗೆ ಪೊಲೀಸ್ ಮತ್ತು ಆರ್‌ಟಿಓ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ. ತಮ್ಮ ಆದೇಶ ಉಲ್ಲಂಘಿಸಿ ಪರೇಡ್ ನಡೆಸುವ ಟ್ಯ್ರಾಕ್ಟರ್‌ಗಳನ್ನು ಸೀಜ್ ಮಾಡುವುದಾಗಿ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಜ.26 ರಂದು ಬೆಂಗಳೂರಿನಲ್ಲಿ ಜನ-ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇ‌ಡ್ ನಡೆಸಲು ನೂರಾರು ಸಂಘಟನೆಗಳು ತೀರ್ಮಾನಿಸಿವೆ. ಅದರ ಭಾಗವಾಗಿ ರಾಜ್ಯದ ಹಲವು ಭಾಗಗಳಿಂದ ರೈತರು ಟ್ರ್ಯಾಕ್ಟರ್‌ಗಳ ಮೂಲಕ ಹಲವು ಜಿಲ್ಲೆಗಳಲ್ಲಿ ರ್ಯಾಲಿ ನಡೆಸಿ ಜನವರಿ 26 ರಂದು ಬೆಂಗಳೂರು ತಲುಪಲು ನಿರ್ಧರಿಸಿದ್ದರು. ಅದರಂತೆ ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಟ್ಯ್ರಾಕ್ಟರ್‌ ರ್ಯಾಲಿ ಆರಂಭವಾಗಿದ್ದು, ಹಿರಿಯ ಹೋರಾಟಗಾರ ಸಿರಿಮನೆ ನಾಗರಾಜ್ ಜಾಥಾಗೆ ಚಾಲನೆ ನೀಡಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆ ತಲುಪಿ ನಂತರ ಧಾರವಾಡದ ಮೂಲಕ ಸಂಜೆಗೆ ಹುಬ್ಬಳ್ಳಿ ತಲುಪಲು ಯೋಜಿಸಲಾಗಿತ್ತು. ಆದರೆ ಇದನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಆರ್‌ಟಿಓ ಅಧಿಕಾರಿಗಳೊಂದಿಗೆ ಶಾಮೀಲಾಗಿದ್ದು ರೈತರ ವಾಹನಗಳನ್ನು ವಶಕ್ಕೆ ಪಡೆಯುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ರೈತರು ದೂರಿದ್ದಾರೆ.

“ನಿಮ್ಮ ಟ್ರ್ಯಾಕ್ಟರ್‌ಗಳಿಗೆ ಇನ್ಶೂರೆನ್ಸ್ ಕಟ್ಟಿಲ್ಲ ಎಂಬುದನ್ನು ಮರೆಯಬೇಡಿ. ನಾವು ಹೋಗಲಿ ಎಂದು ಸುಮ್ಮನಿದ್ದೇವೆ. ಈಗ ನೀವು ರ್ಯಾಲಿ ಹೊರಟರೆ ಖಂಡಿತ ನಿಮ್ಮ ವಾಹನಗಳನ್ನು ಸೀಜ್‌ ಮಾಡುವುದಾಗಿ ಆರ್‌ಟಿಓ ಅಧಿಕಾರಿಗಳು ಬೆದರಿಸುತ್ತಿದ್ದಾರೆ. ಇದಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಆದೇಶ ನೀಡಿದ್ದಾರೆ” ಎಂದು ರೈತರು ತಿಳಿಸಿದ್ದಾರೆ.

ನಾವು ಈ ಕುರಿತು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಡನೆ ಮಾತನಾಡಲು ಕರೆ ಮಾಡುತ್ತಿದ್ದೇವೆ. ಆದರೆ ನಮ್ಮ ಯಾವುದೇ ಕರೆಗಳನ್ನು ಅವರು ಸ್ವೀಕರಿಸುತ್ತಿಲ್ಲ. ಬೇಕಂತಲೇ ಅವು ನಮ್ಮ ಕರೆ ಸ್ವೀಕರಿಸದೇ ಈ ನ್ಯಾಯಯುತ ರೈತ ಹೋರಾಟ ಹಣಿಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸಫಲವಾಗುವುದಿಲ್ಲ. ನಮ್ಮ ಟ್ಯ್ರಾಕ್ಟರ್ ರ್ಯಾಲಿಗೆ ಅನುಮತಿ ನೀಡದಿದ್ದರೆ ಸರ್ಕಾರ ತೀವ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಡಗು ಮೈಸೂರು ಕಡೆಯಿಂದ, ಹೈದರಾಬಾದ್ ಕರ್ನಾಟಕ ಕಡೆಯಿಂದ, ಕೋಲಾರ- ಚಿಕ್ಕಬಳ್ಳಾಪುರದಿಂದ, ಹಾಸನ-ಚಿಕ್ಕಮಗಳೂರು ಕಡೆಯಿಂದ ಸೇರಿದಂತೆ ರಾಜ್ಯದ ಐದು ದಿಕ್ಕುಗಳಿಂದಲೂ ಬರುವ ಟ್ರಾಕ್ಟರ್‌ಗಳು ಜನವರಿ 26 ರಂದು ಬೆಂಗಳೂರು ನಗರವನ್ನು ಪ್ರವೇಶಿಸಿ ಪರೇಡ್ ನಡೆಸಲಾಗುತ್ತದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...