Homeಚಳವಳಿಬೆಳಗಾವಿಯಲ್ಲಿ ಜನ-ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇ‌ಡ್ ತಡೆದ ಪೊಲೀಸರು: ಟ್ರ್ಯಾಕ್ಟರ್‌ಗಳನ್ನು ಸೀಜ್ ಮಾಡುವುದಾಗಿ ಬೆದರಿಕೆ

ಬೆಳಗಾವಿಯಲ್ಲಿ ಜನ-ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇ‌ಡ್ ತಡೆದ ಪೊಲೀಸರು: ಟ್ರ್ಯಾಕ್ಟರ್‌ಗಳನ್ನು ಸೀಜ್ ಮಾಡುವುದಾಗಿ ಬೆದರಿಕೆ

ರಾಜ್ಯದ ಐದು ದಿಕ್ಕುಗಳಿಂದಲೂ ಬರುವ ಟ್ರಾಕ್ಟರ್‌ಗಳು ಜನವರಿ 26 ರಂದು ಬೆಂಗಳೂರು ನಗರವನ್ನು ಪ್ರವೇಶಿಸಿ ಪರೇಡ್ ನಡೆಸಲಾಗುತ್ತದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

- Advertisement -
- Advertisement -

ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವವನ್ನು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಟ್ರ್ಯಾಕ್ಟರ್‌ ಪರೇ‌ಡ್ ನಡೆಸುವ ಮೂಲಕ ವಿಭಿನ್ನವಾಗಿ ಹೋರಾಟ ಮುಂದುವರೆಸಲು ದೇಶಾದ್ಯಂತ ರೈತ ಸಂಘಟನೆಗಳು ತೀರ್ಮಾನಿಸಿವೆ. ಇದರ ಭಾಗವಾಗಿ ಇಂದು ಬೆಳಗಾವಿಯಲ್ಲಿ ಆರಂಭವಾಗಬೇಕಿದ್ದ ಟ್ಯ್ರಾಕ್ಟರ್ ರ್ಯಾಲಿಗೆ ಪೊಲೀಸ್ ಮತ್ತು ಆರ್‌ಟಿಓ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ. ತಮ್ಮ ಆದೇಶ ಉಲ್ಲಂಘಿಸಿ ಪರೇಡ್ ನಡೆಸುವ ಟ್ಯ್ರಾಕ್ಟರ್‌ಗಳನ್ನು ಸೀಜ್ ಮಾಡುವುದಾಗಿ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಜ.26 ರಂದು ಬೆಂಗಳೂರಿನಲ್ಲಿ ಜನ-ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇ‌ಡ್ ನಡೆಸಲು ನೂರಾರು ಸಂಘಟನೆಗಳು ತೀರ್ಮಾನಿಸಿವೆ. ಅದರ ಭಾಗವಾಗಿ ರಾಜ್ಯದ ಹಲವು ಭಾಗಗಳಿಂದ ರೈತರು ಟ್ರ್ಯಾಕ್ಟರ್‌ಗಳ ಮೂಲಕ ಹಲವು ಜಿಲ್ಲೆಗಳಲ್ಲಿ ರ್ಯಾಲಿ ನಡೆಸಿ ಜನವರಿ 26 ರಂದು ಬೆಂಗಳೂರು ತಲುಪಲು ನಿರ್ಧರಿಸಿದ್ದರು. ಅದರಂತೆ ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಟ್ಯ್ರಾಕ್ಟರ್‌ ರ್ಯಾಲಿ ಆರಂಭವಾಗಿದ್ದು, ಹಿರಿಯ ಹೋರಾಟಗಾರ ಸಿರಿಮನೆ ನಾಗರಾಜ್ ಜಾಥಾಗೆ ಚಾಲನೆ ನೀಡಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆ ತಲುಪಿ ನಂತರ ಧಾರವಾಡದ ಮೂಲಕ ಸಂಜೆಗೆ ಹುಬ್ಬಳ್ಳಿ ತಲುಪಲು ಯೋಜಿಸಲಾಗಿತ್ತು. ಆದರೆ ಇದನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಆರ್‌ಟಿಓ ಅಧಿಕಾರಿಗಳೊಂದಿಗೆ ಶಾಮೀಲಾಗಿದ್ದು ರೈತರ ವಾಹನಗಳನ್ನು ವಶಕ್ಕೆ ಪಡೆಯುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ರೈತರು ದೂರಿದ್ದಾರೆ.

“ನಿಮ್ಮ ಟ್ರ್ಯಾಕ್ಟರ್‌ಗಳಿಗೆ ಇನ್ಶೂರೆನ್ಸ್ ಕಟ್ಟಿಲ್ಲ ಎಂಬುದನ್ನು ಮರೆಯಬೇಡಿ. ನಾವು ಹೋಗಲಿ ಎಂದು ಸುಮ್ಮನಿದ್ದೇವೆ. ಈಗ ನೀವು ರ್ಯಾಲಿ ಹೊರಟರೆ ಖಂಡಿತ ನಿಮ್ಮ ವಾಹನಗಳನ್ನು ಸೀಜ್‌ ಮಾಡುವುದಾಗಿ ಆರ್‌ಟಿಓ ಅಧಿಕಾರಿಗಳು ಬೆದರಿಸುತ್ತಿದ್ದಾರೆ. ಇದಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಆದೇಶ ನೀಡಿದ್ದಾರೆ” ಎಂದು ರೈತರು ತಿಳಿಸಿದ್ದಾರೆ.

ನಾವು ಈ ಕುರಿತು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಡನೆ ಮಾತನಾಡಲು ಕರೆ ಮಾಡುತ್ತಿದ್ದೇವೆ. ಆದರೆ ನಮ್ಮ ಯಾವುದೇ ಕರೆಗಳನ್ನು ಅವರು ಸ್ವೀಕರಿಸುತ್ತಿಲ್ಲ. ಬೇಕಂತಲೇ ಅವು ನಮ್ಮ ಕರೆ ಸ್ವೀಕರಿಸದೇ ಈ ನ್ಯಾಯಯುತ ರೈತ ಹೋರಾಟ ಹಣಿಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸಫಲವಾಗುವುದಿಲ್ಲ. ನಮ್ಮ ಟ್ಯ್ರಾಕ್ಟರ್ ರ್ಯಾಲಿಗೆ ಅನುಮತಿ ನೀಡದಿದ್ದರೆ ಸರ್ಕಾರ ತೀವ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಡಗು ಮೈಸೂರು ಕಡೆಯಿಂದ, ಹೈದರಾಬಾದ್ ಕರ್ನಾಟಕ ಕಡೆಯಿಂದ, ಕೋಲಾರ- ಚಿಕ್ಕಬಳ್ಳಾಪುರದಿಂದ, ಹಾಸನ-ಚಿಕ್ಕಮಗಳೂರು ಕಡೆಯಿಂದ ಸೇರಿದಂತೆ ರಾಜ್ಯದ ಐದು ದಿಕ್ಕುಗಳಿಂದಲೂ ಬರುವ ಟ್ರಾಕ್ಟರ್‌ಗಳು ಜನವರಿ 26 ರಂದು ಬೆಂಗಳೂರು ನಗರವನ್ನು ಪ್ರವೇಶಿಸಿ ಪರೇಡ್ ನಡೆಸಲಾಗುತ್ತದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...